Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ ರಾಜ್ಯಮಟ್ಟದ ಕೆ.ಸಿ.ಇ.ಟಿ (KCET) ಪರೀಕ್ಷೆಯಲ್ಲಿ ಕುಂದಾಪುರದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಏಪ್ರಿಲ್ 23 ಮತ್ತು 24 ರಂದು ನಡೆದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಜ್ಯಮಟ್ಟದ ಸಿಇಟಿ ಪರೀಕ್ಷೆಯಲ್ಲಿ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸುಜ್ಞಾನ ನೀಟ್‌ ಅಕಾಡೆಮಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಧನುಷ್‌ ದೇವಾಡಿಗ(ಎನ್‌ ಎಲ್‌ ಟಿ) ರಾಜ್ಯಮಟ್ಟದಲ್ಲಿ 391ನೇ ರ‍್ಯಾಂಕ್, ಇಂಚರಾ 616ನೇ ರ‍್ಯಾಂಕ್, ಸಮ್ಮೆದ ಪಾರೀಸ್‌  888ನೇ ರ‍್ಯಾಂಕ್, ಪ್ರಿಯಾಂಕ ಶೆಟ್ಟಿ 2680ನೇ ರ‍್ಯಾಂಕ್, ಸೃಷ್ಟಿ ಶಿವಾಜಿ 3345ನೇ ರ‍್ಯಾಂಕ್, ಸಿಂಚನಾ  4731ನೇ,  ರಜತ್‌ ಅಡಿಗ 5389ನೇ, ಕೌಶಿಕ್‌ ಶೆಟ್ಟಿ 6093, ಜಯರಾಜ್‌ ಜೆ.ಎಸ್‌ 6166, ಪೃಥ್ವಿಕ್‌ 5357ನೇ ರ್ಯಾಂಕ್‌ ಎಂಬ ವಿದ್ಯಾರ್ಥಿಗಳು ಹತ್ತು ಸಾವಿರ ಒಳಗಡೆ ರ‍್ಯಾಂಕ್ ಗಳಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಪಡುಕರೆಯ ಗೀತಾನಂದ ಫೌಂಡೇಶನ್  ವತಿಯಿಂದ ಮಣೂರು-ಪಡುಕರೆಯ ಕೆ.ಸಿ. ಕುಂದರ್ ಸ್ಮರಣಾರ್ಥ  ಆನಂದೋತ್ಸವ ಕಾರ್ಯಕ್ರಮವು ಶನಿವಾರ ಮಣೂರು ಪಡುಕರೆ ಗೀತಾನಂದ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ನಾಡೋಜ ಫ್ಯಾಮಿಲಿ ಟ್ರಸ್ಟ್ ಮುಖ್ಯಸ್ಥ ಡಾ. ಜಿ. ಶಂಕರ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ನೋಟ್ ಬುಕ್ ಹಸ್ತಾಂತರಿಸಿ ಮಾತನಾಡಿ, ಆನಂದ್ ಸಿ. ಕುಂದರ್ ಈ ಸಮಾಜದ ಆಸ್ತಿಯಾಗಿ ಕರಾವಳಿ ಕಡಲ ತಟವನ್ನು ಶಿಕ್ಷಣ ಕಾಶಿಯಾಗಿಸಿದ್ದಾರೆ, ತನ್ನ ದುಡಿಮೆಯ ಹಣದಲ್ಲಿ ಸಮಾಜಕ್ಕಾಗಿ ಧಾರೆ ಎರೆಯುವ ಕುಂದರ್ ಅವರ ಸಾಮಾಜಿಕ ಬದ್ಧತೆಯನ್ನು ಸಭೆಯಲ್ಲಿ ಕೊಂಡಾಡಿದರಲ್ಲದೆ ಪ್ರಸ್ತುತ ಅಳಿವಿನಂಚಿನಲ್ಲಿರುವ ಸರಕಾರಿ ಶಾಲೆಗಳಿಗೆ ಜೀವ ತುಂಬಿ ಪಡುಕರೆ ಎಂಬ ಗ್ರಾಮೀಣ ಭಾಗದ ಶಾಲೆಯನ್ನು ರಾಜ್ಯದಲ್ಲೆ ಮಾದರಿಯಾಗಿಸಿದ  ಆನಂದ್ ಸಿ ಕುಂದರ್ ಬಡವರ ಕಣ್ಣಿರೊರೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದರು. ಮಾಜಿ ಸಚಿವ ಕೆ. ಜಯ್ರಕಾಶ್ ಹೆಗ್ಡೆ ಪರಿಸರ ಪಾಠ ಸಭೆಯಲ್ಲಿ ಗೀತಾನಂದದ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿ, ಮಕ್ಕಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ನ್ಯಾಷನಲ್ ಹೈಸ್ಕೂಲು ಬಾರ್ಕೂರು ಹಾಗೂ ರೋಟರಿ ಕ್ಲಬ್ ಬಾರ್ಕೂರು (RI ಜಿಲ್ಲೆ 3182) ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನ ಶೈಲಿಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದ ಮುಖ್ಯ ಆಯೋಜಕರಾದ ರೋಟೇರಿಯನ್ P.H.F. ಎ. ರತ್ನಾಕರ ಶೆಟ್ಟಿ ಅವರು ಮಾತನಾಡಿ, “ಪ್ರಸ್ತುತ ದಿನಗಳಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಪದ್ಧತಿಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಂತ ತುರ್ತು ಅಗತ್ಯವಾಗಿದೆ” ಎಂದು ಒತ್ತಿ ಹೇಳಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೇತಾಲ್ಕರ್ ಅವರು ಮಾತನಾಡಿ, ಪ್ರಕೃತಿಯನ್ನು ಉಳಿಸುವಲ್ಲಿ ಮತ್ತು ಮುಂದಿನ ಪೀಳಿಗೆಗೆ ಪರಿಸರವನ್ನು ರಕ್ಷಿಸಿಡುವಲ್ಲಿ ವಿದ್ಯಾರ್ಥಿಗಳು ವಹಿಸಬಹುದಾದ ಮಹತ್ತರ ಪಾತ್ರದ ಕುರಿತು ಅಮೂಲ್ಯವಾದ ಮಾಹಿತಿ ಹಾಗೂ ಮಾರ್ಗದರ್ಶನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಜನಸಾಮಾನ್ಯರಲ್ಲಿ ರೋಗಗಳ ಹರಡುವುದು, ಅವುಗಳ ನಿಯಂತ್ರಣದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವ ಬಗ್ಗೆ, ಆರೋಗ್ಯ ಶಿಕ್ಷಣವನ್ನು ನೀಡಿ ಎಚ್ಚರದಿಂದಿರಲು ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಗಳನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂ / ಮಲೇರಿಯಾ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆ ಈಗಾಗಲೇ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ. ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳ ಸಂತಾನೋತ್ಪತಿ ವೃದ್ಧಿಗೊಂಡು, ಮಲೇರಿಯಾ, ಚಿಕನ್‌ಗೂನ್ಯಾ, ಡೆಂಗ್ಯೂ, ಫೈಲೇರಿಯಾ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಸಾರ್ವನಿಕರಿಗೆ ಇವುಗಳ ತಡೆಗಟ್ಟುವ ಕುರಿತು ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ, ರೋಗಗಳು ಹರಡದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಗಳು ಕಾರ್ಯಪ್ರವೃತ್ತರಾಗುವುದರೊಂದಿಗೆ ಸಮುದಾಯದ ಸಹಭಾಗಿತ್ವದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ. ಅದರಲ್ಲೂ ಬಹುಮುಖ್ಯವಾಗಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಗುರುವಾರ ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನೀತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ, ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಸಮಾಜಸೇವೆಯೇ ಜೀವಾಳವಾಗಿರಿಸಿಕೊಂಡು ಬಡ ವಿದ್ಯಾರ್ಥಿಗಳ ಪಾಲಿಗೆ ಒಂದು ಸಂಘಟನೆ ಆಶ್ರಯದಾತರಾಗಿರುವುದು ಬಲು ಅಪರೂಪ ಇಂತಹ ಸಂಘಟನೆಗಳಿಗೆ ನಮ್ಮ ಫೌಂಡೇಶನ್ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಸ್ತಾಂತರಿಸಿ ಮಾತನಾಡಿದ ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ ಪಂಚವರ್ಣ ಸಂಘಟನೆ ಸಾಮಾಜಿಕ ಬದ್ಧತೆ…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟೇಶ್ವರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ, ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ಜಂಟಿ ನೇತೃತ್ವದಲ್ಲಿ, ಕೋಟೇಶ್ವರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಹಳೆ ಅಳಿವೆ ಸಮುದ್ರ ತೀರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರಾಘವೇಂದ್ರ ಹರಪ್ಪನಕರೆ ಅವರು ವಹಿಸಿದ್ದರು. ​ಕಾರ್ಯಕ್ರಮದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸತೀಶ್ ಎಂ. ನಾಯಕ್, ಉಡುಪಿ ಜಿಲ್ಲಾ ಸಂಘಟನೆಯ ಅಶೋಕ ತೆಕ್ಕಟ್ಟೆ, ಗೌರವ ಅಧ್ಯಕ್ಷರಾದ ಆನಂದ್ ಕುಂದರ್, ನಿಕಟಪೂರ್ವ ಅಧ್ಯಕ್ಷರಾದ ನಾಗರಾಜ್ ಬಿಜಾಡಿ ಹಾಗೂ ಮಾಜಿ ಅಧ್ಯಕ್ಷರಾದ ಸುರೇಶ್ ಛಾತ್ರಬೆಟ್ಟು ಉಪಸ್ಥಿತರಿದ್ದರು. ​ಅಲ್ಲದೆ, ಸಂಘಟನೆಯ ಕಾರ್ಯದರ್ಶಿ ನಾಗರಾಜ್ ತೆಕ್ಕಟ್ಟೆ, ಕೋಟೇಶ್ವರ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹರೀಶ್ ಶೆಟ್ಟಿ, ಗುರಿಕಾರರಾದ ರಾಮ ನಾಯಕ್ ಬೀಜಾಡಿ, ಗೋಪಾಲ್ ಮೆಂಡನ್ ಪಡೈನಮನೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಗ್ರಾಮದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಮುಂದಿನ ಪೀಳಿಗೆಗೆ ಆಯುರ್ವೇದ ಪರಂಪರೆಯನ್ನು ದಾಟಿಸುವ ಉದಾತ್ತ ಉದ್ದೇಶದಿ೦ದ ನಿರ್ಮಿಸಲಾದ 250ಕ್ಕೂ ಹೆಚ್ಚು ಅಪರೂಪದ ಪ್ರಬೇಧದ ಗಿಡಮೂಲಿಕೆಗಳನ್ನೊಳಗೊಂಡ ಚಿತ್ರಕೂಟ ಔಷಧೀಯ ಸಸ್ಯಗಳ ಉದ್ಯಾನವನ (ಔಷಧಿ ವನ) ಮತ್ತು ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಔಷಧಿ ವನವನ್ನು ಉದ್ಘಾಟಿಸಿ, “ಸಾಮಾನ್ಯವಾಗಿ ಎರಡು ಮಾದರಿ ಇರುತ್ತದೆ. ಒ೦ದು, ಹಿಮಾಲಯ ನೋಡಲು ಅಲ್ಲಿಗೆ ಹೋಗುವುದು. ಇನ್ನೊಂದು, ಹಿಮಾಲಯವನ್ನೇ ತನ್ನ ಬಳಿಗೆ ಕರೆಸುವುದು. ಚಿತ್ರಕೂಟದ ಮುಖ್ಯಸ್ಥರಾದ ಡಾ. ರಾಜೇಶ್ ಬಾಯರಿ ಅವರು ಎರಡನೇ ಮಾದರಿಯನ್ನು ಆರಿಸಿಕೊಂಡಿದ್ದಾರೆ. ಸ್ವಂತ ಊರಿನಲ್ಲೇ ಉಳಿದು, ಸ್ಥಳೀಯ ಸಂಪನ್ಮೂಲ ಮತ್ತು ಪ್ರಕೃತಿಯನ್ನು ಬಳಸಿಕೊಂಡು ಗ್ರಾಮೀಣ ಭಾಗದಲ್ಲೂ ಜಾಗತಿಕ ಮಟ್ಟದ ಅದ್ಭುತ ಸಾಧನೆ ಮಾಡಬಹುದು ತೋರಿಸಿಕೊಟ್ಟಿದ್ದಾರೆ. ಅದಕ್ಕೆ ಚಿತ್ರಕೂಟ ಅಯುರ್ವೇದ ಸಂಸ್ಥೆಯೇ ಅತ್ಯುತ್ತಮ ಉದಾಹರಣೆ” ಎಂದು ಹೇಳಿದರು. “ವೈದ್ಯರು ಇಲ್ಲಿ ನಿರ್ಮಿಸಿರುವ ಚಿಕಿತ್ಸಾ ವ್ಯವಸ್ಥೆ ಮತ್ತು ದಿವ್ಯ ಪರಿಸರವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್‌ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಇತ್ತೀಚಿಗೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರೋತ್ಸಾಹಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೇಯಸ್ ಸುವರ್ಣ, ಸಾನ್ವಿ ಟೆಕ್ನಾಲಜೀಸ್, ಸಾಲಿಗ್ರಾಮ ಹಾಗೂ ರಾಜಲಕ್ಷ್ಮಿ ಆನಂದನ್, ಸೆಂಟರ್ ಹೆಡ್, ಸ್ಕೂಲ್ ಆಫ್ ಐಟಿ ಸ್ಕಿಲ್ಸ್, ಎಂಎಸ್‌ಡಿಸಿ, ಮಣಿಪಾಲ ಭಾಗವಹಿಸಿದ್ದರು. ಅತಿಥಿಗಳು ವಿದ್ಯಾರ್ಥಿಗಳ ನವೀನ ಯೋಜನೆಗಳನ್ನು ಶ್ಲಾಘಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಸೃಜನಶೀಲತೆ, ನವೀನ ಚಿಂತನೆ, ತಾಂತ್ರಿಕ ಕೌಶಲ್ಯ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳು ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಗತ್ಯವೆಂದು ತಿಳಿಸಿದರು. ವಿದ್ಯಾರ್ಥಿಗಳು ನಿರಂತರ ಕಲಿಕೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ ಕಾರ್ಯಕ್ರಮವು ಗುರುವಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪನ್ಯಾಸಕರು ಉತ್ತಮ ರೀತಿಯಲ್ಲಿ ಸಾಧನೆ ಮಾಡಬೇಕು. ಹೆಚ್ಚು ಸಂಶೋಧನಾ ಕ್ಷೇತ್ರ ಮತ್ತು ಇತರೆ ಜ್ಞಾನಪೂರ್ಣ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಾಪಕರ ಸಂಘದ ಅಧ್ಯಕ್ಷೆ ನಿಶಾ ಎಮ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ವಿದ್ಯಾಧರ ಪೂಜಾರಿ, ಕಾರ್ಯದರ್ಶಿ ಅರುಣ್ ಎ.ಎಸ್. ಜೊತೆ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ, ಖಜಾಂಚಿ ಮನೋಹರ ಉಪಾಧ್ಯಾಯ ಉಪಸ್ಥಿತರಿದ್ದರು. ಡಾಕ್ಟರೇಟ್ ಪದವಿ ಪಡೆದ ಆಂಗ್ಲ ಭಾಷಾ ಉಪನ್ಯಾಸಕ ಡಾ. ಶರಣ್ ಎಸ್ .ಜೆ. ಮತ್ತು ಕನ್ನಡ ಭಾಷಾ ಉಪನ್ಯಾಸಕ ಡಾ. ಸುಖಾನಂದ ಶೆಟ್ಟಿ ಮತ್ತು ಕರ್ನಾಟಕ…

Read More