Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಕಲಾತ್ಮಕ ಏಕಲ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್ (7ನೇ ತರಗತಿ) ಹಾಗೆಯೇ ತಾಳಾತ್ಮಕ ಯುಗಲ್ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಅಮೂಲ್ಯ (7ನೇ ತರಗತಿ) ಇವರ ಜೋಡಿ ಪ್ರಥಮ ಸ್ಥಾನಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಭಾರತದ ಕರಾಟೆ ಚಾಂಪಿಯನ್‌ಶಿಪ್ ಕೋರಮಂಗಲದ ಒಳಾಂಗಣ ಕ್ರೀಡಾಂಗಣ ಬೆಂಗಳೂರಿನಲ್ಲಿ ಆಯೋಜನೆ ಗೊಂಡಿತ್ತು.  ಸೌತ್ ಝೋನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತಿಯಲ್ಲಿ ಸಮಯಕ್ಕೆ ಸರಿಯಾಗಿ ಸಭೆಗಳನ್ನು ನಡೆಸದೇ ಸಾರ್ವಜನಿಕರಿಗೆ ಅನಾನುಕೂಲ ಮಾಡುತ್ತಿರುವುದನ್ನು ಖಂಡಿಸಿ ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ‌ನೇತೃತ್ವದಲ್ಲಿ ಮಂಗಳವಾರ ಉಪ್ಪುಂದ ಗ್ರಾಮ ಪಂಚಾಯತ್ ಎದುರುಗಡೆ ಪ್ರತಿಭಟನೆ ನಡೆಯಿತು. ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತವು ಕಳೆದ ಕೆಲವು ತಿಂಗಳುಗಳಿಂದ ಸಭೆಗಳನ್ನು ನಡೆಸದೇ ಇರುವ ಕಾರಣ ಸಾರ್ವಜನಿಕರ ತೀರಾ ಅವಶ್ಯ ಇರುವ ಹಲವಾರು ಅರ್ಜಿಗಳು ವಿಲೇವಾರಿಯಾಗದೇ ತೊಂದರೆಯಾಗುತ್ತಿದ್ದು ಗ್ರಾಮ ಪಂಚಾಯತ್ ಆಡಳಿತದ ಈ ರೀತಿಯ ಸಾರ್ವಜನಿಕ ವಿರೋಧಿ ಧೋರಣೆಯನ್ನು ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿ ಖಂಡಿಸಿತು. ಈ ಸಾರ್ವಜನಿಕ ವಿರೋಧಿ ಧೋರಣೆಗಳನ್ನು ಸರಿಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಸಭೆಗಳನ್ನು ನಡೆಸಿ ಸಾರ್ವಜನಿಕರ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿ ಉಪ್ಪುಂದ ಗ್ರಾಮಸ್ಥರು ಹಾಗೂ ಸಾರ್ವಜನಿಕ ಸ್ನೇಹಿ ಆಡಳಿತ ನೀಡುವಂತೆ ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತಕ್ಕೆ ಈ ಪ್ರತಿಭಟನೆಯ ಮೂಲಕ ಎಚ್ಚರಿಸಲಾಯಿತು. ಮುಂದಿನ ದಿನಗಳಲ್ಲಿ ಈ ರೀತಿಯ ಸಾರ್ವಜನಿಕ ವಿರೋಧಿ ಧೋರಣೆಗಳು ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್ – 2025’ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ದಿನವನ್ನು ಸ್ಮರಣೀಯವಾಗಿಸಲು ವಿವಿಧ ಆಟಗಳು ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ಪ್ರಮುಖ ಅಂಶವಾಗಿ ಪ್ರಥಮ ಬಿಸಿಎ ವಿದ್ಯಾರ್ಥಿ ಮೇಘರಾಜನನ್ನು ‘ರಾಜಕುಮಾರ’ ಹಾಗೂ ಪ್ರಥಮ ಬಿಸಿಎ ವಿದ್ಯಾರ್ಥಿನಿ ಮೌಲ್ಯ, ‘ರಾಜಕುಮಾರಿ’ ಎಂದು ಆರಿಸಲ್ಪಟ್ಟರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರು, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ, ಬಿಸಿಎ ವಿಭಾಗದ ಮುಖ್ಯಸ್ಥರು, ಉಪನ್ಯಾಸಕ ವೃಂದದವರು, ತೃತೀಯ ಬಿಸಿಎ ಮತ್ತು ದ್ವಿತೀಯ ಬಿಸಿಎ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದ್ವಿತೀಯ ಬಿಸಿಎ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಧರ್ಮಸ್ಥಳ ಕ್ಷೇತ್ರ ಕೇವಲ ತೀರ್ಥಕ್ಷೇತ್ರ ಮಾತ್ರವಾಗಿರದೆ ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರವಾಗಿದೆ. ಇಂತಹ ಪವಿತ್ರ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಿ ಅಪಪ್ರಚಾರಕ್ಕೆ ತೊಡಗಿರುವುದು ಸಮಸ್ತ ಹಿಂದೂಗಳ ಭಾವನೆಗಳಿಗೆ ಮಾಡಿದ ಅನ್ಯಾಯ. ಖಾವಂದರ ಮತ್ತು ಕ್ಷೇತ್ರದ ವಿರುದ್ಧ ಮಾಡುತ್ತಿರುವ ಅಪಪ್ರಚಾರ ಖಂಡನೀಯ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಬೈಂದೂರು ರೋಟರಿ ಭವನದಲ್ಲಿ ಬೈಂದೂರು ತಾಲೂಕು ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ನಡೆದ ಜನಾಗ್ರಹ ಸಭೆ ಹಾಗೂ ಜಾಥಾ ಉದ್ಘಾಟಿಸಿ ಮಾತನಾಡಿದರು. ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ರಾಜ್ಯದ ಕೋಟ್ಯತರ ಭಕ್ತರು ಖಾವಂದರು ಮತ್ತು ಧರ್ಮಸ್ಥಳ ಕ್ಷೇತ್ರದ ಸಮಾಜಮುಖಿ ಕಾರ್ಯದ ಜತೆಗಿದ್ದಾರೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡು ವವರನ್ನು ಎಂದಿಗೂ ಸಹಿಸುವುದಿಲ್ಲ ಎಂದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಧರ್ಮಸ್ಥಳ ಪ್ರಕರಣದ ಗೊಂದಲಗಳು ಮತ್ತು ಅಪಪ್ರಚಾರಗಳಲ್ಲಿ ತೊಡಗಿಸಿಕೊಂಡಾಗ ರಾಜ್ಯ ಸರಕಾರ ಎಸ್ ಐಟಿ ತನಿಖೆಗೆ ಆದೇಶಿಸಿ ದಕ್ಷ ಅಧಿಕಾರಿಗಳನ್ನು ನೇಮಿಸಿರುವುದರಿಂದ ಅಪಪ್ರಚಾರ ಮಾಡುವವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರ ಪ್ರದೇಶದಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ಅರ್ಹ 18 ವರ್ಷ ಮೇಲ್ಪಟ್ಟ ಯುವಕ ಹಾಗೂ ಯುವತಿಯರಿಂದ ವೆಬ್‌ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ 50 ಲಕ್ಷ ರೂ. ಉತ್ಪಾದನಾ ಚಟುವಟಿಕೆ ಮತ್ತು 20 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುವ ಘಟಕಗಳಿಗೆ ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ ವರೆಗೆ ಹಾಗೂ ನಗರ ಪ್ರದೇಶದಲ್ಲಿ ಸ್ಥಾಪಿಸುವ ಘಟಕಗಳಿಗೆ ಯೋಜನಾ ವೆಚ್ಚದ ಮೇಲೆ ಶೇ.15 ರಿಂದ 25 ರ ವರೆಗೆ ಸಹಾಯಧನ ನೀಡಲಾಗುವುದು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ರ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷದಿಂದ 250 ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವು-ನೋವುಗಳು ಉಂಟಾಗಿವೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಳೆದ ಎರಡು ತಿಂಗಳಿಂದ ರಸ್ತೆ ಅಪಘಾತದಲ್ಲಿ 8 ಕ್ಕೂ ಹೆಚ್ಚು ಜನ ಅಪಘಾತದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರು ಟೋಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಡಿ.ಎ.ಆರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್. ಐ ಶಂಕರ್ ಅವರು ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ . ಬೆಂಗಳೂರಿನ ರಾಜಭವನದಲ್ಲಿ ಆ. 30ರಂದು ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ – 2025 ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪದಕ ಪ್ರದಾನ ಮಾಡಿದರು. ಕರ್ತವ್ಯದ ಜೊತೆಯಲ್ಲಿ ಕ್ರೀಡಾಭ್ಯಾಸದಲ್ಲಿ ತೊಡಗಿಕೊಂಡು ಅಂತರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಇದುವರೆಗೆ 57 ಪದಕ ಪಡೆದಿರುವ ಅವರು ತಮ್ಮ ಕ್ರೀಡಾ ಸಾಧನೆಯ ಮೂಲಕ ಇಲಾಖೆಯ ಘನತೆಯನ್ನು ಹೆಚ್ಚಿಸಿರುತ್ತಾರೆ. 2014ರಲ್ಲಿ ಮಲೇಶಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ 4×100, 4×400 ಮೀಟರ್ ರಿಲೇ ಓಟದಲ್ಲಿ ಚಿನ್ನ ಹಾಗೂ 100, 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗಳಿಸಿರುತ್ತಾರೆ. ಅಲ್ಲದೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವು ಪದಕಗಳಿಗೆ ಭಾಜನರಾಗಿರುತ್ತಾರೆ. 26 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಸುವರ್ಣ ಮಹೋತ್ಸವ ಸಂಭ್ರಮ ಈ ಹಿನ್ನಲ್ಲೆಯಲ್ಲಿ ಸತತ 9ದಿನಗಳ ವಿಜೃಂಭಣೆಯ ಕಾರ್ಯಕ್ರಮಗಳು ಕೋಟದ ಅಮೃತೇಶ್ವರೀ ದೇಗುಲದಲ್ಲಿ ಗೀತಾನಂದ ದರ್ಬಾರ್ ವೈಭವದ  ಸಭಾಂಗಣದಲ್ಲಿ ದೊಡ್ಡ ಗಣೇಶನಿಗೆ ವಿಶೇಷ ಪೂಜೆ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ. ಪ್ರತಿದಿನ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗಿಯಾಗುತ್ತಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗುತ್ತಿದೆ. ಇದೇ ಸೆ.4ರಂದು ಗಣೇಶೋತ್ಸವ ಸಮಾಪನಗೊಳ್ಳಲಿದ್ದು ಕೋಟದ ರಾಷ್ಟ್ರೀಯ ಹೆದ್ದಾರಿ ಮೆರವಣಿಗೆ ಮೂಲಕ ಪಡುಕರೆ ಕಡಲಲ್ಲಿ ಗಣೇಶ ಲೀನಗೊಳ್ಳಲಿದ್ದಾನೆ. ಇಲ್ಲಿನ ಸಮಿತಿಯ ಗೌರವಾಧ್ಯಕ್ಷ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಕನಸಿನ ಯೋಜನೆಯಂತೆ ಈ ಬಾರಿಯ ಸುವರ್ಣ ಮಹೋತ್ಸವವನ್ನು ಪರಿಸರಸ್ನೇಹಿ ಗಣೇಶೋತ್ಸವವಾಗಿಸುವ ನಿಟ್ಟಿನಲ್ಲಿ ದಿನಂಪ್ರತಿ ಗಣೇಶೋತ್ಸವಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಹಸಿರು ಗಿಡ ನೀಡುವ ಹಾಗೂ ಬಟ್ಟೆ ಚೀಲ ವಿತರಿಸಿ, ಪ್ಲಾಸ್ಟಿಕ್ ಮುಕ್ತ ಗಣೇಶೋತ್ಸವವಾಗಿಸಲು ಪಣತೊಟ್ಟು ಗೀತಾನಂದದ ಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ.ಇದಕ್ಕಾಗಿ ಈಗಾಗಲೇ 5ಸಾವಿರ ಗಿಡಗಳನ್ನು ಕಾಯ್ದಿರಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್-I, ಗ್ರೂಪ್-II ಮತ್ತು ಸಿ.ಎಂ.ಎ. ಇಂಟರ್‌ಮೀಡಿಯೆಟ್ ಗ್ರೂಪ್-I ಜೂನ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್-I ರಲ್ಲಿ ಶ್ರೇಯಾ, ಪೂಜಾ ಶೆಟ್ಟಿ, ಆಯುಶ್, ಪೃಥ್ವೀಶ್ ಹೆಬ್ಬಾರ್, ಗ್ರೂಪ್-II ರಲ್ಲಿ ನಿಖಿತಾ ಆರ್. ಪೂಜಾರಿ ಹಾಗೂ ಯಶವಂತ್‌ ಸಿ.ಎಂ.ಎ. ಇಂಟರ್‌ಮೀಡಿಯೆಟ್ ಗ್ರೂಪ್-I ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.  

Read More