ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2025-2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರ ಆಯೋಜಿಸಲಾಯಿತು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಸುಜಾತಾ ಸದಾರಾಮ ಅವರು ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಚಾಲನೆಗೊಳಿಸುವುದರ ಜೊತೆಗೆ ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಪ್ರಾಥಮಿಕ ವಿಭಾಗದ ಮಕ್ಕಳು ಉತ್ಸಾಹದಿ೦ದ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಈ ವಾರ್ಷಿಕ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಕೃಷ್ಣ ಹುಲ್ಲಾಲ್ ಹಾಗೂ ಲತಾ ಗೌಡ ಅವರು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸುವಲ್ಲಿ ಮಾರ್ಗದರ್ಶನ ನೀಡಿದರು. ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿಯಾದ ಜೆ. ರೂಪಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಐರೋಡಿ ಗ್ರಾಮ ಪಂಚಾಯತ್ ವತಿಯಿಂದ ವಿಕಲಚೇತನರ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಸಕ್ಕು ಅವರ ಅಧ್ಯಕ್ಷತೆಯಲ್ಲಿ ಜರಗಿತು. ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಧುಸೂದನ್ರಾವ್ ಅವರು ವಿಕಲಚೇತನರಿಗೆ ಸರ್ಕಾರದ ವಿವಿಧ ಇಲಾಖೆ ಹಾಗೂ ಗ್ರಾಮ ಪಂಚಾಯತ್ನಿಂದ ಸಿಗುವ ಸೇವಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್, ಪಿಡಿಓ ಪ್ರಶಾಂತ, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದವರು ಹಾಗೂ ಸಿಬ್ಬಂದಿಯವರು ವಿ.ಆರ್.ಡಬ್ಲೂ ವಿಕಲಚೇತನರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಇದೇ ವೇಳೆ ವಿಕಲಚೇತನರಿಗೆ ಗ್ರಾಮ ಪಂಚಾಯತ್ನಿಂದ ಸಹಾಯಧನ ವಿತರಿಸಲಾಯಿತು. ಗ್ರಾಮ ಪಂಚಾಯತ್ ಕಾರ್ಯದರ್ಶಿ ವಿಜಯಾ ಸ್ವಾಗತಿಸಿ, ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದ.ಉಡುಪಿ: ಸರಕಾರದ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಹಾಗೂ ವಿಚಾರಧಾರೆಗಳು ಜನಸಾಮಾನ್ಯರಿಗೆ ತಲುಪಿದಾಗ ಮಾತ್ರ ಆ ಯೋಜನೆಗಳು ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ಸರಕಾರದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ಕಲಾಜಾಥಾ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂವಿಧಾನದ ಆಶಯದಂತೆ ದೇಶದ ಜನಸಾಮಾನ್ಯರಿಗೆ ಸಮಾನತೆಯನ್ನು ಕಲ್ಪಿಸುವ ದೃಷ್ಠಿಯಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ, ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡಿದೆ ಎಂದ ಅವರು, ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶ್ರೀ ಸೊಂದ ಸ್ವರ್ಣವಲ್ಲಿ ಮಹಾಸಂಸ್ಥಾನ ಮತ್ತು ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶಿರಸಿ ಮಠ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಭಗವದ್ಗೀತಾ ಅಭಿಯಾನ ಸ್ಪರ್ಧೆಯ ಅಂಗವಾಗಿ ನಡೆದ ‘ಭಗವದ್ಗೀತೆ ಮನ ಸ್ವಾಸ್ತ್ಯದ ಕೈಪಿಡಿ’ ಎಂಬ ವಿಷಯದ ಕುರಿತು ನಡೆದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಪ್ರಥಮ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರ ಯಶಸ್ಸಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ತಂಡ ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇನ್ನೂ ದೊಡ್ಡ ಮಟ್ಟದ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ನಲ್ಲಿ ಸಂವಿಧಾನದ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಭೋದನೆ ಕಾರ್ಯಕ್ರಮ ಜರಗಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಪ್ರತಿಜ್ಞಾ ವಿಧಿ ನೆರವೆರಿಸಿದರು. ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಮಾತನಾಡಿ, ದೇಶದ ಅತಿ ಉನ್ನತವಾದ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಅರಿತು ಕಾರ್ಯಾಚರಿಸುವಂತ್ತಾಗಬೇಕು. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಎಲ್ಲಾ ವರ್ಗದ ಹಾಗೂ ದೇಶದ ಸಾರ್ವಭೌಮವನ್ನು ಗಟ್ಟಿಗೊಳಿಸಿದೆ ಅಲ್ಲದೆ ಜಾತ್ಯಾತೀತ ರಾಷ್ಟ್ರಕ್ಕೆ ಮುನ್ನುಡಿ ಬರೆದಿದೆ ಎಂದರು. ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್, ಕಾರಂತ ಪ್ರತಿಷ್ಠಾನದ ಸುಬ್ರಾಯ ಆಚಾರ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಂಗಳವಾರದಂದು ವಾರ್ಷಿಕ ಕ್ರೀಡಾಕೂಟವು ಸಂಪನ್ನಗೊಂಡಿತು. 14 ಮತ್ತು 17 ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಉದ್ದಜಿಗಿತ, ಗುಂಡೆಸೆತ, 100ಮೀ, 200ಮೀ, 400ಮೀ, 800ಮೀ, 1500ಮೀ ಓಟ ಮತ್ತು ರಿಲೇ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ಈ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದ ಗೌತಮ ಶೆಟ್ಟಿ ಅವರು ಉದ್ಘಾಟನೆ ನಡೆಸಿ ಮಾತನಾಡಿ, ಆಟಗಳಲ್ಲಿ ಸೋಲು ಗೆಲುವು ಮುಖ್ಯವಾದುದಲ್ಲ. ಅದರಲ್ಲಿ ತೊಡಗಿಸಿಕೊಳ್ಳುವುದು ಅತಿಮುಖ್ಯ. ಆಟಗಳನ್ನು ಆಡುವಾಗ ನಮ್ಮ ನಮ್ಮ ಆಟಗಳಲ್ಲಿ ಆನಂದವನ್ನು ಹೊಂದಬೇಕು. ಪ್ರತಿಯೊಂದು ಸ್ಪರ್ಧೆಯಲ್ಲೂ ನಮ್ಮ ಕ್ರೀಡಾ ಜೀವನಕ್ಕೆ ಏನು ಪಡೆದಿದ್ದೇವೆ ಎನ್ನುವುದು ಮುಖ್ಯ. ಆಟಗಳಿಂದ ಉತ್ತಮ ಆರೋಗ್ಯವಂತೂ ನಮಗೆ ಸಿದ್ಧಿಸುತ್ತದೆ. ನಮ್ಮ ಮನಸ್ಸನ್ನು ಸದಾ ನಿರ್ಮಲವಾಗಿಟ್ಟುಕೊಂಡು ಆಡಬೇಕು. ಎಂದು ತಮ್ಮ ಜೀವನದ ಅನುಭವಗಳ ಮೂಲಕ ತಿಳಿ ಹೇಳಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಮಂಗಳೌಆರದಂದು ನಡೆದ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಪ್ರಮುಖ ಬಿ. ಪೂಜಾರಿ ಅವರು ಏಳು ವರ್ಷ ವಯೋಮಿತಿಯ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಐದೂ ಸುತ್ತಿನಲ್ಲೂ ವಿಜೇತನಾಗಿ ಜಿಲ್ಲಾ ಚಾಂಪಿಯನ್ ಆಗಿ ಹೊರಹೊಮ್ಮಿ, ಅತ್ಯುನ್ನತ ಸಾಧನೆಯನ್ನು ಮಾಡಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದಂತಹ ಗಣೇಶ ಮೊಗವೀರ, ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಶುಭಾಶಯಗಳನ್ನು ಕೋರಿದ್ದಾರೆ. ಭೋದಕ – ಬೋಧಕೇತರ ವೃಂದದವರು ವಿದ್ಯಾರ್ಥಿಯ ಈ ಸಾಧನೆಯನ್ನು ಕೊಂಡಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ದಿನವೂ ಹತ್ತಾರು ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಕಾಳಜಿಯಿಂದ ಆರೈಕೆ ಮಾಡುವ, ಅಕ್ಷರದ ಅರಿವು ಮೂಡಿಸುವ, ಸಂಸ್ಕೃತಿಯನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಅತ್ಯಂತ ಶ್ರೇಷ್ಠವಾದದ್ದು ಮತ್ತು ಅಭಿನಂದನನೀಯವಾದದ್ದು ಎಂದು ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗ ರಿ. ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಕಳೆದ ಭಾನುವಾರ ನಡೆದ ಗಂಗೊಳ್ಳಿ ವಲಯದ 18 ಅಂಗನವಾಡಿ ಮತ್ತು ಶಿಶು ಮಂದಿರದ ಕಾರ್ಯಕರ್ತರು ಮತ್ತು ಸಹಾಯಕಿಯರನ್ನು ಅಭಿನಂದಿಸುವ ಮಾತೃ ದೇವೋ ಭವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಂಗೊಳ್ಳಿಯ ಉದ್ಯಮಿ ವಿಠ್ಠಲ್ ಜಿ. ಶೆಣೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಂಗೊಳ್ಳಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ಅಧ್ಯಕ್ಷರಾದ ಭವಾನಿ ಶಂಕರ್ ಖಾರ್ವಿ, ಮತ್ಸ್ಯೋದ್ಯಮಿ ರಾಘವೇಂದ್ರ ವಸಂತ ಮೇಸ್ತ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಶೇರುಗಾರ, ಗಂಗೊಳ್ಳಿಯ ಉದ್ಯಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ , ಪ್ರಸಂಗಕರ್ತ, ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಅವರು ಬುಧವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಯಕ್ಷ ಕವಿ ಕಂದಾವರ ರಘುರಾಮಶೆಟ್ಟಿ ಅವರು ಬಹುಮುಖ ಪ್ರತಿಭೆಯ ಶ್ರೇಷ್ಠ ಪ್ರಸಂಗಕರ್ತರು. ನೂರು ನಾಟಕಗಳಲ್ಲಿ ಹಾಸ್ಯ ನಟನಾಗಿ, ಯಕ್ಷಗಾನದ ಭಾಗವತರಾಗಿ, ಅರ್ಥಧಾರಿಯಾಗಿ, ವೇಷಧಾರಿಯಾಗಿ, ಪ್ರಸಂಗಕರ್ತರಾಗಿ, ನಾಟಕ, ಶಿಶು ಗೀತೆ ಅಭಿನಯ ಗೀತೆ, ಕವನಗಳನ್ನು ರಚಿಸಿದ ಅವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಪ್ರಸಂಗಕರ್ತರಾಗಿ ಕಂದಾವರ ರಘುರಾಮ ಶೆಟ್ಟಿ ಅವರು ‘ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡುತ್ತಿದ್ದರು. ಚೆಲುವೆ ಚಿತ್ರಾವತಿ, ರತಿ ರೇಖಾ, ಶ್ರೀದೇವಿ ಬನಶಂಕರಿ ಮತ್ತು ಶೂದ್ರ ತಪಸ್ವಿನಿಯಂತಹ ಸೂಪರ್ ಹಿಟ್ ಪ್ರಸಂಗಗಳನ್ನು ಕೊಡುಗೆಯಾಗಿ ನೀಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾಗಿ ಪುರಾಣ ಪ್ರವಚನದಲ್ಲಿ ವಾಚಕರಾಗಿ, ಪ್ರವಚಕರಾಗಿದ್ದರು. ಆರರಿಂದ ಏಳು ಪ್ರಶಸ್ತಿಗಳನ್ನು ಪಡೆದಿದ್ದರು. ಕಂದಾವರ ರಘುರಾಮ ಶೆಟ್ಟಿಯವರು ದಕ್ಷಿಣ ಕನ್ನಡದ ಕುಂದಾಪುರ ತಾಲೂಕಿನ ಬಳ್ಳೂರು ಗ್ರಾಮದ ಕಂದಾವರದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ’ಸಿದ್ಧಿಸೌರಭ 2025’ ವಾರ್ಷಿಕೋತ್ಸವ ಸಮಾರಂಭವು ಇತ್ತೀಚಿಗೆ ಬಹಳ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ವೀಣಾ ಬನ್ನಂಜೆ ಅವರು ಮಾತನಾಡಿ, ಈ ಕಾಲದಲ್ಲಿ ಮಕ್ಕಳು ವಿದ್ಯಾಭ್ಯಾಸದ ಸಮಯದಲ್ಲಿ ಮೊಬೈಲ್ ಬಳಕೆಯಿಂದ ಹಾಳಾಗುತ್ತಿದ್ದಾರೆ. ಮಕ್ಕಳ ಸರ್ವತೋಮುಖ ಏಳಿಗೆಗಾಗಿ ಶಾಲೆಗಳು, ಪೋಷಕರು ಪ್ರಯತ್ನಿಸಬೇಕಾದರೆ ಬಹಳಷ್ಟು ಸಮಸ್ಯೆಗಳು ತಲೆದೋರುತ್ತವೆ. ಕೆಲವಷ್ಟು ಮೊಬೈಲ್ ಆಟಗಳು, ಆಡಿ ಬೆಳೆಯಬೇಕಾದ ಮಕ್ಕಳ ಜೀವನದ ಆಟವನ್ನೇ ಮುಗಿಸುತ್ತಿವೆ. ಹೊರಾಂಗಣ ಆಟಗಳು ಎಲ್ಲಿ ಅಧಿಕವಾಗಿರುವುದೋ ಅಲ್ಲಿ ಈ ರೀತಿಯ ಸಮಸ್ಯೆಗಳು ತಲೆದೋರಲಾರವು. ಈ ಶಾಲೆಯ ಕ್ರೀಡಾಸಾಧನೆಯನ್ನು ನೋಡಿದರೆ, ನಿಶ್ಚಯವಾಗಿ ಮಕ್ಕಳಿಗೆ ಹೊರಾಂಗಣ ಆಟಗಳು ಲಭಿಸುತ್ತಿವೆ ಎಂದು ಮನದಟ್ಟಾಗುತ್ತಿದೆ. ಇಲ್ಲಿ ರಚಿತವಾದ ಪ್ರತಿಯೊಂದು ವಿಭಾಗಕ್ಕೂ ಮತಂಗ, ಶಿಬಿ, ಘಟೋತ್ಕಚ ಮೊದಲಾದ ಬೇರೆ ಬೇರೆ ಹೆಸರನ್ನಿಟ್ಟಿರುವುದು ಮತ್ತು ಅವು ಬಹಳ ಅರ್ಥಗರ್ಭಿತವಾಗಿರುವುದು ಕಂಡುಬರುತ್ತಿವೆ. ಅವರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂಕಗಳಿಗೆ ಮಾತ್ರ ಸೀಮಿತವಾದ ಜೀವನ ನಮ್ಮದಲ್ಲ. ಅದನ್ನು…
