ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದ ಮಹತ್ವದ ಉದ್ದೇಶವನ್ನು ಹೊಂದಿಕೊಂಡು ಕುಂದಾಪುರದ ಎಲ್.ಜಿ. ಫೌಂಡೇಶನ್ ವತಿಯಿಂದ “ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಹಾಗೂ ಸಾಧಕರ ಸನ್ಮಾನ ಸಮಾರಂಭ – 2026” ಕಾರ್ಯಕ್ರಮವು ಹೆಮ್ಮಾಡಿಯ ಹೊಸಕಳಿಯ ಬೊಬ್ಬರ್ಯ ದೈವಸ್ಥಾನದ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶೈಕ್ಷಣಿಕ ಸಾಧನೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಇತರ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ನಾಲ್ವರು ವಿದ್ಯಾರ್ಥಿಗಳಾದ ರಿಷಿಕಾ ದೇವಾಡಿಗ, ಶ್ರಾವ್ಯ ಜಿ. ದೇವಾಡಿಗ, ವರ್ಷಾ ಕೆ. ದೇವಾಡಿಗ, ರಶ್ಮಿತಾ ರವಿ ದೇವಾಡಿಗ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲ್.ಜಿ. ಫೌಂಡೇಶನ್ನ ವ್ಯವಸ್ಥಾಪಕ ಟ್ರಸ್ಟಿಗಳಾದ ನಾಗರಾಜ್ ಪಡುಕೋಣೆ ವಹಿಸಿದ್ದರು. ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಅವರು ಎಲ್.ಜಿ. ಫೌಂಡೇಶನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಗ್ರಾಮೀಣ ಭಾಗದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವಾಗುವುದು ಸಂಸ್ಥೆಯ ಪ್ರಮುಖ ಧ್ಯೇಯವಾಗಿದ್ದು, ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ತಿಳಿಸಿದರು. ಕಾರ್ಯಕ್ರಮವನ್ನು ಹೆಮ್ಮಾಡಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ನಂದಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಏಳು ಜನರ ತಂಡ ಸೋಡಾ ಬಾಟಲಿ ಹಾಗೂ ಹೆಲ್ಮೆಟ್ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಕುಂಭಾಶಿಯ ಕೊರವಡಿ ಎಂಬಲ್ಲಿ ನಡೆದಿದೆ. ತೆಕ್ಕಟ್ಟೆ ಗ್ರಾಮದ ರಂಜಿತ್ ಹಲ್ಲೆಗೊಳಗಾದವರು. ಸದ್ಯ ಇವರು ಗಂಭೀರ ಸ್ಥಿತಿಯಲ್ಲಿ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇ.17ರಂದು ರಾತ್ರಿ 10 ಗಂಟೆಯ ಸುಮಾರಿಗೆ ರಂಜಿತ್ ಅವರು ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಜೋರಾಗಿ ಮಳೆ ಬರುತ್ತಿದ್ದ ವೇಳೆ ಕುಂಭಾಶಿಯ ಕೊರವಡಿ ಬಳಿಯ ಅಂಗಡಿಯೊಂದರ ಎದುರು ತಮ್ಮ ಬೈಕ್ ನಿಲ್ಲಿಸಿ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿಗಳಾದ ವಿಕಾಸ್ ಪೂಜಾರಿ, ಶರತ್ ಪೂಜಾರಿ, ಮಹೇಂದ್ರ ಪೂಜಾರಿ, ಸುಕೇಶ್ ಪೂಜಾರಿ, ಅಭಿಲಾಷ್ ಪೂಜಾರಿ, ಮಂಜುನಾಥ ಮತ್ತು ಸಂದೇಶ್ ಇವರು ಒಟ್ಟು ಸೇರಿ, ರಂಜಿತ್ನನ್ನು ಕೊಲ್ಲುವ ಉದ್ದೇಶದಿಂದ ಸೋಡಾ ಬಾಟಲಿ ಹಾಗೂ ಹೆಲ್ಮೇಟ್ನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ರಂಜಿತ್ ಅವರಿಗೆ ಗಂಭೀರ ಸ್ವರೂಪದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಕೋಟ ಬೊಬ್ಬರ್ಯನಕಟ್ಟೆ ಸಮೀಪ ಸಂಭವಿಸಿದೆ. ಕೋಟಿ ಗಿಳಿಯಾರು ನಿವಾಸಿ, ಲಾರಿ ಲೋಡರ್ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ದೇವಾಡಿಗ (60) ಮೃತಪಟ್ಟ ದುರ್ದೈವಿ. ಉಡುಪಿ ಕಡೆಯಿಂದ ಕುಂದಾಪುರದತ್ತ ಸಂಚರಿಸುತ್ತಿದ್ದ ಕಾರು, ರಸ್ತೆ ದಾಟಲು, ನಿಂತಿದ್ದ ಕೃಷ್ಣ ದೇವಾಡಿಗ ಅವರಿಗೆ ಢಿಕ್ಕಿ ಹೊಡೆಯಿತು. ‘ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಅವರನ್ನು ‘ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆಯ ಮಾಹಿತಿ ತಿಳಿದು ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ಎಂಬುವುದು ಮಹತ್ತರವಾದ ಘಟ್ಟ. ಈ ಆರಂಭಿಕ ಶೈಕ್ಷಣಿಕ ದಿನಗಳನ್ನು ನೈಜವಾಗಿ ಸದ್ಭಳಕೆ ಮಾಡಿಕೊಳ್ಳಿ ಎಂದು ಕೋಟದ ಶೈಕ್ಷಣಿಕ ಪ್ರೋತ್ಸಾಹಕ, ಉದ್ಯಮಿ ಆನಂದ್ ಸಿ. ಕುಂದರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕರೆ ಇದರ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಕೊಡಮಾಡಿದ ವಿದ್ಯಾನಿಧಿಯನ್ನು ಹಸ್ತಾಂತರಿಸಿ ಮಾತನಾಡಿದರು. ಗ್ರಾಮೀಣ ಪರಿಸರದ ಮಕ್ಕಳ ವಿದ್ಯಾರ್ಜನೆಯಿಂದ ವಂಚಿತಗೊಳ್ಳಬಾರದೆಂದು ಈ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ.ಗೀತಾನಂದ ಫೌಂಡೇಶನ್ ನಿರಂತರವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಸರಕಾರಿ ವ್ಯವಸ್ಥೆಯನ್ನು ಪ್ರತಿಯೊರ್ವರು ಸದ್ಭಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವತಿಯಿಂದ ವಿಧ್ಯಾನಿಧಿಯನ್ನು ಹಸ್ತಾಂತರಿಸಲಾಯಿತು.ಅಲ್ಲದೆ ಉಪನ್ಯಾಸಕಿ ಡಾ. ಸುನಿತಾ ವಿ.ಸುಬ್ರಹ್ಮಣ್ಯ ಅವರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವೇದಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊಂದಾದ ಕರ್ನಾಟಕ ಸಂಘ ಕತಾರ್ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಐಸಿಸಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭೆಯಲ್ಲಿ ಉಪಸ್ಥಿತರಿದ್ದ ಅಪಾರ ಸಂಖ್ಯೆಯ ಸದಸ್ಯರು ಅವರ ನಾಯಕತ್ವದ ಮೇಲೆ ಅಪಾರ ವಿಶ್ವಾಸ ಮತ್ತು ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಮೂಲದ ಕುಂದಾಪುರ ತಾಲ್ಲೂಕಿನ ಬೈಂದೂರಿನವರಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ಭಾರತೀಯ ಸಮುದಾಯದಲ್ಲಿ ಸಾಮಾಜಿಕ ಮತ್ತು ಸಮುದಾಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅವರು ಹಲವು ವರ್ಷಗಳಿಂದ ಮಾನವೀಯ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಮುದಾಯದ ಗೌರವಾನ್ವಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆರ್ಥಿಕ ವರ್ಷ 2013-14 ರಿಂದ 2018-19ನೇ ಸಾಲಿನಲ್ಲಿ ಅರಿವು, ಶ್ರಮಶಕ್ತಿ, ಸ್ವಾವಲಂಬನಾ, ಎನ್.ಎಂ.ಎಫ್.ಡಿ.ಸಿ ನೇರ ಸಾಲ, ಮೈಕ್ರೋ ಕಿರುಸಾಲ, ಪಶುಸಂಗೋಪನಾ ಯೋಜನೆ ಮುಂತಾದ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲದ ಮೊತ್ತವನ್ನು ಪೂರ್ಣವಾಗಿ ಅಸಲು ಪಾವತಿಸುವ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಒಂದಾವರ್ತಿ ತೀರುವಳಿ ಯೋಜನೆ(ಒ.ಟಿ.ಎಸ್) ಮೂಲಕ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಈ ಯೋಜನೆಯಡಿ ಫಲಾನುಭವಿಯು ಸಾಲದ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತದ ಶೇ.25 ರಷ್ಟು ಮೊತ್ತವನ್ನು ಪಾವತಿಸಿ, ಯೋಜನೆಯಡಿ ನೋಂದಾಯಿಸಿಕೊಂಡು 2026 ರ ಮೇ 1 ರಿಂದ ಜುಲೈ 31 ರವರೆಗೆ ಬಾಕಿ ಉಳಿದ ಪೂರ್ಣ ಮೊತ್ತವನ್ನು ಪಾವತಿಸಿ ಸರ್ಕಾರದ ಒಟಿಎಸ್ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ನಿಗದಿತ ಸಮಯದಲ್ಲಿ ಸಾಲವನ್ನು ಪಾವತಿಸದಿದ್ದಲ್ಲಿ ನಿಗಮದ ನಿಯಮಾವಳಿಯಂತೆ ಮರುಪಾವತಿಸಿದ ಮೊತ್ತವನ್ನು ಸಾಲದ ಖಾತೆಗೆ ಸರಿಹೊಂದಿಸಲಾಗುವುದು. ಒ.