Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಚೇಂಪಿ ವಿಶ್ವಜ್ಯೋತಿ ಮಹಿಳಾ ಬಳಗದ ನೇತೃತ್ವದಲ್ಲಿ ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ, ಶ್ರೀ ವಿಶ್ವಕರ್ಮ ಕಲಾವೃಂದ ಆಶ್ರಯದಲ್ಲಿ ಸಂಘದ ಶ್ರೀ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನ ಸಾಲಿಗ್ರಾಮದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಹಸ್ರ ಕುಂಕುಮಾರ್ಚನೆ ಇನ್ನಿತರ ಕಾರ್ಯಕ್ರಮ ಜರಗಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಚೇಂಪಿ ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯ ರಮೇಶ್ ಆಚಾರ್ ದಂಪತಿಗಳು ಭಾಗವಹಿಸಿ, ಪೂಜಾ ವಿಧಿವಿಧಾನವನ್ನು ಪುರೋಹಿತ ಲಕ್ಷ್ಮೀಕಾಂತ್ ಶರ್ಮ ನೆರವೆರಿಸಿದರು. ಕೋಟ ವಿರಾಡ್ವಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಸುಬ್ರಾಯ ಆಚಾರ್, ರಮೇಶ್ ಆಚಾರ್, ಗೌರವಾಧ್ಯಕ್ಷ ಜನಾರ್ದನ ಆಚಾರ್ ಚೇಂಪಿ, ಕೋಶಾಧಿಕಾರಿ ಕೃಷ್ಣಯ್ಯ ಆಚಾರ್ ಶ್ರೀಲಕ್ಷ್ಮೀ, ವಿಶ್ವಕಲಾವೃಂದದ ಅಧ್ಯಕ್ಷ ವೆಂಕಟೇಶ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್ ಚೇಂಪಿ,ಮಹಿಳಾ ಬಳಗ ಉಪಾಧ್ಯಕ್ಷೆ ಸರಿತಾ ಚಂದ್ರ ಆಚಾರ್,ಕಾರ್ಯದರ್ಶಿ ಸಹನಾ ರಾಘವೇಂದ್ರ ಆಚಾರ್,ಕೋಶಾಧಿಕಾರಿ ಸುಶೀಲ ಸತೀಶ್ ಆಚಾರ್, ಗುರುಸೇವಾ ಪರಿಷತ್ತು ಅಧ್ಯಕ್ಷ ರಾಘವೇಂದ್ರ ಆಚಾರ್ ಇತರರು ಉಪಸ್ಥಿತರಿದ್ದರು. ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ) ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಭೆ 2025-26ನೇ ಶೈಕ್ಷಣಿಕ ವರ್ಷದ ಕಾಲೇಜು ವಿಭಾಗದ ಕ್ರೀಡಾ ಚಟವಟಿಕೆಗಳ ಕುರಿತಾಗಿ ಸಭೆ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವು ಜನತಾ ಪದವಿ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಪ್ರಮುಖವಾದ್ದು. ಈ ಶೈಕ್ಷಣಿಕ ವರ್ಷದ ಎಲ್ಲಾ ಕ್ರೀಡಾ ಚಟುವಟಿಕೆಗಳನ್ನು ಸಮರ್ಪಕವಾಗಿ ಆಯೋಜಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಜಿಲ್ಲೆ ಗುರುತಿಸುವ ಕಾರ್ಯವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ನಾಲ್ಕು ಗೋಡೆಯೊಳಗಷ್ಟೆ ಸೀಮಿತವಾಗದೆ ಅದರಿಂದ ಆಚೆಗೆ ಬಂದಾಗ ಆ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ರಚಿಸಿದ ಶ್ರೀ ಅಮೃತೇಶ್ವರಿ ತಾಯಿಯ ರಂಗೋಲಿ ಭಕ್ತರ ಗಮನ ಸೆಳೆಯಿತು. ಹಂದಟ್ಟು ನಿವಾಸಿ ಪ್ರಜ್ಞಾ ಜಿ. ಹಂದಟ್ಟು ಈ ಸುಂದರ ರಂಗೊಳಿಯಲ್ಲಿ ರಚಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ. ಉಡುಪಿಯ ಪಿಪಿಸಿ ಕಾಲೇಜಿನ ಎಂ.