ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀಕ್ಷಾ ಅವರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಶಾಸಕರ ನಿಧಿಯಿಂದ ಶ್ರವಣ ಸಾಧನವನ್ನು ಶನಿವಾರದಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಗುಣಮಟ್ಟದ ಶ್ರವಣ ಸಾಧನವನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸುವರ್ಣ ಯೋಜನಾ ಸಹಾಯಕರು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾಧಿಕಾರಿ ಶಿವಾಜಿ, ಮಾತು ಮತ್ತು ಶ್ರವಣ ತಜ್ಞರು ನೆಲೆಶ ಫಲಾನುಭವಿಗಳಾದ ಪ್ರತಿಕ್ಷ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಕೋಡಿಂಗ್ ಮತ್ತು ರೊಬೊಟಿಕ್ಸ್ ತತ್ವದ ಆಧಾರದಲ್ಲಿ ತಯಾರಿಸಿದ ಎಲೆಕ್ಟ್ರಾನಿಕ್ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಐದನೇ ತರಗತಿಯಿಂದ ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಒಟ್ಟು 40 ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವವನ್ನು ಪ್ರಶಂಸಿಸಿದರು. ಶಿಕ್ಷಕ ಹಾಗೂ ಪೋಷಕರ ಸಹಕಾರದಿಂದ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು. ಶಾಲಾ ಪ್ರಾಂಶುಪಾಲ ನಿತಿನ್ ಡಿ’ಆಲ್ಮೇಡಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋಡಿಂಗ್ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನದ ಕಲಿಕೆ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಿದೆ ಎಂದು ತಿಳಿಸಿದರು. ವಿಜ್ಞಾನ ಮಾದರಿ ಪ್ರದರ್ಶನವನ್ನು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೆರೆದಿಡಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿ, ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಟಿಂಕರ್ ಸ್ಪೇಸ್ ಸಂಸ್ಥೆಯ ತರಭೇತುದಾರರಾದ ಪ್ರಣಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ನಾಟ್ಯ ರಂಗ ರಿ. ಹೈದರಾಬಾದ್ ಇದರ ವತಿಯಿಂದ ಇತ್ತೀಚಿಗೆ ಹೈದರಾಬಾದ್ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕನ್ನಡ ನಾಟ್ಯ ರಂಗ ರಿ. ಇದರ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ರತ್ನಾಕರ ರೈ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು, ಜಯರಾಮ ಶೆಟ್ಟಿ, ಅಣ್ಣಪ್ಪ ಶೆಟ್ಟಿ ಮಲ್ಯಾಡಿ ಮತ್ತು ನಾಟ್ಯರಂಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾ.15 ರಿಂದ 24 ರವರೆಗೆ ನಡೆಯಲಿರುವ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಶನಿವಾರ ಬೆಳಿಗ್ಗೆ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ದೇಗುಲದ ಸಮಿತಿ ಸದಸ್ಯರಾದ ಧನಾಕ್ಷಿ, ಸುರೇಂದ್ರ ಶೆಟ್ಟಿ, ಯು. ರಾಜೇಶ್ ಕಾರಂತ್, ಮಹಾಲಿಂಗ ನಾಯ್ಕ್, ಸುಧಾ ಕೆ., ಅಭಿಲಾಷ್ ಪಿ.ವಿ., ರಘುರಾಮ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ಮಾರ್ಚ್ 15ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮ ಮಾರ್ಚ್ 24ರ ತನಕ ಜರುಗಲಿದೆ. ಮಾರ್ಚ್ 22ರ ಬೆಳಿಗ್ಗೆ ರಥಾರೋಹಣ ಸಂಜೆ ಮನ್ಮಹಾರಥೋತ್ಸವ ಜರುಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಖಾರ್ವಿಕೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಹಾಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ದೈವ ದೇವರುಗಳ ಪುನರ್ ಪ್ರತಿಷ್ಠೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಬುಧವಾರ ಪ್ರಾರ್ಥನೆಯೊಂದಿಗೆ ಬ್ರಹ್ಮಕಲಶೋತ್ಸವ ಹಾಗೂ ಪುನರ್ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಗುರುವಾರ ಪ್ರತಿಷ್ಠಾ ಹೋಮ, ಕಲಾ ಹೋಮ, ಶಿಖರ ಪ್ರತಿಷ್ಠೆ, ಬಿಂಬಗಳ ಪ್ರತಿಷ್ಠೆ, ಪ್ರಸನ್ನ ಪೂಜೆ, ಮಧ್ಯಾಹ್ನ ಹಾಗುಳಿ ದರ್ಶನ, ಕೊರಗಜ್ಜ ದರ್ಶನ, ಸಂಜೆ ಸುದರ್ಶನ ಹೋಮ, 108 ಬ್ರಹ್ಮಕಲಶ ಮಂಡಲ ಪೂಜೆ ಮೊದಲಾದ ಕಾರ್ಯಕ್ರಮಗಳು ಜರಗಿದವು. ಶುಕ್ರವಾರ ಬೆಳಿಗ್ಗೆ ಬ್ರಹ್ಮಕಲಶಾಭಿಷೇಕ, ವೃಷಭ ಲಗ್ನ ಸುಮೂಹೂರ್ತದಲ್ಲಿ ಸಪರಿವಾರ ಹಾಗುಳಿ ದೈವಕ್ಕೆ ಬ್ರಹ್ಮ ಕಲಶ ಅಭಿಷೇಕ, ಪಲ್ಲ ಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಬಿ. ಶ್ರೀಧರ ಭಟ್ ತಂತ್ರಿಗಳು ನೇತೃತ್ವದಲ್ಲಿ ಪುರೋಹಿತರು ಹಾಗೂ ಅರ್ಚಕರಿಂದ ಸಂಪನ್ನಗೊಂಡಿತು. ದೈವಸ್ಥಾನದ ಜೀಣೋದ್ಧಾರ ಸಮಿತಿ ಅಧ್ಯಕ್ಷ ಅಚ್ಯುತ ಕೆ., ಗೌರವಾಧ್ಯಕ್ಷ ರಾಜೀವ ಕೆ., ಪ್ರಧಾನ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಳ್ಳೂರು ನಿವಾಸಿ ಪುರೋಹಿತ ರಮೇಶ್ (59) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಂಜೆ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ಮನೆಯವರು ಕೆಳಗಿಳಿಸಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದು, ದಾರಿ ಮಧ್ಯ ದಲ್ಲಿ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ಘೋಷಿಸಿ ದ್ದಾರೆ. ಕಳೆದ 1 ವರ್ಷದಿಂದ ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದ ಅವರು, ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ ಎಂದು ಸಹೋದರ ಸುಬ್ರಹ್ಮಣ್ಯ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಾ.18ರಂದು ‘ಅಂಗಾರಕ ಸಂಕಷ್ಟಿ’ ನಡೆಯಲಿದೆ. ಈ ಪ್ರಯುಕ್ತ ಬೆಳಗ್ಗೆ 5 ಗಂಟೆಗೆ ಪ್ರಾತಪೂಜೆ, 11.30ಕ್ಕೆ ಪಂಚಾಮೃತ ಅಭಿಷೇಕ ಪೂರ್ವಕ ಉಪನಿಷತ್ ಕಲಶಾಭಿಷೇಕ, 12 ಗಂಟೆಗೆ ‘ಸಹಸ್ರನಾರಿಕೇಳ ಗಣಹೋಮದ ಪೂರ್ಣಾಹುತಿ’ ಸತ್ಯ ಗಣಪತಿ ವೃತ ಕಲೋಕ್ತ ಪೂಜಾ ಸಹಿತ ಮಹಾಪೂಜೆ ನಡೆಯಲಿದೆ. ರಾತ್ರಿ 8 ಗಂಟೆಗೆ ಸಾಮೂಹಿಕ ಮಹಾ ರಂಗಪೂಜಾ ಹಾಗೂ ರಜತ ಪಲ್ಲಕ್ಕಿ ಮತ್ತು ರಜತ ರಥೋತ್ಸವ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 5.30ರಿಂದ ಗಣೇಶ್ ಬೀಜಾಡಿ ಹಾಗೂ ಬಳಗದವರಿಂದ ‘ದಾಸ ಗಾನಾಮೃತ’ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗಿನಾರೇಯಣರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡಿದರು. ಕೈವಾರ ತಾತಯ್ಯರು ತಮ್ಮ ಕಾಯಕದಿಂದಲೇ ಬದುಕನ್ನು ಕಟ್ಟಿಕೊಂಡು, ಭಾಷಾ ಹಾಗೂ ಬರಹಗಳ ಮೂಲಕ ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅನ್ಯರ ಬದುಕಿನ ಏಳಿಗೆಗಾಗಿ ಶ್ರಮಿಸಿದವರು. ಆಧ್ಯಾತ್ಮ ಚಿಂತನ ಮಂಥನ ನಡೆಸುವುದರಲ್ಲಿ ಕೈವಾರ ತಾತಯ್ಯರು ಚಾಣಾಕ್ಷತೆ ಹೊಂದಿದ್ದರು ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಸರ್ಕಾರವು ಸಂತರ, ವಚನಕಾರರ, ಶರಣರ ಹಾಗೂ ಇಂತಹ ಸಾಧಕರ ಜಯಂತಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ – 2025, ಅಂತರಕಾಲೇಜು ತಂತ್ರಜ್ಞಾನ ಸಂಬಂಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ. ವಿ. ಎಸ್. ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದಂತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ. ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಜಾಗ್ರತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 247000 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ ಅಡಿಯಲ್ಲಿ ಗುರಿ ಹೊಂದಲಾಗಿದ್ದು, ಇವರೆಗೆ 2,14,000 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ನಳ ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.…
