ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಅಂಕದಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ಮುಂಜಾನೆ ನಡೆದ ಅಫಘಾತದಲ್ಲಿ ಕುಂದೇಶ್ವರ ದೇವಳದ ಅರ್ಚಕ ಕೋಟೇಶ್ವರದ ಉಮೇಶ್ ಮಂಜ (54) ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿಯಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಕೇರಳ ನೊಂದಣಿಯ ಇನೋವಾ ಕಾರೊಂದು ಅದೇ ಮಾರ್ಗವಾಗಿ ಮುಂಜಾನೆಯ ವೇಳೆಗೆ ಕೋಟೇಶ್ವರದಿಂದ ಕುಂದಾಪುರ ದೇವಸ್ಥಾನಕ್ಕೆ ನಡೆದು ಬರುತ್ತಿದ್ದ ಅರ್ಚಕ ಉಮೇಶ್ ಮಂಜ ಅವರಿಗೆ ಅಂಕದಕಟ್ಟೆ ಹೆದ್ದಾರಿಯ ಬದಿಯಲ್ಲಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಅರ್ಚಕರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇನ್ನೋವಾ ಕಾರು ಸಮೇತರಾಗಿ ಚಾಲಕ ಅಲ್ಲಿಂದ ತೆರಳಿ ಹೆಮ್ಮಾಡಿಯ ಗ್ಯಾರೇಜ್ವೊಂದರಲ್ಲಿ ರಿಪೇರಿಗೆ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಅಫಘಾತದ ಸಂದರ್ಭದಲ್ಲಿ ಬಿದ್ದಿದ್ದ ಇನೋವಾ ಕಾರಿನ ತುಣುಕಿನ ಆಧಾರದಲ್ಲಿ ವಾಹನವನ್ನು ಪತ್ತೆಹಚ್ಚಲಾಗಿಯಿತು. ಕುಂದೇಶ್ವರ ದೇವಳದಲ್ಲಿ ಅರ್ಚಕ ಹಾಗೂ ಜ್ಯೋಷಿತಿಯಾಗಿದ್ದ ಉಮೇಶ್ ಮಂಜ ಅವರು ಪತ್ನಿ ಹಾಗೂ ಈರ್ವ ಮಕ್ಕಳನ್ನು ಅಗಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಟಿ.ಟ. ರಸ್ತೆಯ ಶಿವಾಜಿ ಕ್ರಿಕೆಟರ್ಸ್ ಆಶ್ರಯದಲ್ಲಿ ಬಡ ರೋಗಿಗಳ ಸಹಾಯಾರ್ಥವಾಗಿ ಶಿವಾಜಿ ಟ್ರೋಫಿ ಕ್ರಿಕೆಟ ಪಂದ್ಯಾಟ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರದ ಚಾಲೆಂಜ್ ಕ್ರಿಕೆಟರ್ಸ್ ಅಂತಿಮ ಪಂದ್ಯದಲ್ಲಿ ಜಾನ್ಸನ್ ತಂಡವನ್ನು ಸೋಲಿಸಿ ಪಶಸ್ತಿ ತನ್ನದಾಗಿಸಿಕೊಂಡಿತ್ತು. ಚಾಲೆಂಜ್ ತಂಡದ ನವೀನ ಉತ್ತಮ ಬ್ಯಾಟ್ಸiನ, ದಿನೇಶ ಮದ್ದುಗುಡ್ಡೆ ಉತ್ತಮ ಎಸೆತಗಾರ, ದಯಾನಂದ ಉತ್ತಮ ಗೂಟರಕ್ಷಕ ಹಾಗೂ ಜಾನ್ಸನ ತಂಡದ ಅನಿಲ್ ಸರಣಿ ಶೇಷ್ಟರಾಗಿ ಮೂಡಿಬಂದರು. ಯೋಗಗುರು ರಘುವೀರ ನಗರಕರ, ಸಂಚಾರಿ ಠಾಣೆಯ ಠಾಣಾಧಿಕಾರಿ ಕೆ.ಜಯ, ವಿದ್ಯುತ್ ಗುತ್ತಿಗೆದಾರರಾದ ಕೆ.