Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಗನವಾಡಿ ಶಾಲೆಯೊಳಗೆ ಮದ್ಯಪಾನ ನಡೆಸುತ್ತಿದ್ದವರನ್ನು ಪ್ರಶ್ನಿಸಿದ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಗುಲ್ವಾಡಿ ಗ್ರಾಮದ ಕರ್ಕಿ ಅಂಗನವಾಡಿ ಶಾಲೆ ಆವರಣದಲ್ಲಿ ನಡೆದಿದೆ. ಹಟ್ಟಿಯಂಗಡಿ ಗ್ರಾಮ ನಿವಾಸಿ ವಿನಯ್ (32) ಅವರು ಫೆ.8ರಂದು ಬೆಳಿಗ್ಗೆ ಸುಮಾರು 1 ಗಂಟೆಯ ವೇಳೆಗೆ ಕರ್ಕಿ ಅಂಗನವಾಡಿ ಶಾಲೆಯ ಸಮೀಪದ ಯಕ್ಷಿ ಗ್ರೌಂಡ್‌ನಲ್ಲಿ ಆಯೋಜಿಸಲಾಗಿದ್ದ ಕ್ರಿಕೇಟ್ ಪಂದ್ಯಾಟ ಮುಗಿದ ನಂತರ, ವಿನಯ್ ಹಾಗೂ ಅವರ ಸ್ನೇಹಿತರಾದ ಲೋಕೇಶ್ ಮತ್ತು ಸುದರ್ಶನ ಸ್ವತ್ತುಗಳನ್ನು ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಶಾಲೆಯ ಒಳಭಾಗದಲ್ಲಿ ಆರೋಪಿತ ಪ್ರಸಾದ್ ಹಾಗೂ ಮತ್ತೊಬ್ಬ ವ್ಯಕ್ತಿ ಕುಳಿತುಕೊಂಡು ಮದ್ಯಪಾನ ಮಾಡುತ್ತಿದ್ದುದನ್ನು ಗಮನಿಸಿದ ಲೋಕೇಶ್ ಅವರು, “ಸಣ್ಣ ಮಕ್ಕಳು ಕಲಿಯುವ ಅಂಗನವಾಡಿ ಶಾಲೆಯೊಳಗೆ ಮದ್ಯಪಾನ ನಡೆಸುವುದು ಸೂಕ್ತವಲ್ಲ, ಬೇರೆ ಸ್ಥಳಕ್ಕೆ ಹೋಗಿ” ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಆರೋಪಿತ ಪ್ರಸಾದ್, ಕೈಯಲ್ಲಿದ್ದ ಬಿಯರ್ ಬಾಟಲಿಯನ್ನು ಅಲ್ಲಿಯೇ ಒಡೆದು, ಅದರಿಂದ ಲೋಕೇಶ್ ಅವರ…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಯುವ ವಿಭೂಷಣ” ರಾಜ್ಯ ಮಟ್ಟದ ಪ್ರಶಸ್ತಿಗೆ ಬೈಂದೂರು ಭಾಗದ ಸಮಾಜಮುಖಿ ಮತ್ತು ಧಾರ್ಮಿಕ ಮುಖಂಡರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಅವರು ಭಾಜನರಾಗಿದ್ದಾರೆ. ​ಬೆಂಗಳೂರಿನ ರಾಜಾಜಿನಗರದಲ್ಲಿ ಶನಿವಾರದಂದು ನಡೆದ ಈ ಪ್ರಶಸ್ತಿ ಪ್ರದಾನ ಸಮಾರಂಭವು ಸಾಧನೆ ಮತ್ತು ಸಂಸ್ಕೃತಿಗೆ ಸಂದ ಗೌರವವಾಗಿದೆ. ಬೈಂದೂರು ಭಾಗದಲ್ಲಿ ತಮ್ಮದೇ ಆದ ಜನಪ್ರಿಯತೆ ಹಾಗೂ ಛಾಪನ್ನು ಮೂಡಿಸಿರುವ ಪ್ರದೀಪ್ ಶೆಟ್ಟಿ ಅವರ ಸಮಾಜಮುಖಿ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು ಅವರು ಈ ಪ್ರಶಸ್ತಿಯನ್ನು ಘೋಷಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಮುಖಂಡರಾದ ಗುಣರಂಜನ್ ಶೆಟ್ಟಿ, ಜೈ ಕರ್ನಾಟಕ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷರಾದ ಪೂಜಾ ಶೆಟ್ಟಿ, ಶೈಲೇಶ್ ಪೂಜಾರಿ ಹಾಗೂ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಂದಿ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ ಆರು ದಿನಗಳ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮ ಸಂಪನ್ನಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಾಂದಿ ಫೌಂಡೇಶನ್‌ನ ಜಂಟಿ ಸಂಪರ್ಕ ಅಧಿಕಾರಿ ಪ್ರೀತಿ ಲೇಖಾ ಸಮಾರೋಪ ನುಡಿಗಳನ್ನಾಡಿದರು. ತರಬೇತುದಾರ ದಾಮೋದರ್ ತಮ್ಮ ಅನಿಸಿಕೆ ಹಂಚಿಕೊಂಡರು. ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು. ಅಂತಿಮ ಬಿಸಿಎ ವಿದ್ಯಾರ್ಥಿನಿ ರಿಶಿತಾ ಪ್ರಾರ್ಥಿಸಿ, ಬಿಬಿಎ ವಿದ್ಯಾರ್ಥಿನಿ ಅಕ್ಷಿತಾ ಸ್ವಾಗತಿಸಿ, ಅಂತಿಮ ಬಿ.ಕಾಂ. ಮಿಥಿಲೇಶ್ ನಿರೂಪಿಸಿ, ಸನ್ಮಿತಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಹಳೇ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಕ್ಷೇತ್ರದ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕೇಂದ್ರ ಪುರಸ್ಕೃತ ಯೋಜನೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೇ ನಿಗದಿತ ಕಾಲ ಮಿತಿಯಲ್ಲಿ ಮುಕ್ತಾಯಗೊಳಿಸಲು ಸೂಚನೆ ನೀಡಿದರು. ಮರವಂತೆ ಹೊರ ಬಂದರು ಕಾಮಗಾರಿ:ರೂ.85 ಕೋಟಿ ಮೊತ್ತದ ಕಾಮಗಾರಿಯು ಪ್ರಸ್ತುತ ಪ್ರಗತಿಯಲ್ಲಿದ್ದು, ಬ್ರೇಕ್ ವಾಟರ್ ನಿರ್ಮಿಸಲು ಅಗತ್ಯವಿರುವ ವಿವಿಧ ಗಾತ್ರದ ಗ್ರಾನೈಟ್ ಕಲ್ಲುಗಳನ್ನು ಶೇಖರಿಸಲಾಗುತ್ತಿದೆ. ಟೆಟ್ರಾಪಾಡ್ ಕಾಸ್ಟಿಂಗ್, ಸ್ಲೋಪಿಂಗ್ ಹಾಗೂ ಟೋ ಬರ್ಮ್ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಅಧಿಕಾರಿಗಳು ನೀಡಿದ್ದು, ಕಾಮಗಾರಿಯನ್ನು ವೇಗಗೊಳಿಸಲು ಹಾಗೂ ಪೂರಕ ಕಾಮಗಾರಿಗಳಿಗೆ ಅನುದಾನದ ಪ್ರಸ್ತಾವನೆಯೊಂದಿಗೆ ಸೂಕ್ತ ವರದಿಯನ್ನು ಸರಕಾರಕ್ಕೆ ಸಲ್ಲಿಸಲು ಸೂಚಿಸಿದರು. ಗಂಗೊಳ್ಳಿ ಬಂದರಿನ ಆಧುನೀಕರಣ ಕಾಮಗಾರಿ ಪ್ರಾರಂಭ:ಕೇಂದ್ರ ಪುರಸ್ಕೃತ ಯೋಜನೆಯಾದ ಗಂಗೊಳ್ಳಿ ಬಂದರು ಆಧುನಿಕರಣ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು ಹರಾಜು ಪ್ರಾಂಗಣ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗಾರ್ಗಿದೇವಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಭರತನಾಟ್ಯ ಪ್ರವೀಣೆ ವಿದ್ಯಾರ್ಥಿನಿ ಗಾರ್ಗಿದೇವಿಯ ಈ ಅಮೋಘ ಸಾಧನೆಯನ್ನು ಶ್ಲಾಘಿಸಿ, ಕಾಲೇಜಿನ ಸಂಚಾಲಕರಾದ ಬಿ‌. ಎಂ. ಸುಕುಮಾರ್ ಶೆಟ್ಟಿ, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂಧಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ‌.