ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೇತಾಜಿ ಸುಭಾಶ್ಚಂದ್ರ ಸರ್ಕಾರಿ ಪ್ರೌಢಶಾಲೆ ಮರವಂತೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದ ವಿದ್ಯಾರ್ಥಿಗಳು ಅಪ್ರತಿಮ ಸಾಧನೆಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದ 100ಮೀ ಓಟದ ಸ್ಪರ್ಧೆಯಲ್ಲಿ ಹೃತಿಕ್ (1೦ನೇ ತರಗತಿ) ಚಿನ್ನದ ಪದಕ, ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಬಾಲಕಿಯರ ತ್ರಿವಿದ ಜಿಗಿತ ಸ್ಪರ್ಧೆಯಲ್ಲಿ ಶ್ರೀರಕ್ಷಾ (10ನೇ ತರಗತಿ) ಚಿನ್ನದ ಪದಕ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯಮಾನದ ಹುಡುಗಿಯರ ಚಕ್ರ ಎಸೆತ ಮತ್ತು ಗುಂಡು ಎಸೆತ ಸ್ಪರ್ಧಿಗಳಲ್ಲಿ ಶರಣ್ಯ (9ನೇ ತರಗತಿ) ಬೆಳ್ಳಿಯ ಪದಕ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . 14ರ ವಯೋಮಾನದ ಬಾಲಕರ ವಿಭಾಗದ ರಿಲೆ ಸ್ಪರ್ಧೆ ಯಲ್ಲಿ ರಜತ್ ಎಲ್ ಪಿ, ಅಬ್ದುಲ್ ಶಯನ್ ,ಪ್ರೀತಮ್, ತನ್ವೀರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿಯಾದ ನಯನ ಎಂ. ನಾಯ್ಕ್ ಅವರು ಕ್ರೀಡಾ ಕ್ಷೇತ್ರದಲ್ಲಿ ಗಳಿಸಿದ ವಿಶಿಷ್ಟ ಸಾಧನೆಗೆ ’ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪಡೆದಿರುತ್ತಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ಸಿಬ್ಬಂಧಿವರ್ಗ ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಂದ ಕೋಟಿಲಿಂಗೇಶ್ವರ ದೇವಸ್ಥಾನ, ಕೋಟೇಶ್ವರ ಇದರ ದೇವಸ್ಥಾನ ಕೆರೆಯ ಸ್ವಚ್ಛತಾ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ದೇವಸ್ಥಾನಕ್ಕೆ ಆಗಮಿಸಿದ್ದ ತೆಲುಗು ಚಿತ್ರ ನಟ ಶ್ರೀಕಾಂತ್ ಅವರು ಈ ಶ್ರಮದಾನವನ್ನು ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಗಿಣಿ ದೇವಾಡಿಗ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ .ಎಂ. ಗೊಂಡ ಹಾಗೂ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎ.ಎಸ್. ಹಾಗೂ ರಾಮಚಂದ್ರ ಆಚಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 75 ಏನ್ ಎಸ್ ಎಸ್ ವಿದ್ಯಾರ್ಥಿಗಳು ದೇವಸ್ಥಾನದ ಕೆರೆಯ ಪರಿಸರವನ್ನು ಸ್ವಚ್ಛಗೊಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದಲ್ಲಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜನತಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ ದೇವಾಡಿಗ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಜನತಾ ಪದವಿ ಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾದಗಿರಿ ಜಿಲ್ಲೆ ಶಹಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವರ್ಣಿತಾ ವಿ. ಕುಂದರ್ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯಮಟ್ಟದ ವೇಟ್ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟಗಳಿಸಿದರು. ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮದುಲಿಂಗ ಎಂ (60 ಕೆ.ಜಿ. ವಿಭಾಗ)- ಚಿನ್ನ, ವಸಂತ್ ಕುಮಾರ್ ಸಿ.ಜಿ. (79 ಕೆ.ಜಿ. ವಿಭಾಗ)- ಚಿನ್ನ, ಸಾಯಿ ಹಿತೇಶ್ (94 ಕೆ.ಜಿ. ವಿಭಾಗ)- ಚಿನ್ನ, ಹರ್ಷ ಸಿ.ಆರ್. (110+ ಕೆ.ಜಿ. ವಿಭಾಗ)-ಚಿನ್ನ ಹಾಗೂ ಹರ್ಷಿತಾ (69 ಕೆ.ಜಿ. ವಿಭಾಗ) ಕಂಚಿನ ಪದಕದೊಂದಿಗೆ ಒಟ್ಟು 4 ಚಿನ್ನ ಹಾಗೂ 1 ಕಂಚಿನ ಪದಕ ಗಳಿಸಿದರು. ವಿಟಿಯು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ನ ನೈದಿಲ್ ಪೂಜಾರಿ (70 ಕೆ.ಜಿ. ವಿಭಾಗ)– ಚಿನ್ನದ ಪದಕದೊಂದಿಗೆ ಮಿಸ್ಟರ್ ವಿಟಿಯು ‘ಮೋಸ್ಟ್ ಮಸ್ಕುಲರ್ ಮ್ಯಾನ್’ ಪಟ್ಟ ಪಡೆದರು. ಸೋಹಮ್ ಕುಡಚಿ (85 ಕೆ.ಜಿ. ವಿಭಾಗ) – ಚಿನ್ನದ ಪದಕ ಪಡೆದರೆ, ಜಗದೀಶ್ ಗೌಡ (85 ಕೆಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಮ್ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ನವೋನ್ಮೇಶ 2025 ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಉದ್ಘಾಟಕರಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಖ್ಯಾತ ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಆಗಮಿಸಿದ್ದರು. ಉದ್ಘಾಟನಾ ಭಾಷಣ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಕ್ಕಳು ವಿದ್ಯೆ ಜೊತೆ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತ ಸಂಸ್ಥೆಯ ಸ್ಥಾಪಕರಾದ ದಿ.ಐ ಎಮ್. ಜಯರಾಮ್ ಶೆಟ್ಟಿ ಹಾಗೂ ಬೆಳವಣಿಗೆಗೆ ಕಾರಣೀಕರ್ತರಾದ ಸಿದ್ಧಾರ್ಥ್ ಜೆ. ಶೆಟ್ಟಿ ಅವರನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕರಾವಳಿಯ ಖ್ಯಾತ ನಟ ದೀಪಕ್ ರೈ ಪಾಣಾಜೆ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಅಕಾಡಮಿಕ್ ಡೈರೆಕ್ಟರ್ ಡಾ. ಎಸ್.ಎನ್. ಭಟ್ ಅಧ್ಯಕ್ಷೀಯ ಭಾಷಣದಲ್ಲಿ ನವೋನ್ಮೇಶ ಪದದ ಅರ್ಥವನ್ನು ವಿವರಿಸಿ ಪ್ರತೀಭಾನ್ವೇಶಣೆಗೆ ಪೂರಕವಾದದ್ದು ಎಂದು ಹೇಳಿ ಕಾರ್ಯಕ್ರಮ ಆಯೋಜಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಐಎಮ್ಜೆ ಐ ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು ಮಾತನಾಡಿ “ಕನ್ನಡವನ್ನು ಉಳಿಸಿ ಬೆಳೆಸಬೇಕಾದ್ದು ಕನ್ನಡಿಗರಾದ ನಮ್ಮ ಕರ್ತವ್ಯ. ಸಾಹಿತ್ಯದ ಓದುವಿಕೆ ಮತ್ತು ಬರೆಯುವಿಕೆ ನಮ್ಮ ಅನುಭವಗಳನ್ನು ಹೆಚ್ಚಿಸುವ ಪ್ರಕ್ರಿಯೆ. ಆದ್ದರಿಂದ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಸಿಕೊಳ್ಳಿ. ಭಾಷೆಯ ಬಗೆಗೆ ಹೆಚ್ಚಿನ ಗಮನ ಕೊಡಿ. ವಾಕ್ಯಗಳ ರಚನೆಯಲ್ಲಿ ತೊಡಗಿ, ಬಳಿಕ ಸಾಹಿತ್ಯ ರಚನೆಗೂ ಮುಂದಾಗಬೇಕು ಎನ್ನುತ್ತಾ ಕನ್ನಡ ಸಾಹಿತ್ಯದ ಕಾಲಘಟ್ಟಗಳು, ನಿಘಂಟುಗಳು, ಗದ್ಯ – ಪದ್ಯ ಕವಿಗಳ ವಿವರ, ಕವಿರಾಜಮಾರ್ಗ, ತಾಳೆಗರಿಗಳ ಉಲ್ಲೇಖದೊಂದಿಗೆ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಕುರಿತು ವಿವರಿಸಿದರು. ಕ್ರಿಯೇಟಿವ್ ಕನ್ನಡ ಸಾಹಿತ್ಯ ಸಂಘದ ಮೂಲಕ ಇನ್ನಷ್ಟು ಸೃಜನಾತ್ಮಕ ಸಾಹಿತ್ಯ ಕೃತಿಗಳು ಮೂಡಿ ಬರಲಿ” ಎಂದು ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಉತ್ಸವ, ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಚದುರಂಗ 7 ಸ್ಪರ್ಧೆಗಳಲ್ಲಿ ತನ್ನ ಚತುರತೆಯಿಂದ ಗಮನ ಸೆಳೆದಿದ್ದಾನೆ. ಬೇಸಿಗೆ ರಜೆಯನ್ನು ಆಟ-ಮನರಂಜನೆಗೆ ವ್ಯಯಿಸದೇ, ಸದುಪಯೋಗಪಡಿಸಿಕೊಂಡ ಈ ಪ್ರತಿಭಾವಂತ ವಿದ್ಯಾರ್ಥಿ ಮೈಸೂರಿನ ಬಿ.ಎಸ್.ಎಸ್. ಸ್ಕೂಲ್ನಲ್ಲಿ ನಡೆದ ರಾಷ್ಟ್ರಮಟ್ಟದ ಎಫ್ಐಡಿಇ ರೇಟೆಡ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಹಾಗೂ ನಗದು ಬಹುಮಾನ ಪಡೆದು ತನ್ನ ಪ್ರತಿಭೆ ಚಾತುರ್ಯವನ್ನು ಜಗತ್ತಿಗೆ ಪರಿಚಯಿಸಿದ್ದಾನೆ. ಅಷ್ಟೇ ಅಲ್ಲದೆ – ಮಂಗಳೂರು ಶಾರದಾ ವಿದ್ಯಾಲಯದಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ಉತ್ಸವ 7ನೇ ಸ್ಥಾನವನ್ನು ಪಡೆದು ನಗದು ಬಹುಮಾನವನ್ನು ಪಡೆದಿದ್ದಾನೆ. ಕೋಣನಕುಂಟೆ, ಬೆಂಗಳೂರು ಇಲ್ಲಿ ಆಯೋಜಿಸಲಾದ ಸ್ಟೇಟ್ ಅಮೇಚುರ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಆತ ಟ್ರೋಪಿ ಹಾಗೂ ನಗದು ಬಹುಮಾನವನ್ನು ಗೆದ್ದು ಮತ್ತೊಮ್ಮೆ ತನ್ನ ಸಾಮರ್ಥ್ಯ ತೋರಿಸಿದ್ದಾನೆ. ಇದೇ ರೀತಿಯಾಗಿ, ಮೈಸೂರಿನ ರೋಟರಿ ವೃಂದಾವನ್ ಸ್ಕೂಲ್ನಲ್ಲಿ ನಡೆದ ಎಫ್ಐಡಿಇ ರೇಟೆಡ್ ಕ್ಲಾಸಿಕಲ್ ಚಾಂಪಿಯನ್ಶಿಪ್ನಲ್ಲಿ ಸಹ ಟ್ರೋಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರದಲ್ಲಿ ಜನವರಿ 2026 ರ ಮಾಹೆಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆ, ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ, ಕಾನೂನು ಸುವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೊರ ಜಿಲ್ಲೆ, ರಾಜ್ಯ, ದೇಶ-ವಿದೇಶಗಳಿಂದ ಹೆಚ್ಚಿನ ಭಕ್ತರು ಉಡುಪಿ ನಗರಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಾಹನಗಳ ಸುಗಮ ಸಂಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಜನರ ದಟ್ಟಣೆಯಾಗದಂತೆ ನೋಡಿಕೊಳ್ಳುವುದು ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಶ್ರೀಕೃಷ್ಣ ಮಠದ ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದರು. ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ…
