ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಸಭೆ ನೆಡೆಯಿತು. ನಂತರ ಅವರು ಮಾತನಾಡಿ, ಗ್ರಾಮೀಣ ಮಹಿಳೆಯರ ಸಾಮಾಜಿಕ ಸಬಲೀಕರಣಕ್ಕಾಗಿ ಸಂಜೀವಿನಿ ಸ್ವ ಸಹಾಯ ಗುಂಪುಗಳನ್ನು ರಚಿಸಲಾಗಿದೆ. ಈಗಾಗಲೇ ಮಹಿಳೆಯರು ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಸಾಲ, ಇಲಾಖೆಗಳ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಚಟುವಟಿಕೆ ನೆಡೆಸುತ್ತಿದ್ದಾರೆ. ಈ ಮಹಿಳೆಯರನ್ನು ಮಾದರಿಯಾಗಿಸಿ ಪ್ರತಿ ಗ್ರಾಮದ ಸಂಜೀವಿನಿ ಮಹಿಳೆಯರು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮಿಗಳನ್ನಾಗಿಸಲು ಸಿಬ್ಬಂದಿಗಳು ಕ್ರಮ ಕೈಗೊಳ್ಳಬೇಕು. ಕೃಷಿ, ಕೃಷಿಯೇತರ, ಪ್ರವಾಸೋದ್ಯಮ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರತಿನಿಧಿಸಬೇಕು. ಇಂದು ಗ್ರಾಮೀಣ ಜನರು ನಿರುದ್ಯೋಗದ ಸಮಸ್ಯೆಯಿಂದ ಬೇರೆ ಕಡೆಗೆ ವಲಸೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ತಿಳಿಸಿದರು. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೋತ್ಸವ ನಡೆಸಲಾಗುತ್ತಿದ್ದು ಸಂಜೀವಿನಿ ಸ್ವ ಸಹಾಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಚಿತ್ರಪಾಡಿಯ ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡುದಿನಗಳ ಕಾಲ ನಡೆಯುವ ಶತಮಾನೋತ್ಸವ ಸಂಭ್ರಮದ ಕಾರ್ಯಕ್ರಮ ಶನಿವಾರ ಶಾಲಾ ವಠಾರದಲ್ಲಿ ಪ್ರಾರಂಭಗೊಂಡಿತು. ಶತಮಾನೋತ್ಸವ ಸಭಾ ಕಾರ್ಯಕ್ರಮವನ್ನು ಬೆಂಗಳೂರಿನ ಉದ್ಯಮಿ ರವೀಂದ್ರ ನಾಯಕ್ ಸಾಲಿಗ್ರಾಮ ಉದ್ಘಾಟಿಸಿ ಮಾತನಾಡಿ, ನಾವು ಉದ್ಯಮರಂಗದಲ್ಲಿ ಗುರುತಿಸಿಕೊಳ್ಳಲು ಅಥವಾ ಈ ಹಂತದಲ್ಲಿ ಬೆಳೆಯಲು ಶಿಕ್ಷಕರ ಪಾತ್ರ ಗಣನೀಯವಾದದ್ದು, ಆದರೆ ಪ್ರಸ್ತುತ ವಿದ್ಯಾಮಾನದಲ್ಲಿ ಮಕ್ಕಳು ಆಧುನಿಕತೆಯಲ್ಲೆ ಮುಳುಗಿ ಅವರ ಸ್ಥಿತಿಗತಿ ಶೋಚನೀಯವಾಗಿದೆ. ಇದಕ್ಕೆ ಪೋಷಕರ ಹೊಣೆಗಾರಿ ಬಹುಪಾಲಾಗಿದೆ ಈ ನಿಟ್ಟಿನಲ್ಲಿ ಮಕ್ಕಳ ಭವಿಷ್ಯವನ್ನು ಪೋಷಕರೇ ಜಾಗೃತರಾಗಿ ಕ್ರಮಿಸುವಾಗೆ ನೋಡಿಕೊಳ್ಳಿ ಎಂದು ಕರೆಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಕೋಟ ಸಹಕಾರಿ ಸಂಘದ ಅಧ್ಯಕ್ಷ ಡಾ. ಕೃಷ್ಣಕಾಂಚನ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉಡುಪಿ ಇಂಡಸ್ಟ್ರಿಯಲ್ ಕೋ. ಅಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ಡೆ, ಬ್ರಹ್ಮಾವರ ಪತ್ರಕರ್ತಸಂಘದ ಅಧ್ಯಕ್ಷ ರಾಜೇಶ್ ಗಾಣಿಗ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಪಟ್ಟಣಪಂಚಾಯತ್ ಮುಖ್ಯಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ https://kpp.karnataka.gov.in ನಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ ಜಿಲ್ಲೆಯ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯ ವೇತನ ನೀಡಲಾಗುವುದು. ಸಹಕಾರ, ಸಹಕಾರ ಪತ್ತು ಮತ್ತು ಬ್ಯಾಂಕಿಂಗ್, ಸಹಕಾರ ಸಂಘಗಳ ನಿರ್ವಹಣೆ, ಸಹಕಾರ ಸಂಘಗಳ ಕಾಯಿದೆ ಅಂಶಗಳು, ಸಹಕಾರ ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ ಹಾಗೂ ಕಂಪ್ಯೂಟರ್ ಅಪರೇಷನ್ ಬಗ್ಗೆ ಪಠ್ಯಕ್ರಮವಿದ್ದು, ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಘಗಳು ಗ್ರಾಮ ಕೇಂದ್ರಿಕೃತವಾಗಿದ್ದು, ಗ್ರಾಮದ ಜನರು ಇದನ್ನು ಸಮರ್ಪಕವಾಗಿ ಸದುಪಯೋಗಿಸಿಕೊಂಡಾಗ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಇಂತಹ ಸಹಕಾರಿ ರಂಗವನ್ನು ಬಲಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯತೆ ದೃಷ್ಟಿಕೋನವನ್ನು ಅಳವಡಿಸಿಕೊಂಡಾಗ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದ ಡಾ. ಶಿವರಾಮ ಕಾರಂತ್ ಟ್ರಸ್ಟ್ ಅಧ್ಯಕ್ಷ ಡಾ. ಗಣಮಾಥ ಎಕ್ಕಾರ್ ಹೇಳಿದರು. ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ಗೋಳಿಹೊಳೆ ಶಾಖೆಯಲ್ಲಿ ಗುರುವಾರ ನಡೆದ ಸೌಹಾರ್ದ ಸಹಕಾರಿ ದಿನಾಚರಣೆ ಹಾಗೂ ಗ್ರಾಹಕರ ಸಭೆ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರಿ ರಂಗಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಹಕಾರಿ ಸಂಘಗಳಿಗೆ ಹೆಚ್ಚಿನ ಮಹತ್ವವಿದೆ. ಪ್ರಜಾಪ್ರಭುತ್ವದ ನಾಲ್ಕು ತತ್ವಗಳಾದ ಸಮಾನತೆ, ಸ್ವಾತಂತ್ರ್ಯ, ಭಾತೃತ್ವ ಹಾಗೂ ಸಾಮಾಜಿಕ ನ್ಯಾಯ ಎನ್ನುವುದನ್ನು ಕೇವಲ ಸಹಕಾರಿ ರಂಗದಲ್ಲಿ ಮಾತ್ರ ಕಾಣಲು ಸಾಧ್ಯವಿದೆ ಎಂದರು. ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬಿ.ಎಡ್ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಸ್ಸಾಂನಲ್ಲಿ ನಡೆದ ನ್ಯಾಷನಲ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಇಲ್ಲಿನ ಕಶ್ಚಿ ಚೆಸ್ ಸ್ಕೂಲ್ನ ವಿದ್ಯಾರ್ಥಿನಿ ಆರಾಧ್ಯ ಎಸ್. ಶೆಟ್ಟಿ ಹೊಸ ದಾಖಲೆ ಬರೆದಿದ್ದಾರೆ. ಸತತ ಒಂಬತ್ತು ಸುತ್ತುಗಳಲ್ಲಿ ಸೋಲರಿಯದೆ ಹೊಸ ವರ್ಷಕ್ಕೆ ಹೊಸ ಮುನ್ನುಡಿ ಬರೆದಿದ್ದಾರೆ. ಬಿಹಾರ, ಅಸ್ಸಾಂ, ಕೇರಳ, ತೆಲಂಗಾಣ, ರಾಜಸ್ತಾನ ರಾಜ್ಯಗಳ ರೇಟಿಂಗ್ ಚೆಸ್ ಕ್ರೀಡಾಪಟುಗಳನ್ನು ಸೋಲಿಸುವುದರ ಮೂಲಕ ಬೆಳ್ಳಿ ಪದಕ ಗಳಿಸಿ ಕರ್ನಾಟಕ ರಾಜ್ಯದ ಚೆಸ್ ಕ್ರೀಡಾಪಟುಗಳಲ್ಲಿ ಭರವಸೆಯ ಧ್ರುವತಾರೆಯಾಗಿಯಾಗಿ ಮೂಡಿಬಂದಿದ್ದಾರೆ ಎಂದು ಚೆಸ್ ಸ್ಕೂಲ್ನ ಪ್ರಕಟಣೆ ತಿಳಿಸಿದೆ. ಈಕೆ ತಾಲೂಕಿನ ಸಲ್ವಾಡಿಯ ಗ್ರಾಮದ ಶ್ರೀಕಾಂತ್ ಶೆಟ್ಟಿ ಹಾಗೂ ಉಷಾಲತಾ ಶೆಟ್ಟಿ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಕೊಟೇಶ್ವರದ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ಬಿ.