Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೇಂದ್ರ ಸರಕಾರದ ಬಡವರ ಕಲ್ಯಾಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು ಅದರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಣ ವ್ಯಾಪ್ತಿಯ ಬಡವರಿಗೆ ಸೂರು ಕಲ್ಪಿಸುವ ಮಹತ್ತರ ಯೋಜನೆಯಾಗಿದೆ ಎಂದು ಉಡುಪಿ – ಚಿಕ್ಮ ಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ)2.0 ಯೋಜನೆಯನ್ನು ಅನುಷ್ಠಾನಗೊಳಿಸುವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಆವಾಸ್ ಯೋಜನೆಯ ಫಲಕವನ್ನು ಅನಾವರಣಗೊಳಿಸಿ ಮಾತನಾಡಿದರು. ಈ ಯೋಜನೆಯ ಅನುಷ್ಠಾನ ಹಾಗೂ ಯಾವುದೇ ರಾಜಕಾರಣಗೊಳಿಸದೆ ಫಲಾನುಭವಿಗಳಿಗೆ ಸೂಕ್ತ ನೆರವು ಕಲ್ಪಿಸಲು ಸಂಸದರು ಮನವಿ ಮಾಡಿದರು.ಕೇಂದ್ರ ಸರಕಾರ ಈಗಾಗಲೇ 1ಕೋಟಿ ಮನೆ ಗುರಿ ಹೊಂದಿದ್ದು ಅಧಿಕಾರಿಗಳು ಸ್ಥಳೀಯಾಡಳಿತ ಜನಪ್ರತಿನಿಧಿಗಳು ಫಲಾನುಭವಿಗಳಿಗೆ ಕರಾರುವಾಕ್ಕಾಗಿ ಯೋಜನೆ ತಲುಪಿಸಲುಕರೆ ನೀಡಿದರು. ಕಾರ್ಯಕ್ರಮವನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಉಡುಪಿ ನಗರಾಭಿವೃದ್ಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಶಿಕ್ಷಕರ ಮತ್ತು ಆಡಳಿತ ಮಂಡಳಿಯ ಸಮಾಲೋಚನ ಸಭೆಯು ನಡೆಯಿತು. ಶಾಲೆಯ ವಾರ್ಷಿಕಪತ್ರಿಕೆ ಜ್ಯೋತಿಷ್ಮತಿಯನ್ನು ಉದ್ಘಾಟಿಸಿ, ಸಭೆಯ ಅಧ್ಯಕ್ಷತೆಯನ್ನು ನಿರ್ವಹಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷರಾದ ಎಲ್. ಟಿ ತಿಮ್ಮಪ್ಪನವರು ಮಾತನಾಡಿ, ಶಾಲೆಯ ಊಟೋಪಚಾರವು ಇಲ್ಲಿನ ವಾತಾವರಣಕ್ಕೆ ಹೊಂದಿಕೆಯಾಗುವಂತಿದ್ದು, ಅತಿಖಾರ, ಉಪ್ಪು, ಸಿಹಿಗಳಿಂದ ಮುಕ್ತವಾಗಿದ್ದು, ಆರೋಗ್ಯದಾಯಕವಾಗಿದೆ. ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಯಾವ ಶಿಸ್ತನ್ನು ರೂಢಿಸಿಕೊಂಡಿರುವರೋ ಅದನ್ನು ಮನೆಯಲ್ಲೂ ಮುಂದುವರಿಸಲು ಪಾಲಕರು ಪ್ರೇರೇಪಿಸಬೇಕು. ಮಕ್ಕಳ ಪ್ರೀತಿಯನ್ನು ಉಳಿಸಿ, ಬೆಳೆಸಿಕೊಳ್ಳಿ. ಎನ್ನುತ್ತಾ ಹಿತವಚನಗಳನ್ನಾಡಿದರು. ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರು ಅಕಾಡೆಮಿಕ್ಸ್ ಮತ್ತು ಟ್ರೈನಿಂಗ್ ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಪರಿಷತ್ ನಿರ್ದೇಶಕರಾದ ಡಾ. ಸಿ. ಕೆ. ಮಂಜುನಾಥ ಅವರು ಮಾತನಾಡಿ, ಭಾರತ ಈ 47% ನಷ್ಟು ಯುವಕರಿಂದ ಕೂಡಿದ ದೇಶ. ಯುವಕರಾಗಲಿರುವ ಮಕ್ಕಳಲ್ಲಿ ಸ್ಪರ್ಧಾತ್ಮಕವಾದ ಜಗತ್ತಿನಲ್ಲಿ ಬದುಕಲು ಹೊಸ ಹೊಸ ನೀತಿಗಳ ಅರಿವು ಅತ್ಯಗತ್ಯ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠ ಎಂಬ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಟ ಆಡುತ್ತಿದ್ದ ಜನರನ್ನು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುಧಾಪ್ರಭು ಅವರು ಬಂಧಿಸಿದ್ದಾರೆ. ಆರೋಪಿಗಳಾದ ರಾಜು, ರಮಾನಂದ, ರಾಜು , ಸಂತೋಷ್, ರಾಜೀವ್ ಹಾಗೂ ಕೃಷ್ಣ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 15,450 ರೂಪಾಯಿ, ಕಾರು-3, ಸ್ಕೂಟರ್‌ -2, ರೌಂಡ್‌ ಟೇಬಲ್‌ -1,ಪ್ಲಾಸ್ಟೀಕ್‌ ಚೇರಗಳು-6, ಇಸ್ಪೀಟ್‌ ಎಲೆಗಳನ್ನು ಸ್ವಾಧಿನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ್ ಪುತ್ರನ್ ಅವರನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪದಗ್ರಹಣ ಕಾರ್ಯಕ್ರಮದಲ್ಲಿ ಕ್ಲಬ್ ನ ನೂತನ ಅಧ್ಯಕ್ಷರಾದ ಲ. ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಮಾಜಿ ಜಿಲ್ಲಾ ಗವರ್ನರ್ ಲ. ಎಂಜೆಎಫ್ ದಿವಾಕರ ಶೆಟ್ಟಿ, ಪಿಎಂಜೆಎಫ್ ಲ. ರಂಜನ್ ಕಲ್ಕೂರ, ಪ್ರಾಂತಿಯ ಅಧ್ಯಕ್ಷರಾದ ಲ. ರಜತ ಹೆಗ್ಡೆ, ವಲಯ ಅಧ್ಯಕ್ಷರಾದ ಲ. ವಸಂತರಾಜ್ ಶೆಟ್ಟಿ, ಎಕ್ಸ್ಟೆಂಶನ್ ಚೇರ್ಮನ್ ಲ. ಅರುಣ್ ಕುಮಾರ್ ಹೆಗ್ಡೆ, ಪ್ರಾಂತೀಯ ಕಾರ್ಯದರ್ಶಿ ಲ. ಏಕನಾಥ ಬೋಳಾರ್, ಸ್ಥಾಪಕ ಅಧ್ಯಕ್ಷರಾದ ಲ. ಅಶೋಕ್ ಶೆಟ್ಟಿ ಸಂಸಾಡಿ, ಮಾಜಿ ಅಧ್ಯಕ್ಷರಾದ ಲ .ಉದಯ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಲ. ವೆಂಕಟರಮಣ ನಾಯಕ್, ಕೋಶಾಧಿಕಾರಿ ಲ. ಅರುಣ್ ಕುಮಾರ್ ಶೆಟ್ಟಿ ನೂತನ ಕಾರ್ಯದರ್ಶಿ ಲ.ಭುಜಂಗ ಶೆಟ್ಟಿ ರಟ್ಟಾಡಿ, ಕೋಶಾಧಿಕಾರಿ ಲ. ಅಣ್ಣಪ್ಪ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಸಂತೆ ಮಾರ್ಕೆಟ್ ಬಳಿ ಜು.14ರ ಮಧ್ಯರಾತ್ರಿ  2.30 ಸುಮಾರಿಗೆ ಅಂಗಡಿಯ ಶಟ‌ರ್ ಬಾಗಿಲು ಒಡೆದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್‌, ಹಿತ್ತಾಳೆಯ ವಸ್ತುಗಳನ್ನು ಕಳ್ಳತನಗೈದಿದ್ದ ನಾಲ್ವರು ಕಳ್ಳರನ್ನು ಕುಂದಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಗಳಾದ ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಪಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಅವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಬಂಧಿಸಲಾಗಿದೆ. ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬಂದಿ ಮೋಹನ್, ಸಂತೋಷ್, ಪ್ರೀನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ  ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮದರ್ ತೆರೆಸಾ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಅಪಾಯ, ಸೈಬರ್ ಭದ್ರತೆ, ರಸ್ತೆ ಸುರಕ್ಷತೆಯ ನಿಯಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮವು ಪೊಲೀಸ್ ಇಲಾಖಾ ಅಧಿಕಾರಿ ವರ್ಗದವರ ಸಹಕಾರದೊಂದಿಗೆ ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಶಂಕರನಾರಾಯಣ ಠಾಣೆಯ  ಉಪ ನಿರೀಕ್ಷಕ ತನಿಖಾಧಿಕಾರಿಗಳಾದ  ಶಂಭುಲಿಂಗಯ್ಯ ಅವರು ಮಾತನಾಡಿ “ಮಾದಕ ವ್ಯಸನದಿಂದ ದೂರವಿದ್ದು ಜೀವನವನ್ನು ಸಂತೋಷದಿಂದ ಅನುಭವಿಸಿ ” ಎಂದು ಹಿತನುಡಿಗಳನ್ನಾಡಿದರು. ಶಂಕನಾರಾಯಣ ಪೊಲೀಸ್ ಉಪನಿರೀಕ್ಷಕರಾದ ನಾಸಿರ್ ಹುಸೈನ್ ಅವರು ಮಾತನಾಡಿ, ಇಂದು ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದಾಗಿ ಹಾಗೂ ವಿದ್ಯಾರ್ಥಿಗಳ ಅತಿಯಾದ ಮೊಬೈಲ್ ಬಳಕೆಯಿಂದ ಆಗುವ ಅನಾಹುತಗಳು, ಮೊಬೈಲ್ ಗೇಮಿಂಗ್ ಅಪಾಯಗಳ ಬಗ್ಗೆ ತಿಳಿ ಹೇಳುವುದರ ಮೂಲಕ ಅದನ್ನು ಹೇಗೆ ಜವಾಬ್ದಾರಿಯಿಂದ ಬಳಸಬೇಕು ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕುಂದಾಪುರ ಪೋಲಿಸ್ ವೃ ತ್ತ ನಿರೀಕ್ಷಕರಾದ ಜಯರಾಮ್ ಬಿ. ಗೌಡ ಅವರು ರಸ್ತೆ ನಿಯಮಗಳ ಉಲ್ಲಂಘನೆಯಿಂದಾಗಿ ಆಗುವ ಅನಾಹುತಗಳ ಬಗ್ಗೆ ಮಾತನಾಡುತ್ತಾ ನಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವೆ, ಸಂಸ್ಕೃತಿ, ಸಮ್ಮಿಲನ ಎಂಬ ಧ್ಯೇಯದೊಂದಿಗೆ ಬೆಂಗಳೂರಿನಲ್ಲಿ ನೆಲೆಸಿರುವ ಕುಂದಾಪುರ ಮೂಲದ ಉತ್ಸಾಹಿ ಯುವ ಸಮೂಹದ ತಂಡ – ́ಟೀಮ್ ಕುಂದಾಪುರಿಯನ್ಸ್ʼ ನೇತೃತ್ವದಲ್ಲಿ ಪ್ರತಿವರ್ಷದಂತ ಈ ಭಾರಿಯೂ ʼಕುಂದಾಪ್ರ ಕನ್ನಡ ಉತ್ಸವ 2025ʼ ಅದ್ದೂರಿಯಾಗಿ ಆಯೋಜಿಸಲಾಗಿದೆ. ವಿಶ್ವ ಕುಂದಾಪ್ರ ಕನ್ನಡದ ದಿನಾಚರಣೆ ಅಂಗವಾಗಿ ಆಯೋಜಿಸಲಾಗುತ್ತಿರುವ ಈ ಉತ್ಸವವು ಜುಲೈ 20ರ ಭಾನುವಾರ ಬೆಳಿಗ್ಗೆ 8:30ರಿಂದ ಮೊದಲ್ಗೊಂಡು ಸಂಜೆಯ ತನಕ ಬೆಂಗಳೂರು ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ನಡೆಯಲಿದೆ. ಕ್ರೀಡೆ, ಸಂಸ್ಕೃತಿ, ನಡಿತೋರಣ ಮೊದಲಾದ ವೈವಿಧ್ಯಮಯ ಕಾರ್ಯಕ್ರಮಗಳು ದಿನವಿಡಿ ಕುಂದಾಪ್ರ ಕನ್ನಡ ಉತ್ಸವದಲ್ಲಿ ಇರಲಿವೆ. ಮೆರವಣಿಗೆಯೊಂದಿಗೆ ಚಾಲನೆ:ಜು.20ರ ಬೆಳಿಗ್ಗೆ 8.30ಕ್ಕೆ ಆರಂಭ ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ನೇತಾಜಿ ಮೈದಾನದವರೆಗೆ ಕೊಲ್ಲೂರು ತಾಯಿ ಮೂಕಾಂಬಿಕೆಯ ಟ್ಯಾಬ್ಲೋ ಮೆರವಣಿಗೆ – ಸಂಕಲ್ಪ ಯಾತ್ರೆ ನಡೆಯಲಿದ್ದು, ಪೇಜಾವರ ‌ಮಠ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ನಿರಂಜನಿ ಅಖಾಡ ನಾಗಸಾಧು ಶ್ರೀ ಧನಂಜಯಗಿರಿ ಮಹಾರಾಜ್ ಅವರ ದಿವ್ಯ ಸಾನಿಧ್ಯವಿರಲಿದೆ. ವೈವಿದ್ಯಮಯ ಕಾರ್ಯಕ್ರಮಗಳುಉದ್ಘಾಟನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ಹಾಗೂ ಬದುಕಿನ ಸೊಗಡನ್ನು ಮುಂದಿನ ತಲೆಮಾರಿಗೆ ನೀಡಲು ಪ್ರತಿಯೊಬ್ಬರು ಶ್ರಮಿಸಬೇಕಿದೆ ಎಂದು ಸಾಹಿತಿ, ಶಿಕ್ಷಕ ಕುಂದಗನ್ನಡ ಭಾಷಾ ಜ್ಞಾನಿ ನರೇಂದ್ರ ಕುಮಾರ್ ಕೋಟ ಕರೆ ನೀಡಿದರು. ಅವರು ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಇದೇ ಬರುವ ಅ. ೧೦ರಂದು ಹಂದಟ್ಟು ಗೆಳೆಯರ ಬಳಗ ದಾನಗುಂದು ಸಭಾಂಗಣದಲ್ಲಿ ನಾಲ್ಕನೇ ವರ್ಷದ ಆಸಾಡಿ ಒಡ್ರ್ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಭಾಷೆ ಹಾಗೂ ಜೀವನ ಪದ್ದತಿ ಮತ್ತು ಜನಾಂಗ ಇವುಗಳು ಅಳಿಯಬಾರದು ಇದಕ್ಕಾಗಿ ಪ್ರತಿ ಮನೆಯಲ್ಲಿ ನಮ್ಮ ಗ್ರಾಮ್ಯ ಭಾಷೆ ಬದುಕಿನ ರೀತಿ ನೀತಿಯನ್ನು ತಲೆಮಾರಿಗೆ ತಿಳಿಹೇಳುವ ತನ್ಮೂಲಕ ಅದರ ಉಳಿಯುವ ಕಾರ್ಯ ಮಾಡಬೇಕಿದೆ,ಇಂತಹ ಕಾರ್ಯಕ್ರಮ ನಿತ್ಯನಿರಂತರವಾಗಿ ಪ್ರತಿ ಊರಲ್ಲಿ ಪ್ರಜ್ವಲಿಸಲಿ ಎಂದು ಪಂಚವರ್ಣ ಮಹಿಳಾ ಮಂಡಲದ ಈ ಕಾರ್ಯಕ್ರಮವನ್ನು ಶ್ಲಾಘಿಸಿದರು. ಮುಖ್ಯ ಅಭ್ಯಾಗತರಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜು.18 : ಅಡಿಕೆ ಬೆಳೆಗಾರರನ್ನು ಬೆಂಬಲಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಡಿಕೆಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಿ, ಆತ್ಯಾಧುನಿಕ ಕೃಷಿ ಉಪಕರಣಗಳನ್ನು ಕೈಗೆಟುಕುವಂತೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿರುವುದು ತೋಟಗಾರಿಕೆ ಬೆಳೆಗಾರರಲ್ಲಿ ಸಂತಸ ಮೂಡಿಸಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ. ಕಳೆದ ತಿಂಗಳಲ್ಲಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘವು ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರ ಸರ್ಕಾರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ರೈತರನ್ನು ಬೆಂಬಲಿಸಲು ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸುವಂತೆ ಮನವಿಯನ್ನು ಮಾಡಲಾಗಿತ್ತು. ಅಲ್ಲದೇ ಪತ್ರ ಬರೆದು ಒತ್ತಾಯಿಸಲಾಗಿತ್ತು ಎಂದ ಅವರು ನಮ್ಮ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಅಡಿ ಟೆಲಿಸ್ಕೊಪಿಕ್ ಟ್ರಿ-ಪ್ರೂನರ್ (Carbon Doti)ಗೆ ಸಹಾಯಧನದ ಮೊತ್ತವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ ಎಂದವರು…

Read More