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರ್ಕಡ ಗೆಳೆಯರ ಬಳಗ ಇದರ 35ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ದತ್ತಿನಿಧಿ ವಿತರಣೆ ಸನ್ಮಾನ, ವಿಕಲಚೇತನ ಸಹಾಯ ನಿಧಿ ವಿತರಣೆ, ಮತ್ತು ಅಶಕ್ತರ ಸಹಾಯನಿಧಿ ವಿತರಣೆ ಕಾರ್ಯಕ್ರಮವು ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ಪಾರ್ವತಿ ಹೊಳ್ಳ ರಂಗ ಮಂಟಪದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ವಹಿಸಿದ್ದರು. ಯಕ್ಷಗಾನ ಕಲಾವಿದ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ ಬಂಗೇರ, ವಿವೇಕ ಬಲಕಿಯರ ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಕೆ. ಜಗದೀಶ ಹೊಳ್ಳ ಕಾರ್ಕಡ, ನ್ಯೂಕಾರ್ಕಡ ಶಾಲಾ ಮುಖ್ಯೋಪಾಧ್ಯ ಎನ್. ಪ್ರ್ರಭಾಕರ ಕಾಮತ್ ಹಾಗೂ ನಿವೃತ್ತ ಅಧ್ಯಾಪಕ ಕೆ. ನಾರಾಯಣ ಆಚಾರ್ಯ , ಹವ್ಯಾಸಿ ಯಕ್ಷಗಾನ ಕಲಾವಿದ ಕೆ. ಐತ ಮತ್ತು ಮಹಾ ಪೋಷಕ ವಿಘ್ನರಾಜ ಭಟ್ಟ ಅವರುಗಳನ್ನು ಸನ್ಮಾನಿಸಲಾಯಿತು. ಸಾಲಿಗ್ರಾಮದ ಹೊಸ ಬದುಕು ಆಶ್ರಮಕ್ಕೆ ಧನ ಸಹಾಯ ಪರಿಕರವನ್ನು, ಉದ್ಯಮಿ  ಕಿದಿಯೂರು ಉದಯಕುಮಾರ್ ಶೆಟ್ಟಿ ಆಶ್ರಮದ ಮುಖ್ಯಸ್ಥ ವಿನಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯವು ಓದಿನಲ್ಲಿ ಹೆಚ್ಚಿನ ಏಕಾಗ್ರತೆಯನ್ನು ಸಾಧಿಸಲು ನೆರವಾಗುತ್ತದೆ ಎಂದು ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷ ಭಾಸ್ಕರ್ ಹೆಚ್‌.ಜಿ. ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಇಲ್ಲಿನ ಎಸ್‌.ವಿ ಕಾಮರ್ಸ್ ಕ್ಲಬ್ ಮತ್ತು ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಆಶ್ರಯದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿನ ವಿಶೇಷ ಪರೀಕ್ಷಾ ಮಾರ್ಗದರ್ಶನ ಶಿಬಿರದ ಕಾರ್ಯಕ್ರಮ ‘ಪಯಣ’ವನ್ನು ಉದ್ಘಾಟಿಸಿ ಮಾತನಾಡಿದರು. ಮಾರ್ಗದರ್ಶನವನ್ನು ನೀಡಿದ ನರೇಂದ್ರ ಎಸ್. ಗಂಗೊಳ್ಳಿ ಮಾತನಾಡಿ, ಪರೀಕ್ಷೆ ಎಂದರೆ ಭಯಪಡುವುದಾಗಲಿ ಅಥವಾ ಸಂಭ್ರಮ ಪಡುವುದಾಗಲಿ ಸಲ್ಲದು. ಇದೊಂದು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಜೀವನದ ಒಂದು ಭಾಗ. ನಮ್ಮ ಸ್ಪರ್ಧೆ ಎನ್ನುವುದು ಅಂಕಗಳೊಂದಿಗೆ ಇರಲಿ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸರಸ್ವತಿ ವಿದ್ಯಾಲಯ ಪದವಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದೇಶದಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಜಾಗತಿಕ ಮಟ್ಟದಲ್ಲಿ 50 ಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಜಾಗತಿಕ ಪ್ರವಾಸೋದ್ಯಮ ತಾಣ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಸ್ಥಿರತೆಯನ್ನು ಮುನ್ನೆಲೆಗೆ ತರುವುದು ಮತ್ತು ನೈಸರ್ಗಿಕ, ಸಾಂಸ್ಕೃತಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ ಪರಿಸರ ಸ್ನೇಹಿಯಾಗಿ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವ ಗುರಿಯೊಂದಿಗೆ ಡೆಸ್ಟಿನೇಷನ್ ಡೆವಲಪ್‌ಮೆಂಟ್ ಸ್ಕೀಮ್ ಅನ್ನು ಜಾರಿಗೆ ತಂದಿದೆ ಎಂದರು. ಜಿಲ್ಲೆಯಲ್ಲಿ ಈ ಯೋಜನೆಗೆ ಕೋಡಿ- ಕನ್ಯಾನ, ಕೋಡಿ ಕುಂದಾಪುರ, ಬಾರ್ಕೂರು ಪೋರ್ಟ್ ಪ್ರದೇಶ ಹಾಗೂ ತ್ರಾಸಿ-ಮರವಂತೆ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ ಒತ್ತೆ ಇಡುವುದು ಬೇಡ. ಹೋಬಳಿಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಸಮಾಜದ ಸಾಮಾಜಿಕ, ಶೈಕ್ಷಣಿಕ ಪ್ರಗತಿಯಲ್ಲಿ ಸಹಭಾಗಿಗಳೋಣ. ಯುವ ಸಂಘಟನಾ ಶಕ್ತಿಯ ಮೂಲಕ ಮತ್ತೊಮ್ಮೆ ಹೆಮ್ಮಾಡಿ ಘಟಕ ಬಲಿಷ್ಠ ಘಟಕವಾಗಿ ಮೂಡಿಬರಲಿ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು.ಅವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ನಡೆದ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾರ್ಚ್ 1ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣದ ಸಲುವಾಗಿ ಸಾಮೂಹಿಕ ಗುರು ಪಾದ ಕಾಣಿಕೆ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಅದರಲ್ಲಿ ತಾವೆಲ್ಲರೂ ಪಾಲ್ಗೊಳ್ಳುವ ಮೂಲಕ ಸಮಾಜದ ಒಗ್ಗಟ್ಟನ್ನು ಬಿಂಬಿಸಬೇಕು. ಅದೇ ರೀತಿ ಬಗ್ವಾಡಿಯಲ್ಲೂ ಕೂಡಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಮತ್ತು ಮುಖ್ಯ ಶಿಕ್ಷಕರ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ವೃದ್ಧಿಗಾಗಿ ನಡೆದ ಜಿಲ್ಲಾ ಮಟ್ಟದ ಮುಖ್ಯ ಶಿಕ್ಷಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಬರುತ್ತಿರುವ ಉಡುಪಿ ಜಿಲ್ಲೆಯು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ ನೂರರಷ್ಟು ಫಲಿತಾಂಶ ಪಡೆದು ತಮ್ಮ ಸಾಧನೆಯನ್ನು ಮುಂದುವರೆಸಿಕೊಂಡು ಹೋಗುವುದರೊಂದಿಗೆ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು. ಎಸ್.ಎಸ್.ಎಲ್.ಸಿ ಯಲ್ಲಿ ಗುನಾತ್ಮಕ ಫಲಿತಾಂಶ ತರುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದ್ದು, ಫಲಿತಾಂಶ ವೃದ್ಧಿಗೊಳಿಸುವ ಶಿಕ್ಷಣ ಇಲಾಖೆಯ…

Read More