Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಯುವ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವು ವಂಡ್ಸೆಯ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಡಾ. ಅತುಲ್ ಕುಮಾರ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಸಾರ್ವಜನಿಕ ಉಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದೆ. ಶಿಕ್ಷಣ, ಆರೋಗ್ಯ, ಸಾಮಾಜಿಕ, ಕೃಷಿ ಕ್ಷೇತ್ರಕ್ಕೆ ಒತ್ತು ನೀಡುತ್ತಿದೆ. ಸಾರ್ವಜನಿಕರು ಇಂಥಹ ಉಪಯೂಕ್ತ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ನಿರಾಮಯ ಸೊಸೈಟಿ ವಂಡ್ಸೆ ಇದರ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು ಮಾತನಾಡಿ, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಆರೋಗ್ಯದ ದೃಷ್ಟಿಯಿಂದ ನಿರಾಮಯ ಸೊಸೈಟಿ, (ಪಾಲಿಯೇಟಿವ್ ಕೇರ್ ಯೂನಿಟ್) ಸೆ.೧ರಿಂದ ವಂಡ್ಸೆ ಕ್ಲಸ್ಟರ್‌ನಲ್ಲಿ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ – ಕೇರಳ ಹಾಗೂ ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ದ. ಕ ಜಿಲ್ಲೆ ಇವರ ಸಹಕಾರದೊಂದಿಗೆ ನಮ್ಮ ನ್ಯಾಯಕೂಟ ಉದ್ಘಾಟನಾ ಕಾರ್ಯಕ್ರಮವು ಯುಗಪುರುಷ ಸಭಾಭವನ ಕಿನ್ನಿಗೋಳಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಮ್ಮ ನ್ಯಾಯಕೂಟದ ಅಧ್ಯಕ್ಷರಾಗಿರುವ ಬಾಲರಾಜ್ ಕೋಡಿಕಲ್ ಅವರು ಡೋಲು ಬಾರಿಸುವುದರ ಮೂಲಕ ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಮೂಡಬಿದ್ರೆ ತಹಶೀಲ್ದಾರ್‌ ಶ್ರೀಧರ ಎಸ್. ಮುಂದಲಮನಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಾಡುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು. ಉದ್ಘಾಟನಾ ಮಾತುಗಳನ್ನಾಡಿದ ತಹಶೀಲ್ದಾರ್ ಸಮುದಾಯದ ಜನರಿಗೆ ಸೌಲಭ್ಯಗಳು, ಯೋಜನೆಗಳು ತಲುಪುವಲ್ಲಿ ಅಧಿಕಾರಿಯ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂಬುದಾಗಿ ಭರವಸೆಯ ನುಡಿಗಳನ್ನಾಡಿದರು. ಬಾಲರಾಜ್ ಕೋಡಿಕಲ್ ಅವರು ನಮ್ಮ ನ್ಯಾಯಕೂಟ ವ್ಯವಸ್ಥೆಯು ಸಮುದಾಯದಲ್ಲಿ ಇರಬೇಕಾದ ಅಗತ್ಯತೆ ಹಾಗೂ ನಮ್ಮ ನ್ಯಾಯಕೂಟ ವ್ಯವಸ್ಥೆಯ ಇತಿಹಾಸವನ್ನು ಪರಿಚಯ ಮಾಡಿದರು. ಸಮುದಾಯದಲ್ಲಿನ ಕೌಟುಂಬಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರೆಡ್‌ಕ್ರಾಸ್ ಸಂಸ್ಥೆಯು ಮಾನವ ಜೀವನ ಹಾಗೂ ಆರೋಗ್ಯವನ್ನು ರಕ್ಷಿಸಲು ಯಾವುದೇ ಫಲಾಪೇಕ್ಷಿಯಿಲ್ಲದೇ ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರೆಡ್‌ಕ್ರಾಸ್‌ನ ಈ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಿನೇವಾ ಒಪ್ಪಂದ ಐತಿಹಾಸಿಕ ಆಚರಣೆಯ ಸಮಾರೋಪ, ವಿಶ್ವಶಾಂತಿಗಾಗಿ ಮತ್ತು ಮಾದಕ ವ್ಯಸನ ವಿರೋಧಿ ಜಾಥಾ, ಸಾಮಾಜಿಕ ಕಾರ್ಯಗಳಿಗೆ ನಿಧಿ ಸಂಗ್ರಹಣೆ ಹಾಗೂ ನೆರೆ ಸಂತ್ರಸ್ತರು ಮತ್ತು ಅರ್ಹ ಫಲಾನುಭವಿಗಳಿಗೆ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೆಡ್‌ಕ್ರಾಸ್ ಸಂಸ್ಥೆಯು ಸಮಾಜಕ್ಕೆ ಬಲಿಷ್ಠ ರೀತಿಯಲ್ಲಿ ಸೇವೆ ನೀಡುತ್ತಿದ್ದು, ಪ್ರಾಕೃತಿಕ ವಿಕೋಪ, ಬರ ನಿರ್ವಹಣೆ, ತುರ್ತು ಅಗತ್ಯದ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಲ್ಲಿಸುತ್ತಿರುವ ಸೇವೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ನಿರ್ಗತಿಕರ ಬದುಕಿಗೆ ಆಶಾಕಿರಣವಾಗಿರುವ ಸಂಸ್ಥೆಯು ನಿರಂತರವಾಗಿ ಅಗತ್ಯವಿರುವವರಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಮೀನು ಮಾರಾಟಕ್ಕಾಗಿ 4 ಚಕ್ರ ವಾಹನ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯವನ್ನು ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನುಡಿದರು. ಅವರು ಸೋಮವಾರ ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾನೂನು ಬರುವ ಮೊದಲೇ ಸಮಾಜದಲ್ಲಿ ಕೆಲವು ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಈಗ ಆ ಸಮಾಜ ಬದಲಾಗಿದೆ. ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ ಇಲ್ಲದ ಹಾಗೇ ಆಗಿದೆ. ದುರಾಸೆ ಎಂಬ ರೋಗ ಇದಕ್ಕೆ ಕಾರಣವಾಗಿದೆ ಎಂದು ವಿವರಿಸಿದರು. ಹಿಂದೆಲ್ಲಾ ತಪ್ಪು ಮಾಡಿದವರಿಗೆ ಅವರನ್ನು ದೂರ ಇಡುವ ಮೂಲಕ ಶಿಕ್ಷೆ ನೀಡಲಾಗುತ್ತಿತ್ತು. ಆದರೆ ಈಗ ಜೈಲಿಗೆ ಹೋಗಿ ಜಾಮೀನಿನ ಮೂಲಕ ಹೊರಗೆ ಬಂದವನಿಗೆ ಹಾರ ತುರಾಯಿ ಹಾಕಿ ಸ್ವಾಗತ ಕೋರುತ್ತೇವೆ. ಪ್ರಾಮಾಣಿಕತೆ, ಮೌಲ್ಯಗಳು ಹಣದ ಮುಂದೆ ಗೌಣ್ಯವಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಕ್ರಾಂತಿ ಮೂಲಕ ಬದಲಾವಣೆ ಆದರೆ ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿನಿಯರಲ್ಲಿ ಅಡಗಿರುವ ಹಲವಾರು ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸುತ್ತಾ, ಮಾನಸಿಕ ಖಿನ್ನತೆ, ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ, ಆರೋಗ್ಯದ ಬಗ್ಗೆ ಮತ್ತು ಇಂದಿನ ಯುಗದಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ದೈಹಿಕ ಹಾಗೂ ಬೌದ್ಧಿಕ ಸಮಸ್ಯೆಗಳ ಬಗ್ಗೆ ಮತ್ತು ಇವುಗಳ ಪರಿಹಾರಗಳ ಬಗ್ಗೆ ಡಾ. ಎನ್. ಆರ್. ಆಚಾರ್ಯ ಆಸ್ಪತ್ರೆಯ ಮನೋರೋಗ ತಜ್ಞರು ಡಾ. ಮಹಿಮಾ ಆಚಾರ್ಯ ತಿಳಿಸಿದರು. ಅವರು ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಮಹಿಳಾ ದೌರ್ಜನ್ಯ ತಡೆ ಮತ್ತು ಕರ್ನಾಟಕ ದಕ್ಷಿಣ ಪ್ರಾಂತ್ಯ, ನ್ಯಾಷನಲ್ ಮೆಡಿಕೋಸ್ ಒರ್ಗನೈಸೇಷನ್ (ಎನ್‌ಎಮ್‌ಒ) ಇವರ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಲ್ಲಿ ಶೈಕ್ಷಣಿಕೇತರ ಸಮಸ್ಯೆಗಳು ಮತ್ತು ಪರಿಹಾರಗಳು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರು ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿನಿ ಎನ್.ಸಿ.ಸಿ ಸೇನಾ ಕೆಡೆಟ್ ಜೂನಿಯರ್ ಅಂಡರ್ ಆಫೀಸರ್ ಹನಿ ಹೆಗ್ಡೆ ಅವರು ಸೆಪ್ಟೆಂಬರ್ 1, 2025 ರಿಂದ ಸೆಪ್ಟೆಂಬರ್ 12, 2025 ರವರೆಗೆ ದೆಹಲಿಯಲ್ಲಿ ನಡೆಯಲಿರುವ ಥಾಲ್ ಸೈನಿಕ್ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 1 ರಿಂದ ಜೂನ್ 10, 2025 ರವರೆಗೆ ಕಾರ್ಕಳದಲ್ಲಿ ನಡೆದ ಮೊದಲ ಶಿಬಿರ, ಜುಲೈ 6 ರಿಂದ ಜುಲೈ 15, 2025 ರವರೆಗೆ ಮೂಡಬಿದ್ರಿಯಲ್ಲಿ ನಡೆದ ಎರಡನೇ ಶಿಬಿರ, ಜುಲೈ 17 ರಿಂದ ಜುಲೈ 26, 2025 ರವರೆಗೆ ಮೈಸೂರಿನಲ್ಲಿ ನಡೆದ ಮೂರನೇ ಶಿಬಿರ TSC – IGC, ಜುಲೈ 27 ರಿಂದ ಆಗಸ್ಟ್ 5, 2025 ರವರೆಗೆ ಮೈಸೂರಿನಲ್ಲಿ ನಡೆದ ನಾಲ್ಕನೇ ಶಿಬಿರ TSC – 1, ಆಗಸ್ಟ್ 10 ರಿಂದ ಆಗಸ್ಟ್ 19, 2025 ರವರೆಗೆ ಮೈಸೂರಿನಲ್ಲಿ ನಡೆದ 5ನೇ ಶಿಬಿರ TSC – 2 ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ರೈತರಿಗೆ ಪೋತ್ಸಾಹಕರ ವಾತಾವರಣ ಸೃಷ್ಠಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತ ಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ 48ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು. ತೆರೆಯ ಮರೆಯಲ್ಲಿರುವ ರೈತರನ್ನು ಹುಡುಕಿ ಗುರುತಿಸುವ ಕಾಯಕ ಅತ್ಯಂತ ಶ್ಲಾಘನೀಯ ಕಾರ್ಯ, ಪಂಚವರ್ಣ ಸಾಮಾಜಿಕ ಕಾರ್ಯ, ನಿರಂತ ಸ್ವಚ್ಛತೆ ಮತ್ತು ಹಸಿರು ಅಭಿಯಾನ ಮನೆಮಾತಾಗಿ ಬೆಳೆದಿದೆ ಎಂದು ಸಾಧಕ ರೈತ ಮಹಿಳೆ ಶಾರದ ಶೆಟ್ಟಿಗೆ ರೈತಪುರಸ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಗೋ ಮಾತೆ ಪೂಜೆ ನೆರವೆರಿಸಿಕೊಂಡು, ಗಿಡನೆಟ್ಟು ಪರಿಸರ ಜಾಗೃತಿ ಮೆರೆಯಲಾಯಿತು. ಕಾರ್ಯಕ್ರಮದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಜೀವನದಲ್ಲಿ ಯಶಸ್ಸು ಕೇವಲ ಪ್ರತಿಭೆಯಿಂದ ನಿರ್ಧಾರವಾಗುವುದಿಲ್ಲ. ಶ್ರೇಷ್ಠ ಸಾಧನೆಯೆಡೆಗಿನ ತುಡಿತ,  ಆತ್ಮವಿಶ್ವಾಸ, ನಿರಂತರ ಪರಿಶ್ರಮ ಹಾಗೂ ಗುರಿಯತ್ತ ಸರಿಯಾದ ಮಾರ್ಗದಲ್ಲಿ ಸಾಗುವ ಪ್ರಾಮಾಣಿಕ ಪ್ರಯತ್ನ ಸಾಧನೆಯನ್ನು ಸಹಕಾರಗೊಳಿಸುತ್ತದೆ ಎಂದು 2025ರ ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ 10ನೇ ರ್ಯಾಂಕ್‌ ಪಡೆದ ಆಳ್ವಾಸ್‌ನ ಹಿರಿಯ ವಿದ್ಯಾರ್ಥಿ ಸಿಎ ತಬಿಶ್ ಹಸನ್ ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿಯಲ್ಲಿ ಟಾಪ್ 10ರ ಒಳಗೆ ರ್ಯಾಂಕ್‌ ಪಡೆದ ಹಾಗೂ ಸಿಎ ಫೈನಲ್ ಪರೀಕ್ಷೆಯನ್ನು 2025ರಲ್ಲಿ ಉತ್ತೀರ್ಣರಾದ ಸಾಧಕರ ಸನ್ಮಾನ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕ ಸಂದೇಶ ನೀಡಿದರು. ಗುರಿಯನ್ನು ಕೇಂದ್ರೀಕರಿಸಿ, ಅದನ್ನು ಸಾಧಿಸಲು ಶ್ರಮಿಸುವುದು ಅತಿ ದೊಡ್ಡ ಸಾಧನೆ ಏನಿಸಿಕೊಳ್ಳುತ್ತದೆ. ಸುಲಭವಾಗಿ ಸಿಗುವ ತಕ್ಷಣದ ಯಶಸ್ಸು ಭ್ರಮೆಯೆ ಸರಿ. ಶ್ರೇಷ್ಠ ಸಾಧನೆಗೆ ತಾಳ್ಮೆ ಮತ್ತು ಪರಿಶ್ರಮ ಬೇಕು. ಕನಸನ್ನು ನನಸಾಗಿಸಲು ತ್ಯಾಗ ಅಗತ್ಯ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ, ಭಂಡಾರ್ಕಾರ್ಸ್ ಪದವಿ ಕಾಲೇಜು ಮತ್ತು ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇವರು ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿ.ಯು ಅಂತರ್ ಕಾಲೇಜು ಬಾಲಕ- ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಟಿ. ಸೋನ್ಸ್ ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್. ಗೊಂಡ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಅಧ್ಯಕ್ಷ ಗುರುರಾಜ್ ಕೊತ್ವಾಲ್, ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಆಟಗಾರ ಹರೀಶ್ ಕಾಮತ್, ಪಿ.ಯು ದೈಹಿಕ ನಿರ್ದೇಶಕರುಗಳ ಸಂಘ ಇದರ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ, ಭಂಡಾರ್ಕಾರ್ಸ್…

Read More