Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಬಂದರು ಬಳಿ ಮಂಗಳವಾರ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಸಂಸದ ಬಿ. ವೈ. ರಾಘವೇಂದ್ರ ಅವರು ಮಾತನಾಡಿ, ಇಂತಹ ಘಟನೆ ನಡೆದಿರುವುದು ವಿಷಾದನೀಯ. ಈಗಾಗಲೇ ಶಾಸಕರು, ಉಡುಪಿ ಸಂಸದರು ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ನಾನು ಕೂಡ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದೇನೆ. ನಾಳೆ ಮಧ್ಯಾಹ್ನದ ತನಕ ಮೃತದೇಹವನ್ನು ಹುಡುಕುವ ಕೆಲಸ ಮಾಡಲಾಗುತ್ತದೆ. ಆಗಲೂ ಮೃತದೇಹ ಪತ್ತೆಯಾಗದಿದ್ದರೇ, ಹೆಲಿಕಾಪ್ಟರ್‌ ಮೂಲಕ ಪತ್ತೆ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಬೇಕು ಎಂದು ವಿನಂತಿಸಿದರು. ದೋಣಿ ದುರಂತದಲ್ಲಿ ನಾಪತ್ತೆಯಾಗಿರುವ ಪ್ರತಿ ಮೀನುಗಾರರ ಕುಟುಂಬಕ್ಕೆ ಕೇಂದ್ರ ಸರಕಾರದ ಜನತಾ ಪರಿವಾರ್‌ ಯೋಜನೆಯಡಿ ರೂ, 5 ಲಕ್ಷ, ನಾಡದೋಣಿ ಸಂಘಟನೆಯಿಂದ ಸಂಕಷ್ಟ ಪರಿಹಾರ ನಿಧಿಯಿಂದ ರೂ.10 ಲಕ್ಷ ನೀಡಲಾಗುತ್ತಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಪೂರ್ವ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸೋಮವಾರದಂದು ತರಕಾರಿ ದಿನವನ್ನು ಆಚರಿಸಲಾಯಿತು. ಎಲ್‌ಕೆಜಿ ತರಗತಿಯ ಮಕ್ಕಳು ತರಕಾರಿಯ ಕಟೌಟ್‌ಗಳನ್ನು ಧರಿಸಿ ವೇದಿಕೆಯ ಮೇಲೆ ಹೆಜ್ಜೆ ಹಾಕಿದರು. ಯುಕೆಜಿ ತರಗತಿಯ ಮಕ್ಕಳು ತರಕಾರಿ ವ್ಯಾಪಾರಿಗಳ ವೇಷ ಧರಿಸಿ ತರಕಾರಿಗಳ ಮಹತ್ವವನ್ನು ವಿವರಿಸಿದರು. ಈ ಚಟುವಟಿಕೆಯ ಒಂದು ಭಾಗವಾಗಿ ತರಕಾರಿ ಮಾರುಕಟ್ಟೆಯ ಸನ್ನಿವೇಶವನ್ನು ನಿರ್ಮಾಣ ಮಾಡಿ, ಮಾರುಕಟ್ಟೆ ವ್ಯವಹಾರದ ಅನುಭವಾತ್ಮಕ ಕಲಿಕೆಗೆ ಅವಕಾಶ ನೀಡಲಾಯಿತು. ನಂತರ ತರಕಾರಿಗಳನ್ನು ಬಳಸಿ ಸಲಾಡ್ ಮಾಡಿ ಮಕ್ಕಳಿಗೆ ವಿತರಿಸಲಾಯಿತು. ಮಕ್ಕಳು ಈ ಚಟುವಟಿಕೆಯ ಮೂಲಕ ಆರೋಗ್ಯಕರ ಆಹಾರದ ಅವಶ್ಯಕತೆ ಮತ್ತು ತರಕಾರಿಗಳ ಪೋಷಣಾತ್ಮಕ ಮೌಲ್ಯವನ್ನು ಅರಿತರು. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರ ಉಪಸ್ಥಿತಿಯಲ್ಲಿ 39ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್ ಹಾಗೂ ಚಿನ್ಮಯಿ ಆಸ್ಪತ್ರೆಯ ಸುಮಾ ಉಮೇಶ್ ಪುತ್ರನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಸನ್ಮಾನಿಸಿ ಬೆಳ್ಳೆಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. 600ಕ್ಕಿಂತ ಅಧಿಕ ಅಂಕ ಪಡೆದ 60ವಿದ್ಯಾರ್ಥಿಗಳಿಗೆ 10ಗ್ರಾಂ ಬೆಳ್ಳಿಯ ನಾಣ್ಯವನ್ನು, ಡಿಸ್ಟಿಂಕ್ಷನ್ ಪಡೆದ 88 ವಿದ್ಯಾರ್ಥಿಗಳಿಗೆ 8ಗ್ರಾಂ ಬೆಳ್ಳಿಯ ನಾಣ್ಯವನ್ನು ನೀಡಿ ಪ್ರೋತ್ಸಾಹಿಸಲಾಯಿತು ಹಾಗೂ ಪಿ.ಯು.ಸಿ.