Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಏಳಜಿತ್ ರಾಮಕೃಷ್ಣ ಕುಟೀರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆಯನ್ನು ಪ್ರಾರಂಭಿಸಿದರು. ಈ ಕಾರ್ಯಕ್ರಮದಲ್ಲಿ ನಾಯ್ಕನಕಟ್ಟೆ ರಾಮಕೃಷ್ಣ ಮಂದಿರದ ಗಣೇಶ ಪೈ ಹಾಗೂ ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ಅಧ್ಯಾಪಕರಾದ ಪ್ರಶಾಂತ ಶಾನುಭೋಗ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿತವಚನವನ್ನು ಹೇಳಿ ಪುಸ್ತಕಗಳನ್ನು ವಿತರಿಸಿದರು. ಆಶ್ರಮದ ವತಿಯಿಂದ ಪ್ರತೀ ವರ್ಷವೂ 400 ರಿಂದ 500 ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ಗಳನ್ನು ನೀಡಲಾಗುತ್ತಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗದ ಸಹಯೋಗದೊಂದಿಗೆ ಪ್ರತಿ ಭಾನುವಾರದ ಆಯೋಜಿಸಿಕೊಂಡು ಬರುತ್ತಿರುವ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ ಇದೀಗ 300ನೇ ವಾರದ ಸಂಭ್ರಮ, ಸದಾ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡ ಈ ಸಂಘಟನೆ ಪ್ರತಿ ಭಾನುವಾರ ಬಂತ್ತೆಂದರೆ ಜಿಲ್ಲೆಯ ವಿವಿಧ ಗ್ರಾಮಪಂಚಾಯತ್ ವ್ಯಾಪ್ತಿಯ ಬೀಚ್ ಹಾಗೂ ಒಳರಸ್ತೆಗಳಲ್ಲಿನ ತ್ಯಾಜ್ಯ ಮುಕ್ತಗೊಳಿಸುವ ಜತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುವ ಇವರ ಈ ಕೈಂಕರ್ಯಕ್ಕೆ ಇದೀಗ ಇದೇ ಮೇ.3ರಂದು ಪೂರ್ವಾಹ್ನ 7.ಗ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಮುನ್ನುಡಿ ಬರೆಯಲಿದೆ. ಕೋಡಿ ಗ್ರಾಮಪಂಚಾಯತ್ ಮೂಲಕ ಪ್ರಾರಂಭಿಸಿಕೊಳ್ಳುವ ಈ ಅಭಿಯಾನ ಸಾಲಿಗ್ರಾಮ ಪಟ್ಟಣಪಂಚಾಯತ್, ಕೋಟತಟ್ಟು ಗ್ರಾಮಪಂಚಾಯತ್, ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಎಲ್ಲಾ ಭಾಗಗಳ ಬೀಚ್ ಕ್ಲಿನಿಂಗ್ ಆಯ್ಕೆಗೊಳಿಸಿದ್ದು ಇದರ ತಯಾರಿಗಳು ಈಗಾಗಲೇ ಪೂರ್ಣಗೊಳಿಸಿದೆ. ಸಮಾಜ ಸೇವಕ ಆನಂದ್ ಸಿ. ಕುಂದರ್ 78ನೇ ಹುಟ್ಟುಹಬ್ಬಕ್ಕೆ ಸಮರ್ಪಿತ ಕಾರ್ಯಕ್ರಮ:ಪಂಚವರ್ಣ ಸಂಘಟನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಗ್ರಾಮೀಣ ಪ್ರದೇಶದಲ್ಲಿ ಕಳೆದ 28 ವರ್ಷಗಳಿಂದ ಶಿಕ್ಷಣ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಗೆ 2026ರ ಇಂಡಿಯನ್ ಎಜುಕೇಷನ್ ಅವಾರ್ಡ್ಸ್ – ಗ್ರಾಮೀಣ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಯಲ್ಲಿ ಶ್ರೇಷ್ಠ ಶಾಲೆ ಮತ್ತು ಪಿಯು ಕಾಲೇಜು” ಎಂಬ ಗೌರವ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲೆಯಲ್ಲಿ ಈ ಗೌರವವನ್ನು ಪಡೆದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಈ ಸಂಸ್ಥೆ ಪಾತ್ರವಾಗಿದೆ. ಬೆಂಗಳೂರು ನಗರದಲ್ಲಿ Anyelp Groups ವತಿಯಿಂದ ಇತ್ತೀಚಿಗೆ ಇಂಡಿಯನ್ ಎಜುಕೇಷನ್ ಅವಾರ್ಡ್ಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಖ್ಯಾತರಾದ ಮಾಸ್ಟರ್ ಶೆಫ್ ಸಂಜೀವ್ ಕಪೂರ್ ಹಾಗೂ ಅನೇಕ ಗಣ್ಯರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು. ಮಾಜಿ ಸಾಲಿಸಿಟರ್ ಜನರಲ್ ಸಂತೋಷ್ ಹೆಗ್ಡೆ ಯವರೂ ಪ್ರಮುಖ ಆಹ್ವಾನಿತರಾಗಿದ್ದರು. ಅಂದು ನೆರೆದಿದ್ದ ಗಣ್ಯರ ಸಮ್ಮುಖದಲ್ಲಿ ಡಾ. ಶಿವಶಂಕರ್ ಸ್ವಾಮೀಜಿಯವರಿಂದ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದ ಗುಣಮಟ್ಟ, ಶಿಸ್ತಿನ ವಾತಾವರಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಹೆಸರು ವಾಸಿಯಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿ 2025–26ನೇ ಶೈಕ್ಷಣಿಕ ವರ್ಷದಲ್ಲಿ ಐಸಿಎಸ್ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.  ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಈ ಶಾಲೆ, 23 ವರ್ಷದಿಂದ ನೂರಕ್ಕೆ ನೂರು ಫಲಿತಾಂಶ ದಾಖಲಿಸಿರುವ ಸಾಧನೆ ಮಾಡಿರುವುದು ಕುಂದಾಪುರ ತಾಲ್ಲೂಕಿನ ಏಕೈಕ ಐಸಿಎಸ್ಇ ಪಠ್ಯಕ್ರಮದ ಶಾಲೆ ಇದಾಗಿದೆ. ಈ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ ಮತ್ತು ಹೊರರಾಜ್ಯಗಳ ಸುಮಾರು 1839 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ 683 ಮಕ್ಕಳಿಗೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ವಸತಿ, ಪಾಠಶಾಲೆ, ಶೈಕ್ಷಣಿಕ ನೆರವು, ಶಿಸ್ತು – ಎಲ್ಲವನ್ನೂ ಒಟ್ಟಿಗೆ ನೀಡುತ್ತಿರುವ ಈ ಸಂಸ್ಥೆ ಈ ಭಾಗದ ಮಾದರಿ ವಸತಿ ಶಾಲೆಯಾಗಿ ಹೊರಹೊಮ್ಮಿದೆ. ಈ ವರ್ಷ 270 ವಿದ್ಯಾರ್ಥಿಗಳು ಐಸಿಎಸ್ಇ 10ನೇ ವರ್ಗದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ: ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಅವರು ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯು ಫಲಿತಾಂಶದಲ್ಲಿ ಜನತಾ ಪಿಯು ಕಾಲೇಜು ಹೆಮ್ಮಾಡಿ ರಾಜ್ಯ ಮಟ್ಟದ ದ್ವಿತೀಯ ರ್ಯಾಂಕ್ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಮರು ಮೌಲ್ಯಮಾಪನದಿಂದ ಜನತಾ ಪಿಯು ಕಾಲೇಜಿನ 22 ವಿದ್ಯಾರ್ಥಿಗಳು ಟಾಪ್ 10 ರ್ಯಾಂಕ್ ನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ ಪಡೆದು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಗುರುತಿಸಲಾಗಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ ಜಿ. ಕಾಂಚನ 597 ಅಂಕ ಪಡೆದು ರಾಜ್ಯಕ್ಕೆ 4ನೇ ರ್ಯಾಂಕ್, ಆಕಾಶ್ 594 ಅಂಕ ಪಡೆದು 7ನೇ ರ್ಯಾಂಕ್, ತನ್ವಿತಾ ವಿ 593 ಅಂಕ ಪಡೆದು 8ನೇ ರ್ಯಾಂಕ್, ಐಶ್ವರ್ಯ 592 ಅಂಕ ಪಡೆದು 9ನೇ ರ್ಯಾಂಕ್, ಶ್ರೇಷ್ಠ 591 ಅಂಕ ಪಡೆದು 10ನೇ ರ್ಯಾಂಕ್, ತನ್ವಿಲವ 591 ಅಂಕ ಪಡೆದು 10ನೇ ರ್ಯಾಂಕ್ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ, ಬೋಧಕ, ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಅರ್ಹ ಕೌಶಲ್ಯಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಅವರು ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ, ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು. ಮುದ್ರಣ ಮಾಧ್ಯಮ, ಟೆಲಿವಿಷನ್ ಮಾಧ್ಯಮ, ರೇಡಿಯೊ ಹಾಗೂ ಡಿಜಿಟಲ್ ಮಾಧ್ಯಮದ ಪ್ರಾಯೋಗಿಕ ತರಗತಿಗಳನ್ನು ತಜ್ಞರು ನಡೆಸಿಕೊಟ್ಟರು. ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜು, ಮೂಡುಬಿದಿರೆ ಮಹಾವೀರ ಕಾಲೇಜು, ಕಟೀಲು ಎಸ್ಡಿಟಿ ಪ್ರಥಮ ದರ್ಜೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ  ವಿದ್ಯಾರ್ಥಿಗಳು, ನಂತರ ಪಿಯುಸಿ ವಿದ್ಯಾಭ್ಯಾಸಕ್ಕೆ ಮದರ್ ತೆರೆಸಾ ಪದವಿ ಪೂರ್ವ ಕಾಲೇಜನ್ನು ಆಯ್ಕೆ ಮಾಡಿಕೊಂಡು, ದ್ವಿತೀಯ ಪಿಯುಸಿಯಲ್ಲಿ ರಾಜ್ಯಮಟ್ಟದ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. 2025–26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿದ್ದು, , ರಿಷಿತಾ ಮತ್ತು ಕ್ಷಮಾ 593 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 8ನೇರ್ಯಾಂಕ್, ಪ್ರಗತಿ 591 ಅಂಕಗಳೊಂದಿಗೆ 10ನೇ ರ್ಯಾಂಕ್, ರಾಶಿ 590 ಅಂಕಗಳೊಂದಿಗೆ 11ನೇ ರ್ಯಾಂಕ್ ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆ, ಗ್ರಾಮೀಣ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳಿಗೂ ಉತ್ತಮ ಅವಕಾಶ ಮತ್ತು ಮಾರ್ಗದರ್ಶನ ದೊರೆತರೆ ಎತ್ತರದ ಸಾಧನೆ ಸಾಧ್ಯವೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದ ಈ ವಿದ್ಯಾರ್ಥಿಗಳು, ಪದವಿ ಪೂರ್ವ ಹಂತದಲ್ಲಿ ಮದರ್ ತೆರೆಸಾ ಪಿಯು ಕಾಲೇಜಿನ ಶೈಕ್ಷಣಿಕ ವಾತಾವರಣ ಮತ್ತು ಗುಣಮಟ್ಟದ ಮಾರ್ಗದರ್ಶನದಿಂದ ತಮ್ಮ ಪ್ರತಿಭೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪ  Çರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27 ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 13 ರ ವರೆಗೆ ವಿಸ್ತರಿಸಲಾಗಿದೆ.    ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ರ್ಯಾಲಿಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಎ.29: ತಾಲೂಕಿನ ತ್ರಾಸಿ – ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಅಪಘಾತದಲ್ಲಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಬೈಂದೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬಸ್, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್ ಮತ್ತು ಲಾರಿಗೆ ನಿಯಂತ್ರಣ ತಪ್ಪಿ ಮಧ್ಯಾಹ್ನ 1:30ರ ಸಮಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಬಸ್ಸಿನ ಹೆಚ್ಚುವರಿ ಚಾಲಕ ರಘು, ಕ್ಲೀನರ್ ರಂಗನಾಥ್ ಹಾಗೂ ಅಡುಗೆ ಸಹಾಯಕ ಹೇಮಂತ್ ಮೃತಪಟ್ಟಿದ್ದಾರೆ. ಇವರ ಜೊತೆಯಲ್ಲಿದ್ದ ವಿದ್ಯಾರ್ಥಿಯೋರ್ವನಿಗೂ ಗಂಭೀರ ಗಾಯವಾಗಿದೆ. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನಿಂದ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ 3 ದಿನಗಳ ಪ್ರವಾಸಕ್ಕೆ ಹೊರಟ್ಟಿದ್ದರು. ನಿನ್ನೆ ಹೊನ್ನಾವರದಲ್ಲಿ ಪ್ರವಾಸಿ ಮುಗಿಸಿ ಅಲ್ಲಿಯೇ ಉಳಿದು, ಇಂದು ಉಡುಪಿ ಕಡೆಗೆ ಹೊರಟಿದ್ದರು. ಮರವಂತೆಯಲ್ಲಿ ಬಸ್ ನಿಲ್ಲಿಸಿ ಬೀಚ್‌ಗೆ ತೆರಳಿ ಅಲ್ಲಿಂದ ಪ್ರಯಾಣ ಮುಂದುವರಿಸುವ ವೇಳೆ ಏಕಾಏಕಿ ಈ ಅವಘಡ ನಡೆದಿದೆ. ಮರವಂತೆಯಿಂದ ಒಂದು ಕಿ.ಮೀ ಸಾಗಿದ್ದ ಬಸ್ಸು ಏಕಾಎಕಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರಿನ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಬಳಿಕ ಅಲ್ಲೇ ಎದುರಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿ ನಿಂತಿದೆ. ಅಪಘಾತದ ತೀವ್ರತೆಗೆ ನಾಲ್ವರು ಗಂಭೀರ…

Read More