Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್‌ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ 2025-26ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ರೋಟರಿ ನೂತನ ಅಧ್ಯಕ್ಷ – ಕಾರ್ಯದರ್ಶಿಗಳಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ಬೈಂದೂರಿನಂತಹ ಗ್ರಾಮೀಣ ಪ್ರದೇಶದಲ್ಲಿಯೂ ಸಾಕಷ್ಟು ಸೇವಾ ಕಾರ್ಯಗಳು ರೋಟರಿ ಮೂಲಕ ನಡೆದಿದೆ. ಇದು ಇತರ ಸಂಘ ಸಂಸ್ಥೆಗಳಿಗೆ ಪ್ರೇರಣೆಯಾಗುವಂತಾಗಬೇಕು ಎಂದರು. ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಝೋನ್‌ 1ರ ವಲಯ ಸೇನಾನಿ ಪ್ರಸಾದ್‌ ಪ್ರಭು ರೋಟರಿ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ‌ ಮೂವರು ನೂತನ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಗೊಂಡರು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೊಟೇಲ್‌ ವೊಂದರಲ್ಲಿ ಸಿಗರೇಟ್ ಗಾಗಿ ರಂಪಾಟ ನಡೆಸುತ್ತಿದ್ದಾಗ ಓರ್ವ ವ್ಯಕ್ತಿ ನೋಡಿದ ಎಂಬ ಕಾರಣಕ್ಕೆ ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ಇಲ್ಲಿನ ಹಟ್ಟಿಯಂಗಡಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಗಣೇಶ ಎಂಬವರು ಹಲ್ಲೆಗೊಳಗಾದವರು. ಪ್ರಸಾದ ಯಾನೆ ರಬಡ ಎಂಬಾತ ಹಲ್ಲೆ ನಡೆಸಿದವನು. ಈತ ಹೊಟೇಲ್ ಮಾಲಿಕರಲ್ಲಿ ಸಿಗರೇಟು ಕೇಳಿದ್ದು ಆಗ ಮಾಲಿಕ ನಾವು ಇಲ್ಲಿ ಸಿಗರೇಟು ಮಾರುವುದಿಲ್ಲ ಎಂದಿದ್ದಾರೆ. ಆದರೂ ತಂದುಕೊಡುವಂತೆ ಗಲಾಟೆ ಮಾಡಿದಾಗ ಗಣೇಶ್ ಅವರು ನೋಡಿದರು ಎಂಬ ಕಾರಣಕ್ಕೆ ಅವರನ್ನು ಹಿಡಿದು ಬೈದು ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪ್ರಕೃತಿಯ ಉಳಿವಿಗಾಗಿ ಸಸಿಗಳನ್ನು ನೆಟ್ಟು ಪೋಷಿಸಿ, ಪ್ರೀತಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪ್ರಕೃತಿಯ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಮೂಲ್ಯವಾಗಿದೆ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಹೇಳಿದರು. ಅವರು ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ (ಹವೇ)ಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ನಿರ್ಮಿಸಿರುವ ಚಿಣ್ಣರ ಕೈ ತೋಟವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಗಿಡಗಳನ್ನು ನೆಟ್ಟು ಶುಭ ಹಾರೈಸಿದರು. ಚಿಣ್ಣರ ತೋಟದಲ್ಲಿ ಮಕ್ಕಳು ಬೀಜದುಂಡೆ ಬಿತ್ತನೆ ಮಾಡಿ ಸಸಿಗಳನ್ನು ನೆಟ್ಟರು. ವಿವಿಧ ಜಾತಿಯ ತರಕಾರಿ ಬೀಜ, ತೊಂಡೆ, ಬಸಲೆ, ಕಬ್ಬು, ಬಾಳೆ ಗಿಡ, ಪಪ್ಪಾಯಿ ಗಿಡ, ಮಲ್ಲಿಗೆ ಮೊದಲಾದ ಗಿಡಗಳನ್ನು ತಮ್ಮ ಕೈಯಾರೆ ನೆಟ್ಟು ಖುಷಿ ಪಟ್ಟರು. ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಂದ್ರ ಶೇರುಗಾರ್, ಚಂದ್ರ ಖಾರ್ವಿ, ಎಸ್‌ಡಿಎಂಸಿ ಅಧ್ಯಕ್ಷೆ ಕವಿತಾ ಖಾರ್ವಿ, ಶಕುಂತಲಾ ಖಾರ್ವಿ, ಜ್ಯೋತಿ ಆನಂದ, ನಾಗಲಕ್ಷ್ಮೀ, ಸಹನಾ, ಕಾವೇರಿ ಮೊದಲಾದವರು ಇದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 29ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತಿಚಿಗೆ ಕೋಡಿಯಲ್ಲಿ ಜರಗಿತು. ಇದರ ಅಧ್ಯಕ್ಷರಾಗಿ ಸಂತೋಷ ಖಾರ್ವಿ ಹಾಗೂ ಕಾರ್ಯದರ್ಶಿಯಾಗಿ ಸುಧೀರ್‌ ಕುಂದರ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರು ಡಾ. ಜಿ. ಶಂಕರ್, ಉಪಾಧ್ಯಕ್ಷರಾಗಿ ಸಂತೋಷ್ ಕುಂದರ್, ಉದಯ ಕಾಂಚನ್, ಜೊತೆ ಕಾರ್ಯದರ್ಶಿ ವೆಂಕಟೇಶ್ ಮೆಂಡನ್, ಕೋಶಾಧಿಕಾರಿ ವಾಮನ ಸಾಲಿಯಾನ್, ಕ್ರೀಡಾ ಕಾರ್ಯದರ್ಶಿ ಗೋಪಾಲ ಖಾರ್ವಿ, ಕುಮಾರ ಪುತ್ರನ್, ಅನಿಲ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಜಯ ಕರ್ಕೇರ , ಮುತ್ತಪ್ಪ ಸಾಲಿಯಾನ್, ಶ್ರೀನಿವಾಸ ಪೂಜಾರಿ, ಮಹಾಬಲ ಕುಂದರ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಬಿ. ಕರ್ಕೇರ, ಉದಯ ಕುಂದರ್, ಸುರೇಶ್ ಕುಂದರ್, ರಾಜು ಕರ್ಕೇರ,ರಾ ಮಚಂದ್ರ ಖಾರ್ವಿ, ರಾಘವೇಂದ್ರ ಕರ್ಕೇರ, ಜಯಂತ್ ಬೆನ್ನು, ಅಶೋಕ ತಿಂಗಳಾಯ, ಕರುಣಾಕರ ಖಾರ್ವಿ ರಘುರಾಮ ಪೂಜಾರಿ, ಅಂತೋನಿ ಡಿಸೋಜ, ಭಾಸ್ಕರ ಕಾಂಚನ್, ದಿವಾಕರ ಕುಂದರ್, ಮಹೇಶ್ ಕುಂದರ್, ಅಕ್ಷಿತ್ ಪೂಜಾರಿ, ಸಂತೋಷ್ ಕುಂದರ್, ಅರುಣ ಮೆಂಡನ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಎಸ್.ಎಸ್.ಪಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ ಪರಿಶಿಷ್ಟ ಜಾತಿ ವೆಬ್‌ಸೈಟ್ SW.KAR.NIC.IN, ಪರಿಶಿಷ್ಟ ಪಂಗಡ TW.KAR.NIC.IN ಅಥವಾ http://ssp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು ವಿನಾಯಿತಿ ನೀಡಲು ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ಅನ್ನು ಪಡೆಯಲು ಜನಸಾಮಾನ್ಯರು ಸಂಬಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಿದರೂ ಅವುಗಳನ್ನು ಪಡೆಯಲು ವಿಳಂಬವಾಗುತ್ತಿದೆ. ತಿಂಗಳುಗಟ್ಟಲೇ ಸುತ್ತಾಡಿದರೂ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಹೊಸ ಅಧಿಸೂಚನೆಯ ಪ್ರಕಾರ ಎಲ್ಲಾ ಅರ್ಜಿಗಳನ್ನು ಅನುಮೋದನೆ ನೀಡಲೂ ಸಹ ಕಷ್ಟಸಾಧ್ಯವಾಗುತ್ತಿದೆ. ಇದಕ್ಕೆ ಸರಕಾರ ಕೆಲವೊಂದು ವಿನಾಯಿತಿಗಳನ್ನು ಕರಾವಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸರಕಾರದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಗಳು ಘೋಷಿಸಿದಂತೆ ಸಮುದ್ರತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಿದ್ಧತೆಗಳಾಗುತ್ತಿವೆ. ಆದರೆ ಈಗಾಗಲೇ ಪ್ರವಾಸೋದ್ಯಮ ಪೂರಕ ಚಟುವಟಿಕೆ ನೀಡುತ್ತಿರುವವರು ತಮಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಯಾರಿಗೂ ಸಮಸ್ಯೆ ಆಗದಂತೆ ಮುತುವರ್ಜಿ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಹೇಳಿದರು. ಅವರು ಮಂಗಳವಾರ ಕೋಡಿ ಸೀವಾಕ್‌ನಲ್ಲಿ ಪರಿಶೀಲನೆ ನಡೆಸಿ ಮಾತನಾಡಿದರು. ಹೊಸದಾಗಿ ಪ್ರವಾಸೋದ್ಯಮ ಚಟುವಟಿಕೆ ಹಮ್ಮಿಕೊಳ್ಳುವುದರಿಂದ ಈಗಾಗಲೇ ನಿರ್ವಹಿಸುತ್ತಿರುವವರಿಗೆ ತೊಂದರೆ ಕೊಡುವ ಉದ್ದೇಶ ಇಲ್ಲ. ಪ್ರವಾಸ ಪೂರಕ ಚಟುವಟಿಕೆಗಳು ನಡೆದಷ್ಟೂ ಸ್ಥಳೀಯರ ಆದಾಯ ಹೆಚ್ಚಾಗುತ್ತದೆ. ಚಟುವಟಿಕೆಗಳಿಗೆ ಊರು ತೆರೆದುಕೊಳ್ಳುತ್ತದೆ. ಬೇರೆ ಬೇರೆ ಊರುಗಳಿಂದ ಜನ ಆಗಮಿಸುತ್ತಾರೆ. ಡಿಜಿಟಲ್ ಸಾಧನ, ಮಾಧ್ಯಮದ ಮೂಲಕ ತಿಳಿದುಕೊಳ್ಳುತ್ತಾರೆ. ಆಗ ಸೌಕರ್ಯಗಳು ಚೆನ್ನಾಗಿದ್ದಷ್ಟು ಅದಕ್ಕೆ ಮಹತ್ವ ಬರುತ್ತದೆ. ಈಗಾಗಲೇ ಇಲ್ಲಿ ಬೋಟಿಂಗ್, ಕಯಾಕಿಂಗ್, ಡಾಲ್ಟಿನ್ ವೀಕ್ಷಣೆ ಇತ್ಯಾದಿ ನಡೆಯುತ್ತಿದೆ. ಅದರ ಜತೆಗೆ ವಾಟರ್ ಗೇಮ್ಸ್ ಮೊದಲಾದ ಚಟುವಟಿಕೆ ಹಮ್ಮಿಕೊಳ್ಳಲಾಗುವುದು ಎಂದರು. ಪ್ರವಾಸೋದ್ಯಮ ಇಲಾಖೆ ಸಹಾಯಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುಜಿಡಿ ಬಾಕಿ ಉಳಿದ ಕಾಮಗಾರಿಗೆ ಒಂದು ಸ್ಪಷ್ಟವಾದ ಯೋಜನೆ ರೂಪಿಸಿ, ಏಕಕಾಲಕ್ಕೆ ಅದನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಶಾಸಕ ಕಿರಣ್‌ ಕುಮಾರ ಕೊಡ್ಗಿ ಹೇಳಿದರು. ಅವರು ಕುಂದಾಪುರ ಪುರಸಭೆಯಲ್ಲಿ ಮಂಗಳವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು. ಸರಿಯಾದ ಪ್ಲ್ಯಾನಿಂಗ್‌ ಇಲ್ಲದೆ ಯುಜಿಡಿ ಪೂರ್ಣತೆ ಕಂಡುಕೊಳ್ಳಲು ಆಗಿಲ್ಲ, ಈಗಾ ಗಲೇ ಯೋಜನೆಗಾಗಿ 33 ಕೊಟಿ ಹಣ. ವ್ಯಯವಾಗಿದೆ. 