Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟ ಆಗುತ್ತದೆ ಹಾಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಸರ್ಕಾರವು ಉಚಿತ ಕ್ಯಾಂಪ್ ಗಳನ್ನು ನಡೆಸುತ್ತವೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇಂದು ತಪ್ಪಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಅನೇಕ ಕಾಯಿಲೆಗಳು ಬರುತ್ತವೆ ಅದಕ್ಕಾಗಿ ನಮ್ಮ ಸುತ್ತಮುತ್ತಲ ಬೆಳೆದ ತರಕಾರಿ, ಹಣ್ಣು, ಹಂಪಲುಗಳನ್ನು ಉಪಯೋಗಿಸಬೇಕು. ಅಲ್ಲದೆ ದೀರ್ಘಕಾಲಿನ ಕೆಲವು ಕಾಯಿಲೆಗಳಿಗೆ ಆಯುರ್ವೇದದಲ್ಲಿ ಉತ್ತಮ ಪರಿಹಾರಗಳವೆ ಈ ನಿಟ್ಟಿನಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಕಾಲ್ತೋಡು ಆಯುರ್ವೇದ ಆಸ್ಪತ್ರೆಯ ಪ್ರಯೋಜನ ಪಡೆದುಕೊಳ್ಳಿ ಎಂದು ಕುಂದಾಪುರ ತಾಲೂಕಿನ ಆರೋಗ್ಯ ಅಧಿಕಾರಿಗಳಾದ ಡಾ. ಪ್ರೇಮಾನಂದ್‌ ಹೇಳಿದರು. ಅವರು ಉಡುಪಿಯ ಆಯುಷ್ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕಾಲ್ತೋಡು ಗ್ರಾಮ ಪಂಚಾಯತ್ , ಕಾಲ್ತೋಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಕಾಲ್ತೋಡು ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್), ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ತೋಡು ಸರಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೌದ್ಧಿಕ ಚಟುವಟಿಕೆಗಿಂತ ಹೆಚ್ಚಾಗಿ ಪ್ರಾಪಂಚಿಕ ಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟು ದೇಶಭಕ್ತಿ, ತಾಯಿ-ತಂದೆ, ಗುರು ಹಿರಿಯರಿಗೆ ಗೌರವಕೊಡುವ ಸಂಸ್ಕೃತಿಯನ್ನು ಇಂದಿನ ಯುವಜನತೆ ಪಾಲಿಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ 18ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಪದವಿಯಿಂದ ಪುರುಷಾರ್ಥವಲ್ಲ, ಬದಲಿಗೆ ನಮ್ಮ ವ್ಯಕ್ತಿತ್ವದಿಂದಲೇ ನಾವು ಪಡೆದ ಜ್ಞಾನದ ಬೆಳಕು ನಮ್ಮ ಬದುಕನ್ನು ಬೆಳಗುತ್ತದೆ. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಧೈರ್ಯ ಗುಂದದೆ ಆತ್ಮವಿಶ್ವಾಸದಿಂದ ಮುನ್ನುಗ್ಗಿ ಕಷ್ಟದ ದಾರಿಯನ್ನು ತಾಳ್ಮೆಯಿಂದ ಕ್ರಮಿಸಬೇಕು. ಸೂಕ್ತ ನಿರ್ಧಾರ ತೆಗೆದುಕೊಂಡು ಜೀವನೋತ್ಸಾಹದಿಂದ ಆತ್ಮ ಗೌರವವನ್ನು ವೃದ್ಧಿಸಿಕೊಳ್ಳಬೇಕು. ನಮ್ಮ ಬದುಕನ್ನು ಬದಲಾಯಿಸಿಕೊಳ್ಳುವ ಬಲ ನಮ್ಮೊಳಗೇ ಇದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಶಿಕ್ಷಣವೆಂದರೆ ಮಾನವರಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಗಾಲದ ಬಳಿಕ ನಿರ್ಮಾಣ ಚಟುವಟಿಕೆಗೆ ಪೂರಕವಾಗಿ ಕಡಿಮೆ ದರದಲ್ಲಿ ಗುಣಮಟ್ಟದ ಮರಳು ಜನರ ಬೇಡಿಕೆಗೆ ತಕ್ಕಂತೆ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಅಂದು ಜಿಲ್ಲಾ ವ್ಯಾಪ್ತಿಯ ಮರಳು ಸಮಸ್ಯೆಯ ಬಗ್ಗೆ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿಯ ಕೋರ್ಟ್‌ ಹಾಲ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮರಳುಗಾರಿಕೆಗೆ ಅರ್ಜಿ ಸಲ್ಲಿಸಿದ 48 ಗಂಟೆಯೊಳಗೆ ಪರಿಶೀಲಿಸಬೇಕು ಎಂದರು. ಗಣಿ ಮತ್ತು ಭೂ ವಿಜ್ಙಾನ ಇಲಾಖೆಯ ಹಿರಿಯ ಭೂ ವಿಜ್ಙಾನಿ ಸಂದೀಪ್‌ ಮಾತನಾಡಿ, 118 ಗ್ರಾಪಂಗಳಲ್ಲಿ ಮರಳು ತೆರವಿಗೆ ಅವಕಾಶವಿದ್ದರೂ 37 ಗ್ರಾಪಂಗಳಿಗೆ ಆಶಯ ಪತ್ರ ನೀಡಿದ್ದು, 28 ಬ್ಲಾಕ್‌ ಗಳಲ್ಲಿ ಸ್ಥಳೀಯವಾಗಿ ಸಮಸ್ಯೆಯಿದೆ. ಇನ್ನೂ 20 ಗ್ರಾಪಂ. ಗಳಿಗೆ ರಾಯಧನ ಶೇ.25 ಪಾಲು ಆದಾಯ ದೊರತೆರೂ ಪಿಡಿಒಗಳು ಸ್ಥಳೀಯ ರಾಜಕೀಯ, ಲೋಕಾಯುಕ್ತಕ್ಕೆ ವಿನಾಕೃಣ ದೂರಿನ ಹಿನ್ನಲೆಯಲ್ಲಿ ಬ್ಯಾಕ್‌ ಮರಳುಗಾರಿಕೆ ಅವಕಾಶಕ್ಕಾಗಿ ಹಿಂದೇಟು ಹಾಕುತ್ತಿದ್ದಾರೆ ಎಂದರು. ಸರಕಾರಿ ಕಾಮಗಾರಿಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ತಾಲೂಕಿನ ಸಿದ್ದಾಪುರ ಗ್ರಾಮದ ಕೊಡ್ಸನಬೇರು ಎಂಬಲ್ಲಿ ಪಿಕ್‌ಅಪ್ ವಾಹನವೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಸುರೇಶ್ ಕುಮಾರ್(61) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇವರ ಅಣ್ಣ ಡಾ. ಸುನೀತ್ ಕುಮಾರ್, ತಂಗಿ ಸುಜಾತ ಹಾಗೂ ತಂಗಿ ಮಗಳು ಶ್ರೀಲಕ್ಷ್ಮೀ ಎಂಬವರು ಗಾಯಗೊಂಡಿದ್ದು, ಇವರಲ್ಲಿ ಸುಜಾತ ಹಾಗೂ ಶ್ರೀಲಕ್ಷ್ಮೀ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲ ಡಾ. ಸುನೀತ್ ಕುಮಾರ್‌ ಮಗನ ಮದುವೆಯ ಬೀಗರ ಊಟ ಕಾರ್ಯಕ್ರಮಕ್ಕೆ ಸಾಗರದ ಸಿಂಗಧೂರು ಎಂಬಲ್ಲಿಗೆ ಹೊರಟಿದ್ದು ಕಾರನ್ನು ಪರೀಕ್ಷಿತ್ ಚಲಾಯಿಸುತ್ತಿದ್ದರು. ಸಿದ್ದಾಪುರದಲ್ಲಿ ಉಳಿದ ಎರಡು ಕಾರುಗಳನ್ನು ಕೂಡಿಕೊಂಡು ಸಾಗರದ ಕಡೆಗೆ ಹೋಗುತ್ತಿದ್ದಾಗ ಹೊಸಂಗಡಿ ಕಡೆಯಿಂದ ಬಂದ ಪಿಕ್‌ಅಪ್ ವಾಹನ ಕಾರಿಗೆ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸುರೇಶ್ ಕುಮಾರ್ ಕುಂದಾಪುರ ಸರಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪರ್ತಗಾಳಿ ಮಠದ 550 ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಇರುವ ಮಠದ ಶಾಖೆ, ಜಿಎಸ್‌ಬಿ ಸಮಾಜದ ದೇವಸ್ಥಾನಗಳಲ್ಲಿ ನಡೆಯುತ್ತಿರುವ 550 ಕೋಟಿ ಶ್ರೀರಾಮ ನಾಮ ತಾರಕ ಮಂತ್ರ ಜಪಯಜ್ಞವು ಯಶಸ್ವಿಯಾಗಿ ಸಾಗುತ್ತಿದ್ದು, ಈ ಜಪಯಜ್ಞದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಯುವಪೀಳಿಗೆ ಭಾಗವಹಿಸಬೇಕು. 