ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಬ್ಬರಲ್ಲೂ ಅನಂತ ಶಕ್ತಿ ಅಡಗಿದೆ. ನಮ್ಮಲ್ಲಿ ನಾವು ನಂಬಿಕೆ, ಶ್ರದ್ಧೆ ಇಟ್ಟುಕೊಂಡು ಅದ್ಭುತ ಸಾಧನೆ ಮಾಡಲು ನಮ್ಮಲ್ಲಿರುವ ಶಕ್ತಿಯನ್ನು ಹೊರ ತೆಗೆಯಲು ಕಠಿಣ ಪರಿಶ್ರಮ ಪಡಬೇಕು. ಜೀವನದಲ್ಲಿ ಉಚ್ಛ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಬೇಕು. ಜಾಗೃತ ಮನಸ್ಸು ನಮ್ಮದಾಗಬೇಕು. ಆಧ್ಯಾತ್ಮಿಕತೆಯನ್ನು ಬೆಳೆಸಿಕೊಳ್ಳಬೇಕು. ಘನತೆ ಇರುವ ಕೆಲಸಗಳನ್ನು ಮಾಡಬೇಕು. ಧನಾತ್ಮಕ ಚಿಂತೆಗಳನ್ನು ಇಟ್ಟುಕೊಂಡು ನಮ್ಮ ಗುರಿ ಮತ್ತು ಕನಸುಗಳನ್ನು ಸಾಫಲ್ಯಗೊಳಿಸಲು ಪ್ರಯತ್ನಿಸಬೇಕು ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಯುಗೇಶಾನಂದ ಹೇಳಿದರು. ಅವರು ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳು ಗಂಗೊಳ್ಳಿ ಮತ್ತು ಬಾಲಚಂದ್ರ ನಾಯ್ಕನಕಟ್ಟೆ ಟ್ರಸ್ಟ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಶ್ರೀ ಸರಸ್ವತಿ ವಿದ್ಯಾನಿಧಿ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಸ್ವಾಮೀ ವಿವೇಕಾನಂದರು ಯುವಕರಲ್ಲಿ ಹುರುಪು-ಹುಮ್ಮಸ್ಸು ತುಂಬಿ, ಅವರ ಸರ್ವೋನ್ನತಿಗೆ ಹೊಸ ಭಾಷ್ಯವನ್ನೇ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತಮಿಳುನಾಡಿನ ಈರೋಡಿನಲ್ಲಿ ಮುಕ್ತಾಯಗೊಂಡ 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಬಾಲಕರ ತಂಡ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಪೈನಲ್ನಲ್ಲಿ ಕರ್ನಾಟಕ ಬಾಲಕಿಯರ ತಂಡ ಕಳೆದ ಬಾರಿಯ ಚಾಂಪಿಯನ್ ತಮಿಳುನಾಡು ವಿರುದ್ಧ 35-25, 35-31 ನೇರ ಸೆಟ್ಗಳಿಂದ ಗೆದ್ದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಬಾಲಕರ ತಂಡ ತಮಿಳುನಾಡು ವಿರುದ್ಧ 26-35, 27-35 ನೇರ ಸೆಟ್ಗಳಿಂದ ಪರಾಭವಗೊಂಡು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. ಕರ್ನಾಟಕ ತಂಡದಲ್ಲಿ ಬಾಲಕಿಯರ ವಿಭಾಗದಲ್ಲಿ ಆರು ಮಂದಿ ಹಾಗೂ ಬಾಲಕರ ವಿಭಾಗದಲ್ಲಿ ನಾಲ್ಕು ಮಂದಿ ಆಳ್ವಾಸ್ ಕ್ರೀಡಾಪಟುಗಳು ಪಾಲ್ಗೊಂಡು ಶ್ರೇಷ್ಠ ಸಾಧನೆ ಮೆರೆಯಲು ಸಹಕರಿಸಿದರು. ವಿಜೇತ ಕರ್ನಾಟಕ ತಂಡದ ಪರವಾಗಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಚರಣ್ ಹಾಗೂ ಬಾಲಕಿಯರ ತಂಡದಲ್ಲಿ ರಾಜ್ಯ ತಂಡದ ನಾಯಕಿಯಾಗಿದ್ದ ಆಳ್ವಾಸ್ನ ಗೀತಾ ಹಾಗೂ ಶುಭಶ್ರೀ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ ಪಡೆದುಕೊಂಡರು. ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮೆರೆದ ಕರ್ನಾಟಕ ತಂಡಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. ಆರು ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೋಟ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಸೊಸೈಟಿ ಲಿಮಿಟೆಡ್, ಕೋಟ ಇದರ ಅಧ್ಯಕ್ಷರಾದ ಡಾ| ಕೃಷ್ಣ ಕಾಂಚನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅಗತ್ಯವಾದ ಜಾಗೃತಿಯ ಬಗ್ಗೆ ಉಪನ್ಯಾಸ ನೀಡಿದರು. ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿ ಸುಹಾಸ್ ವಿ. ಮಲ್ಯ ಪ್ರಾರ್ಥಿಸಿ, ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿ, ಕಾಲೇಜಿನ ಗ್ರಂಥಪಾಲಕರಾದ ಮಹೇಶ್ ನಾಯ್ಕ್ ನಿರೂಪಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ವೃತ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತ್ರಾಸಿ ಗ್ರಾಮದ ಸಣ್ಣಕುಂಬ್ರಿ ಪ್ರದೇಶದಲ್ಲಿ ವಾಕಿಂಗ್ಗೆ ತೆರಳಿದ್ದ ವೃದ್ಧೆಯೊಬ್ಬರ ಕುತ್ತಿಗೆಯಿಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಬಲಾತ್ಕಾರವಾಗಿ ಎಳೆದುಕೊಂಡು ಪರಾರಿಯಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ತ್ರಾಸಿಯ ಸಣ್ಣಕುಂಬ್ರಿ ಡೋನ್ ಬೋಸ್ಕೋ ಶಾಲೆ ರಸ್ತೆಯಲ್ಲಿ ವಾಕಿಂಗ್ಗೆ ತೆರಳಿದ್ದ ಸೀತಾ (83) ಎಂಬ ವೃದ್ಧೆಯ ಬಳಿ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿ ಕುತ್ತಿಗೆಯಲ್ಲಿದ್ದ ಸುಮಾರು 22.470 ಗ್ರಾಂ ತೂಕದ, ಅಂದಾಜು 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾನೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ತನಿಖೆ ಮುಂದುವರಿದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಮಂಡಲದ ವತಿಯಿಂದ ಹಿಂದೂ ಸಂಗಮದ ಶೋಭಯಾತ್ರೆ ಸಮಾವೇಶವು ವಿಜೃಂಬಣೆಯಿಂದ ಇತ್ತೀಚಿಗೆ ಜರಗಿತು. ಹಿಂದೂ ಮುಖಂಡರಾದ ಶಿವರಾಮ ಉಡುಪ ಸಾಲಿಗ್ರಾಮ ಶೋಭಯಾತ್ರೆಗೆ ಚಾಲನೆ ನೀಡಿದರು. ವಿವಿಧ ಭಾಗಗಳಿಂದ ಆಗಮಿಸಿದ ಮಹಿಳಾ ಭಜನಾ ತಂಡ, ಮಕ್ಕಳ ಭಜನಾ ತಂಡ, ಪುರುಷ ಹಾಗೂ ಮಹಿಳಾ ಚಂಡೆ ಬಳಗದಿಂದ ಚಂಡೆ ವಾದನ, ಹಲವಾರು ಪುಟಾಣಿಗಳು ವೇಷಭೂಶಣಗಳಿಂದ ಕೂಡಿದ ಟ್ಯಾಬ್ಲೋ, ಶಿವಾಜಿ ಮೂರ್ತಿಯನ್ನು ಹೊತ್ತು ಭಾರತಾಂಭೆಯ ಭಾವಚಿತ್ರವನ್ನು ಹೊತ್ತ ವಾಹನ ರಥಗಳು ಶೋಭಯಾತ್ರೆಯಲ್ಲಿ ಕಂಡು ಬಂದವು. ಸಾಲಿಗ್ರಾಮ ಬಸ್ಸು ನಿಲ್ದಾಣದಿಂದ ಆರಂಭಗೊಂಡ ಶೋಭಾಯಾತ್ರೆ ಶ್ರೀ ಗುರುನರಸಿಂಹ ದೇವಸ್ಥಾನದ ಬಯಲು ರಂಗಮಂದಿರವನ್ನು ತಲುಪಿತು. ಸಭಾಕಾರ್ಯಕ್ರಮಕ್ಕೆ ಸಾಲಿಗ್ರಾಮ ದೇವಸ್ಥಾನದ ಪ್ರದಾನ ಅರ್ಚಕ ಜನಾರ್ದನ ಅಡಿಗ ಅವರು ಗೋ ಪೂಜೆಯ ಮೂಲಕ ಚಾಲನೆ ನೀಡಿದರು. ಸಮಾವೇಶದ ಸಭಾಧ್ಯಕ್ಷತೆಯನ್ನು ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಅಧ್ಯಕ್ಷ ಡಾ. ಕೆ.