ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ “ಟೆಕ್ ಮಂಥನ್ 6.0” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳೇ ತಯಾರಿಸಿದ ಸಾಫ್ಟ್ವೇರ್ ಅಪ್ಲಿಕೇಶನ್ ಮೂಲಕ ಕಾರ್ಯಕ್ರಮವನ್ನು ವಿನೂತನವಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಂಐಟಿಯ ಕ್ವಾಲಿಟಿ ಎಸೂರೆನ್ಸ್ ನ ಸಹಾಯಕ ನಿರ್ದೇಶಕರಾದ ಡಾ. ಶ್ವೇತಾ ವಿನ್ಸೆಂಟ್ ಅವರು ಮಾತನಾಡಿ “ತಂತ್ರಜ್ಞಾನದೊಂದಿಗೆ ಬುದ್ದಿಯನ್ನು ಮಂಥನ ಮಾಡಿದಾಗ ಮಾತ್ರ ಹೊಸ ಹೊಸ ಆಲೋಚನೆಗಳಿಂದಾಗಿ ಇನ್ನಷ್ಟು ಹೊಸ ಬಗೆಯ ತಂತ್ರಜ್ಞಾನಗಳನ್ನು ಕಂಡುಹಿಡಿಯಲು ಸಾಧ್ಯ” ಎಂದರು. ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಭಾವತಿ ಅವರು ಮಾತನಾಡಿ, “ವಿದ್ಯಾರ್ಥಿಗಳು ಕ್ರಿಯಾಶೀಲತೆಯನ್ನು ಬೆಳೆಸಿಕೊಂಡು ಹೊಸ ಸಾಫ್ಟ್ವೇರ್ ಗಳನ್ನು ಅಭಿವೃದ್ಧಿಗೊಳಿಸಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ” ಎಂದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲಕ ಕಾರಣವಾಗಿದೆ ಎಂದು ಕೆ.ಎಂ.ಎಫ್ ವಿಸ್ತರ್ಣಾಧಿಕಾರಿ ಉಮೇಶ್ ಕುಂದರ್ ಹೇಳಿದರು. ಅವರು ಸೋಮವಾರ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಯಲ್ಲಿ ಯುವ ಸಮೂಹ ಹೈನುಗಾರಿಕೆಯಲ್ಲಿ ಮುನ್ನುಗ್ಗುತ್ತಿರುವುದು ಆವಾಸಸ್ಥಾನ ಬೆಳವಣಿಗೆಯಾಗಿದೆ, ಹೈನುಗಾರಿಕೆ ಲಾಭದಾಯ ಉದ್ಯಮವಾಗಿರಿಸಿಕೊಂಡು ಕುಟುಂಬ ನಿರ್ವಹಣೆ ಸಾಧ್ಯ ಎಂದರು. ನಮ್ಮ ಹಿರಿಯರು ತೋರಿಸಿಕೊಟ್ಟಿದ್ದಾರೆ,ಹೈನುಗಾರಿಕೆ ವಿಧಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಹೆಚ್ಚು ಹೆಚ್ಚು ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡಲು ಸಲಹೆ ನೀಡಿದರ ಅವರು ಈ ಮೂಲಕ ತಾವು ಅಭಿವೃದ್ಧಿಗೊಂಡು ತಮ್ಮ ಸಂಘದ ಹಿತಕಾಯಲು ಕರೆಕೊಟ್ಟರಲ್ಲದೆ ಎಐ ತಂತ್ರಜ್ಞಾನದ ಬಲದಿಂದ ಅದೆಷ್ಟೊ ಯುವ ಸಮೂಹ ಗ್ರಾಮೀಣ ಚಟುವಟಿಕೆಗಳಾದ ಕೃಷಿ ಹೈನೋದ್ಯಮದಲ್ಲಿ ತೊಡಗಿಕೊಳ್ಳುತ್ತಿರುವುದು ಇತ್ತೀಚಿಗಿನ ದಿನಗಳಲ್ಲಿ ಬೆಳಕಿಗೆ ಬಂದಿದೆ,ಕೆ.ಎಂಎಫ್ ಹೈನುಗಾರರ ಹಿತ ಕಾಯಲು ಬದ್ಧವಾಗಿದ್ದು ಸಾಕಷ್ಟು ಯೋಜನೆಗಳನ್ನು ಹೊರತಂದಿದ್ದು ಅದರ ಪ್ರಯೋಜನ ಪಡೆಯಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಪ್ಲೇಸ್ ಮೆಂಟ್ ಘಟಕ ಹಾಗೂ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಮೂರು ದಿನಗಳ ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಸಂಚಾಲಕರಾದ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಸಮಗ್ರವಾಗಿ ಅಭಿವೃದ್ಧಿಯಾಗಬೇಕಾದರೆ ಇಂತಹ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸದಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ, ನಾಯಕತ್ವ ಗುಣ, ಉತ್ತಮ ಸಂವಹನ ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮ್ಯಾಜಿಕ್ ಬಸ್ ಫೌಂಡೇಶನ್ ಕಾರ್ಯಕ್ರಮದ ವ್ಯವಸ್ಥಾಪಕ ಡಾ. ಹರೀಶ್, ಕಾಲೇಜಿನ ಆಡಳಿತ ಅಧಿಕಾರಿ ಡಾ. ಮೋಹನ ಕೆ.ಎನ್. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ್ ಕೆ. ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶದ ಐಕ್ಯತೆ, ಸಮಗ್ರತೆ ಮತ್ತು ರಾಷ್ಟ್ರೀಯತೆಯ ಜಾಗೃತಿಗಾಗಿ ಬೈಂದೂರಿನಲ್ಲಿ “ಹಿಂದು ಜಾಗರಣ ವೇದಿಕೆ”ವತಿಯಿಂದ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆದ ಬೃಹತ್ ಪಂಜಿನ ಮೆರವಣಿಗೆ ಹಾಗೂ ದೇಶಭಕ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಹಿಂದೂ ಸಂಘಟನೆಗಳ ಪ್ರಮುಖರು, ದೇಶಪ್ರೇಮಿ ಯುವಕರು ಹಾಗೂ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ರಾಷ್ಟ್ರೀಯತೆಯ ಸಂದೇಶ ಸಾರಿದ್ದು ಅತ್ಯಂತ ಹೆಮ್ಮೆಯ ವಿಷಯ. ದೇಶದ ಅಖಂಡತೆ ಮತ್ತು ಸ್ವಾಭಿಮಾನವನ್ನು ಎತ್ತಿಹಿಡಿಯಲು ಯುವಜನತೆ ಸದಾ ಮುಂಚೂಣಿಯಲ್ಲಿರಬೇಕು. ಈ ನಿಟ್ಟಿನಲ್ಲಿ ಆಯೋಜಿತವಾದ ಈ ಕಾರ್ಯಕ್ರಮವು ಯುವ ಮನಸ್ಸುಗಳಲ್ಲಿ ದೇಶಭಕ್ತಿಯ ಕಿಚ್ಚನ್ನು ಹೆಚ್ಚಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’ದ ಪ್ರಯುಕ್ತ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವ ಹಾಗೂ ಸಮಾಜದಲ್ಲಿ ರಾಷ್ಟ್ರೀಯತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಭವ್ಯವಾದ ಪಂಜಿನ ಮೆರವಣಿಗೆ ಹಾಗೂ ವಿಶೇಷ ಸಭಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಅಖಂಡ ಭಾರತ ಸಂಕಲ್ಪದ ಮುಖ್ಯ ಉದ್ದೇಶ ವಿಭಜನೆಯ ಕಹಿ ನೆನಪುಗಳನ್ನು ಮೆಲುಕು ಹಾಕುತ್ತಾ, ದೇಶದ ಐಕ್ಯತೆ, ಸಮಗ್ರತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದು ಅಖಂಡ ಭಾರತ ಸಂಕಲ್ಪ ದಿನದ ಮುಖ್ಯ ಉದ್ದೇಶವಾಗಿದೆ. ಭವಿಷ್ಯದ ಯುವಪೀಳಿಗೆಗೆ ದೇಶದ ಇತಿಹಾಸ, ದೇಶಕ್ಕಾಗಿ ತ್ಯಾಗ-ಬಲಿದಾನಗೈದ ಮಹಾನ್ ವೀರರ ಆದರ್ಶಗಳನ್ನು ತಲುಪಿಸುವುದು ಹಾಗೂ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸುವುದು ಇದರ ಪ್ರಮುಖ ಆಶಯವಾಗಿದೆ ಎಂದು ಕೇಶವ್ ಬಂಗೇರ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಿದ್ದ ಶ್ರೀ ಕೇಶವ್ ಬಂಗೇರ ಅವರು ಮಾತನಾಡಿ, ಇಂದಿನ ಜೆನ್-ಜಿ (Gen Z) ಮತ್ತು ಜೆನ್-ಆಲ್ಫಾ (Gen Alpha) ಯುವಪೀಳಿಗೆಯು ಕೆಲವೊಮ್ಮೆ ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಶನಿವಾರದ ಅಂಗವಾಗಿ ವಿವಿಧ ಸಾಂಸ್ಕೃತಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಧಾರ್ಮಿಕ, ಸಮಾಜ ಸೇವೆಯಲ್ಲಿ ಸಮಾಜ ಸೇವಕ ಪಾರಂಪಳ್ಳಿ ಸದಾಶಿವ ಮಧ್ಯಸ್ಥ, ಶೈಕ್ಷಣಿಕ ಹಾಗೂ ಶ್ರೀ ಗುರುರಸಿಂಹ ದೇವಳದಲ್ಲಿ ನಿತ್ಯ ಪೂಜಾ ವಿಧಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚಿತ್ರಪಾಡಿ ಜಗದೀಶ ಉಪಾಧ್ಯಾಯ, ಆಂಜನೇಯ ದೇವಳದಲ್ಲಿ 20 ವರ್ಷಗಳಿಗಿಂತಲೂ ಹೆಚ್ಚು ಸ್ವಚ್ಛತಾ ಸೇವೆಗೈದ ರಾಮಚಂದ್ರ ಆಚಾರ್, ಪಾರಂಪಳ್ಳಿ ರಾಧಾ, ಕರ್ಣ, ಶ್ರೀದೇವಳದಲ್ಲಿ ಅಡಿಪು ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ದೇವಾಡಿಗ ಅವರುಗಳನ್ನು ಸನ್ಮಾನಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಕಾರಂತ ಅವರುಗಳನ್ನು ಅಭಿನಂದಿಸಿ ಸೇವೆಯನ್ನು ಶ್ಲಾಘಿಸಿ ದೇವಸ್ಥಾನವಿರಲಿ ಯಾವುದೇ ಸಂಘ ಸಂಸ್ಥೆಗಳಿರಲಿ ಪ್ರತಿಯೊಬ್ಬರ ಸೇವಾ ಕಾರ್ಯ ಬಹಳ ಮುಖ್ಯವಾಗಿದೆ ಹಾಗೂ ಅವರ ಸೇವಕಾರ್ಯವನ್ನು ಗುರುತಿಸಿ ಗೌರವಿಸಿದಾಗ ಉಳಿದವರಿಗೂ ಕೂಡ ಪ್ರೇರಣಾದಾಯಕವಾಗಿರುತ್ತದೆ ಎಂದು ತಿಳಿಸಿದರು. ದೇಗುಲ ರಾಜ್ಯಾಂಗಣದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾದ ಚಂದ್ರಶೇಖರ ಉಪಾಧ್ಯಾಯರು