ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ, ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೀಡಲಾಗುವುದು. ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ/ ಸಲ್ಲಿಸುತ್ತಿರುವ ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ಪ್ರಸ್ತಾವನೆಗಳನ್ನು ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ, ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿಯನ್ನು ಆಗಸ್ಟ್ 25 ರ ಒಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬಹುದಾಗಿದೆ. ಪ್ರಸ್ತಾವನೆಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನೇಪಾಳ ರಂಗಶೀಲ ಸ್ಟೈಡಿಯಂನಲ್ಲಿ ಜು.26 – 27ರಂದು ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟ ದಿನೇಶ ಗಾಣಿಗ ಅವರು ಪಾಲ್ಗೊಳ್ಳಲಿದ್ದು ವೇಗ ನಡಿಗೆ, ಗುಂಡೆಸೆತ, ಲಾಂಗ್ ಜಂಪ್ನಲ್ಲಿ ಸ್ಪರ್ಧಿಸಲಿದ್ದಾರೆ. ದಿನೇಶ್ ಅವರು ಈ ಹಿಂದೆ ಥೈಲ್ಯಾಂಡ್ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸ್ನಲ್ಲಿ ದ್ವಿತೀಯ ಬೆಳ್ಳಿ ಪದಕ ಮತ್ತು ವೇಗ ನಡಿಗೆಯಲ್ಲಿ ತೃತೀಯ – ಕಂಚು ಪದಕ ಹಾಗೂ 2021 ಸಿಂಗಾಪುರ, 2022 ಮಲೇಷಿಯಾ ಹಾಗೂ 2023ರಲ್ಲಿ ಶ್ರೀಲಂಕಾದ ಅಂತಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ : ರೋಟರಿ ಒಂದು ಅಂತಾರಾಷ್ಟ್ರೀಯ ಸಂಸ್ಥೆ ಅದರ ಕಾರ್ಯಚಟುವಟಿಕೆಗಳು ಸಮಾಜದ ಪ್ರತಿ ಹಳ್ಳಿ ಹಳ್ಳಿಗಳನ್ನು ತಲುಪುತ್ತಿದೆ. ಅವರ ಸಾಮಾಜಿಕ ಕಾರ್ಯಗಳು ಅತ್ಯಮೂಲ್ಯವಾದದ್ದು ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಗುರುವಾರ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಹಮ್ಮಿಕೊಂಡ ಹಸಿರು ಅಭಿಯಾನದಡಿ ಕೋಟದ ಪಂಚವರ್ಣ ಸಂಘಟನೆಗೆ ಗಿಡ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಕೋಟ ಸಿಟಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಿದೆ. ಇವರ ಪ್ರಸ್ತುತ ಹಸಿರು ಅಭಿಯಾನ ಪಂಚವರ್ಣದಂತಹ ಸಂಸ್ಥೆಗೆ ಗಿಡ ನೀಡಿ ಅರ್ಥಪೂರ್ಣಗೊಳಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಪಂಚವರ್ಣ ಸಂಘಟನೆಗೆ ನೂರುಕ್ಕೂ ಅಧಿಕ ರಕ್ತಚಂದನ ಗಿಡಗಳನ್ನು ಆನಂದ್ ಸಿ ಕುಂದರ್ ಸಮ್ಮುಖದಲ್ಲಿ ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಪ್ರಕಾಶ್ ಹಂದಟ್ಟು ಹಸ್ತಾಂತರಿಸಿದರು. ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ 3182 ವಲಯ 2 ರ ಸಹಾಯಕ ಗವರ್ನರ್ ಶ್ಯಾಮಸುಂದರ್ ನಾಯರಿ ಶುಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ ವಿಷಯದ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಹಾಗೂ ವಾಣಿಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿ ಪರ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ವೃತ್ತಿ ನಿರತ ಕುಶಲ ಕರ್ಮಿಗಳಿಗೆ ಸ್ವ ಉದ್ಯೋಗ ಸಂಬಂಧ ಸುಧಾರಿತ ಉಪಕರಣಗಳನ್ನು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿತರಿಸಿದರು. ಶಾಸಕರು ಕಾರ್ಯಕ್ರಮದಲ್ಲಿ ಮಾತನಾಡಿ, ಬೈಂದೂರು ಕ್ಷೇತ್ರವು ಸಾಕಷ್ಟು ಗ್ರಾಮೀಣ ಪ್ರದೇಶಗಳನ್ನು ಹೊಂದಿದ್ದು ವಿವಿಧ ವೃತ್ತಿಪರರು ಸ್ವ ಉದ್ಯೋಗ ಮೂಲಕ ತಮ್ಮ ಜೀವನಮಟ್ಟ ಸುಧಾರಿಸಿ ಕೊಂಡು ಗೌರವಯುತ ಜೀವನ ನಡೆಸುತ್ತಿದ್ದಾರೆ ಹಾಗೂ ತಮ್ಮ ಮುಂದಿನ ಪೀಳಿಗೆಯ ಶೈಕ್ಷಣಿಕ ಭವಿಷ್ಯ ಸೇರಿದಂತೆ ಕುಟುಂಬದ ಸುಭದ್ರ ಬದುಕಿಗೆ ಶ್ರಮಿಸುತ್ತಿದ್ದಾರೆ. ಇಂತಹ ವರ್ಗವು ಹೆಚ್ಚು ಹೆಚ್ಚು ಗ್ರಾಮೀಣ ಭಾಗದಲ್ಲಿ ಏಳಿಗೆ ಕಾಣುವುದರಿಂದ ಇಡೀ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಪಡೆದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ತಾವು ಕಲಿತ ಶಾಲೆಯಲ್ಲಿ ನಿಕಟವಾದ ಸಂಪರ್ಕವನ್ನು ಇಟ್ಟುಕೊಂಡು ಕಳೆದ ಬಹಳ ವರ್ಷಗಳಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನೂ ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗುತ್ತದೆ. ಈ ಕಾರ್ಯದಿಂದಾಗಿ ಮತ್ತಷ್ಟು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದೆ ಬರಲು ಉತ್ತೇಜಿಸುತ್ತಿರುವ ಇವರ ಕಾರ್ಯ ಮೆಚ್ಚುಗೆ ಪಡುವಂತದ್ದು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇದರ ಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಚೇತನಾ ಸಭಾಭವನದಲ್ಲಿ ಶುಕ್ರವಾರ ಜರುಗಿದ 2002-03ನೇ ಸಾಲಿನ ಸ್ನೇಹ ಸಂಗಮ ಹಳೆ ವಿದ್ಯಾರ್ಥಿ ಸಂಘದ 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಎಸ್ಡಿಎಮ್ಸಿ ಸದಸ್ಯ ಅಶೋಕ ಜಿ., ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ ಅಧಕ್ಷ ಗೀರಿಶ್ ಪೂಜಾರಿ, ಸದಸ್ಯರಾದ ರವಿ ದೇವಾಡಿಗ, ಯೋಗೀಶ್ ದೇವಾಡಿಗ, ರಾಘವೇಂದ್ರ ಎಸ್ ಬೀಜಾಡಿ ಉಪಸ್ಥಿತರಿದ್ದರು. ಕಲಿಕೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆರಾಡಿ ಗ್ರಾಮದ ಚಪ್ಪರಕ/ ಕೋಣ್ಬೇರು ಎಂಬಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಬೈಕ್ ಸವಾರ ರೋಧಿ ಲಾಲ್ ಎಂದು ತಿಳಿದುಬಂದಿದೆ. ಬೈಕ್ ಸವಾರ ಕೆರಾಡಿ ಕಡೆಯಿಂದ ಕಾರಿಬೈಲು ಕಡೆಯಿಂದ ಕೆರಾಡಿ ಕಡೆಗೆ ಗುಂಡು ಎಂಬವರು ಚಲಾಯಿಸಿಕೊಂಡು ಲಾರಿಗೆ ಎದುರುಗಡೆಯಿಂದ ಡಿಕ್ಕಿ ಹೊಡೆದು ರಸ್ತೆಯಲ್ಲಿ ಬೈಕ್ ಸಹಿತ ಬಿದ್ದಿದ್ದು ಲಾರಿಯ ಚಕ್ರ ಬೈಕ್ ಚಾಲಕ ರೋಧಿ ಲಾಲ್ ತಲೆಯ ಮೇಲೆ ಹತ್ತಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸೇನೇಶ್ವರ ದೇವಾಸ್ಥಾನದ ಅರ್ಚಕರಾದ ಕೆರೆಕಟ್ಟೆ ಸೀತಾರಾಮ ಅಡಿಗ (72) ಅವರು ಗುರುವಾರ ರಾತ್ರಿ ಅಸೌಖ್ಯದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊಂಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ ದಾಸ್ತಾನು ಲಭ್ಯವಿರುತ್ತವೆ. ಯೂರಿಯಾ ರಸಗೊಬ್ಬರದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 1,510 ಮೆ.ಟನ್ ಇದ್ದು, 2035 ಮೆ.ಟನ್ ಪೂರೈಕೆಯಾಗಿ, 792 ಟನ್ ವಿತರಣೆಯಾಗಿ 1243 ಟನ್ ದಾಸ್ತಾನು ಇರುತ್ತದೆ. ಯೂರಿಯಾ ರಸಗೊಬ್ಬರವನ್ನು ಭತ್ತದ ಕೃಷಿಯಲ್ಲಿ ಮೂಲ ಹಾಗೂ ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಪೂರೈಕೆ ಇದ್ದು, ಯಾವುದೇ ಕೊರತೆ ಇರುವುದಿಲ್ಲ. ಭೌತಿಕ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾವನ್ನು…
