ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬಲ್ಮಟದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನೆಗೊಂದು ಮರ ಊರಿಗೊಂದು ವನ ಎಂಬ ನಾಣ್ಣುಡಿಯಂತೆ ಭಾನುವಾರ ಮೊಗವೀರ ಸಂಘದ ಮಾರ್ಗದರ್ಶಕರಾದ ನಾಡೋಜ ಡಾ. ಜಿ ಶಂಕರ್ ಅವರ 70ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮೊಗವೀರ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ವತಿಯಿಂದ ವಿನೂತನವಾಗಿ ಮನೆಮನೆಗೂ ಹಸಿರು ಕಾರ್ಯಕ್ರಮದಡಿ ಮನೆಗೊಂದು ಸಸಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಸಂಘಟನೆಯ ಕಾರ್ಯಕರ್ತರಾದ ಜಗದೀಶ್ ಮೇಸ್ತ್ರಿ ಅವರ ಮನೆಯಲ್ಲಿ ಗಿಡ ನೆಡುವುದರ ಮೂಲಕ ಚಾಲನೆ ನೀಡಲಾಯಿತು. ನಂತರ ತಂಡವಾಗಿ ವಿವಿದೆಡೆ ಮನೆಮನೆಗೆ ಭೇಟಿ ನೀಡಿ 70ರ ಹುಟ್ಟುಹಬ್ಬದ ನೆನಪಿಗಾಗಿ 70 ಮನೆಗಳಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು. ಇದೇ ವೇಳೆ ಸ್ಥಳೀಯವಾಗಿ ಅಶಕ್ತರಿಗೆ ಮನೆಗಳಿಗೆ ತೆರಳಿ ಅನಾರೋಗ್ಯಕ್ಕೆ ತುತ್ತಾದವರಿಗೆ ಸಾಂತ್ವನ ಹೇಳಿ ಅವರಿಗೆ ಧೈರ್ಯ ತುಂಬಲಾಯಿತು. ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷರಾದ ರಾಘವೇಂದ್ರ ಹರಪ್ಪನಕೆರೆ ಅಧ್ಯಕ್ಷೆತೆಯಲ್ಲಿ ಈ ಕಾರ್ಯಕ್ರಮ ಜರಗಿತು. ಸಂಘದ ಕೋಟೇಶ್ವರ ಘಟಕದ ಸ್ಥಾಪಕ ಅಧ್ಯಕ್ಷ ಸತೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಸ್ವಿಫ್ಟ್ ಕಾರಿಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ, ದುಷ್ಕೃತ್ಯ ಮೆರೆದ ಘಟನೆ ತಾಲೂಕಿನ ಕಾವ್ರಾಡಿಯ ನೂರಾನಿ ಮಸೀದಿ ಸಮೀಪದ ರಸ್ತೆಯಲ್ಲಿ ಇತ್ತೀಚಿಗೆ ನಡೆದಿದೆ. ಕಾವ್ರಾಡಿ ಗ್ರಾಮದ ಶೇಖ್ ಮೊಹಮ್ಮದ್ ಗೌಸ್ ಮತ್ತು ಕುಟುಂಬದವರು ಅ.1 ರಂದು ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಅವರು ಪ್ರವಾಸಕ್ಕೆ ಹೋಗುವ 10 ದಿನಗಳ ಮೊದಲು 5 ಲಕ್ಷ ರೂಪಾಯಿ ಕೊಟ್ಟು ಸ್ವಿಫ್ಟ್ ಕಾರು ಖರೀದಿಸಿದ್ದರು. ಆದರೆ ಆ ಕಾರನ್ನು ಅವರ ಮನೆಗೆ ತೆಗೆದುಕೊಂಡು ಹೋಗಲು ಇತ್ತೀಚೆಗೆ ದಾರಿಯ ಸಮಸ್ಯೆ ಇದ್ದುದರಿಂದ ಕಾರನ್ನು ಕಾವ್ರಾಡಿಯ ನೂರಾನಿ ಮಸೀದಿಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಹೋಗಿದ್ದರು. ಅ.4 ರಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ಮೊಹಮ್ಮದ್ ಗೌಸ್ ಅವರ ತಮ್ಮ ಶೇಕ್ ಅನ್ಸಾರ್ ಸಾಹೇಬ್ ನಮಾಜಿಗೆ ಎದ್ದು ಬರುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಶೇಖ್ ಮೊಹಮ್ಮದ್ ಗೌಸ್ ಮತ್ತು ಅವರ ಮನೆಯವರಿಗೆ ಆರ್ಥಿಕವಾಗಿ ನಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಯಸ್ಸಿನಿಂದ ಮಾಗಿದ ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು. ಹಿರಿಯ ನಾಗರಿಕರನ್ನು ಗೌರವಿಸುವ ಜೊತೆಗೆ ಅವರ ಬದುಕಿಗೆ ಆತ್ಮಸ್ಥರ್ಯ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು. ವೃದ್ಧಾಪ್ಯದ ಕಾಲದಲ್ಲಿ ಅವರನ್ನು