ಎಸ್ಸಿ ಪದವೀಧರೆಯಾಗಿರುವ ಪ್ರಜ್ಞಾ ಹಂದಟ್ಟು ಅವರು ಬಾಲ್ಯದಿಂದಲೇ ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದರು. ಗುರುವಿಲ್ಲದೆ ತನ್ನ ಸ್ವಂತ ಪರಿಶ್ರಮ ಹಾಗೂ ಆಸಕ್ತಿಯಿಂದ ರಂಗೊಲಿ ಕಲೆಯನ್ನು ಅವರು ಕರಗತ ಮಾಡಿಕೊಂಡಿದ್ದಾರೆ. ಈ ಹಿಂದೆ ಕಟೀಲು ದುರ್ಗಾಪರಮೇಶ್ವರಿ ದೇವಿಯ ಚಿತ್ರ ಸೇರಿದಂತೆ ಚಲನಚಿತ್ರ ನಟ ದೊಡ್ಡಣ್ಣ, ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರ ಚಿತ್ರ ಬಿಡಿಸಿ ಅವರಿಂದ ಶಹಬ್ಬಾಸ್ ಅನಿಸಿಕೊಂಡವರು. ಈಕೆಯ ಈ ಎಲ್ಲಾ ಸಾಧನೆಗೆ ಹಿಂದೆ ಇವರ ತಾಯಿ ಪೂರ್ಣಪ್ರಜ್ಞಾ ಕಾಲೇಜಿನ ಗ್ರಂಥಪಾಲಕಿ ಗೀತಾ ಪೂಜಾರಿ ಸಾಥ್ ನೀಡುತ್ತಿದ್ದಾರೆ. ಅಮೃತೇಶ್ವರಿ ದೇವಿ ರಂಗೊಲಿಯ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ  ಶುಕ್ರವಾರದಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಜರಗಿತು. ಈ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಬೆಳಿಗ್ಗೆ 9.30ಕ್ಕೆ ಆರಂಭಗೊಂಡಿತು. ಸಾವಿರಾರು ಭಕ್ತರು ಶ್ರೀ ದೇಗುಲದಲ್ಲಿ ನಡೆದ ವಿವಿಧ ಪೂಜಾ ಕಾರ್ಯದಲ್ಲಿ ಭಾಗಿಯಾದರು. ದೇಗುಲದಲ್ಲಿ ವಿಶೇಷ ಹೂವಿನ ಅಲಂಕಾರ, ಸಹಸ್ರ ಕುಂಕುಮಾರ್ಚನೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ನೇತೃತ್ವದಲ್ಲಿ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ ದಂಪತಿಗಳು ಪೂಜಾ ವಿಧಿವಿಧಾನದಲ್ಲಿ ಪಾಲ್ಗೊಂಡರು. ಶ್ರೀ ದೇವಿ ಅಮೃತೇಶ್ವರೀ ಗೆ ವರಮಹಾಲಕ್ಷ್ಮೀ ಅಂಗವಾಗಿ ವಿಶೇಷ ಅಲಂಕಾರ ಭಕ್ತ ಮಹಾಶಯನ್ನು ವಿಶೇಷವಾಗಿ ಸೆಳೆಯಿತು. ದೇಗುಲದ ಟ್ರಸ್ಟಿಗಳಾದ ಗಣೇಶ್ ನೆಲ್ಲಿಬೆಟ್ಟು, ಶಿವ ಪೂಜಾರಿ, ರತನ್ ಐತಾಳ್, ಸುಧಾ ಪೂಜಾರಿ, ಜ್ಯೋತಿ ಡಿ.ಕಾಂಚನ್, ಅರ್ಚಕ ಪ್ರತಿನಿಧಿಗಳಾದ ಸುಬ್ರಾಯ ಜೋಗಿ, ದಿನೇಶ್ ಜೋಗಿ ಮತ್ತಿತರರು ಇದ್ದರು. ಧಾರ್ಮಿಕ ವಿಧಿವಿಧಾನವನ್ನು ವೇ.ಮೂ ಮಧುಸೂದನ ಬಾಯರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಜಿ.ಎಸ್.ಬಿ. ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆಶೀರ್ವಾದ, ಮಾರ್ಗದರ್ಶನದಲ್ಲಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಭವನದಲ್ಲಿ ಶುಕ್ರವಾರ ಜರಗಿತು. ದೇವಳದ ತಾಂತ್ರಿಕ ಜಿ.ವಸಂತ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವೃತದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ಜಿಎಸ್‌ಬಿ ಸಮಾಜದ ಮುತ್ತೈದೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು. ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿಎಸ್‌ಬಿ ಮಹಿಳಾ ಮಂಡಳಿ ಅಧ್ಯಕ್ಷೆ ವಿಜಯಶ್ರೀ ವಿ.ಆಚಾರ್ಯ, ಕಾರ್ಯದರ್ಶಿ ವೈಭವಿ ವಿ.ಶೆಣೈ, ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಜಿಎಸ್‌ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು, ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಗುಂಪು ರಚಿಸಿ, ಅದರ ಉಳಿತಾಯದ ಹಣದಲ್ಲಿ ಮಹಿಳೆಯರ ಸ್ವ-ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಕೊಡುವ ಬಗ್ಗೆ ಚಿಂತನೆಯಿದೆ. ಅದು ಆ.15ರಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮೀ ಫಲಾನುಭವಿಗಳ ಸ್ವ-ಸಹಾಯ ಗುಂಪುಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ವಿಲೀನಗೊಳಿಸಿ, ಮಹಿಳಾ ಸ್ವಉದ್ಯೋಗಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. ಬೈಂದೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಸದ್ಯದಲ್ಲಿ ಅದು ಪೂರ್ಣಗೊಳ್ಳಲಿದೆ ಎಂದ ಅವರು ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳ ಸಂಚಾರಕ್ಕೆ ತೊಡಕ್ಕಾಗದಂತೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸು ವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ಯಾರಂಟಿಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶ್ರೀ ವೀರರಾಜೇಂದ್ರ ಹೆಗ್ಡೆ ಸಭಾ ಭವನದಲ್ಲಿ ಹೊಸದಾಗಿ ಆಗಮಿಸಿದ ವಿದ್ಯಾರ್ಥಿಗಳಿಗೆ ’ಫ್ರೆಶರ್ಸ್ ಡೇʼ ಕಾರ್ಯಕ್ರಮ ಶುಕ್ರವಾರ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೃಷ್ಟಿ ಇನ್‌ಪೋಟೆಕ್ ಕುಂದಾಪುರ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆದ ಹರ್ಷವರ್ಧನ ಶೆಟ್ಟಿ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿ, ಹೊಸದಾಗಿ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಆಚರಿಸುವ ಈ ದಿನದಲ್ಲಿ ವಿದ್ಯಾರ್ಥಿಗಳು ತಮ್ಮ ಮೂರು ವರ್ಷಗಳ ಪದವಿ ಶಿಕ್ಷಣದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸ್ಪಷ್ಟ ಗುರಿಯೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಎದುರಾಗುವ ಸನ್ನಿವೇಶಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು. ಇಂದಿನ ಕೃತಕ ಬುದ್ಧಿಮತ್ತೆ ಯುಗದಲ್ಲಿ ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿರಬೇಕು. ಜೊತೆಗೆ ಗುಣಾತ್ಮಕ ಗುಣಗಳನ್ನು ಬೆಳೆಸಿಕೊಂಡು ವಿಷಯದ ಬಗ್ಗೆ ಆಳವಾಗಿ ಅಧ್ಯಯನ ಮಾಡಿದಾಗ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿ ದೆಶೆಯಲ್ಲಿಯೇ ಪದವಿ ಹಂತದ ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆದುಕೊಳ್ಳಬೇಕಾದರೆ ಕೃತಜ್ಞತೆ ಮನೋಭಾವ ಪ್ರಾಮಾಣಿಕತೆ, ಗುರಿ, ಕೌಶಲ್ಯತೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಪದವಿ ಕಾಲೇಜು ಇದರ ಕಾಮರ್ಸ್ ಮತ್ತು ವ್ಯವಹಾರ ಆಡಳಿತ ಸಂಘದ ಆಶ್ರಯದಲ್ಲಿ 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿಯ ಸಿ.ಎ ಮತ್ತು ಸಿ.ಎಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಿ.ಎ ಪಾಂಡುರಂಗ ನಾಯಕ್ ಅವರು ಸಿ.ಎ ಮತ್ತು ಸಿ.ಎಸ್ ಕೋರ್ಸ್ ನ ಸಂಪೂರ್ಣ ಮಾಹಿತಿಯನ್ನು ವಿವರಿಸಿ ಮಾತನಾಡಿ, ಸಮಾಜದಲ್ಲಿ ಉತ್ತಮ ಸ್ತರದಲ್ಲಿರುವ ಸಿಎ ಮತ್ತು ಸಿ.ಎಸ್ ಕೋರ್ಸ್ ಅನ್ನು ನಿರಂತರ ಪ್ರಯತ್ನ, ಛಲ ಮತ್ತು ಏಕಾಗ್ರತೆಯಿಂದ ಯಾವ ವಿದ್ಯಾರ್ಥಿಯು ಸಫಲತೆಯನ್ನು ಸಾಧಿಸಬಹುದು ಎಂದರು. ಜಿಲ್ಲೆಯ ನುರಿತ ಸಿ.ಎ, ಸಿ.ಎಸ್ ತರಬೇತುದಾರರಿಂದ ಕಾಲೇಜಿನಲ್ಲಿಯೇ ಕೋಚಿಂಗ್ ವ್ಯವಸ್ಥೆಯನ್ನು ಒದಗಿಸುತ್ತಿರುವ ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಗಿಸಿದರು. ಕೋರ್ಸ್ ನ ವಿವಿಧ ಹಂತಗಳು, ವಿಷಯ, ಪರೀಕ್ಷಾ ತಯಾರಿ, ಮಾನಸಿಕ ಸಿದ್ಧತೆ ಹೀಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಉಪ ಪ್ರಾಂಶುಪಾಲರು ಹಾಗೂ ಐಕ್ಯೂಎಸಿ ಸಂಯೋಜಕರಾದ ಜಯಶೀಲ್ ಕುಮಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ಅಭಿವೃದ್ಧಿ ಕಾರ್ಯದ ಅಂಗವಾಗಿ ವಾಸ್ತು ತಜ್ಞರ ಕಟ್ಟಿ ಮುಖೇನ ಸಿದ್ದಪಡಿಸಿರುವ ನೀಲ ನಾಕ ನಕಾಶೆಯನ್ನು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಭಿವೃದ್ಧಿ ಸಮಿತಿ ವಿಜ್ಞಾಪನಾ ಪತ್ರವನ್ನು ಅನಾವರಣಗೊಳಿಸಿದರು. ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜಶೇಖರ್ ಹೆಬ್ಬಾರ್ ಮಾತನಾಡಿ, ಅರಬ್ಬಿ ಸಮುದ್ರ ಮತ್ತು ಸೌಪರ್ಣಿಕಾ ನದಿ ಮಧ್ಯದಲ್ಲಿ, ಉದ್ಭವಿಸಿರುವ ಅತ್ಯಂತ ಪುರಾತನ ಇತಿಹಾಸವನ್ನು ಹೊಂದಿರುವಂತಹ ಜಿಲ್ಲೆಯ ಸುಪ್ರಸಿದ್ದ ದೇವಾಲ ಯವು ಜೀರ್ಣಾವಸ್ಥೆಯಲ್ಲಿದೆ. ದೇವಾಲಯವನ್ನು ಜೀರ್ಣೋದ್ದಾರ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ದೇವಾಲಯದ ಅಭಿವೃದ್ಧಿ ಸಮಿತಿ ಕೂಡ ರಚಿಸಲಾಗಿದೆ. ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ದೇವಾಲಯವನ್ನು ಆಲೋಚನೆ ಹೊಂದಲಾಗಿದೆ. ಅತಿ ಶೀಘ್ರದಲ್ಲೆ ಜೀರ್ಣೋದ್ದಾರ ಕಾರ್ಯಕ್ಕೆ ಮುಂದಾಗಲಿದ್ದೇವೆ ಎಂದು ಹೇಳಿದರು. ಮಹಾರಾಜ ಸ್ವಾಮಿ ಶ್ರೀ ವರಾಹ ದೇವಾಲಯ ಇತಿಹಾಸಕಾರರ ಅಭಿಪ್ರಾಯದಂತೆ ದೇವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲ ಅವರನ್ನು ಗುರುವಾರ ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿವೃದ್ಧಿ ಯೋಜನೆಗಳ ಕುರಿತು ಮನವಿ ಸಲ್ಲಿಸಿದರು. ಗಂಗೊಳ್ಳಿ ರಾಜ್ಯದ 2ನೇ ಅತೀದೊಡ್ಡ ಮೀನುಗಾರಿಕ ಬಂದರಾಗಿದ್ದು, 200ಕ್ಕೂ ಹೆಚ್ಚು ದೋಣಿಗಳು ಅವಲಂಬಿತವಾಗಿವೆ. ಮತ್ಯೋದ್ಯಮ, ವ್ಯಾಪಾರ ಹಾಗೂ ಕರಾವಳಿಯ ವಾಣಿಜ್ಯ ವ್ಯವಹಾರಕ್ಕೆ ಗಂಗೊಳ್ಳಿ ಬಂದರು ಪ್ರಮುಖ ಕೇಂದ್ರವಾಗಿದೆ. ಗಂಗೊಳ್ಳಿಯಿಂದ ತಾಲೂಕು ಕೇಂದ್ರ ಕುಂದಾಪುರವು ಕೂಗಳತೆಯ ದೂರದಲ್ಲಿದ್ದರೂ, ಇಲ್ಲಿನ ಜನರು ಪ್ರಸ್ತುತ ರಾ.ಹೆ.-66 ಮೂಲಕ 17-18ಕಿ.ಮೀ. ಸಂಚರಿಸಿ ಕುಂದಾಪುರ ತಲುಪಬೇಕಿದೆ. ಇದರಿಂದ ಸಾರ್ವಜನಿಕರಿಗೆ ಸಮಯ ಹಾಗೂ ಆರ್ಥಿಕ ನಷ್ಟ ಉಂಟಾಗುತ್ತಿದೆ. ಹಾಗಾಗಿ ಗಂಗೊಳ್ಳಿ-ಕುಂದಾಪುರ ಸೇತುವೆ ಯೋಜನೆಯನ್ನು ಸಾಗರಮಾಲಾ ಯೋಜನೆಯ ಬಂದರು ಸಂಪರ್ಕ ಘಟಕದಡಿ ಸೇರಿಸಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಶಿಫಾರಸು ಮಾಡುವಂತೆ ಸಂಸದರು ಒತ್ತಾಯಿಸಿದರು. ಶಿರೂರು ಅಳಿವೆಗದ್ದೆ ಬಂದರಿನಲ್ಲಿ ಮೂಲಸೌಕರ್ಯವನ್ನು ಒದಗಿಸಿ ಮೀನುಗಾರರ ಬದುಕನ್ನು ಬೆಂಬಲಿಸಿ ಸುಸ್ಥಿರ ಮೀನುಗಾರಿಕೆಯನ್ನು ಉತ್ತೇಜಿಸಬೇಕು ಎಂದು ಸಂಸದರು ವಿವರಿಸಿದ್ದಾರೆ.

Read More