Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡುಕಟ್ಟಿನ ವ್ಯಾಪ್ತಿಯಲ್ಲಿ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಆಶ್ರಯದಲ್ಲಿ ‘ಕ್ರೀಡಾ ಸಂಭ್ರಮ’ ನಡೆಯಿತು.  ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ್ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ಇಂದಿನ ಯುವ ಜನಾಂಗದವರು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಸಮಾಜಮುಖಿ ಪರಿಪೂರ್ಣ ವ್ಯಕ್ತಿತ್ವವನ್ನಾಗಿ ರೂಪುಗೊಳ್ಳಲು ಜೀವನ ಸಾರ್ಥಕಗೊಳಿಸಿಕೊಳ್ಳಿ ಎಂದರು. ಸಂಘಟನಾ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಶೆಟ್ಟಿಗಾರ ಸುರತ್ಕಲ್ ಕ್ರೀಡಾ ಧ್ವಜಾರೋಹಣ ಗೈದರು. ಮಹಿಳಾ ವೇದಿಕೆಯ ಯಶೋಧ ಶ್ರೀನಿವಾಸ ಶೆಟ್ಟಿಗಾರ್ ವಾಲಿಬಾಲ್ ಕೋರ್ಟ್ ಉದ್ಘಾಟಿಸಿದರು.ವೀರೇಶ್ವರ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಮಣಿಪಾಲ್ ಥ್ರೋಬಾಲ್ ಕೋರ್ಟ್ ಉದ್ಘಾಟಿಸಿದರು. ವೇದಿಕೆಯಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಜಯರಾಮ ಶೆಟ್ಟಿಗಾರ್, ಸಂಘಟನಾ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಶೆಟ್ಟಿಗಾರ ಸುರತ್ಕಲ್, ವೀರೇಶ್ವರ ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಮಣಿಪಾಲ್, ಸಂಘಟನಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜಿಲ್ಲೆಯಾದ್ಯಂತ ಬಡವರ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು ಇದರಿಂದ ಹಿಂದುಳಿದ ವರ್ಗಗಳ ಬಡವರಿಗೆ ಮತ್ತು ಶ್ರಮಿಕ ವರ್ಗದ ಜನರಿಗೆ ಅನ್ಯಾಯವಾಗುತ್ತಿದ್ದು ಇದರ ಜೊತೆಗೆ ಪರಿವರ್ತನೆಗೊಂಡ ಎಪಿಎಲ್ ಪಡಿತರ ಚೀಟಿಯನ್ನು ಪುನಃ ಸಮರ್ಪಕ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನಾಗಿ ಮಾಡಲು ತಾಲುಕು ಮಟ್ಟದ ಅಧಿಕಾರಿಗಳ ಬಳಿ ತೆರಳಿದರೆ ಕೊಂಚವೂ ನಾಚಿಕೆ ಇಲ್ಲದೆ ಬಡವ ಶ್ರಮಿಕ ದುಡಿಯುವ ಹಿಂದುಳಿದ ವರ್ಗಗಳ ಜನರ ಬಳಿ ಲಂಚ ಬೇಡಿಕೆಯ ಹಿನ್ನಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ತಾಲುಕು ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ, ಹಾಗಾಗಿ ಇದು ನಿಲ್ಲದೆ ಹೋದಲ್ಲಿ ಬಡವರಿಗೆ ಅನ್ಯಾಯವಾಗಲು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಮ್ಮನಿರದೆ ನೊಂದವರ ಜೊತೆಯಾಗಿ ಜಿಲ್ಲೆಯ ತಾಲೂಕು ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಎದುರು ಬ್ರಹತ್ ಪ್ರತಿಭಟನೆ ಮಾಡಲಾಗುವುದು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಇವರ ವತಿಯಿಂದ ಅಪರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯ ತರಬೇತಿ ತರಗತಿಗಳ ಉದ್ಘಾಟನಾ ಸಮಾರಂಭ ಮತ್ತು 2024- 25ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವು ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಜರುಗಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶೇಖರ್ ಖಾರ್ವಿ ಹಾಗೂ ನಾವುಂದ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನರಸಿಂಹ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿಕ್ಷಣ ಸಂಯೋಜಕರಾದ ಯೋಗೇಶ್ ಕೆ. ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ “ಉತ್ತಮ ಯೋಜಿತ ಕಾರ್ಯಗಳು ಸದಾ ಯಶಸ್ಸನ್ನು ನೀಡುತ್ತವೆ ಎನ್ನುವುದಕ್ಕೆ ಹಿಂದಿನ ಸಾಲಿನ ಭರ್ಜರಿ ಫಲಿತಾಂಶವೇ ಸಾಕ್ಷಿ. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರ ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಶ್ರೇಯೋನ್ನತಿಗೆ ವಿಶೇಷ ಸಹಕಾರ ನೀಡಿದ್ದು, ನಮಗೆ ವರದಾನವಾಗಿದೆ” ಎಂದರು. ಶೇಖರ ಖಾರ್ವಿ ಅವರು ತಮ್ಮ ಉದ್ಘಾಟನಾ ನುಡಿಗಳಲ್ಲಿ “ಎನ್ಎಂಎಂಎಸ್ ಪರೀಕ್ಷೆಯು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆ ಶಂಕರನಾರಾಯಣ ಇಲ್ಲಿನ ಬಾಲ ಪ್ರತಿಭೆ , ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಪ್ರಣತಿ ಜೆ ಶೆಟ್ಟಿ ಇವರು ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಸಾಧಕ ಕಿರಿಯ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಕುಂದಾಪುರ ವಲಯ ಮಟ್ಟದ ಹೈಸ್ಕೂಲ್ ವಿಭಾಗದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಇವರಿಗೆ ದ್ವಿತೀಯ ಸ್ಥಾನ ಲಭಿಸಿದೆ. ಸಾಧಕ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪ ಪ್ರಾಂಶುಪಾಲರು, ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಮಕ್ಕಳು ಕೇವಲ ಓದು ಮತ್ತು ಅಂಕಗಳು ಎಂದು ಕಳೆದುಹೋಗದೇ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮಕ್ಕಳ ತಮ್ಮ ಪ್ರತಿಭೆಯನ್ನು ಹೊರಹಾಕಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ” ಎಂದು ಶಾಸಕ ಎ. ಕಿರಣ್ ಕುಮಾರ್‌ ಕೊಡ್ಗಿ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ-ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡುತ್ತಾ, “ಹಿಂದೆ ಪ್ರತಿಭೆ ಇದ್ದರೂ ಅವಕಾಶಗಳು ಸಿಗುತ್ತಿರಲಿಲ್ಲ. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಇದನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು.ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯ” ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಶಾಲೆಯಲ್ಲಿ ನಿರ್ಮಿಸಲಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯವು ಶನಿವಾರ ಉದ್ಘಾಟಿಸಲಾಯಿತು. ಭಾರತದ ಚಂದ್ರಮಾನವ ಎಂದು ಖ್ಯಾತಿ ಪಡೆದಿರುವ ಪದ್ಮಶ್ರೀ ಪುರಸ್ಕೃತ ಡಾ. ಮೈಲ್ಸ್ವಾಮಿ ಅನ್ನಾದುರೈ ಅವರು ಉದ್ಘಾಟಿಸಿ, ಮಾತನಾಡಿ, ಇದು ಕೇವಲ ಖಗೋಳ ಪ್ರಯೋಗಾಲಯವಲ್ಲ, ಇದು ನಮ್ಮ ಬಾಹ್ಯಾಕಾಶ ಸಾಧನೆಯತ್ತ ಭವಿಷ್ಯದ ದೃಢ ಹೆಜ್ಜೆಯಾಗಬಲ್ಲದು ಎಂದು ಆಶಿಸಿದರು.   