Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಉದ್ಯೋಗದಲ್ಲಿ ಇಚ್ಛಾಶಕ್ತಿ ಹಾಗೂ ಪ್ರಾಮಾಣಿಕತೆ ಅತೀ ಮುಖ್ಯವಾದ ಅಂಗಗಳು. ಜೊತೆಗೆ ಶಿಸ್ತು ಪಾಲನೆ ಹಾಗೂ ಸಮಯ ಪ್ರಜ್ಞೆಯನ್ನೂ ಅಳವಡಿಸಿಕೊಂಡಾಗ ಯಶಸ್ವೀ ಉದ್ಯಮಿಯಾಗಿ ಇತರರಿಗೂ ಮಾದರಿಯಾಗಿ ಬೆಳೆಯಬಹುದು. ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು. ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದು ಹಿರಿಯ ರಂಗ ಕಲಾವಿದ, ನಿರ್ದೇಶಕ ಕಂಚಿಕಾನ್ ರವೀಂದ್ರ ಕಿಣಿ ಹೇಳಿದರು. ಅವರು ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಮಂಗಳವಾರ ನಡೆದ ಬೈಂದೂರು ವಲಯದ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 14ನೇ ವಾರ್ಷಿಕ ಮಹಾಸಭೆಯ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಸದಸ್ಯರ ಸಂಖ್ಯೆ ಹೆಚ್ಚಾದಂತೆ ಸಂಘಟನೆಯ ತಾಕತ್ತು ಬಲಗೊಳ್ಳುತ್ತದೆ. ಈ ಸಂಘಟನೆಯಲ್ಲಿ ಉದ್ಯಮದ ಮಾಲೀಕನೇ ನೌಕರನಾಗಿ ದುಡಿಯುತ್ತಿರುತ್ತಾನೆ. ಧ್ವನಿ ಮತ್ತು ಬೆಳಕು ಇಲ್ಲವಾದರೆ ಯಾವುದೇ ಸಮಾರಂಭಗಳು ಕಾರ್ಯಗಳು ಯಶಸ್ವಿಯಾಗದು. ಈ ನಿಟ್ಟಿನಲ್ಲಿ ಸಂಘದ ಸದಸ್ಯರೆಲ್ಲರೂ ಪರಸ್ಪರ ಪೈಪೋಟಿಗಿಳಿಯದೇ ಧನಾತ್ಮಕ ಚಿಂತನೆಗಳ ಮೂಲಕ ಸೌಹಾರ್ದಯುತವಾಗಿ ಸಮಾಜಕ್ಕೂ ನ್ಯಾಯ ಸಿಗುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ‌ ಜಾಲತಾಣದ ಜನಪ್ರಿಯ ಪೋರ್ಟಲ್ ಗಳಲ್ಲೆಲ್ಲ ಬಳಕೆದಾರ ಸ್ನೇಹಿ ತಂತ್ರಾಂಶ‌ ಭಾಷೆ ಪೈತಾನ್ ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಗಳನ್ನೇ ಹೆಚ್ಚಾಗಿ ಬಳಸುತ್ತಾರೆ ಎಂದು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ‌ ಡೀನ್ ಎಕಾಡೆಮಿಕ್ಸ್ ಸಹಾಯಕ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಅವರು ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ‌‌ ಕಂಪ್ಯೂಟರ್ ವಿಭಾಗ ಆಯೋಜಿಸಿದ ‘ಪೈತಾನ್ ಓರಿಯಂಟೇಶನ್ ‘ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ಕಂಪ್ಯೂಟರ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಾಗುತ್ತಿರುವ ಕಲ್ಪನಾತೀತ ಬೆಳವಣಿಗೆ ಆವಿಷ್ಕಾರಗಳು ತಕ್ಷಣದಲ್ಲಿ ಉದ್ಯೋಗಾವಕಾಶಕ್ಕೆ ಧಕ್ಕೆ ಎನಿಸಿದರೂ, ಕಾಲಾಂತರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವುದೂ ಖಚಿತ. ಪ್ರತಿಭೆ ಮತ್ತು ಶ್ರಮದಿಂದ ಕೆಲಸ ಮಾಡಿದರೆ ಬೇರೆ ಕ್ಷೇತ್ರಗಳಿಗಿಂತ ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ಷಿಪ್ರವಾಗಿ‌ ಉನ್ನತ ಸ್ಥಾನ‌ ತಲುಪಬಹುದು ಎಂದರು. ಕುಂದಾಪುರದ ಎಮ್‌ಐಸಿಇ ಕಂಪ್ಯೂಟರ್ ಸಂಸ್ಥೆಯ ಪ್ರಾಂಶುