Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ, ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸ್ನೇಹಕೂಟ ಮಣೂರು ಇವುಗಳ ಸಹಯೋಗದೊಂದಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಂಯೋಜನೆಯೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕರನ್ನು ಗುರುತಿಸುವ ’ರೈತರೆಡೆಗೆ ನಮ್ಮ ನಡೆ’ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. 56ನೇ ಸರಣಿ ಕಾರ್ಯಕ್ರಮದ ಅಂಗವಾಗಿ, ಸಾಧಕ ಕೃಷಿಕರ ಮನೆಯಂಗಳಕ್ಕೇ ತೆರಳಿ ’ಕೃಷಿ ಪರಿಕರ’ವನ್ನು ನೀಡಿ ಗೌರವಿಸುವ ಕಾರ್ಯಕ್ರಮವು ಆ.26ರ ಬುಧವಾರ ಸಂಜೆ 4.45ಕ್ಕೆ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹೈನುಗಾರರಿಗೆ ಸರಕಾರದ ಪ್ರೋತ್ಸಾಹಧನ ಬೇಡ ಬದಲಾಗಿ ಉದ್ಯೋಗ ಖಾತ್ರಿಯೋಜನೆಯಂತೆ  ಕನಿಷ್ಟ ದಿನಗೂಲಿ ನೀಡಿ ಎಂದು ಕೋಟ ಹಾಲು ಉತ್ಪಾದಕರ ವಾರ್ಷಿಕ ಸಭೆಯಲ್ಲಿ ಹೈನುಗಾರರೊಬ್ಬರು ಆಗ್ರಹಿಸಿದರು. ಬುಧವಾರ ಕೋಟ ಹಾಲು ಉತ್ಪಾದಕರ ವಠಾರದಲ್ಲಿ ಕೋಟ ಸಹಕಾರ ಹಾಲು ಉತ್ಪಾದಕರ ವಾರ್ಷಿಕ ಸಭೆಯಲ್ಲಿ ಈ ವಿಚಾರದ ಬಗ್ಗೆ ಹೈನುಗಾರರಿಂದ ವಿಸ್ತ್ರತ ಚರ್ಚೆ ನಡೆಯಿತು. ಈ ಬಗ್ಗೆ ಮಾತನಾಡಿದ ಕೆ.ಎಂ.ಎಫ್ ವಿಸ್ತೀರ್ಣಾಧಿಕಾರಿ ಉಮೇಶ್ ಕುಂದರ್ ಯೋಜನೆಗಳನ್ನು ಸರಕಾರ ನಿಗದಿಪಡುಸುವುದು ಹಾಲಿನ ಗುಣಮಟ್ಟ ನೋಡಿ ಸಕರಾರದ ಸಹಾಧನ ನೀಡಲಾಗುತ್ತದೆ ಯೋಜನೆ ಬದಲಿಸುವ ಹಕ್ಕು ಸರಕಾರದ್ದಾಗಿದೆ ಎಂದರಲ್ಲದೆ ರಾಜ್ಯದ ಹಾಲು ಉದ್ಯಮ ನಂ 1 ಸ್ಥಾನದಲ್ಲಿದೆ,ವಿವಿಧ ಹೊಸ ತಂತ್ರಜ್ಞಾನ ಬಳಕೆಯಲ್ಲಿ ಮುಂಚೂಣಿಯಲ್ಲಿದೆ ಹಾಲು ಉತ್ಪಾದನೆಯಲ್ಲಿ ಕೆ.ಎಂ ಎಫ್ ಹೊಸ ಭಾಷ್ಯ ಬರೆದಿದೆ ಎಂದರಲ್ಲದೆ ಹಾಲಿನ ಗುಣಮಟ್ಟದ ವಿಚಾರದಲ್ಲಿ ಒಕ್ಕೂಟ ನಿರ್ಲಕ್ಷ್ಯೀಯ ದೋರಣೆ ಅನುಸರಿಸಿಲ್ಲ ಆದ್ದರಿಂದ ರಾಷ್ಟ್ರದಲ್ಲೆ ನಂದಿನಿ ಹಾಲಿಗೆ ಬಾರಿ ಬೇಡಿಕೆಯೂ ಇದೆ,ಹೈನುಗಾರರು ಹಾಲಿನ ಗುಣಮಟ್ಟದಲ್ಲಿ ಲೋಪ ಎಸೆಗಬೇಡಿ, ಸಾಮಾನ್ಯವಾಗಿ ಸಾಕಾಣಿಕೆ ವ್ಯತ್ಯಾಸದಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅನನ್ಯ ಪ್ರೀತಿ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ – ಗಮ್ಮತ್ತ್” ಕಾರ್ಯಕ್ರಮವನ್ನು ಅಗಸ್ಟ್ 23ರ ಭಾನುವಾರ ಬೆಳಿಗ್ಗೆ ಗಂಟೆ 09ರಿಂದ ಬೈಂದೂರು ಯಡ್ತರೆಯ ಜೆ.ಎನ್.ಆರ್ ಕಲಾಮಂದಿರ ಹಾಗೂ ಪಕ್ಕದ ನೆಲ್ಯಾಡಿ ಬೈಲ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಹೇಳಿದರು. ಅವರು ಬೈಂದೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ಎರಡು ವರ್ಷದಿಂದ ಅದ್ದೂರಿ ಕಾರ್ಯಕ್ರಮ ಆಯೋಜಿಸುತ್ತಾ ಬರಲಾಗುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೂರನೇ ವರ್ಷದ ಕಾರ್ಯಕ್ರಮದಲ್ಲಿ ಅದ್ದೂರಿ ಕಂಬಳ, ವಿವಿಧ ಪ್ರಾತ್ಯಕ್ಷಿಕೆ, ವಸ್ತು ಪ್ರದರ್ಶನ, ಹರಟೆ, ನ್ಯೆಗಿಕೊಪ್ಪರಿಗೆ ವಿವಿಧ್ಯಮಯ ಕಾರ್ಯಕ್ರಮಗಳ ಜೊತೆಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ತಿರುಪತಿಗೆ ಸಾಸ್ತಾನ ದಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪಾದಯಾತ್ರೆ ಸತತ 16ನೇ ವರ್ಷಕ್ಕೆ ಕಾಲಿಟ್ಟಿದೆ. ಶ್ರೀ ವೆಂಕಟೇಶ್ವರ ಸ್ವೀಟ್ಸ್‌ನ ಮಾಲೀಕರಾದ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಆಗಸ್ಟ್ 18ರಂದು ನಾಗರಪಂಚಮಿಯ ಮರುದಿನ ಪಾದಯಾತ್ರೆ ಆರಂಭಗೊಂಡಿದ್ದು, ಸುಮಾರು 18 ದಿನಗಳ ಕಾಲ ಪಾದಯಾತ್ರೆ ಮುಂದುವರಿಯಲಿದೆ. 200ಕ್ಕೂ ಅಧಿಕ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು, ಭಕ್ತಿ ಮತ್ತು ಶ್ರದ್ಧೆಯಿಂದ ತಿರುಪತಿ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಪಾದಯಾತ್ರೆಯ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ನಾಮಸ್ಮರಣೆ, ಭಜನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತರು ಸಾಗಲಿದ್ದಾರೆ. ಪ್ರತಿ ವರ್ಷವೂ ಭಕ್ತರನ್ನು ಒಗ್ಗೂಡಿಸಿ ಯಶಸ್ವಿಯಾಗಿ ಪಾದಯಾತ್ರೆ ನಡೆಸಲಾಗುತ್ತಿದ್ದು, ಈ ಬಾರಿಯೂ 200ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿರುವುದು ವಿಶೇಷವಾಗಿದೆ. ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಭಕ್ತರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ವೇಳೆ ಜೋರಾದ ಗಾಳಿಗೆ ದೋಣಿ ತೇಲಾಡಿ, ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮರವಂತೆ ಬಂದರಿನ ಸಮೀಪ ನಡೆದಿದೆ. ಮರವಂತೆ ಗ್ರಾಮದ ನಾಗರಾಜ ಖಾರ್ವಿ (40) ಮೃತಪಟ್ಟ ದುರ್ದೈವಿ. ಅವರು ಎಂದಿನಂತೆ ಬೆಳಿಗ್ಗೆ 04:30ಕ್ಕೆ ಮನೆಯಿಂದ ಹೊರಟು ಮರವಂತೆ ಬಂದರು ತಲುಪಿದ್ದರು. ಬೆಳಿಗ್ಗೆ0 5:00 ಗಂಟೆಗೆ ಆನಂದ ಖಾರ್ವಿ ಅವರಿಗೆ ಸೇರಿದ ದೋಣಿಯಲ್ಲಿ ಇತರ ಕೆಲಸಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು. ಮರವಂತೆ ಗ್ರಾಮದ ನಾಗರಾಜ ಖಾರ್ವಿ ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ಬೆಳಿಗ್ಗೆ 4:30ಕ್ಕೆ ಮನೆಯಿಂದ ಹೊರಟು ಮರವಂತೆ ಬಂದರು ತಲುಪಿದ್ದರು. ಬೆಳಿಗ್ಗೆ 5:00 ಗಂಟೆಗೆ ಆನಂದ ಖಾರ್ವಿ ಅವರಿಗೆ ಸೇರಿದ ದೋಣಿಯಲ್ಲಿ ಇತರ ಕೆಲಸಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು. ಬಂದರಿನಿಂದ ಸುಮಾರು 200 ಮೀಟರ್ ದೂರದ ಅರಬ್ಬಿ ಸಮುದ್ರದಲ್ಲಿ ದೋಣಿ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಜೋರಾಗಿ ಗಾಳಿ ಬೀಸಿದೆ. ಈ ವೇಳೆ ದೋಣಿ ನೀರಿನಲ್ಲಿ ನಿಯಂತ್ರಣ ತಪ್ಪಿ ತೇಲಾಡಿದ ಪರಿಣಾಮ, ದೋಣಿಯಲ್ಲಿದ್ದ ನಾಗರಾಜ ಖಾರ್ವಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 (ಎಸ್‌ಐಆರ್‌) ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಸೋಮವಾರ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಅವರು ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026ರ ಕರಡು ಮತದಾರರ ಪಟ್ಟಿ ಪ್ರಕಟಣೆ ಮತ್ತು ಪ್ರಕಟಣೆಯ ನಂತರದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ, ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಷ್ಕೃತ ಎಸ್‌ಐಆರ್-2026 ವೇಳಾಪಟ್ಟಿಯಂತೆ ಆ.17ಕ್ಕೆ ಎನ್ಯುಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಸಂಗ್ರಹಿಸುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆ.24ರಂದು ಬೆಳಿಗ್ಗೆ 11:00 ಗಂಟೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಾಗೂ ಪಟ್ಟಿ ಪ್ರಕಟಗೊಂಡ ನಂತರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒಂದು ಮುದ್ರಿತ ಪ್ರತಿ ಹಾಗೂ ಒಂದು ಸಾಫ್ಟ್ ಕಾಪಿ ಪಟ್ಟಿಯನ್ನು ನೀಡಲಾಗುವುದು ಎಂದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳು ರೋಟರಿ ಕ್ಲಬ್, ಕುಂದಾಪುರ ಆಯೋಜಿಸಿದ ರೋಟರಿ ಯುತ್ ಲೀಡರ್‌ಶಿಪ್ ಅವಾರ್ಡ್ ರ‍್ಯಾಲಿ ವಲಯ ತರಬೇತಿ ಕಾರ್ಯಾಗಾರ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದರು. ತರಬೇತುದಾರರಾದ ಪಿಡಿಜಿ ಅಭಿನಂದನ್ ಎ. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಕುರಿತು, ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಜೀವನ ಮೌಲ್ಯದ ಕುರಿತು ಹಾಗೂ ವಕೀಲರಾದ ರಾಘವೇಂದ್ರ ಚರಣ್ ನಾವಡ ಸ್ಮರಣ ಶಕ್ತಿಯ ತಂತ್ರಗಳ ಕುರಿತು ಉಪನ್ಯಾಸ ಮತ್ತು ತರಬೇತಿ ನೀಡಿದರು. ಇದೇ ಸಂದರ್ಭ ರೋಟರಿ ಕ್ಲಬ್ ಕುಂದಾಪುರ ಕಾಲೇಜು ವಿದ್ಯಾರ್ಥಿಗಳಿಗೆ ‘ಶ್ರೇಷ್ಠ ಭಾರತ – ಸಮೃದ್ಧ ಭಾರತ’ಎಂಬ ವಿಷಯದ ಕುರಿತು ಗಿಳಿಯಾರು ಕುಶಲ್ ಹೆಗ್ಡೆ ರೋಟರಿ ಭವನ, ಕುಂದಾಪುರದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಪಡೆಯಿತು. ಈ ಸಂದರ್ಭ ರೋಟರಿ ಕ್ಲಬ್ ಅಧ್ಯಕ್ಷ ರೋ. ಸತೀಶ್ ಹೆಗ್ಡೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಹಿಳಾ ಸಬಲೀಕರಣವೆಂದರೆ ಕೇವಲ ಮೀಸಲಾತಿ ಅಥವಾ ಅವಕಾಶಗಳನ್ನು ಪಡೆಯುವುದಲ್ಲ; ತನ್ನ ಸಾಮರ್ಥ್ಯ, ಅರ್ಹತೆ ಹಾಗೂ ಆತ್ಮವಿಶ್ವಾಸದ ಮೂಲಕ ಸಮಾಜದಲ್ಲಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳುವುದಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ವಿಶ್ರಾಂತ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಸಂಘಟನೆ ‘ಸಕ್ಷಮಾ’ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಮಹಿಳಾ ಸಬಲೀಕರಣ’ ವಿಷಯದ ಕುರಿತು ಮಾತನಾಡಿದರು. ಮಹಿಳೆಯರು ತಮ್ಮ ಹಕ್ಕುಗಳು, ಕರ್ತವ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಜಾಗೃತರಾಗಬೇಕು ಎಂದರು. ಮಹಿಳೆಯಲ್ಲಿ ಅಪಾರವಾದ ಅರ್ಹತೆ ಮತ್ತು ಸಾಮರ್ಥ್ಯವಿದೆ. ಯಾವುದೇ ಅನುಕಂಪದ ಆಧಾರದ ಮೇಲೆ ಅವಕಾಶವನ್ನು ಬೇಡುವ ಅಗತ್ಯವಿಲ್ಲ. ನಮ್ಮ ಅರ್ಹತೆ, ಪರಿಶ್ರಮ ಮತ್ತು ಸಾಮರ್ಥ್ಯವನ್ನು ಗುರುತಿಸಿ ಅವಕಾಶ ನೀಡಿ ಎಂದು ಕೇಳುವ ಆತ್ಮವಿಶ್ವಾಸ ಮಹಿಳೆಯರಲ್ಲಿ ಬರಬೇಕು ಎಂದರು.ಮಹಿಳೆಯರಿಗೆ ಆಸ್ತಿ ಸೇರಿದಂತೆ ಕಾನೂನುಬದ್ಧವಾಗಿ ದೊರೆಯುವ ಹಕ್ಕುಗಳ ಬಗ್ಗೆ ಅರಿವು ಮೂಡಬೇಕು. ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದರ ಜೊತೆಗೆ, ಇತರರ ಹಕ್ಕುಗಳನ್ನೂ ಗೌರವಿಸುವ ಮನೋಭಾವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಬೆಳೆಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಮೈ ಭಾರತ್’ ಯೋಜನೆಯು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಕಾರ್ಯಕ್ರಮವಾಗಿದ್ದು, ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು, ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಹಾಗೂ ‘ವಿಕಸಿತ ಭಾರತ @2047’ ಗುರಿ ಸಾಧನೆಯಲ್ಲಿ ಯುವಜನರನ್ನು ಪಾಲುದಾರರನ್ನಾಗಿ ರೂಪಿಸುವ ಉದ್ದೇಶ ಹೊಂದಿದೆ ಎಂದರು. ಜಿಲ್ಲೆಯ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಯುವಜನ ಅಭಿವೃದ್ಧಿ ಕಾರ್ಯಕ್ರಮವಾದ ‘ಮೈ ಭಾರತ್’ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲಾ ಸದಸ್ಯ ಇಲಾಖೆಗಳು ಪರಸ್ಪರ ಸಹಕಾರ ಮತ್ತು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಕಟಪಾಡಿಯ ಕುರ್ಕಲು ಎಂಬಲ್ಲಿ ನಡೆದ ಕಾಂಪೀಟ್ 5.0 ಗರ್ಜನೆ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳಾದ ನಿಹಾಲ್, ಭುವನ್ ಶೇಟ್, ಶಿಫಾಲಿ, ಚಿರಾಗ್ ಅಮೋಘ ಪ್ರದರ್ಶನದೊಂದಿಗೆ ಪ್ರಥಮ ಸ್ಥಾನ ಗಳಿಸಿದರು. ಲವ್ವಿಕ್, ವಿಶ್ರುತ್, ಆಯುಷ್ ಮೊಗವೀರ, ದೀಕ್ಷಿತ್,ಸೂರ್ಯ, ಇಶಾನ್, ವಿಸ್ಮಯ, ರಿತ್ವಿಕ್, ಅಕ್ಷಜ್ಞ ಮತ್ತು ನಿಮಯ್ ಪುತ್ರನ್ ದ್ವಿತೀಯ ಸ್ಥಾನ ಪಡೆದರು. ಆರುಷಿ, ತನುಷ್, ನಮಿಷ್, ಹವಿಷ್, ಕೌಶಿಕ್, ಅಭಿನವ್, ಅಥರ್ವ ಮತ್ತು ನಾಸಿರ್ ತೃತೀಯ ಸ್ಥಾನ ಪಡೆದರು. ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಮುಖ್ಯ ಶಿಕ್ಷಕಿ ಹರ್ಷ ವ್ಯಕ್ತಪಡಿಸಿದರು. ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Read More