ಆರ್ ನಾಯ್ಕ, ಉದ್ಯಮಿ ಧರ್ಮಪ್ರಕಾಶ, ಪತ್ರಕರ್ತರಾದ ನಾಗರಾಜ್ ರಾಯಪ್ಪನಮಠ, ಸಂಸ್ಥೆಯ ಗೌರವಾದ್ಯಕ್ಷರಾದ ರಾಜು ಪೂಜಾರಿ ಕೈಪಾಡಿ, ಅದ್ಯಕ್ಷರಾದ ರಾಜು ದೇವಾಡಿಗ ಬಹುಮಾನ ವಿತರಿಸಿದರು. ರಾಘವೇಂದ್ರ ದೇವಾಡಿಗ ಆನಗಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಮ್ಮಾಡಿ ಶ್ರೀ ಕಾಶೀ ಮಠದಲ್ಲಿ ಶ್ರೀ ಮಹಾ ವಿಷ್ಣು ಯಾಗದ ಪೂರ್ಣಾಹುತಿ ಕಾಶೀ ಮಠಾಧೀಶ ಶ್ರೀ ಶ್ರೀ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತದಿಂದ ನೆರವೇರಿತು. ಈ ಸಂದರ್ಭದಲ್ಲಿ ಮಠದ ಭಕ್ತಾಧಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಲ್ಲ ಕ್ಷೇತ್ರಗಳಲ್ಲಿ ಬದಲಾವಣೆಗಳು ಆಗುತ್ತಿವೆ. ಧಾರ್ಮಿಕ ಕ್ಷೇತ್ರವೂ ಬದಲಾವಣೆಗಳಿಗೆ ಹೊಂದಿಕೊಳ್ಳಬೇಕು. ಅದು ಸಾಮಾಜಿಕ ಬದ್ಧತೆಯಿಂದ ಕೆಲಸಮಾಡಬೇಕಾದ ಅನಿವಾರ್ಯತೆ ಇದೆ ಎಂದು ಇಡಗುಂಜಿಯ ಸಿದ್ಧಿವಿನಾಯಕ ಕ್ಷೇತ್ರದ ಆಡಳಿತ ಧರ್ಮದರ್ಶಿ ಡಾ. ಜಿ. ಜಿ. ಸಭಾಹಿತ ಹೇಳಿದರು. ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಪುನರ್ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶೋತ್ಸವದ ವರ್ಧಂತ್ಯುತ್ಸವದ ನಿಮಿತ್ತ ಶನಿವಾರ ನಡೆದ ಧರ್ಮಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ದೇವಾಲಯಗಳ ಜೀರ್ಣೋದ್ಧಾರ ನಡೆದರೆ ಅವು ಸಮಾಜದ ನೆಮ್ಮದಿಯ ತಾಣಗಳಾಗುತ್ತವೆ. ಜನರು ತಮ್ಮ ದುಡಿಮೆಯ ಹಣವನ್ನು ದೇವಾಲಯಕ್ಕೆ ನೀಡಿದರೆ ಅದರಿಂದ ಸತ್ಫಲ ಪ್ರಾಪ್ತಿಯಾಗುತ್ತದೆ. ದೇವರಿಗೂ ತನ್ನ ಭಕ್ತರು ಚೆನ್ನಾಗಿರಬೇಕೆಂಬ ಇಚ್ಛೆ ಇರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದ ಮಾಜಿ ಆಡಳಿತ ಧರ್ಮದರ್ಶಿ ಬಿ. ಎಂ. ಸುಕುಮಾರ ಶೆಟ್ಟಿ ದೇವಸ್ಥಾನ ಶ್ರದ್ಧಾಕೇಂದ್ರ. ಅದರ ಆಡಳಿತ ಮಂಡಳಿಯಲ್ಲಿ ರಾಜಕೀಯೇತರ ಪ್ರಾಮಾಣಿಕ ವ್ಯಕ್ತಿಗಳಿರಬೇಕು. ಹಾಗಿದ್ದರಷ್ಟೆ ಆ ದೇವಸ್ಥಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ತಗ್ಗರ್ಸೆ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವರ ಎರಡನೇ ಪ್ರತಿಷ್ಟಾ ವರ್ಧಂತ್ಯೋತ್ಸದ ಪ್ರಯುಕ್ತ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಉದ್ಯಮಿ ಟಿ. ನಾರಾಯಣ ಹೆಗ್ಡೆ ಮತ್ತು ಮಕ್ಕಳು ಶ್ರೀದೇವರಿಗೆ ರಜತ ಕವಚ ಮತ್ತು ದಾನಿಗಳು ಹಾಗೂ ಸಾರ್ವಜನಿಕರ ನೆರವಿನಿಂದ ಬೆಳ್ಳಿಯ ಪ್ರಭಾವಳಿ ಸಮರ್ಪಿಸಲಾಯಿತು. ಈ ಸಂದರ್ಭ ವಂಡ್ಸೆ ಜಿಪಂ ಸದಸ್ಯ ಕೆ. ಬಾಬು ಶೆಟ್ಟಿ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವವರಿಗೆ ಈ ಭಾರಿ ನೀರಿನ ಅಭಾವದಿಂದ ಬರ ಎದುರಿಸುತ್ತಿರುವಾಗ ಕೆರಾಡಿ ಗ್ರಾಮ ಏಕಾಏಕಿ ಮನೆ ತೆರಿಗೆ ಪರಿಷ್ಕರಣೆ ಮೂಲಕ ಐದಾರು ಪಟ್ಟು ತೆರಿಗೆ ಏರಿಸಿ ಗಾಯದ ಮೇಲೆ ಬರೆ ಎಳೆದಿದೆ. ಹೆಚ್ಚಳವಾಗಿ ಮಾಡಿರುವ ತೆರಿಗೆಯನ್ನು ಕೈಬಿಡದಿದ್ದರೆ, ಗ್ರಾಪಂಗೆ ತೆರಿಗೆ ಪಾವತಸದೇ ಪ್ರತಿಭಟಿಸಲಾಗಿತ್ತದೆ ಎಂದು ಕೆರಾಡಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ ಎಚ್ಚರಿಸಿದ್ದಾರೆ. ಕೆರಾಡಿ ಗ್ರಾಪಂ. ಎದುರು ಮನೆ ತೆರಿಗೆ ಪರಿಷ್ಕಣೆ ವಿರುದ್ಧ ಬೆಳ್ಳಾಲ, ಕೆರಾಡಿ ಗ್ರಾಮಸ್ಥರು ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ಕೆರಾಡಿ ಮತ್ತು ಬೆಳ್ಳಾಲದಲ್ಲಿ ಕೃಷಿ ಕೂಲಿ ಕಾರ್ಮಿಕರು ವಾಸಿಸುತ್ತಿದ್ದು, ಆರ್ಥಿಕವಾಗಿ ಹಿಂದುಳಿದವರ ಮೇಲೆ ಗ್ರಾಪಂ ಹೆಚ್ಚು ತೆರಿಗೆ ಬರೆ ಎಳೆದಿದೆ. ಗ್ರಾಪಂ ತಕ್ಷಣ ತೆರಿಗೆ ಏರಿಕೆ ಕೈಬಿಡದಿದ್ದರೆ, ತೆರಿಗೆ ಹೆಚ್ಚಳ ಕೈ ಬಿಡುವವರೆಗೂ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಗ್ರಾಪಂ ಅಭಿವೃದ್ಧಿ ಹೆಸರಲ್ಲಿ ತೆರಿಗೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದು, ಜನರನ್ನು ಕತ್ತಲಲ್ಲಿಟ್ಟು ತೆರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಿ ಅತ್ಯಂತ ತಳಮಟ್ಟದಲ್ಲಿ ಜೀವನ ನಡೆಸುತ್ತಿರುವವರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವಂತೆ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆ ತರುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರವಹಿಸಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಯಡ್ತರೆ ಜೆಎನ್ಆರ್ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ವಲಯದ ಯಡ್ತರೆ, ಬೈಂದೂರು, ಪಡುವರಿ, ತಗ್ಗರ್ಸೆ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವ-ಸಹಾಯ ಸಂಘದ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪ್ರದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಒಕ್ಕೂಟದ ಸದಸ್ಯರು ಒಗ್ಗಟ್ಟಾಗಿ ಯಾವುದೇ ಹೆಚ್ಚಿನ ಫಲಾಪೇಕ್ಷೆ ಇಲ್ಲದೇ ಕಾರ್ಯನಿರ್ವಹಿಸಿದರೆ ಇನ್ನಷ್ಟು ಅಭಿವೃದ್ಧಿ ಕಾಣಲು ಸಾಧ್ಯವಿದೆ. ರಾಜ್ಯಾದ್ಯಂತ ಶ್ರೀಕ್ಷೇತ್ರದ ಮೂಲಕ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ತಂದು ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ, ಮಹಿಳೆಯರು ಆರ್ಥಿವಾಗಿ ಸ್ವಾವಲಂಬಿ ಜೀವನ ನಡೆಸುನ ವಾತಾವರಣ ನಿರ್ಮಾಣ, ಜನಜಾಗೃತಿ ವೇದಿಕೆಯ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣದಂತಹ ಮಹತ್ಕಾರ್ಯಗಳು ನಡೆಯುತ್ತಿದ್ದು, ಹತ್ತು-ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಟಾನಗೊಳಿಸುತ್ತಿರುವುದು ಶ್ಲಾಘನೀಯ ಎಂದರು. ಯಡ್ತರೆ ಗ್ರಾಪಂ ಅಧ್ಯಕ್ಷ ಎನ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಪಂ ವ್ಯಾಪ್ತಿಯ ಕುಂಜಳ್ಳಿ ಎಂಬಲ್ಲಿ ಯುವಕನೋರ್ವ ಗೇರುಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ವರದಿಯಾಗಿದೆ. ಕುಂಜಳ್ಳಿಯ ನಿವಾಸಿ ನಾರಾಯಣ ಶೆಟ್ಟಿ ಎಂಬುವವರ ಮಗ ಪ್ರವೀಣ್ (25) ಆತ್ಮಹತ್ಯೆಗೆ ಶರಣಾದ ದುರ್ದೈವಿ. ತನ್ನ ಪರಿಚಿತ ಯುವತಿ ಪ್ರೀತಿಯನ್ನು ನಿರಾಕರಿಸಿದ್ದರಿಂದ ಹತಾಶನಾದ ಯುವಕ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದ್ದು, ತನಿಕೆ ನಡೆಯುತ್ತಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಮ್ಮ ಹಿರಿಯರು ಸಮಾಜದ ಅಭಿವೃದ್ಧಿಗಾಗಿ ದೇವ ಗುರು ಮಂದಿರಗಳನ್ನು ಸ್ಥಾಪಿಸಿ ಸಮಾಜಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟು ಸನ್ಮಾರ್ಗದಲ್ಲಿ ಮುನ್ನಡೆಯಲು ಉತ್ತಮ ಮಾರ್ಗದರ್ಶನಗಳನ್ನು ನೀಡುತ್ತಾ ಬಂದಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕಡೆಗಳಲ್ಲಿ ಬೇರೆ ಬೇರೆ ಕಾರಣಗಳಿಂದ ಊರಿನಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಪ್ರತಿಯೊಂದು