Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾಷೆ ನಾಶ ಆದರೆ ಸಂಸ್ಕೃತಿ ಸತ್ತಂತೆ. ಕುಂದಾಪ್ರ ಕನ್ನಡ ಭಾಷೆ ಉಳಿದಿದೆ, ರಂಗಾಗಿದೆ, ಕಳೆಗಟ್ಟಿದೆ. ಕುಂದಗನ್ನಡದಲ್ಲಿರುವ ಅಮೂಲ್ಯ ದಾಖಲೆಗಳನ್ನು ಕಾಪಾಡುವುದು ಅಗತ್ಯವಾಗಿದೆ. ಇದನ್ನು ಚಂದವಾಗಿ ಮುಂದಿನ ಪೀಳಿಗೆಗೆ ರವಾನಿಸಬೇಕು. ಅದಕ್ಕಾಗಿ ಪದಗಳ, ಸಾಹಿತ್ಯದ ದಾಖಲೀಕರಣವಾಗಬೇಕು. ಕುಂದ ಕನ್ನಡ ಉಳಿಸಲು ಸಾಕಷ್ಟು ಕಾರ್ಯಕ್ರಮ ನಾವು ಮಾಡಿದ್ದೇವೆ. ಆದರೆ ಬರೇ ಗೌಜಿಯಿಂದ ಕುಂದಾಪ್ರ ಕನ್ನಡ ಬೆಳೆಯದು, ಇದಕ್ಕಾಗಿ ಹಿಂದೆ ಶ್ರಮಿಸಿದ ಹಿರಿಯರ ಸಂಗ್ರಹವನ್ನು ಉಳಿಸಿಕೊಳ್ಳಬೇಕು. ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ ಉತ್ತಮ ಹೆಜ್ಜೆ ಇಟ್ಟಿದೆ” ಎಂದು ಕ.ಸಾ.ಪ. ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ರವಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕುಂದಗನ್ನಡ ಭಾಷಾಭಿವೃದ್ಧಿ ವೇದಿಕೆಯ ಸಮಾಲೋಚನ ಸಭೆಯಲ್ಲಿ ಮಾತನಾಡಿದರು. ಶಿಕ್ಷಕ ಸತೀಶ್ ಕುಮಾರ್ ವಡ್ಡರ್ಸೆ, ಕುಂದಾಪ್ರ ಕನ್ನಡದ ಅನೇಕ ಶಬ್ದಗಳ ಬಳಕೆ ಕಡಿಮೆಯಾಗಿದೆ. ಇವು ಮುಂದಿನ ಪೀಳಿಗೆಗೆ ಸುಲಭದಲ್ಲಿ ಸಿಗುವಂತಿರಬೇಕು. 60 ವಯಸ್ಸು ದಾಟಿದವರ ಬಳಿ ಕುಂದ ಕನ್ನಡದ ಅಪಾರ ಸಂಪತ್ತಿದೆ. ಇದು ಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕಡಲ ತೀರದಲ್ಲಿ ತೆಗೆದುಕೊಳ್ಳಬೇಕಾದ ಭದ್ರತೆ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಕಡಲಲ್ಲಿ ವಿಹರಿಸಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿ ಬೋಟ್‌ಗಳ ಮೊರೆ ಹೋಗುತ್ತಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆದೇ ಕಡಲಿಗೆ ಇಳಿಯಬೇಕು ಎಂದರು. ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಪಡೆಯದೇ ಇರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪುದುಚೇರಿಯಲ್ಲಿ ನಡೆದ 21ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಓಕವುಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಗ್ಯಾ ದೇವಾಡಿಗ ಪ್ರಥಮ ಸ್ಥಾನ ಪಡೆದು ವಿನ್ನರ್ ಪ್ರಶಸ್ತಿ ಜಯಿಸಿದ್ದಾರೆ ಹಾಗೂ ದ್ವಿತಾ ದೇವಾಡಿಗ  ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರು ಶಿಕ್ಷಕಿ ಅಂಬಿಕಾ ಕುಂದಾಪುರ ಮತ್ತು ಕೊಂಕಣ ರೈಲ್ವೆ ಟಿ.ಟಿ ಮೋಹನ ದೇವಾಡಿಗ ಬಿಜೂರು ಅವರ ಪುತ್ರಿಯರು. ಅವರಿಗೆ ಕುಂದಾಪುರ ಅಬಾಕಸ್ ಸೆಂಟರ್‌ನ ಪ್ರಸನ್ನ ಕೆ.ಬಿ, ಮಹಾಲಕ್ಷ್ಮಿ  ಹಾಗೂ ದೀಪಾ ಅವರು ತರಬೇತಿ ನೀಡಿದ್ದರು .