ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಕಾಡಿಯಲ್ಲಿ ಗುರುವಾರ ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣದ ಆರೋಪಿ ಮಗ ಮೆಲ್ವಿನ್ ಮೊಂತೇರೊ(38)ನನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಆರೋಪಿ ತನ್ನ ತಾಯಿಯನ್ನು ಕೊಲೆ ಮಾಡಿದ ಬಳಿಕ ಆಟೋ ರಿಕ್ಷಾದಲ್ಲಿ ಪರಾರಿಯಾಗಿದ್ದನು. ಈ ಕುರಿತ ಮಾಹಿತಿ ಪೊಲೀಸರಿಗೆ ದೊರೆತಿದ್ದು ನಂತರ ಆತ ಬಸ್ ಮೂಲಕ ಉಡುಪಿ-ಕುಂದಾಪುರ ಮಾರ್ಗವಾಗಿ ಕೊಲ್ಲೂರಿನತ್ತ ಸಾಗುತ್ತಿರುವುದು ತಾಂತ್ರಿಕ ಮಾಹಿತಿಗಳಿಂದ ಲಭಿಸಿತ್ತು. ಅಂತೆಯೇ ಕಾಸರ ಗೋಡು ಪೊಲೀಸರು ಉಡುಪಿ ಎಸ್ಪಿ ಹರಿರಾಂ ಶಂಕರ್ ಅವರಿಗೆ ಮಾಹಿತಿ ನೀಡಿದ್ದರು. ಮಂಜೇಶ್ವರ ಪೊಲೀಸರ ಒಂದು ತಂಡ – ಮೋಪಿಯನ್ನು ಬೆನ್ನತ್ತಿ ಬಂದಿತ್ತು. ಕುಂದಾಪುರಕ್ಕೆ ಬಂದಿಳಿದಿದ್ದ ಆರೋಪಿ ಅಲ್ಲಿಂದ ಕೊಲ್ಲೂರಿಗೆ ತೆರಳುವ ಖಾಸಗಿ ಬಸ್ ಏರಿದ್ದನು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತು. ಆ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸರು ಅಲರ್ಟ್ ಆಗಿದ್ದರು. ಆತ ದಾರಿ ಮಧ್ಯೆ ಇಳಿದು ಬೈಂದೂರಿನತ್ತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದರೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ಲಭಿಸುವಂತೆ ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯವಿರುವ ಮಾಹಿತಿಗಳನ್ನೊಳಗೊಂಡಂತೆ ಎಲ್ಲಾ ರೀತಿಯ ಮೂಲ ಸೌಕರ್ಯಗಳುಳ್ಳ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಿ, ನೀಡಿದ್ದಲ್ಲಿ ಹೆಚ್ಚು ಕೈಗಾರಿಕೆಗಳು ಆರಂಭಗೊಂಡು ಜಿಲ್ಲೆಯ ಜನತೆಗೆ ಉದ್ಯೋಗಾವಕಾಶಗಳು ಲಭಿಸುತ್ತವೆ. ಇದಕ್ಕೆ ಒತ್ತು ನೀಡಬೇಕೆಂದರು. ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101.19…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರವು ಇತ್ತೀಚಿಗೆ ನಡೆಯಿತು. ಅಂತಾರಾಷ್ಟ್ರೀಯ ಮಟ್ಟದ ತರಬೇತುದಾರರಾದ ಮೈಸೂರಿನ ಸತೀಶ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನದ ಮಾರ್ಗಗಳು ಮತ್ತು ಜೀವನ ಕೌಶಲ್ಯಗಳ ಕುರಿತಾದ ವಿಚಾರಗಳ ಬಗ್ಗೆ ಉಪಯುಕ್ತ ತರಬೇತಿ ನೀಡಿದರು. ಶಾಲೆಯ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ತರಬೇತುದಾರರಾದ ಸತೀಶ್ ಅವರ ಕೊಡುಗೆ ಬಹುಮೂಲ್ಯವಾದುದು. ವರ್ಷಪೂರ್ತಿ ಅಧ್ಯಯನದಲ್ಲಿ ತೊಡಗುವಂತೆ ಮಾಡಲು, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಮಾರ್ಗದರ್ಶನದಲ್ಲಿ ಶಾಲಾರಂಭದಲ್ಲಿಯೇ ಈ ಕಾರ್ಯಾಗಾರವನ್ನು ನಡೆಸಲಾಯಿತು. ಅಧ್ಯಯನದ ತಂತ್ರಗಳು, ಏಕಾಗ್ರತೆಯನ್ನು ಹೊಂದುವ ಮಾರ್ಗಗಳು, ಓದುವಿಕೆಯ ವೇಗವನ್ನು ಹೆಚ್ಚಿಸಿಕೊಳ್ಳುವ ಕೌಶಲ್ಯಗಳು, ಅತ್ಯುತ್ತಮ ಆಹಾರ ಪದ್ಧತಿಗಳು, ಜೀವನ ಕೌಶಲ್ಯಗಳು, ಸ್ವಪ್ರೇರಣೆಯ ತಂತ್ರಗಳು, ಸ್ಮರಣಶಕ್ತಿಯನ್ನು ಹೆಚ್ಚಿಸುವ ತಂತ್ರೋಪಾಯಗಳು, ಸುಲಭ ಲೆಕ್ಕಾಚಾರದ ಮಾರ್ಗೋಪಾಯಗಳು ಇತ್ಯಾದಿ ವಿಚಾರಗಳ ಕುರಿತಂತೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು. ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್.,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ಕ್ನಲ್ಲಿ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಆಯೋಜಿಸಿದರು. ಸಹಶಿಕ್ಷಕಿ ಆಶಾಲತಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಉದ್ದೇಶದ ಬಗ್ಗೆ ತಿಳಿ ಹೇಳುತ್ತಾ, ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯಯುತ ಜೀವನವನ್ನು ತಮ್ಮದಾಗಿಸಿಕೊಳ್ಳುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಹಾಗೂ ಕಂಬದಕೋಣೆ ಶಾಖೆಗೆ ಒಡಿಸ್ಸಾ ಅಂಗುಲ್ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ 22 ಮಂದಿ ಸಿಇಓ ಹಾಗೂ ಅಧ್ಯಕ್ಷ – ನಿರ್ದೇಶಕರುಗಳ ಅಧ್ಯಯನ ತಂಡ ಬುಧವಾರ ಭೇಟಿ ನೀಡಿತು. ಸಂಘದ ವ್ಯವಹಾರ ಚಟುವಟಿಕೆಗಳ ವೈವಿದ್ಯೀಕರಣ, ಕ್ರೆಡಿಟ್ ಮಾನಿಟರಿಂಗ್, ಕೃಷಿ ಸಾಲ, ಬಡ್ಡಿದರ, ವಹಿವಾಟು, ಸದಸ್ಯರ ಒಳಗೊಳ್ಳುವಿಕೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸೊಸೈಟಿಯ ಕಾರ್ಯವೈಖರಿಯನ್ನು ಶ್ಲಾಘಿಸಿ ಮುಂದಿನ ಯೋಜನೆಗಳ ಮಾಹಿತಿ ಪಡೆದುಕೊಂಡರು. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ಒಂದು ಸಾವಿರ ಕೋಟಿ ವಹಿವಾಟು ಇರುವ ನಮ್ಮ ಸಂಘವು ನಾಲ್ಕು ಗ್ರಾಮಗಳ ಸದಸ್ಯರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಾ ಬಂದಿದೆ. ಆರ್ಥಿಕ ವಹಿವಾಟಿನ ಜೊತೆಗೆ ರೈತರಿಗೆ ಬಲ ತುಂಬುವ ನಿಟ್ಟಿನಲ್ಲಿ ಮಾಹಿತಿ ಕಾರ್ಯಗಾರ, ಪ್ರಾತ್ಯಕ್ಷಿಕೆ, ಕೃಷಿ ಪೂರಕ ಉತ್ಪನ್ನಗಳು ಹಾಗೂ ಸಲಕರಣೆಗಳ ಒದಗಿಸುವಿಕೆಗೆ ಆದ್ಯತೆ ನೀಡಲಾಗುತ್ತಿದೆ. ಸಂಘದ ಮಹಾತ್ವಕಾಂಕ್ಷಿಯ ಯೋಜನೆಯಾದ ರೈತ ಸಿರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು : ಉಪ್ಪುಂದ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ, ಸೋಲಾರ್ ಸಿಸ್ಟಮ್ ಸಂಪೂರ್ಣ ಹವಾ ನಿಯಂತ್ರಣ ಹಾಗೂ ಗಣಕೀಕೃತ ಸೌಲೌಭ್ಯದೊಂದಿಗೆ ಸಿದ್ಧಾಪುರ ಶಾಖೆ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ತ್ರಿಶಕ್ತಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಎಸ್. ಸಚ್ಚಿದಾನಂದ ಅವರು ಚಾತ್ರ ಸಿದ್ದಾಪುರ ಶಾಖೆ ಉದ್ಘಾಟಿಸಿ ಮಾತನಾಡಿ, ಶ್ರಮಹಿಸಿ ದುಡಿದಾಗ ಜೀವನದಲ್ಲಿ ಯಶಸ್ಸು ಸಿಗುತ್ತದೆ ಎನ್ನುವುದಕ್ಕೆ ಗೋವಿಂದ ಬಾಬು ಪೂಜಾರಿ ಸಾಕ್ಷಿಯಾಗಿದ್ದಾರೆ. ಅವರು ಅನೇಕ ಉದ್ಯಮದಲ್ಲಿ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕೂಡ ಒಂದಾಗಿದೆ. ಗೋವಿಂದ ಬಾಬು ಪೂಜಾರಿ ಅವರು ಅನೇಕ ದಾನ ಧರ್ಮಗಳನ್ನು ಮಾಡಿದ್ದಾರೆ. ಅವರ ಇನ್ನಷ್ಟು ದಾನ ಧರ್ಮಗಳು ಸಮಾಜದ ಒಳ್ಳೆಯವರಿಗೆ ಸಿಗುವಂತಾಗಲಿ ಎಂದು ಹೇಳಿದರು. ಈ ವೇಳೆ ತ್ರಿಶಕ್ತಿ ಕಟ್ಟಡದ ಮಾಲೀಕ ನಾರಾಯಣ ಶೆಟ್ಟಿ ಅವರನ್ನು ಸನ್ಮಾಸಿ, ಗೌರವಿಸಲಾಯಿತು. ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋವಿಂದ ಬಾಬು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರ ಸೂಚನೆ ಮೇರೆಗೆ ಕಡಲ್ಕೊರೆತದಿಂದ ಹಾನಿಗೊಳದ ಕುಂದಾಪುರ ತಾಲೂಕಿನ ತ್ರಾಸಿ, ಕಂಚು ಗೋಡು ಮತ್ತು ಹೊಸಪೇಟೆ ಭಾಗಗಕ್ಕೆ ಬಂದರು ಮತ್ತು ಮೀನುಗಾರಿಕೆ ಇಲಾಖೆ ಎಂಜಿನಿಯರ್ ಭಾನುಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ಎಂ.ಡಿ. ಬಿಜೂರು ಮಾತನಾಡಿ, ತ್ರಾಸಿ, ಕಂಚುಗೋಡು ಮತ್ತು ಹೊಸಪೇಟೆ ಭಾಗದಲ್ಲಿ ಅಲ್ಲಲಿ ಕಡಲ್ಕೊರೆತ ಉಂಟಾಗಿ ತೀರ ಪ್ರದೇಶ ಬಹಳಷ್ಟು ಹಾನಿಯಾಗಿದೆ. ಮೀನುಗಾರರ ಮನೆ ಮತ್ತು ಬದುಕನ್ನು ರಕ್ಷಿಸುವ ನಿಟ್ಟಿನಲ್ಲಿ ಕಡಲ್ಕೊರೆತದಿಂದ ನಷ್ಟ ಉಂಟಾಗಿರುವ ತೀರ ಪ್ರದೇಶವನ್ನು ರಕ್ಷಿಸಲು ಕಲ್ಲಿನ ತಡೆಗೋಡೆ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂಜಿನಿ ಯರ್ಗೆ ಮನವಿ ಮಾಡಿದರು. ಸ್ಥಳೀಯ ಮೀನುಗಾರರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೇಸಿಐ ಕುಂದಾಪುರ ಇವರ ಪ್ರಾಯೋಜಕತ್ವದಲ್ಲಿ ನೂತನವಾಗಿ ರಚನೆಗೊಂಡ ಜೇಸಿಐ ಗಂಗೊಳ್ಳಿಯ ಸ್ಥಾಪಕ ಅಧ್ಯಕ್ಷರಾಗಿ ರೋಶನ್ ಖಾರ್ವಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜಹೀರ್ ಅಹಮ್ಮದ್, ಕಾರ್ಯದರ್ಶಿಯಾಗಿ ನಾಗರಾಜ್ ಖಾರ್ವಿ ಜಿಎಫ್ಸಿಎಸ್, ಜತೆ ಕಾರ್ಯದರ್ಶಿಯಾಗಿ ಮಡಿ ಚೇತನ ಖಾರ್ವಿ, ಕೋಶಾಧಿಕಾರಿಯಾಗಿ ಮಡಿ ಗೋಪಾಲ ಖಾರ್ವಿ, ಜತೆ ಕೋಶಾಧಿಕಾರಿಯಾಗಿ ಸುರೇಶ ಆಚಾರ್ಯ ನಾಯಕವಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಂದೀಪ ಖಾರ್ವಿ ತ್ರಾಸಿ, ಮಹಮ್ಮದ್ ಹುಸೇನ್ ಗಂಗೊಳ್ಳಿ, ಸಂದೀಪ ನಾರಾಯಣ ಖಾರ್ವಿ, ಗಿರೀಶ್ ಎಸ್.ಖಾರ್ವಿ, ಅಭಿಜಿತ್ ಗಂಗೊಳ್ಳಿ, ಜಯಂತ್ ಶೇರುಗಾರ್ ಗಂಗೊಳ್ಳಿ, ನೇತ್ರಾ ಖಾರ್ವಿ, ಆಕಾಶ್ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಂಗಳೂರು ಗ್ರಾಮದ ಶ್ರೀನಿವಾಸ ಅವರ ಪುತ್ರ ಶರತ್ (35) ಅವರು ಮಲಗಿದಲ್ಲೇ ಮೃತಪಟ್ಟಿದ್ದಾರೆ. ಜೂ. 23ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದವರು ಜೂ. 24ರಂದು ಬೆಳಗಿನ ಜಾವ ಶರತ್ ತನಗೆ ಎದೆ ನೋವು ಬರುತ್ತಿದೆ ಎಂದು ಹೇಳಿ ವಾಂತಿ ಮಾಡಿಕೊಂಡರು. ಕೂಡಲೇಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಶರತ್ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ’ವಿಶ್ವ ತಂಬಾಕು ರಹಿತ ದಿನದ’ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿಎಸ್ ಆಚಾರ್ಯ ಸಭಾ ಭವನದಲ್ಲಿ ಬುಧವಾರ ನಡೆಯಿತು. ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ ಇಳಿಯುತ್ತಾನೆ. ಸಮಾಜದಲ್ಲಿ ಇಂತಹ ಕೃತ್ಯಕ್ಕೆ ವಿದ್ಯಾರ್ಥಿಗಳನ್ನೇ ಬಲೆ ಬೀಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳ ಇಂತಹ ಕೃತ್ಯದಿಂದ ತಂದೆ ತಾಯಂದಿರು ಅವಮಾನ ಎದುರಿಸುವಂತಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರತರಾಗಿರುವುದು ಹಾಗೂ ಒಳ್ಳೆಯ ಗೆಳೆಯರ ಸ್ನೇಹ ಬೆಳೆಸುವುದು ಅಗತ್ಯ ಎಂದರು. ಮೊದಲ ಬಾರಿ ಡ್ರಗ್ಸ್ ಸೇವನೆ ಮಾಡಿದವರಿಗೆ ರೂ 10,000 ದಂಡ ಅಥವಾ 6 ತಿಂಗಳು…