ಯ ಸಾಧಕರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 14 ಬೋಧಕ ಬೋಧಕೇತರ ಸಿಬ್ಬಂದಿಯವರಿಗೆ ಬೆಳ್ಳಿಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಸಮಾರಂಭದಲ್ಲಿ ಪದವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯಲ್ಲಿ ಮಂಗಳವಾರ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮಗುಚಿ ಮೂವರು ಸಮುದ್ರಪಾಲಾಗಿದ್ದು, ಓರ್ವ ವ್ಯಕ್ತಿ ಈಜಿ ದಡ ಸೇರಿರುವ ಘಟನೆ ನಡೆದಿದೆ. ಘಟನೆಯಲ್ಲಿ ಗಂಗೊಳ್ಳಿ ನಿವಾಸಿಗಳಾದ ಸುರೇಶ್ ಖಾರ್ವಿ (48), ಲೋಹೀತ್ ಖಾರ್ವಿ (34), ಜಗದೀಶ್ ಖಾರ್ವಿ (50) ಎಂಬ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಕಿರುದೋಣಿಯಲ್ಲಿ ನಾಲ್ವರು ಮೀನುಗಾರರು ಎಂದಿನಂತೆ ಮೀನುಗಾರಿಕೆಗಾಗಿ ತೆರಳಿದ್ದು, ಮೀನು ತುಂಬಿಸಿಕೊಂಡು ಗಂಗೊಳ್ಳಿ ಬಂದರಿಗೆ ಹಿಂದಿರುಗುತ್ತಿದ್ದ ವೇಳೆ ಬ್ರೇಕ್ ವಾಟರ್ ತುದಿಯಲ್ಲಿ ಈ ಅವಘಡ ನಡೆದಿದೆ. ಹಿಂದಿರುಗುವಾಗ ಗಾಳಿ ಹಾಗೂ ಅಬ್ಬರ ತೆರೆಗಳ ರಭಸಕ್ಕೆ ದೋಣಿಯಲ್ಲಿದ್ದ ಓರ್ವ ಮೀನುಗಾರ ಕೆಳಕ್ಕೆ ಬಿದ್ದಿದ್ದರು. ಅವರನ್ನು ರಕ್ಷಣೆ ಮಾಡುವ ಸಲುವಾಗಿ ದೋಣಿಯಲ್ಲಿ ತಿರುಗಿಸಲಾಗಿದ್ದು, ಅದೇ ವೇಳೆದ ಅಬ್ಬರದ ಅಲೆಗಳು ಹೊಡೆದು ದೋಣಿ ಮಗುಚಿದೆ. ಘಟನೆಯಲ್ಲಿ ಸುರೇಶ್ ಖಾರ್ವಿ, ಲೋಹೀತ್, ಜಗದೀಶ್ ಎಂಬ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಸಂತೋಷ ಖಾರ್ವಿ (35) ಎಂಬುವವರು ಈಜಿಕೊಂಡು ದಡ ಸೇರಿದ್ದಾರೆ. /ಕುಂದಾಪ್ರ ಡಾಟ್ ಕಾಂ/…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಫ್ ಎಂ ರೇಡಿಯೋಗಳು ಉಡುಪಿ ಜಿಲ್ಲೆಯಲ್ಲೂ ಅತ್ಯಂತ ಉತ್ತಮವಾಗಿ ಕೇಳುಗರಿಗೆ ದೊರೆಯುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರು ಪ್ರಯತ್ನ ಪಡಲಿ ಎಂದು ಎಫ್ ಎಂ ಕೇಳುಗರ ಪರವಾಗಿ ಕುಂದಾಪುರದ ನ್ಯಾಯವಾದಿ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗೃಹ ಮಾಡಿದ್ದಾರೆ. ಹಲವಾರು ಎಫ್ ಎಂ ರೇಡಿಯೋ ಚಾನಲ್ ಗಳು ಮಂಗಳೂರಿನಲ್ಲಿ ಪ್ರಾರಂಭವಾಗಿ ಹಲವು ವರ್ಷಗಳೇ ಕಳೆದರೂ ಸಹ ಉಡುಪಿ ಜಿಲ್ಲೆಯಲ್ಲಿ ಮಂಗಳೂರಿನ ಎಫ್ ಎಂ ರೇಡಿಯೋ ತರಂಗಾಂತರಗಳು ಸುಲಲಿತವಾಗಿ ಕೇಳುಗರಿಗೆ ಸಿಗುತ್ತಿಲ್ಲ. ಬ್ರಹ್ಮಾವರದಲ್ಲಿನ ಮಂಗಳೂರು ಆಕಾಶವಾಣಿ ಕೇಂದ್ರವು ಎಫ್ ಎಂ ರೇಡಿಯೋ ತರಂಗಾಂತರಳನ್ನು ಉಡುಪಿ ಜಿಲ್ಲೆಯ ಕೇಳುಗರಿಗೆ ಸುಲಲಿತವಾಗಿ ಸಿಗುವಂತೆ ಮಾಡಬೇಕು ಹಾಗೂ ಇದರಿಂದ ಉಡುಪಿ ಜಿಲ್ಲೆ ಮಾತ್ರವಲ್ಲದೆ ಪಕ್ಕದ ಉತ್ತರ ಕನ್ನಡ ಜಿಲ್ಲೆಯ ಹಾಗೂ ಶಿವಮೊಗ್ಗ ಜಿಲ್ಲೆಯ ಹಲವು ತಾಲ್ಲೂಕುಗಳಿಗೂ ಇದರಿಂದ ಉಪಯುಕ್ತವಾಗುತ್ತದೆ. ಈ ಬಗ್ಗೆ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕ್ರಮವಹಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗೃಹಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಳ್ನಾಡು ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಕೃಷಿಯ ಅರಿವನ್ನು ಪಡೆದುಕೊಂಡರು . ಹಳ್ನಾಡಿನ ಸಮೀಪದ, ಮೊಗವೀರ ಸಂಘಟನೆಯ ಅಧ್ಯಕ್ಷರು, ಕೃಷಿಕರಾದ ನಾಗೇಶ್ ಮೊಗವೀರ ಇಅವರ ಗದ್ದೆಯಲ್ಲಿ ಶನಿವಾರ ನಡೆದ ಪ್ರಾತ್ಯಕ್ಷಿಕೆಯಲ್ಲಿ 6, 7 ಮತ್ತು 8ನೇ ತರಗತಿ ಮಕ್ಕಳು ಭಾಗವಹಿಸಿ ಕೃಷಿ ಜ್ಞಾನ, ಪ್ರಸ್ತುತ ಕೃಷಿ ಭೂಮಿಯಲ್ಲಿ ರೈತರ ಸಮಸ್ಯೆ, ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳು ಮುಂತಾದ ಮಾಹಿತಿಗಳನ್ನು ತಿಳಿದುಕೊಂಡರು. ಶಾಲಾ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್ ಮುಂಚೂಣಿಯಲ್ಲಿ ಈ ಕೃಷಿ ಪ್ರಾತ್ಯಕ್ಷಿಕೆ ನಡೆಯಿತು. ಆಡಳಿತ ಮಂಡಳಿ ಸದಸ್ಯರು, ಶಿಕ್ಷಕೇತರ ಸಿಬ್ಬಂದಿ, ಹಾಗೂ ಶಿಕ್ಷಕರು ಈ ಪ್ರಾತ್ಯಕ್ಷಿಕೆಯಲ್ಲಿ ಮಕ್ಕಳ ಜೊತೆಯಲ್ಲಿದ್ದರು. ಸುರಿಯುವ ಮಳೆಯ ನಡುವೆಯೂ ನಾಟಿ ಮಾಡುವ ಮೂಲಕ ಮಕ್ಕಳು ಕೃಷಿ ಸಂಭ್ರಮವನ್ನು ಅನುಭವಿಸಿದರು. ಶಾಲಾ ಆಟಪಾಠಗಳ ಜೊತೆ ನೈಜ ಬದುಕಿನಲ್ಲಿ ಕೃಷಿ ಕಲಿಕೆಯನ್ನು ಅರ್ಥಮಾಡಿಸುವ ನಿಟ್ಟಿನಲ್ಲಿ ಅನ್ನ ಮೂಲದ ಅರಿವನ್ನು ಮಕ್ಕಳಲ್ಲಿ ತಿಳಿಸಲು ತುಳಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಆನ್ಲೈನ್ ತರಗತಿಗಳಿಗೆ ಹೋಲಿಸಿದರೆ ವಿದ್ಯಾರ್ಥಿ ಶಿಕ್ಷಕರ ನೇರ ಮುಖಾಮುಖಿ ಸಂವಹನ  ಸಾಧ್ಯವಾಗುವ ಭೌತಿಕ ತರಗತಿಗಳು ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚು ಪೂರಕವಾದ ಧನಾತ್ಮಕ ಪರಿಣಾಮವನ್ನು ಬೀರುತ್ತದೆ ಮತ್ತು ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಬದ್ಧತೆಯಿಂದ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿ.ಎಸ್‌.ವಿ.ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರಿನ ಅರ್ಜುನ್ ಅಕಾಡೆಮಿಯ ಸಹಯೋಗದಲ್ಲಿ ಆರಂಭಗೊಂಡ ಸಿಇಟಿ ಮತ್ತು ನೀಟ್ ತರಬೇತಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಅರ್ಜುನ್ ಅಕಾಡೆಮಿಯ ಪ್ರದೀಪ್ ಎನ್. ಎಸ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ. ಎ., ವಿಜ್ಞಾನ ವಿಭಾಗದ ಉಪನ್ಯಾಸಕಿಯರಾದ ಪವಿತ್ರ, ರಮ್ಯ ಮತ್ತು ಪಲ್ಲವಿ ಉಪಸ್ಥಿತರಿದ್ದರು. ನರೇಂದ್ರ ಎಸ್. ಗಂಗೊಳ್ಳಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಕೊಡಮಾಡುವ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಬೆಲ್ಟ್ ಮತ್ತು ಹೆಚ್ಚುವರಿ ಕಲಿಕೆಗೆ ಅಗತ್ಯವಾದ ಪಠ್ಯ ಪುಸ್ತಕಗಳ ವಿತರಣೆ ಕಾರ್ಯಕ್ರಮವು ಸೋಮವಾರ ಜರುಗಿತು. ಉಚಿತ ಕೊಡುಗೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದ ಕೃಷ್ಣಮೂರ್ತಿ ಮಂಜರು, ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದು ಸಚ್ಚಾರಿತ್ರ್ಯವಂತರಾಗಿ ಎಂದು ಶುಭಹಾರೈಸಿದರು. ಟ್ರಸ್ಟಿನ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಮಾತನಾಡಿ, ಶಾಲೆಯ ಏಳಿಗೆಗೆ ಕೃಷ್ಣಮೂರ್ತಿ ಮಂಜರ ಕೊಡುಗೆಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಾಗೇಂದ್ರ ಉಡುಪ, ಸದಸ್ಯರಾದ ಸತೀಶ್, ಆಶಾ, ಆಶಾರಾಣಿ, ಶ್ರೀಧರ್, ನಯನಾ ಮತ್ತು ಆಶಾ, ಪ್ರಭಾರ ಮುಖ್ಯ ಶಿಕ್ಷಕ ರಾಜು ಎನ್ ಉಪಸ್ಥಿತರಿದ್ದರು. ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಇಂದಿರಾ ಸ್ವಾಗತಿಸಿ, ಶಿಕ್ಷಕಿ ಭಾರತಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಂಘಗಳ ಶ್ರೇಯಸ್ಸಿಗೆ ಒಗ್ಗಟ್ಟು ಅಗತ್ಯ. ಈ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಮೂಲಕ ಯಶಸ್ಸು ಸಾಧ್ಯ ಎಂದು ಕೋಟ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟ ಸಿ.ಎ. ಬ್ಯಾಂಕ್‌ನ ಬಿ.ಸಿ.ಹೊಳ್ಳ ಸಭಾಭವನ ಇಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಮಂಗಳೂರು ಇದರ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿ ಸಾದರಪಡಿಸುವ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಕುಲದ ಸೌಂದರ್ಯ ಹೆಚ್ಚಿಸಲು ಟೈಲರ್ಸಗಳ ಪಾತ್ರ ಬಹುಮುಖ್ಯವಾದದ್ದು. ಅಂತಹ ಟೈಲರ್ಸ್‌ಗಳ ಬೇಡಿಕೆಗಳನ್ನು ಸರಕಾರದ ಜನಪ್ರತಿನಿಧಿಗಳು ಆಲಿಸಬೇಕಾಗಿದೆ, ವೃತ್ತಿ ಕಾಯಕದ ನಡುವೆ ಗೌರವಿಸುವ ಗುರುತಿಸುವ, ಸಹಾಯಹಸ್ತ ಚಾಚುವ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ಸಭೆಯ ಅಧ್ಯಕ್ಷತೆಯನ್ನು ಕೆ.ಎಸ್.ಟಿ.ಎ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿ ಅಧ್ಯಕ್ಷ ಕೃಷ್ಣ ದೇವಾಡಿಗ ವಹಿಸಿದ್ದರು. ಟೈಲರ್ ವೃತ್ತಿ ಕಾಯಕದ ಕುಟುಂಬದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ನೀಡಲಾಯಿತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರತಿ ಹಂತದಲ್ಲಿ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೇಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಫರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್‌ನಡಿ ಆರ್.ಎಸ್.ಕೆ ಅಥವಾ ಸಿಟಿಝನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಕನಿಷ್ಠ 1 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದಿರುವ ಹಾಗೂ ರೆವಿನ್ಯೂ ದಾಖಲೆಯ…

Read More