ಕಾರ್ಯದರ್ಶಿ ಪರಶುರಾಮ ಭಟ್ಟ, ಕೋಶಾಧಿಕಾರಿ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನೆಜಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಸಾಂಪ್ರದಾಯಿಕ ತಿರುವಾತಿರಂ ನೃತ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂತರ ವಿವಿಧ ಮನರಂಜನಾತ್ಮಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಅನುಮೋಲ್, ಆಸಿಫ್ ಹಾಗೂ ಹೀನಾ ಅವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿದರು. ಪವಿತ್ರಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಆಯಿಷಾ ರಫೀದಾ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಊಟವು ಯಜ್ಞ ಸ್ವರೂಪವಾಗಿದ್ದು, ಊಟವನ್ನು ಮಾಡುವಾಗ ಒಮ್ಮೆ ಬಾಳೆಗೆ ಬಡಿಸಿದ ನಂತರ ಅದು ಅಗ್ನಿಯ ಸಂಪರ್ಕಕ್ಕೆ ಬಂದಂತಾಗುತ್ತದೆ. ಜಠರಾಗ್ನಿಯು ಅವರವರ ಕರ್ಮಕ್ಕೆ ಅನುಗುಣವಾಗಿ ಭಿನ್ನವಾಗಿದ್ದು, ಒಬ್ಬರು ಇನ್ನೊಬ್ಬರ ಎಂಜಲನ್ನು ಅಥವಾ ಇನ್ನೊಬ್ಬರ ಬಾಳೆಯಿಂದ ತೆಗೆದುಕೊಂಡು ತಿನ್ನುವುದು ವ್ಯತಿರಿಕ್ತಪರಿಣಾಮವನ್ನು ಉಂಟುಮಾಡುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಅನ್ನಬ್ರಹ್ಮ ಚಾತುರ್ಮಾಸ್ಯದ ಧರ್ಮಸಭೆಯಲ್ಲಿ ಅಗ್ನಿಜಯದ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಒಬ್ಬರ ಎಂಜಲನ್ನು ಇನ್ನೊಬ್ಬರು ತಿನ್ನಬಾರದು ಎಂಬ ನಿಯಮವಿದ್ದು, ಇದು ಆರೋಗ್ಯ ಹಾಗೂ ಆಧ್ಯಾತ್ಮದ ದೃಷ್ಟಿಯಿಂದ ಅನುಸರಣೀಯವಾಗಿದೆ ಎಂದ ಶ್ರೀಗಳು, ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ದಂಪತಿಗಳಿಗೆ ಈ ನಿಯಮದಿಂದ ವಿನಾಯಿತಿ ಇದ್ದು, ಸತಿಪತಿಗಳು ಅರ್ಧನಾರೀಶ್ವರ ತತ್ತ್ವದ ಪ್ರತೀಕ. ದಂಪತಿಗಳು ಎನ್ನುವಾಗ ಅದ್ವೈತವಿರುವುದರಿಂದ ಎಂಜಲನ್ನು ತಿನ್ನಬಾರದು ಎಂಬ ನಿಯಮಕ್ಕೆ ವಿನಾಯಿತಿ ಇದೆ ವಿವರಿಸಿದರು. ಹನುಮಂತನ ಬಾಲಕ್ಕೆ ಲಂಕೆಯಲ್ಲಿ ಬೆಂಕಿ ಹಚ್ಚಿದ ರಾಮಾಯಣದ ಸಂದರ್ಭವನ್ನು ವಿವರಿಸಿದ ಶ್ರೀಗಳು, ಇದನ್ನು ಅರಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆ ಭಾಷೆಯ ಮೂಲಕವೇ ವ್ಯಕ್ತವಾಗುತ್ತದೆ. ನಮ್ಮ ಹಿರಿಯರ ಬಳಸುತ್ತಿದ್ದ ಭಾಷೆಯ ಬಗ್ಗೆ ಹೆಮ್ಮೆ ಹೊಂದಿರುವ ಜೊತೆಗೆ ಅದನ್ನು ಹೆಚ್ಚು ಬಳಸುವ ಹೊಂದಿಕೊಳ್ಳುವುದು ತಪ್ಪಲ್ಲ ಆದರೆ ನಮ್ಮತನವನ್ನು ಮರೆಯಬಾರದು. ಸುಮಾರು ಎರಡು ಸಾವಿರ ಕೇವಲ ಒಂದು ಭಾಷೆಯಲ್ಲ ಅದೊಂದು ಬದುಕು ಎಂದು ಮೂಡುಬಿದಿರೆ ಆಳ್ವಾನ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಅವರು ಕುಂದಾಪುರ ಕನ್ನಡ ಪ್ರತಿಷ್ಠಾನ ಬೈಂದೂರು ವತಿಯಿಂದ ಯಡ್ತರೆ ಜೆ.ಎನ್.ಆರ್. ಹಾಲ್ ಸಭಾಭವನದಲ್ಲಿ ಆದಿತ್ಯವಾರ ʼಕೆಸ್ರಲೊಂದಿನ ಗಮ್ಮತ್ತ್ʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾಜಿ ಸಚಿವ ಕುಂದ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ ಶೆಟ್ಟಿ ಮಾತನಾಡಿ, ಕುಂದಾಪ್ರ ಕನ್ನಡ ಭಾಷೆಗೆ ಅದರದ್ದು ವೈಶಿಷ್ಟ್ಯತೆ ಇದೆ. ಹಾಗಯೇ ಪ್ರದೇಶವಾರು, ಸಮುದಾಯವಾರು ಭಿನ್ನತೆಯೂ ನಮ್ಮ ಭಾಷೆಯ ಬಗ್ಗೆ ತಮ್ಮ ಇದ್ದರಷ್ಟೇ ಸಾಲದು. ಅದು ಇನ್ನಷ್ಟು ವಿಸ್ತಾರಗೊಳ್ಳಬೇಕು ಎಂದರು. ಪ್ರತಿಷ್ಠಾನದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಿಯ ಭಕ್ತರ ಅನುಕೂಲಕ್ಕಾಗಿ ಕೈಗೊಂಡಿರುವ ಪ್ರಮುಖ ಕಾರ್ಯಗಳು ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿದರು. ನಿಲ್ದಾಣದ ಮೇಲ್ದರ್ಜೆ: ಈ ಹಿಂದೆ ಕೇವಲ ಹಾಲ್ಟ್ ಸ್ಟೇಷನ್ ಆಗಿದ್ದ ಬೈಂದೂರು ರೈಲ್ವೇ ನಿಲ್ದಾಣವನ್ನು ₹2.64 ಕೋಟಿ ವೆಚ್ಚದಲ್ಲಿ ನೂತನ ನಿಲ್ದಾಣ, ಗಣಕೀಕೃತ ಟಿಕೆಟ್ ಕಾದಿರಿಸುವಿಕೆ (PRS) ಮತ್ತು ಪ್ಲಾಟ್ಫಾರ್ಮ್ ವಿಸ್ತರಣೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. 50ಕ್ಕೂ ಹೆಚ್ಚು ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ: ಒಂದೂ ಎಕ್ಸ್ಪ್ರೆಸ್ ರೈಲು ನಿಲ್ಲದ ನಿಲ್ದಾಣದಲ್ಲಿ ಇಂದು 50ಕ್ಕೂ ಹೆಚ್ಚು ಎಕ್ಸ್ಪ್ರೆಸ್ ರೈಲುಗಳು ನಿಲುಗಡೆಯಾಗುತ್ತಿದ್ದು, ನೂರಾರು ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉದ್ಯೋಗಾವಕಾಶ ದೊರೆತಿದೆ. ಕೊಲ್ಲೂರು ಕ್ಷೇತ್ರದ ಅಧಿಕೃತ ರೈಲು ನಿಲ್ದಾಣ: ಕೊಲ್ಲೂರು ದೇವಸ್ಥಾನದಿಂದ ಕೇವಲ 27 ಕಿ.ಮೀ. ದೂರದಲ್ಲಿರುವ ಈ ನಿಲ್ದಾಣಕ್ಕೆ ರಾ.ಹೆ-766ಸಿ ಮೂಲಕ ನೇರ ರಸ್ತೆ ಸಂಪರ್ಕವಿದೆ. ಕರ್ನಾಟಕ, ಕೇರಳ, ತಮಿಳುನಾಡು,…