ಎಸ್. ಕಾರಂತ್ ವಹಿಸಿದ್ದರು. ದಿಕ್ಸೂಚಿ ಭಾಷಣವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿ ಜಿಲ್ಲಾ ಕಾಲೇಜು ವಿದ್ಯಾರ್ಥಿ ಪ್ರಮುಖ್ ಅಜಿತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ, ಗ್ರಾಮ ಪಂಚಾಯತ್ ಹಾಲಾಡಿ, ಜೆಸಿಐ ಹಾಲಾಡಿ- ವಾರಾಹಿ, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಶಿರೂರು-ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಂಗಳವಾರದಂದು ಹಾಲಾಡಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಚೋರಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಂತ್, ಶಿರೂರು ಮುದ್ದುಮನೆಯ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ. ಮನೋಜ್ ಭಟ್, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ಸಂಚಾಲಕ ಯು. ಶಂಕರ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಜನಾರ್ಧನ ಹಾಲಾಡಿ, ಗುರುಪ್ರಸಾದ ಶೆಟ್ಟಿ, ಜೆಸಿಐ ಹಾಲಾಡಿ ಘಟಕದ ಅಧ್ಯಕ್ಷರಾದ ಪ್ರದೀಪ ಹಾಲಾಡಿ, ಲೇಡಿ ಜೆಸಿಐ ಅಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಸಂದೇಶಗಳ ಪರಿಚಯಕ್ಕಾಗಿ ’ಗೀತಾ ಸಂದೇಶ ಸಾರ’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗೀತಾಜ್ಞಾನ ಯಜ್ಞ ವೇದಿಕೆಯ ಪ್ರಧಾನ ಗುರುಗಳಾದ ಸುಬ್ರಾಯ ನಂದೋಡಿ, ಕಾಸರಗೋಡು ಅವರು ಆಗಮಿಸಿದ್ದರು. ಪಂಚಾಂಗಪಠನವನ್ನು ವೀಕ್ಷಾ ನಡೆಸಿದರೆ, ಕೃಪಾಲಿ ಗೀತಾಮಹಾತ್ಮ್ಯೆಯನ್ನು ಪಠಿಸಿದರೆ, ಮಯೂರ ಜ್ಞಾನಕಿರಣವನ್ನು ಪಠಿಸಿದನು. ನಂತರ ಗೀತಾ ಜ್ಞಾನ ಯಜ್ಞದ ಪ್ರಧಾನ ಗುರುಗಳಾದ ಸುಬ್ರಾಯ ನಂದೋಡಿ ಅವರು ಮಾತನಾಡಿ, ಜೀವನವನ್ನು ಬೆಳಗಿಸುವ ಗ್ರಂಥ ಭಗವದ್ಗೀತೆ. ಚಂಚಲವಾದ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಶಕ್ತಿಯಾಗಬೇಕು. ಸ್ವಾತಂತ್ರ್ಯ ಪಡೆದ ಶತಮಾನೋತ್ಸವದಲ್ಲಿ ಭಾರತ ದೇಶದ ಪ್ರತಿಯೊಬ್ಬ ನಾಗರಿಕನೂ ಭಗವದ್ಗೀತೆಯ ಜ್ಞಾನವನ್ನು ಹೊಂದಿದವನಾಗಬೇಕು. ಮನೆ ಮನೆಗಳಲ್ಲೂ ನಿತ್ಯ ಭಗವದ್ಗೀತೆಯ ಅಧ್ಯಯನ ಆಗಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮಾತನಾಡಿ, ವಿದ್ಯೆಯನ್ನು ಜೀವನದ ಬಾಲ್ಯದಲ್ಲಿ ಹೊಂದಿದರೆ ಸಾಧಿಸುವಾತಗೆ ಸಾವಿರಾರು ಅವಕಾಶಗಳು ಬಂದೊದಗುತ್ತವೆ. ತಾನು, ತನ್ನ ಮನೆ, ತನ್ನ ಊರು, ತನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಗೆ ಖಾಲಿ ಇದ್ದ ಎರಡು ಸಮಿತಿ ಸದಸ್ಯರ ಹುದ್ದೆಗಳನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರುಗಳಾಗಿ ಉಡುಪಿಯ ಅಜಿತ್ ಆರಾಡಿ ಹಾಗೂ ಬೈಂದೂರಿನ ಉದಯ ಶಂಕರ್ ಪಡಿಯಾರ್ ಅವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟೋ ಮೋಹನ್, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿನ್ನ ಖರೀದಿಸುವ ನೆಪದಲ್ಲಿ ಅಂಗಡಿಯಿಂದ ಚಿನ್ನದ ಸರ ಎಗರಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂಗಡಿ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಸುಮಾರು 09 ಗ್ರಾಮ ಮೌಲ್ಯದ 1,25,000 ರೂ ಬೆಲೆ ಬಾಳುವ ಚಿನ್ನದ ಸರವನ್ನು ಕಳವುಗೈದ ಆರೋಪಿ ರಮೇಶ (42) ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಳ್ಳತನ ಮಾಡಿದ ಚಿನ್ನದ ಚೈನ್ ಮತ್ತು ಆತನ ವಶದಲ್ಲಿದ್ದ ರೂಪಾಯಿ 33,000/- ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ನಗರದ ಶಾಸ್ತ್ರೀಸರ್ಕಲ್ ಬಳಿಯ ಇರುವ ಎಸ್.ಪಿ.ಜಿ ಗೋಲ್ಡ್ & ಡೈಮಂಡ್ ಅಂಗಡಿಗೆ ಬಂದು ಚಿನ್ನವನ್ನು ತೆಗೆದುಕೊಳ್ಳುವ ನೆಪದಲ್ಲಿ ಅಂಗಡಿಯ ಕೆಲಸದವರಿಂದ ಚಿನ್ನದ ಸರವನ್ನು ನೋಡಿ ಅವರ ಕಣ್ಣು ತಪ್ಪಿಸಿ ಸುಮಾರು 09 ಗ್ರಾಮ ಮೌಲ್ಯದ 125000 ರೂ ಬೆಲೆ ಬಾಳುವ ಚಿನ್ನದ ಸರವನ್ನು ಕಳವುಗೈದಿದ್ದ. ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕರಾದ ಜಯರಾಮ್ ಡಿ. ಗೌಡ ಸಾರಥ್ಯದಲ್ಲಿ, ಠಾಣಾ ಪಿಎಸ್ಐ ನಂಜಾನಾಯ್ಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ (66) ಸೋಮವಾರ ಅಲ್ಪಕಾಲದ ನಿಧನರಾಗಿದ್ದಾರೆ. ರಾಜಕೀಯ ಬದುಕಿನ ಆರಂಭದಲ್ಲಿ ಜನತಾದಳದಲ್ಲಿ ಗುರುತಿಸಿಕೊಂಡಿದ್ದ ಅವರು ಮುಂದೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಕಾಂಗ್ರೆಸ್ ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸಿ ತ್ರಿಸ್ತರ ಆಡಳಿತವನ್ನು ಪ್ರತಿನಿಧಿಸಿದ್ದರು. 1987ರಲ್ಲಿ ತ್ರಾಸಿ ಪಂಚಾಯತ್ ನಲ್ಲಿ ಪ್ರಪ್ರಥಮ ಅಧ್ಯಕ್ಷರಾಗಿದ್ದವರು. 2007ರಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುಂದೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪಂಚಗಂಗಾವಳಿ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿ, ಗಂಗೊಳ್ಳಿಯ ಪಂಚಗಂಗಾವಳಿ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಗುಜ್ಜಾಡಿಯ ಭಾಸ್ಕರ ಪೈ ಸ್ಮಾರಕ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಬೈಂದೂರು ತಾಲೂಕು ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಪಾರ ದೈವಭಕ್ತರಾಗಿದ್ದ ಅವರು, ಅನೇಕ…