ಕಾಂ. ನ 50 ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿ ಅದರ ಸೂಕ್ಷ್ಮ ಅಧ್ಯಯನವನ್ನು ಮಾಡಲಾಯಿತು. ಮಣಿಪಾಲದ ಉದಯವಾಣಿ ಮುದ್ರಣಾಲಯ ಮುಖ್ಯಸ್ಥರು ವಿದ್ಯಾರ್ಥಿಗಳ ಈ ಭೇಟಿಯಿಂದ ನೈಜ ಅಧ್ಯಯನ ಹಾಗೂ ಸಮಾಜಮುಖಿಗಳಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಉದಯ ಅಲ್ಯುಮೀನಿಯಂ ಘಟಕ ಮಣಿಪಾಲದ ವ್ಯವಸ್ಥಾಪಕರಾದ ಹೇಮಂತ್ ಕುಮಾರ್ ಅವರು ಅಲ್ಯುಮೀನಿಯಂ ಹಾಗೂ ಸ್ಟೀಲ್ನ ವಿವಿಧ ಪರಿಕರಗಳ ಉತ್ಪಾದನಾ ಹಂತಗಳನ್ನು ಸ್ಥೂಲವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಉಪ್ಪೂರಿನಲ್ಲಿರುವ ಕೆ.ಎಂ.ಎಫ್.ನ ಹಾಲಿನ ಸಂಸ್ಕರಣ ಘಟಕದಲ್ಲಿ ಅಲ್ಲಿಯ ಸಿಬ್ಬಂದಿಯವರು ಹಾಲು ಹಾಗೂ ಅದರ ಸಹ – ಉತ್ಪನ್ನಗಳ ಸಂಸ್ಕರಣೆಯ ವಿವಿಧ ಮಜಲುಗಳನ್ನು ವಿವರವಾಗಿ ತಿಳಿಸಿದರು. ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಶೇಖರ ಬಿ. ಹಾಗೂ ಉಪನ್ಯಾಸಕರಾದ ಶೃತಿ ಆಚಾರ್ಯ ಎನ್. ಹಾಗೂ ಚೈತ್ರಾ ಹೆಚ್. ಅವರು ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಮೆಸ್ಕಾಂ ಇಲಾಖೆ ಹೊಸ ವರ್ಷದಲ್ಲಿ ವಿದ್ಯುತ್ ಶಾಕ್ ನೀಡಿದೆ ಎಂದು ತಾಲ್ಲೂಕು ರೈತ ಸಂಘದ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಈ ಹಿಂದೆ ಸಿಂಗಲ್ ಪೇಸ್ ಹಳೆಯ ಮೀಟರಿಗೆ 936 ರೂಪಾಯಿ ಇತ್ತು ಆದರೆ ಈಗ ಹೊಸ ಸ್ಮಾರ್ಟ್ ಮೀಟರ್ ನ್ನು ಖಾಸಗಿಯವರ ಮೂಲಕ ಖರೀದಿ ಮಾಡಿ ಸಿಂಗಲ್ ಫೇಸ್ ವಿದ್ಯುತ್ ಸಂಪರ್ಕಕ್ಕೆ ಬಳಸುವ ಸ್ಮಾರ್ಟ್ ಮೀಟರ್ ದರ 4,785 ರೂಪಾಯಿ. ಅದೇ ತ್ರೀ ಫೇಸ್ ವಿದ್ಯುತ್ ಸಂಪರ್ಕ ಪಡೆಯಲು ಹಿಂದೆ ಮೀಟರ್ ದರ 2300 ರೂಪಾಯಿ ಇತ್ತು ಅದೇ ಈಗ ಹೊಸ ಸ್ಮಾರ್ಟ್ ಮೀಟರ್ ದರ 8400 ರೂಪಾಯಿ. ಇದು ತಾತ್ಕಾಲಿಕ ಸಂಪರ್ಕ ಪಡೆಯುವ ಹಾಗೂ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ರೈತರು ಹಾಗೂ ಜನಸಾಮಾನ್ಯರಿಗೆ ಅನಗತ್ಯ ಹೊರೆಯಾಗಲಿದೆ. ಈ ಸ್ಮಾರ್ಟ್ ಮೀಟರ್ ನ ಮುಂದುವರಿದ ಭಾಗವಾಗಿ ಮುಂದೆ ಮೆಸ್ಕಾಂ ಇಲಾಖೆ ಪ್ರಿಪೆಯ್ಡ್ ವ್ಯವಸ್ಥೆ ವಿದ್ಯುತ್ ಬಿಲ್ ಜಾರಿಗೆ ತಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿ ಇರುವ ಶುಶ್ರೂಷಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ಒಳಮೀಸಲಾತಿಯ ವರ್ಗೀಕರಣದಿಂದ ತಡಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗೆ ಪರಿಷ್ಕೃತ ರೋಸ್ಟರ್ ಗಳನ್ನು ಅಳವಡಿಸಿ ಮರು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