ಭಾರತವು ಇಂದು ಉಪಗ್ರಹ ಸಂವಹನದಿಂದ ನ್ಯಾವಿಗೇಶನ್ ವ್ಯವಸ್ಥೆ, ದೂರ ಸಂವಹನ, ಚಂದ್ರಯಾನ–ಮಂಗಳಯಾನ ಮುಂತಾದ ಸಾಧನೆಗಳ ಮೂಲಕ ಜಗತ್ತನ್ನು ತನ್ನತ್ತಾ ಸೆಳೆಯುತ್ತಿದೆ. ಭಾರತದ ಶಿಕ್ಷಣ ಪದ್ದತಿಯನ್ನು ಉಲ್ಲೇಖಿಸಿದ ಅವರು, ಶಾಲೆಗಳು ಇಂದಿನ ಅಂತರಾಷ್ಟ್ರೀಯ ಚೆಸ್ ಗ್ರ್ಯಾಂಡ್‌ ಮಾಸ್ಟರ್‌ಗಳನ್ನು ಹೊರತರುತ್ತಿದ್ದರೆ, ನಾಳೆಯ ವಿಜ್ಞಾನಿಗಳನ್ನು ಕೂಡ ರೂಪಿಸಬಲ್ಲ ಸಾಮಾರ್ಥ್ಯ ಹೊಂದಿದೆ ಎಂದರು. ಭಾರತ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚಿದ ಸಾಧನೆಯನ್ನು ನೆನಪಿಸಿಕೊಂಡ ಅವರು ಕೊಲಂಬಸ್ ಭಾರತವನ್ನು ಹುಡುಕುತ್ತ ಅಮೇರಿಕಾವನ್ನು ಕಂಡುಹಿಡಿದ. ಶತಮಾನಗಳ ನಂತರ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚುವಲ್ಲಿ ಅಮೇರಿಕಕ್ಕೆ ಸಾಧ್ಯವಾಗಲಿಲ್ಲ, ಆದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಪನಿರ್ದೇಶಕರ ಕಛೇರಿ ಉಡುಪಿ ಇಲ್ಲಿಯ ದೈಹಿಕ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ’ಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಫಾತಿಮಾ ಶೀಝಾ ಕಾರ್ಯಕ್ರಮ ನಿರೂಪಿಸಿ, ಕನ್ವಿತಾ  ಸ್ವಾಗತಿಸಿ ಹಾಗೂ  ಮಹಾಲಸಾ ಶ್ಯಾನುಭಾಗ್ ವಂದಿಸಿದರು. ಈ ಸಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುರುವಿಗೆ ಗೌರವ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ವಿದ್ಯೆಯೊಂದಿಗೆ ವಿವೇಕ ಮತ್ತು ತಾಳ್ಮೆ ಇರಬೇಕು. ಸಜ್ಜನರ ಸಹವಾಸ ವ್ಯಕ್ತಿತ್ವವನ್ನು ಒಳ್ಳೆಯ ದಾರಿಗೆ ಕೊಂಡೊಯ್ಯುತ್ತದೆ. ವ್ಯಕ್ತಿತ್ವ ನಿರ್ಮಾಣಕ್ಕೆ ಜೀವನದಲ್ಲಿ ದೃಢ ನಿಶ್ಚಯ ಮತ್ತು ಸ್ಪಷ್ಟ ಗುರಿ ಅತಿ ಮುಖ್ಯ. ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ, ಸನ್ಮಾರ್ಗದಲ್ಲಿ ಸೃಜನಶೀಲ ಬದುಕನ್ನು ರೂಪಿಸಿಕೊಂಡಾಗ ಸಾಧನೆಗೆ ಸುಲಭವಾಗುತ್ತದೆ. ಹವ್ಯಾಸ ಬದಲಾದರೆ ಹಣೆಬರಹ ಬದಲಾಗುತ್ತದೆ, ದೃಷ್ಟಿ ಬದಲಾದರೆ ಜೀವನ ದೃಶ್ಯವೇ ಬದಲಾಗುತ್ತದೆ ಎಂದು ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆಯ ಪರಿವೀಕ್ಷಣಾಧಿಕಾರಿ ಹಾಗೂ ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಘಟಕದ ಸಂಯೋಜಕರಾದ ದೀಪಿಕಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ಪರ್ಧೆಗಳು ನಮ್ಮನ್ನ ಕ್ರಿಯಾಶೀಲರಾಗಿ ಮಾಡುತ್ತದೆ ಅದಕ್ಕೆ ನಾವು ಪೂರಕವಾಗಿರಬೇಕೆಷ್ಟೇ ಹೊರತು ಮಾರಕವಾಗಿರಬಾರದು ಎಂದು ಸಾಂಸ್ಕೃತಿಕ ಚಿಂತಕರಾದ ಆನಂದ್ ಸಿ. ಕುಂದರ್ ನುಡಿದರು. ಅವರು ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್‌ನ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿವನ ಟ್ರಸ್ಟ್ ನಿರ್ದೇಶಕರಾದ ಡಾ. ಶಶಿಕಾಂತ್ ಜೈನ್ ಕಾರ್ಯಕ್ರಮದ ಸ್ವರೂಪಗಳನ್ನು ವಿವರಿಸಿದರು. ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷ ಸತೀಶ್ ಬಾರಿಕೆರೆ, ಜಿಲ್ಲಾ ಸಂಯೋಜಕರಾದ ಕೃಷ್ಣ ಆಚಾರ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ನಡೆದವು.

Read More