13 ಕೋಟಿ ಹಣ ಉಳಿಕೆಯಾಗಿದೆ. ಯೋಜನೆ ಪೂರ್ಣಗೊಳಿಸಲು ಇನ್ನೂ 33 ಕೋಟಿ ಬೇಕಾಗುತ್ತದೆ. ಉಳಿಕೆ ಹಣದಲ್ಲಿ ಅಷ್ಟಿಷ್ಟು ಕೆಲಸ ನಿರ್ವಹಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ಸದಸ್ಯ ಗಿರೀಶ್‌ ಜಿ.ಕೆ ಮಾತನಾಡಿ, ಯುಜಿಡಿ ಯೋಜನೆಯಿಂದ ಈಗಾಗಲೇ ಆಗಿರುವ ಪ್ರಮಾದಗಳು ಮುಂದೆ ಆಗಬಾರದು. ಆದಷ್ಟು ಬೇಗನೇ ಯೋಜನೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಿತ ಇಲಾಖೆ ಅಧಿಕಾರಿಗಳು, ಎಂಜಿನಿಯರ್‌ಗಳು ಸಹಕರಿಸಬೇಕು ಎಂದರು. ಸದಸ್ಯ ಶ್ರೀಧರ ಶೇರೆಗಾರ್ ಮಾತನಾಡಿ, ಈ ಯೋಜನೆ ಪುರಸಭೆಗೆ ಬಿಳಿ ಆನೆ ಆಗಿಬಿಟ್ಟಿದೆ. ಯೋಜನೆ ಜಾರಿಗೊಂಡ ದಿನದಿಂದ ಇಂದಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ನಾಲ್ಕನೇ ವರ್ಷದ “ಆಸಾಡಿ ಒಡ್ರ್”ಸಾಧಕ ಪುರಸ್ಕಾರಕ್ಕೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟ ಮಣೂರು ಭಾರತಿ ವಿಷ್ಣುಮೂರ್ತಿ ಮಯ್ಯ ಆಯ್ಕೆಗೊಳಿಸಲಾಗಿದೆ. ಅಗಸ್ಟ್ 10ರ ಭಾನುವಾರ ಬೆಳಿಗ್ಗೆ 9 ರಿಂದ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್”ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಿದೆ. ವಿಶೇಷ ಆಹ್ವಾನಿತರಾಗಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಕುಂದಗನ್ನಡ ರವಿ ಬಸ್ರೂರು ಹಾಗೂ ಕುಂದಗನ್ನಡದ ಲೇಖಕಿ ಪೂರ್ಣಿಮಾ ಕಮಲಶಿಲೆ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ, ಅನಾಥಾಶ್ರಮಕ್ಕೆ ನೆರವು, ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಗೆಳೆಯರ ಬಳಗ ಹಂದಟ್ಟು ಹಾಗೂ ಹಂದಟ್ಟು ಮಹಿಳಾ ಬಳಗ ಕೋಟ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ “ಪತ್ರಕರ್ತರಿಗೆ ಕನ್ನಡ ಸಾಹಿತ್ಯ” ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, 20 ರಿಂದ 40 ವರ್ಷ ದೊಳಗಿನ, ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ https://sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More