ಟಿ.ಎಸ್ ಬಡ್ಡಿಯನ್ನು ಮನ್ನಾ ಯೋಜನೆ ಅಪೇಕ್ಷಿಸುವ ಫಲಾನುಭವಿಗಳು ನಿಗಮದ ವೆಬ್ಸೈಟ್ https://kmdconline.karnataka.gov.in/Portal/ots-repayment ಮೂಲಕ ಅಥವಾ ನಿಗಮದ ಕಚೇರಿಯಾದ ಮೌಲಾನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂ.17 ಕೊನೆಯ ದಿನ, ಜೂ.19 ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಜೂ. 25 ರ ವರೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೇ.26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆ, ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನ ಚರಂಡಿ, ತೋಡುಗಳನ್ನು ಸ್ವಚ್ಛಗೊಳಿಸಿ, ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮಗಳನ್ನು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಇದರಿಂದ ರೋಗ ರುಜಿನಗಳು ಹರಡದಂತೆ ತಡೆಯಲು ಸಾಧ್ಯ ಎಂದ ಅವರು, ಅತಿವೃಷ್ಠಿ ಸಂಭವಿಸಿದಾಗ ತುರ್ತು ವಿಪತ್ತು ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಲುಬಾಯಿ ರೋಗವು ಜಾನುಬಾರುಗಳಲ್ಲಿ ಅತ್ಯಂತ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಈ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಈಗಾಗಲೇ ಆರಂಭಗೊಂಡಿದ್ದು, ಮೇ.22ರ ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಾನುವಾರುಗಳಿಗೆ ವೈರಾಣುವಿನಿಂದ ಹರಡುವ ಈ ರೋಗ ತಡೆಗೆ ಲಸಿಕೆಯೊಂದೇ ಪರಿಹಾರವಾಗಿದ್ದು, ರೈತರುಗಳು ನಿರ್ಲಕ್ಷಯ ವಹಿಸದೇ ತಪ್ಪದೇ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಪಶು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಜಾನುವಾರುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ವಾಷಿಂಗ್ಟನ್ ಡೀಸಿಯಲ್ಲಿರುವ ಪ್ರತಿಷ್ಠಿತ ವಾಷಿಂಗ್ಟನ್ ಎಡ್ಡೆಂಟಿಸ್ಟ್ ಯುನಿವರ್ಸಿಟಿಯ 111ನೇ ಪದವಿ ಪ್ರದಾನ ಸಮಾರಂಭದಂದು ಮೆರಿಲ್ಯಾಂಡ್ ನಿವಾಸಿ ಉದ್ಯಮಿ, ಸಾಧಕ ಆನಂದ ಪೂಜಾರಿ ಅವರಿಗೆ ‘ಡಾಕ್ಟರ್ ಆಫ್ ಹೂಮನ್ ಲೆಟರ್ಸ್’ ಗೌರವ ಪದವಿಯನ್ನು ನೀಡಿ ಗೌರವಿಸಲಾಯಿತು. ಆರಂಭದಲ್ಲಿ ಪ್ರಾಸ್ತಾವಿಕವಾಗಿ ‘ಬ್ಯುಸಿನೆಸ್ ಎಂಡ್ ಕಮುನಿಟಿ ಸರ್ವಿಸೆಸ್’ನಲ್ಲಿ ಸಮಾಜಕ್ಕೆ ಅಸಾಧರಣ ಕೊಡುಗೆ ನೀಡಿದ ಸಾಧಕರಿಗೆ ಈ ಗೌರವ ಡಾಕ್ಟರೇಟ್ ಗೌರವವನ್ನು ನೀಡಲಾಗುತ್ತದೆ ಎಂದು ಉದ್ಯೋಷಕ ಚೆರ್ಲಿ ಕಿಸುಂಝು ಹೇಳಿದರು. ವಿಶ್ವವಿದ್ಯಾಲಯದ ಅಧ್ಯಕ್ಷರಾದ ವೇಯಮೌತ್ ಸ್ಟೆನ್ಸ್ ಅವರು, ಆನಂದ ಪೂಜಾರಿ ಅವರ ಹೊಟೇಲು ಮತ್ತು ಆತಿಥ್ಯ ಉದ್ಯಮದಲ್ಲಿ ವೃತ್ತಿಪರ ಸೇವೆ; ಸರಕಾರದ ರಾಜತಾಂತ್ರಿಕ ಸಂಸ್ಥೆಗಳೊಂದಿಗಿನ ಸೌಹಾರ್ದಪೂರ್ಣ ವೈಯಕ್ತಿಕ ಬಾಂದವ್ಯ ಮತ್ತು ತಮ್ಮ ವಿವಿಧ ಉದ್ಯಮದ ಮೂಲಕ ನೂರಾರು ಉದ್ಯೋಗಗಳನ್ನು ಸೃಷ್ಟಿ ಮಾಡಿರುವುದಲ್ಲದೆ, ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಸೇವಾ ವಲಯದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿ ಆನಂದ ಪೂಜಾರಿ ಅವರನ್ನು ಅಭಿನಂದಿಸಿ, ನೆರೆದ ವಿದ್ಯಾರ್ಥಿಗಳು, ಅವರ ಪರಿವಾರದವರು…