2025ರ ಅಕ್ಟೋಬರ್‌ನಲ್ಲಿ ಪರ್ತಗಾಳಿಯಲ್ಲಿ 550 ಕೋಟಿ ರಾಮನಾಮ ತಾರಕ ಜಪದ ಹವನ, ಪೂರ್ಣಾಹುತಿ ನಡೆಯಲಿದ್ದು, ಜತೆಗೆ 77 ಅಡಿ ಕಂಚಿನ ಶ್ರೀರಾಮಚಂದ್ರ ದೇವರ ವಿಗ್ರಹ ಪ್ರತಿಷ್ಠಾಪನೆ ಜರುಗಲಿದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠಾಧೀಶ ಶ್ರೀ ವಿದ್ಯಾಧೀಶ ಶ್ರೀಪಾದ ವಡೆಯರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನೂತನ ನಿರ್ಮಾಣದ ಶ್ರೀ ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳನ್ನು ಲೋಕಾರ್ಪಣೆಗೊಳಸಿ ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ರಾಮನಾಮ ಅಭಿಯಾನದಿಂದ ಸಮಾಜ ಜಾಗೃತಗೊಂಡಿರುವುದು ಸಮುದಾಯಕ್ಕೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಂತಾಗಿದೆ. ಈ ಅಭಿಯಾನದ ಅನುಭವಗಳನ್ನು ನಾವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಣ್ಮರೆಯಾಗುತ್ತಿರುವ ದೇಸಿ ತಳಿಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ದೇಸಿ ತಳಿಗಳನ್ನು ಹಿಂದಿನಿಂದಲೂ ಸಂರಕ್ಷಿಸಿ ಕೃಷಿ ಮಾಡುತ್ತಿರುವ ರೈತರಿಗೆ ಉತ್ತೇಜನ ನೀಡಲು ಕೃಷಿ ಇಲಾಖೆಯು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸ್ಥಳೀಯ ತಳಿಗಳು ಅಥವಾ ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ಅಭಿವೃದ್ಧಿ ನಿರ್ವಹಿಸಲ್ಪಡುವ ತಳಿಗಳು ದೇಸಿ ತಳಿಗಳೆಂದು ಕರೆಯಲ್ಪಡುತ್ತವೆ. ಇವು ರೈತರ ಸಾಂಪ್ರದಾಯಿಕ, ಪರಂಪರೆ, ಜಾನಪದ ಪ್ರಭೇದಗಳಾಗಿರುತ್ತವೆ. ಈ ತಳಿಗಳಲ್ಲಿರುವ ವಿಶಿಷ್ಟ ಗುಣಲಕ್ಷಣಗಳು ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ವೈಜ್ಞಾನಿಕವಾಗಿ ಅಭಿವೃದ್ದಿಪಡಿಸಲಾದ ಅಧಿಸೂಚಿತ ಪ್ರಭೇದಗಳಿಗಿಂತ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ದವಾಗಿವೆ. ಆದರೆ ಕೆಲವೇ ರೈತರು ಮಾತ್ರವೇ ಇಂತಹ ದೇಸಿ ತಳಿ ಕೃಷಿ ಮಾಡುವುದನ್ನು ಮುಂದುವರೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖಾ ವತಿಯಿಂದ ದೇಸಿ ತಳಿಗಳ ಸಂರಕ್ಷಣೆಗಾಗಿ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಈ ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ತಳಿಗಳನ್ನೊಳಗೊಂಡಂತೆ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಗುರುತಿಸುವಿಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು 21 ದಿನಗಳ ಒಳಗಾಗಿ ಕಡ್ಡಾಯವಾಗಿ ಸೂಕ್ತ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಆಗುವ ಪ್ರತಿಶತಃ ನೂರರಷ್ಟು ಜನನ, ಮರಣ ಮತ್ತು ನಿರ್ಜೀವ ಜನನಗಳ ಘಟನೆಗಳನ್ನು ವಿಳಂಬವಿಲ್ಲದೇ ನೋಂದಣಿ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಜನನ ಮತ್ತು ಮರಣ ನೋಂದಣಿಯು ಭವಿಷ್ಯದ ಕೆಲಸ ಕಾರ್ಯಗಳಿಗೆ ಇವುಗಳ ಪ್ರಮಾಣಪತ್ರವು ಅವಶ್ಯವಿರುತ್ತದೆ. ಇದನ್ನು ಮನಗಂಡು ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದರು. ಗ್ರಾಮೀಣ ಪ್ರದೇಶದಲ್ಲಿ 30 ದಿನಗಳವರೆಗೆ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ನಗರ ವ್ಯಾಪ್ತಿಗಳಲ್ಲಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರೋಗ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕುಂದಾಪುರ ತಾಲೂಕು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ದಿ. ಪುಳಿಮಾರು ಎಂ. ಕೃಷ್ಣಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಖ್ಯಾತ ಸಾಹಿತಿ, ಅಂಕಣ ಬರಹಗಾರ್ತಿ ವಸಂತಿ ಶೆಟ್ಟಿ ಬ್ರಹ್ಮಾವರ ಅವರು ಮಾತನಾಡಿ, ಯಕ್ಷಗಾನ ಕಲೆ ಕನ್ನಡದ ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕನ್ನಡ ಸ್ಪಷ್ಟವಾಗಿರುವುದು ಯಕ್ಷಗಾನದಲ್ಲಿ ಮಾತ್ರ. ಇಂದಿನ ಯುವಜನತೆಗೆ ಮೌಲ್ಯ ಶಿಕ್ಷಣ ವರ್ತಮಾನದ ತುರ್ತು ಎಂದರು. ಇದೇ ಸಂದರ್ಭ ವಿವಿಧ ದೃಷ್ಟಾಂತಗಳ ಮೂಲಕ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಕುರಿತು ವಿವರಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಸಾಹಿತ್ಯ, ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ ಹಾಗೂ ಉದ್ಯೋಗ ಈ ಪಂಚಮುಖಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ, ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಮತ್ತು ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ವತಿಯಿಂದ 2024-25ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್. ಗಾಣಿಗ ಅವರನ್ನು ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಆವರಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ. ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್. ಗಂಗೊಳ್ಳಿ, ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪಂಚಾಯತ್ ಸದಸ್ಯೆ ಮಮತಾ ಗಾಣಿಗ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆಯ ಸದಸ್ಯರುಗಳಾದ ಆನಂದ ಬಿಲ್ಲವ ಹಾಗೂ ರಾಮಚಂದ್ರ ಜಿ. ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಿತ ಕೈಗಾರಿಕಾ ಭೇಟಿ ಕಾರ್ಯಕ್ರಮವನ್ನು ಕೋಟಾದ ಜನತಾ ಪಿಶ್ ಇಂಡಸ್ಟ್ರೀಸ್ ಇಲ್ಲಿ ನಡೆಸಲಾಯಿತು. ಇದರಿಂದ ವಿದ್ಯಾರ್ಥಿಗಳು ಜನತಾ ಪಿಶ್ ಇಂಡಸ್ಟ್ರೀಸ್ ಕಾರ್ಯ ನಿರ್ವಹಣೆ, ತಂತ್ರಜ್ಞಾನ, ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ವ್ಯವಹಾರದ ಕುರಿತು ಅನೇಕ ವಿಷಯಗಳ ಬಗ್ಗೆ ಸಂಸ್ಥೆಯ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ಕಾರ್ಯಕ್ರದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ, ಉಪನ್ಯಾಸಕರುಗಳಾದ ಸಂದೀಪ ಕೆ., ದೀಪಕ್ ಕುಮಾರ್ ಶೆಟ್ಟಿ, ಸುಹಾಸ್‌ ಉಪಸ್ಥಿತರಿದ್ದರು.

Read More