ಊರಿನಲ್ಲಿರುವ ದೇವ ಮಂದಿರಗಳನ್ನು ಸಂರಕ್ಷಿಸುವ ಬಗ್ಗೆ ಗಮನ ಹರಿಸಬೇಕು. ಜಿಎಸ್ಬಿ ಸಮಾಜಬಾಂಧವರು ಒಗ್ಗಟ್ಟಾಗಿ ಎಲ್ಲಾ ಕಾರ್ಯಗಳನ್ನು ನಡೆಸಬೇಕು ಎಂದು ಶಿರಾಲಿಯ ಉದ್ಯಮಿ ವೆಂಕಟೇಶ ಪ್ರಭು ಹೇಳಿದರು. ಅವರು ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದ್ವಾರಕಾನಾಥ ಕಲ್ಯಾಣ ಮಂಟಪದಲ್ಲಿ ಜರಗಿದ ಗಂಗೊಳ್ಳಿಯ ನಿನಾದ ಸಂಸ್ಥೆಯ 11ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಜಿಎಸ್ಬಿ ಸಮಾಜವನ್ನು ಇಂದು ಎಲ್ಲಾ ಸಮಾಜದವರು ಅನುಕರಣೆ ಮಾಡುತ್ತಿದ್ದಾರೆ. ಆದರೆ ನಾವು ಬೇರೆ ಸಂಸ್ಕೃತಿಯನ್ನು ಅನುಸರಿಸಿ ನಮ್ಮ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದೇವೆ. ನಿನಾದ ಸಂಸ್ಥೆಯು ಭಜನೆ ಮೂಲಕ ಪ್ರತಿಯೊಂದು ಕಡೆಗಳಲ್ಲಿ ಉತ್ತಮ ಸಂಸ್ಕೃತಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿಗೆ ಸಮೀಪದ ಯಡಬೆಟ್ಟು ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿ ಹಡೋಲು ಬಿದ್ದಿದ್ದ ಏಳು ಎಕರೆ ಕೃಷಿ ಭೂಮಿಗೆ ಬೆಂಕಿ ಬಿದ್ದಿದ್ದು ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡೆಬೇಕಾಯಿತು. ಸಂಜೆ 5 ಗಂಟೆರ ಸುಮಾರು ಚಿಕ್ಕದಾಗಿ ಕಾಣಿಸಿಕೊಂಡ ಬೆಂಕಿ ಗಾಳಿಗೆ ಮೆಲ್ಲನೆ ಹಬ್ಬಿ, ಯಡಬೆಟ್ಟು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬಳಿಯವರೆಗೆ ಸುಮಾರು 7 ಎಕರೆ ಜಾಗದವರೆಗೆ ಆಕ್ರಮಿಸಿತ್ತು. ಅಷ್ಟು ಜಾಗದಲ್ಲಿದ್ದ ಒಣಗಿದ ಹುಲ್ಲು ಕಡ್ಡಿಗಳು ಇದ್ದುದರಿಂದ ಬೆಂಕಿಯ ತೀವ್ರತೆ ಹೆಚ್ಚುತ್ತಿರುವುದನ್ನು ಗಮನಿಸಿ ಸ್ಥಳೀಯರು ಹಸಿ ಮರದ ಕೊಂಬೆಗಳ ಮೂಲಕ ಬೆಂಕಿ ನಂದಿಸುವ ಪ್ರಯತ್ನ ಮಾಡಿದರೂ ಕೂಡ, ಬೆಂಕಿ ನಿಧಾನವಾಗಿ ಮುಂದುವರಿಯುತ್ತಾ ಸಾಗಿತ್ತು. ಬಳಿಕ ಕುಂದಾಪುರ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಯಿಸಲಾಯಿತು. ಸುಮಾರು ಒಂದು ಗಂಟೆಗಳ ಹರಸಾಹಸದ ಬಳಿಕ ಬೆಂಕಿ ಸಂಪೂರ್ಣ ನಂದಿಸುವಲ್ಲಿ ಆಗ್ನಿಶಾಮಕ ಇಲಾಖೆ ಸಫಲವಾಯಿತು. ಘಟನಾಸ್ಥಳಕ್ಕೆ ಪಾಂಡೇಶ್ವರ ಪಂಚಾಯಿತಿ ಅಧ್ಯಕ್ಷ ಗೋವಿಂದ ಉಪಸ್ಥಿತರಿದ್ದ, ಸ್ವತಃ ಬೆಂಕಿ ನಂದಿಸುವ…