ಕಾಡುವ ಏಕಾಂಗಿತನ, ಅಭದ್ರತೆ, ಆರೋಗ್ಯ ಸಮಸ್ಯೆಗಳನ್ನು ಅರಿತು ಅವರ ಬದುಕಿಗೆ ಆಸರೆ ಮತ್ತು ಚೈತನ್ಯ ನೀಡುವ ನಿಟ್ಟಿನಲ್ಲಿ ಸಮಾಜವೂ ಮುಂದಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಮತ್ತು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 1 ಮತ್ತು 2 ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ರಾಮಕ್ಷತ್ರಿಯ ಯುವಕ ಸಮಾಜ ಶ್ರೀ ಸೀತಾರಾಮಚಂದ್ರ ದೇವಸ್ಥಾನದ 39ನೇ ವರ್ಷದ ಶಾರದೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ವೈಭವ ಸ್ಪರ್ಧೆಯಲ್ಲಿ ಪಡುವರಿಯ ಸೋಮೇಶ್ವರ ತಂಡವು ನಟಿಸಿದ ಕ್ಷಾತ್ರತೇಜ ನಾಟಕ ಪ್ರಥಮ ಸ್ಥಾನ ಗಳಿಸಿತು. ಬಹುಮಾನವನ್ನು ಬೈಂದೂರು ರಾಮಕ್ಷತ್ರಿಯ ಸಮಾಜ ಇದರ ಅಧ್ಯಕ್ಷರಾದ ರಾಮಕೃಷ್ಣ ಸಿ., ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ್ ಬಟವಾಡಿ, ಯುವಕ ಸಮಾಜದ ಗೌರವಾಧ್ಯಕ್ಷ ರವೀಂದ್ರಸೋಡಿ ತಾರ್, ಅಧ್ಯಕ್ಷರಾದ ರಾಜಶೇಖರ ರೊಕ್ಕನ್, ಗೌರವ ಕಾರ್ಯದರ್ಶಿ ಅಶೋಕ ಕೆ. ಕಾರ್ಯದರ್ಶಿ ಕೌಶಿಕ್ ಜಿಕೆ., ತಂಡದ ವ್ಯವಸ್ಥಾಪಕರಾದ ಹಾಗೂ ಮಾತ್ರ ಮಂಡಳಿಯ ಅಧ್ಯಕ್ಷರಾದ ಗಾಯತ್ರಿ ರಾಮ ಸೋಡಿತಾರ್ ಮತ್ತು ತಂಡಕ್ಕೆ ವಿತರಿಸಿದರು. ನಾಟಕ ಪರಿಕಲ್ಪನೆ ಮತ್ತು ನಿರ್ದೇಶನ ಗಣಪತಿ ಹೋಬಳಿದಾರ್ ಮಾಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹೋಬಳಿ ಶಾಖೆ ಕೋಟ ಇದರ ವತಿಯಿಂದ ಮಹಾತ್ಮ ಗಾಂಧೀ ಜಯಂತಿ ಆಚರಿಸಲಾಯಿತು. ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಶಾಮ್ ಸುಂದರ್ ತೆಕ್ಕಟ್ಟೆ, ಸುರೇಶ್ ಹಕ್ಲಾಡಿ, ಕುಂದಾಪುರ ತಾಲೂಕು ಸಂಚಾಲಕ ಕೆ. ಸಿ. ರಾಜು ಬೆಟ್ಟಿನಮನೆ, ಕುಮಾರ್ ಕೋಟ, ಕೋಟ ಹೋಬಳಿ ಶಾಖೆ ಸಂಚಾಲಕ ನಾಗರಾಜ್ ಪಡುಕರೆ,ಕುಂದಾಪುರ ತಾಲೂಕು ಸಂಘಟನಾ ಸಂಚಾಲಕ ಚಂದ್ರ ಕೊರ್ಗಿ, ವಿಜಯ ಗಿಳಿಯಾರ್, ರೈತ ಧ್ವನಿ ಕೋಟ ಇದರ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ,ಗೋಪಾಲ್ ಗಿಳಿಯಾರು, ದಿನೇಶ್ ಹೊಸಮಠ, ದಿನೇಶ್ ಮೊಳಹಳ್ಳಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿರಂತರ ಕಲಿಕೆ ಸಾಧ್ಯವಾದಾಗ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ. ಅದರಲ್ಲಿಯೂ ಸಂಶೋಧನಾತ್ಮಕ ಕಲಿಕೆಗೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಸಂಸ್ಥೆಯಲ್ಲಿ ಸಂಶೋಧನಾರ್ಥಿಗಳು ಹೆಚ್ಚಾದಷ್ಟು ಸಂಸ್ಥೆಯ ಮೌಲ್ಯ ಹೆಚ್ಚುತ್ತದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರಿಗೆ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಕೊಯಮತ್ತೂರಿನ ಭಾರತೀಯಾರ್ ವಿಶ್ವವಿದ್ಯಾನಿಲಯದಿಂದ “ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು”ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಅವರ ಧರ್ಮಪತ್ನಿ ಪೂರ್ಣಿಮಾ ಶೆಟ್ಟಿ, ಪುತ್ರಿ ಪೂರ್ವಿ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತಾಯ ಶುಭ ಹಾರೈಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ 51ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಶುಕ್ರವಾರ ಸಂಜೆ ತೆರೆ ಬಿದ್ದಿದೆ. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಯು ಮೇಲ್ಗಂಗೊಳ್ಳಿಯ ಬಾವಿಕಟ್ಟೆ ತನಕ ಸಾಗಿ ಮರಳಿ ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಸಾಗಿ ಬಂದು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಗಂಗೊಳ್ಳಿಯ ಬಂದರಿನಲ್ಲಿ ಪಂಚಗಂಗಾವಳಿ ನದಿಯಲ್ಲಿ ಶಾರದಾ ವಿಗ್ರಹದ ಜಲಸ್ತಂಭನ ಮಾಡಲಾಯಿತು. ಶೋಭಾಯಾತ್ರೆಯಲ್ಲಿ ಶ್ರೀ ಶಾರದಾ ಮಾತೆಯನ್ನು ನೋಡಿ ಕಣ್ತುಂಬಿಕೊಳ್ಳಲು ಜನತೆ ಸಾವಿರಾರು ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದರು. ಆಕರ್ಷಕ ಚಂಡೆ ವಾದನ, ಹುಲಿವೇಷ, ಗೊಂಬೆಗಳು, ಛದ್ಮವೇಷಗಳ ತಂಡ ಸೇರಿದಂತೆ ಹಲವು ವೇಷಗಳು ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದವು. ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ (ಪ್ರಭಾರ) ನಿಲೇಶ್ ಚೌಹಾಣ್ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕೋಣಿ ಎಂಬಲ್ಲಿ ಶುಕ್ರವಾರ ಮೃತರನ್ನು ಕೃಷ್ಣ ಪೂಜಾರಿ(45) ಎಂದು ಗುರುತಿಸಲಾಗಿದೆ. ಅ. 2ರ ರಾತ್ರಿ ಕುಂದಾಪುರ – ಸಿದ್ದಾಪುರ ರಸ್ತೆಯಲ್ಲಿ ಬಸ್ರೂರು ಮೂರುಕೈಯಿಂದ ಕೋಣಿ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದ ಅವರು ಬೈಕ್ ಆಯತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕೃಷ್ಣ ಪೂಜಾರಿ ತಲೆಗೆ ವಿದ್ಯುತ್ ಕಂಬ ತಾಗಿ ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅರಣ್ಯಗಳತ್ತಾ ನಮ್ಮ ನಿಲುವು ಸದಾ ವಿವೇಚನೆಯಿಂದ ಕೂಡಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ನುಡಿದರು. ಅವರು ಆಳ್ವಾಸ್ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಹಳೆ ವಿದ್ಯಾರ್ಥಿಗಳ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರಕೃತಿಯನ್ನು ಅವಲೋಕಿಸುವುದು ಬಹಳ ಮುಖ್ಯ. ಪ್ರಕೃತಿಯ ಪ್ರತಿಯೊಂದು ಅಂಶವೂ ನಮಗೆ ಬದುಕಿಗೆ ಪಾಠವನ್ನು ಕಲಿಸುತ್ತದೆ. ಪ್ರಕೃತಿ, ಕೇವಲ ಸಂಪನ್ಮೂಲವಲ್ಲ, ಅದು ಸುಖ-ಶಾಂತಿಯ ಅಮೂಲ್ಯ ಸಂಪತ್ತು. ಅದನ್ನು ಕಾಪಾಡುವುದು ನಮ್ಮ ನೈತಿಕ ಕರ್ತವ್ಯ ಮಾತ್ರವಲ್ಲ, ಭವಿಷ್ಯದ ಪೀಳಿಗೆಗಾಗಿ ಜೀವಸಂಪತ್ತನ್ನು ಉಳಿಸುವ ಅಗತ್ಯವೂ ನಮ್ಮದಾಗಿದೆ. ನಾವು ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಬದುಕಿದರೆ ಮಾತ್ರ ಸುಖ ಮತ್ತು ಶಾಂತಿಯಿಂದ ಬದುಕಲು ಸಾಧ್ಯ. ನಾವು ವಾಸಿಸುತ್ತಿರುವ ಪ್ರದೇಶ ಜೀವ ವೈವಿಧ್ಯತೆಯ ಹಾಟ್ ಸ್ಪಾಟ್. ಜಗತ್ತಿನಲ್ಲಿ ಕೇವಲ 2 ರಿಂದ 3 ಶೇಕಡಾದಷ್ಟು ಪ್ರದೇಶವಷ್ಟೇ ಜೀವ ವೈವಿಧ್ಯ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಆದ್ದರಿಂದ ಜನರು ಈ ವಿಷಯವನ್ನು…