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕೋಟ: ಗಣರಾಜ್ಯೋತ್ಸವ ಮುನ್ನದಿನ ಆಪರೇಶನ್ ಪರಾಕ್ರಮದಲ್ಲಿ ಭಾಗಿಯಾದ ಕಾಸರಗೋಡು ಯೋಧ ಶ್ಯಾಮ್ ರಾಜ್‌ ಅವರಿಗೆ ಸಾಸ್ತಾನ ಟೋಲ್‌ನಲ್ಲಿ ಅಗೌರವಾಗಿ ನಡೆಸಿಕೊಂಡ ಪ್ರಕರಣದ ಕುರಿತಂತೆ ಸೋಮವಾರ ಟೋಲ್ ಬಳಿ ನಿವೃತ್ತ ಯೋಧರ ಸಂಘ ಉಡುಪಿ ಹಾಗೂ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಸಾಸ್ತಾನ ಪ್ರತಿಭಟನೆ ಹಮ್ಮಿಕೊಂಡಿತು. ಈ ಹಿನ್ನಲ್ಲೆಯಲ್ಲಿ ಕೋಟ ಠಾಣಾಧಿಕಾರಿ ಪ್ರವೀಣ್ ಕುಮಾರ್ ಮಂಗಳವಾರ ಕೋಟ ಠಾಣೆಯಲ್ಲಿ ಕೆ.ಕೆ. ಆರ್ ಕಂಪನಿ ಮ್ಯಾನೇಜರ್ ತಿಮ್ಮಯ್ಯ ಹಾಗೂ ನಿವೃತ್ತ ಯೋಧರ ಸಂಘ, ಹೆದ್ದಾರಿ ಜಾಗೃತಿ ಸಮಿತಿಯ ಪ್ರಮುಖರ ಸಮ್ಮುಖದಲ್ಲಿ ಸಭೆ ಏರ್ಪಡಿಸಿ ಸಮಸ್ಯೆಯ ಕುರಿತಂತೆ ಮಾಹಿತಿ ಕಲೆಹಾಕಿತು. ಹೆದ್ದಾರಿ ಜಾಗೃತಿ ಸಮಿತಿ ಹಾಗೂ ನಿವೃತ್ತ ಸೈನಿಕರು , ಟೋಲ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದಾದ ತಪ್ಪುಗಳು ಮತ್ತು ಮುಂದಿನ ದಿನಗಳಲ್ಲಿ ನಿವೃತ್ತ ಯೋಧರಿಗೆ ವಿನಾಯಿತಿ,ಸ್ಥಳೀಯ ವಾಹನಗಳಿಗೆ ಸಮಸ್ಯೆ ನೀಡದಂತೆ,ಹೆದ್ದಾರಿ ದಾರಿದೀಪ,,ಸರ್ವಿಸ್ ರಸ್ತೆ ಇಲ್ಲದೆ ಅಪಘಾತ ಪ್ರಕರಣ ಕುರಿತಂತೆ ವಿಸ್ತ್ರತ ಚರ್ಚೆ ಏರ್ಪಟ್ಟಿತ್ತು ಟೋಲ್ ಮ್ಯಾನೇಜರ್ ತಿಮ್ಮಯ್ಯ ಎಕ್ಸ್ ಮಿಲಿಟರಿ:ಸಾಸ್ತಾನ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಸಾಹಿತ್ಯ ಸಂಗೀತಗಳೆರಡು ಸರಸ್ವತಿ ದೇವಿಯ ಸ್ತನದ್ವಯಗಳು ಎಂಬ ಉಕ್ತಿಯಿದೆ. ಸಾಹಿತ್ಯ ಮತ್ತು ಸಂಗೀತಗಳು ಮೇಳೈಸಿದಾಗ ಮನೋರಂಜನೆಯೊಂದಿಗೆ ಬೌದ್ಧಿಕ ವಿಕಾಸವೂ ಸಾಧ್ಯವಾಗುವುದು. ಪುರಾತನ ಮತ್ತು ನವೀನ ಕವಿ ಸಾಹಿತ್ಯಗಳ ರಾಗ ಭಾವಪೂರ್ಣ ಓದು ಗಮಕ ಕಲೆಯಾಗಿ ಪರಂಪರೆಯಿಂದ ಬೆಳೆದುಬಂದಿದೆ. ಯುವ ಜನತೆ ಗಮಕದತ್ತ ಒಲಿದು ಬರಬೇಕು” ಎಂದು ತಾಲೂಕು ಘಟಕ ಗಮಕ ಕಲಾಪರಿಷತ್ತಿನ ಅಧ್ಯಕ್ಷ ಎಚ್. ಸುಜಯೀಂದ್ರ ಹಂದೆ ಹೇಳಿದರು. ಅವರು ಕೋಟದ ಸು.ವಿ.ಕಾ. ಸಾಂಸ್ಕೃತಿಕ ಸಂಘಟನೆಯ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆ ಮನೆಯಲ್ಲಿ ನಡೆದ ಅಕಾಡೆಮಿಯ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸಂದರ್ಭದಲ್ಲಿ ನಡೆಸಿದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಘವಾಂಕ ಕವಿಯ ಹರಿಶ್ಚಂದ್ರ ಚರಿತ್ರೆಯ ವಿರೂಪಾಕ್ಷ ಸಾಕ್ಷಾತ್ಕಾರ ಭಾಗವನ್ನು ಗಮಕಿ ಕಾವ್ಯ ಹಂದೆ ವಾಚಿಸಿದರು. ಸುಜಯೀಂದ್ರ ಹಂದೆ ವ್ಯಾಖ್ಯಾನ ಮಾಡಿದರು. ಜಿ.ಎಸ್. ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶೀನಾಥ್ ಪೈ, ಕಲಾ ಸಾಹಿತಿ ಜನಾರ್ದನ ಹಂದೆ, ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ರುವಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಮ್ಮ ದೇಶದಲ್ಲಿ ಗುರುಕುಲ ಮಾದರಿಯ ಶಿಕ್ಷಣ ಪದ್ದತಿಯನ್ನು ಜಾರಿಗೆ ತರಬೇಕು ಎಂದು ಕೇಮಾರಿನ ಸಾಂದೀಪನಿಸಾಧನಾಶ್ರಮದ ಶ್ರೀ ಈಶ ವಿಠಲದಾಸ ಶ್ರೀಪಾದಂಗಳ ನುಡಿದರು. ಅವರು ಭಾನುವಾರ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್‌ನಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕಿನ ಸಾಸ್ತಾನ ಮಂಡಲದ ಆಶ್ರಯದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಆಶ್ರೀವಚನ ನೀಡಿ ಮಾತನಾಡಿದರು. ಹಿಂದೆ ಗುರುಕುಲ ಮಾದರಿ ಶಿಕ್ಷಣ ಇದಿತ್ತು ಆದರೆ ಇಂದು ಗುಲಾಮಿ ಶಿಕ್ಷಣದಿಂದ ಇಡೀ ದೇಶವೇ ಸಮಸ್ಯೆ ಎದುರಿಸುತ್ತಿದ್ದೇವೆ. ಸಂಸ್ಕಾರಭರಿತ ಶಿಕ್ಷಣವನ್ನು ನಮ್ಮ ಮುಂದಿನ ತಲೆಮಾರಿಗೆ ತಾಯಂದಿರರು ನೀಡಬೇಕಿದೆ, ಆಂಗ್ಲ ಶಿಕ್ಷಣ ವ್ಯಾಮೂಹದಿಂದ ನಮ್ಮ ಸಂಪ್ರದಾಯ ಪರಂಪರೆಯನ್ನು ಮರೆತು ಬಿಡುತ್ತಿದ್ದೇವೆ ಇದರ ದುಷ್ಪರಿಣಾಮ ಇಂದು ಅನುಭವಿಸುತ್ತಿದ್ದೇವೆ ಇದಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮರ್ಪಣಾ ಮನೋಭಾವದಿಂದ ಹಗಲು ರಾತ್ರಿ ಎನ್ನದೆ ಕಾರ್ಯನಿರ್ವಹಿಸುತ್ತಿದೆ. ಹಿಂದೂ ಸಮುದಾಯದ ಮಕ್ಕಳಿಗೆ ಭಗವದ್ಗೀತೆ, ರಾಮಾಯಣ ಮಹಾಭಾರತದಂತ ಕಾವ್ಯವನ್ನು ಪ್ರತಿದಿನ ಓದಿಸಿ ಹಿಂದೂ ಧರ್ಮವನ್ನು ನಿರಂತರ ಜಾಗೃತಗೊಳಿಸುವ ಕೆಲಸ ನಮ್ಮ ಪೋಷಕರಿಂದಾಗಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ವಿದ್ಯಾಗಿರಿ: ‘ಕ್ರೀಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ’ ಎಂದ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರು, ‘ಜಾತಿ ಮತ ಮೀರಿದ ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರತೆಯ ಅಡಿಪಾಯ’ ಎಂದು ಸಂದೇಶ ನೀಡಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆ ವನಜಾಕ್ಷಿ ಶ್ರೀಪತಿ ಭಟ್ ಬೃಹತ್ ವೇದಿಕೆಯಲ್ಲಿ ಸೋಮವಾರ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ವೈವಿಧ್ಯತೆಯಲ್ಲಿ ಏಕತೆಯೇ ದೇಶದ ಸುಭದ್ರತೆ. ಈ ಸದೃಢತೆಗೆ ನ್ಯಾಯಾಲಯದ ಕ್ರೀಯಾಶೀಲ ಪಾತ್ರ ಬಹುಮುಖ್ಯ. ಕಾನೂನು ಉಲ್ಲಂಘನೆ, ಅರಾಜಕತೆ ಮತ್ತಿತರ ಸಂದರ್ಭಗಳಲ್ಲಿ ನ್ಯಾಯಾಲಯವು ಪ್ರಜಾಪ್ರಭುತ್ವ ಚಿಂತನೆ ಮೂಲಕ ಪ್ರತಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ. ಪ್ರಜಾಪ್ರಭುತ್ವದ ಕಾವಲು ನಾಯಿಯಂತೆ ನ್ಯಾಯಾಲಯ ಎಚ್ಚರದಿಂದ ಕಾರ್ಯ ನಿರ್ವಹಿಸುತ್ತದೆ ಎಂದು ವಿವರಿಸಿದರು. ‘ಸ್ವಾತಂತ್ರಯದ ಸದ್ಬಳಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ’ಎಂದ ಅವರು, ‘ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆ ನಮ್ಮ ಸ್ವಾತಂತ್ರ‍್ಯದ ಮೂಲ ಮಂತ್ರವಾಗಿದೆ. ಇದಕ್ಕೆ 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಹಾಗೂ 1942ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿಶ್ವಕ್ಕೆ ಸದ್ವಿಚಾರ, ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಶ್ರೇಷ್ಠ ಮೌಲ್ಯಗಳನ್ನು ನೀಡಿರುವ ದೇಶ ನಮ್ಮದು. ಈ ಹಿರಿಮೆಯನ್ನು ಅರಿತು ನಾವೆಲ್ಲರೂ ಜಾತಿ, ಮತ, ಪ್ರಾಂತ್ಯದಂತಹ ಸಂಕುಚಿತ ಭಾವನೆಗಳನ್ನು ಮೀರಿ ದೇಶದ ಅಭಿವೃದ್ಧಿಗೆ ಹಾಗೂ ಉತ್ತಮ ಭವಿಷ್ಯಕ್ಕೆ ಕೊಡುಗೆ ನೀಡಬೇಕು ಎಂದರು. ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಹಾಗೂ ಕಾಲೇಜಿನ ಭೋದಕ, ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅವರು 77ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ‌ ಎಂದರು. ವಾರಾಹಿ ನೀರಾವರಿ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರ ಕಚ್ಚಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಇದು ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಅವರ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ.‌…

Read More

ಕರಾವಳಿ ಪ್ರವಾಸೋಧ್ಯಮ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅವರು ಸೇಂಟ್ ಮೇರೀಸ್ ಐಲ್ಯಾಂಡ್‌ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಐಲ್ಯಾಂಡ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ ಗಳೂ ನಿರ್ಲಕ್ಷ್ಯಕ್ಕೊಳಗಾಗಿದೆ. ಇಂತಹ ಅತ್ಯದ್ಭುತ ಸಂಪನ್ಮೂಲಗಳಿದ್ದರೂ ನಾವು ಪ್ರವಾಸೋದ್ಯಮದ ದೃಷ್ಟಿಯಿಂದ ಬಳಸಿಕೊಳ್ಳಲು ವಿಫಲರಾಗಿದ್ದೇವೆ. ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಕರಾವಳಿ ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ ಇಡೀ ದಿನ ವಿಚಾರಸಂಕಿರಣವೊಂದನ್ನು ಆಯೋಜಿಸಲಾಗಿತ್ತು. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕರಾವಳಿ ಜಿಲ್ಲೆಗಳ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿರುವ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಸಲು ನಾವು…

Read More