ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯ ಸಭಾಂಗಣದಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಬುಧವಾರ ಜರಗಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್. ಇಬ್ರಾಹಿಂ ಸಾಹೇಬ್ ದೀಪ ಬೆಳಗಿಸುವ ಮೂಲಕ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ನ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಚೇತನಾ ಇಂಟರಾಕ್ಟ್ ಪದಗ್ರಹಣ ಕಾರ್ಯಕ್ರಮವನ್ನು ನೆರವೆರಿಸಿದರು. ಐರೋಡಿ ಕರ್ಣಾಟಕ ಬ್ಯಾಂಕ್ ಪ್ರಭಂದಕ ಮಂಜುನಾಥ ಶೇಟ್ ಶಾಲಾ ವಿದ್ಯಾರ್ಥಿ ಮಾರ್ಗದರ್ಶಿಯನ್ನು ಬಿಡುಗಡೆಗೊಳಿಸಿದರು. ಯಕ್ಷ ಗುರು ಪ್ರತೀಶ್ ಕುಮಾರ್ ಹಾಗೂ ವಿದ್ಯಾರ್ಥಿನಿ ಕು.ಭೂಮಿಕಾ ಹಾಗೂ ಕು.ಸುಪ್ರಭಾ ರವರಿಂದ ಯಕ್ಷಗಾನ ಪ್ರಾತ್ಯಕ್ಷಿತೆಯೊಂದಿಗೆ ಯಕ್ಷಗಾನ ತರಬೇತಿ ತರಗತಿಯು ಉದ್ಘಾಟನೆಗೊಂಡಿತು. ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಶಾಲಾ ಸರಕಾರದ ನೂತನ ಮಂತ್ರಿಮಂಡಲಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಬಿ .ಭರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಫಾರ್ಚುನ್ ಕಾಲೇಜಿನ ಮುಖ್ಯಸ್ಥ ತಾರಾನಾಥ ಶೆಟ್ಟಿ, ಚೇತಾ ಪ್ರೌಢಶಾಲಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಧಾನಸಭಾ ಸಮಿತಿಯ ಮೂಲಕ ಅಮೇರಿಕಾದ ಬೋಸ್ಟನ್ಗೆ ಅಧ್ಯಯನ ಪ್ರವಾಸದ ಅವಕಾಶ ಪಡೆದಿದ್ದಾರೆ. ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಗಳ ಆಶ್ರಯದಲ್ಲಿ ಅಮೇರಿಕಾದ ಬೋಸ್ಟನ್ ನಗರದಲ್ಲಿ ಶಾಸಕಾಂಗ ಶೃಂಗಸಭೆ 2025 ನಡೆಯಲಿದ್ದು, ಈ ಶೃಂಗಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಶೃಂಗಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪಂಚ ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ತಗ್ಗಿಸುವುದರೊಂದಿಗೆ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಸಮಾಜದಲ್ಲಿ ಈ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇದ್ದ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಸರಕಾರ ಕಳೆದ ಎರಡು ವರ್ಷಗಳ ಹಿಂದೆ ಜಾರಿಗೆ ತರುವುದರೊಂದಿಗೆ ನಿರಂತರವಾಗಿ ಯೋಜನೆಗಳನ್ನು ಜನಸಾಮಾನ್ಯರಿಗೆ ಎರಡು ವರ್ಷದಿಂದಲೂ ತಲುಪಿಸುತ್ತಿದೆ. ಈ ಬಾರಿಯ ಬಜೆಟ್ನಲ್ಲಿ 51,034 ಕೋಟಿ ರೂ. ಮೊತ್ತದ ಅನುದಾನವನ್ನು ಮೀಸಲಿಟ್ಟಿದೆ. ಈ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವಂತೆ ಪ್ರತಿಯೊಂದು ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳ ಕುರಿತು ದೂರುಗಳು ಬಂದಲ್ಲಿ ಕೂಡಲೇ ಅವುಗಳಿಗೆ ಸ್ಪಂದಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜಧಾನಿ ಬೆಂಗಳೂರಿನ ʼಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)ʼ ವರ್ಷಂಪ್ರತಿ ಆಯೋಜಿಸುವ ʼಕುಂದಾಪ್ರ ಕನ್ನಡ ಹಬ್ಬʼ ಈ ಸಲ ಜುಲೈ 26 ಮತ್ತು 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದ್ದಾರೆ. ʼಕುಂದಾಪ್ರ ಕನ್ನಡ ಹಬ್ಬ-2025ʼರ ಕುರಿತು ಗುರುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಆರನೇ ಕುಂದಾಪ್ರ ಕನ್ನಡ ಹಬ್ಬವಾಗಿದ್ದು, ಈ ಸಲ ಇದನ್ನು ಶನಿವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಕುಂದಾಪ್ರ ಕನ್ನಡ ಅಧ್ಯಯನ ಪೀಠವನ್ನು ಸಿಎಂ, ಸಭಾಪತಿ ಯು.ಟಿ.ಖಾದರ್, ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ ಮುಂತಾದವರು ಜೊತೆಯಾಗಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು. ನಾಲ್ಕು ವರ್ಷಗಳ ಹಿಂದೆ ಕುಂದಾಪ್ರ ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದ ಗುಣಮಟ್ಟ ವ್ಯಕ್ತಿತ್ವದ ನಿರ್ಮಾಣಕ್ಕೆ ಸಹಾಯಕವಾಗಬೇಕು. ಅಂತಹ ಶಿಕ್ಷಣ ಆಂತರ್ಯದ ಶಕ್ತಿಯನ್ನು ಉದ್ದೀಪನಗೊಳಿಸಿ ಜ್ಞಾನ ಸಂಪಾದಿಸುವಂತಾಗಬೇಕಾದರೆ ಪಠ್ಯದೊಂದಿಗೆ ಪಠ್ಯಪೂರಕ ಚಟುವಟಿಕೆಗಳು ಮುಖ್ಯ. ಅವುಗಳಿಂದ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ. ಈ ರೀತಿಯ ಚಟುವಟಿಕೆಗಳು ವರ್ತಮಾನದ ತುರ್ತು ಎಂದು ಉಡುಪಿಯ ಎಮ್ಜಿಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಕೆ. ಸುರೇಂದ್ರನಾಥ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಆಯೋಜಿಸಿದ 4 ದಿನಗಳ ಪೂರ್ವ ಪರಿಚಯ ‘ಪ್ರೇರಣಾ’ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಪ್ರಸ್ತಾಪಿಸಿದರು. ವಾಣಿಜ್ಯ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಶೈಕ್ಷಣಿಕ ನಿಕಾಯಕ ಶ್ರೀ ಗಿರಿರಾಜ್ ಭಟ್ ಉಪಸ್ಥಿತರಿದ್ದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಜನರಿಗೆ ಅನಗತ್ಯ ಆರ್ಥಿಕ ಹೊರೆಯನ್ನು ಹೊರೆಸುವ ಯೋಜನೆ. ಇದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಹೆಸರಿನಲ್ಲಿ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸಲು ಸಬ್ಸಿಡಿ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಕೇಂದ್ರ ಸರ್ಕಾರ ಜಾಹಿರಾತುಗಳನ್ನು ನೀಡುತ್ತಿದ್ದು ಇದೊಂದು ಅನುಪಯುಕ್ತ ಹಾಗೂ ಜನಸಾಮಾನ್ಯರನ್ನು ಆರ್ಥಿಕ ಹೊರೆಯನ್ನು ಹೇರುವ ಯೋಜನೆಯಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯ ಮೂಲಕ ಇನ್ನೂರು ಯೂನಿಟ್ ತನಕ ಉಚಿತ ವಿದ್ಯುತ್ ನೀಡುತ್ತಿದ್ದು ರಾಜ್ಯದ ಸುಮಾರು 80% ಕ್ಕಿಂತ ಹೆಚ್ಚಿನ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಹೆಸರಿಗೆ ಮಾತ್ರ ಉಚಿತ ಆದರೆ ಸಬ್ಸಿಡಿ ಹೆಸರಿನಲ್ಲಿ ಫಲಾನುಭವಿಗಳಿಗೆ ಸಾಲ ನೀಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಕಾರ್ಯಕ್ರಮದಲ್ಲಿ ಮಾತನಾಡಿ, ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ ಅಡಿಪಾಯವನ್ನು ಹಾಕುತ್ತದೆ ಎಂಬುದನ್ನು ಉಲ್ಲೇಖಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಆದರೆ ಜೆ.ಇ.ಇ., ಎನ್.ಎ.ಟಿ.ಎ., ಎನ್.ಡಿ.ಎ., ಬಿ. ನಂತಹ ರಾ?ಮಟ್ಟದ ಪರೀಕ್ಷೆಗಳಿಗೆ ಬಂದಾಗ ವಿದ್ಯಾರ್ಥಿಗಳು ಹಿಂದುಳಿಯುತ್ತಾರೆ. ಪಿ.ಯು.ಸಿ. ಮಟ್ಟದಲ್ಲಿ ಫಲಿತಾಂಶಗಳನ್ನು ಹೆಚ್ಚಿಸಲು ಗಣಿತದ ಅಡಿಪಾಯವನ್ನು ಬಲಪಡಿಸಲು ಉಪನ್ಯಾಸಕರು ಕಾರ್ಯ ಪ್ರವೃತರಾಗಬೇಕೆಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ, ಶಿಕ್ಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯದ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಚ್ಡಿಎಫ್ಸಿ ಮ್ಯೂಚುಯಲ್ ಫಂಡ್ ರಿಲೇಷನ್ಶಿಪ್ ಮ್ಯಾನೇಜರ್ ಸುದೀಪ್ ಆರ್ ಅವರು ಮಾತನಾಡಿ, ಗಳಿಕೆಯನ್ನು ಖರ್ಚು ಮಾಡುವ ಮೊದಲು ಸಮರ್ಪಕ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಉಳಿಕೆಯನ್ನು ಜೀವನದ ಒಂದು ಭಾಗವಾಗಿ ರೂಪಿಸಿಕೊಂಡು ಉಳಿಕೆಯ ಮೂಲಕ ಗಳಿಕೆಯನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದರು ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಮಂಗಳೂರು ವಿಭಾಗದ ಸೀನಿಯರ್ ಮ್ಯಾನೇಜರ್ ಧನ್ಯ ಬಿ. ಅವರು ವಿದ್ಯಾರ್ಥಿಗಳಿಗೆ ಉಳಿಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಇಂಟಿಗ್ರೇಟೆಡ್ ಎಂಟರ್ಪ್ರೈಸಸ್ ಜನಾರ್ಧನ ಪೂಜಾರಿ ಮತ್ತು ಆದರ್ಶ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮಪಂಚಾಯತ್ ಕೊರಗ ಸಮುದಾಯದ ಬಗೆಗಿನ ಕಾಳಜಿ ಅವರಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ಬುಮುಖ್ಯ ಪಾತ್ರ ವಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ನ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ. ಇಬ್ರಾಹಿಂಪುರ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಪರಿಸರದ ಎಂಟು ಕೊರಗ ಕುಟುಂಬಕ್ಕೆ ಮನೆ ನಿರ್ಮಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಮಹೇಶ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ಎಚ್. ಪ್ರಮೋದ್ ಹಂದೆ, ವಾಸು ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹಾಗೂ ಕೊರಗ ಕುಟುಂಬದ ಫಲಾನುಭವಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನ ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾ.ವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪ್ರಥಮ ವರ್ಷದ ಬಾಕಿ ಉಳಿದಿರುವ ಸೀಟುಗಳ ಪ್ರವೇಶಾತಿಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿ.ಯು.ಸಿ ಗೆ ಸಮನಾಂತರ ಕೋರ್ಸು ಮಾಡಿದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ:0821-2438931 ಅನ್ನು ಕಚೇರಿ ವೇಳೆಯಲ್ಲಿ ಅಥವಾ ವೆಬ್ಸೈಟ್ htts://uucms.karnataka.gov.in ಅಥವಾ https://www.cavamysore.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
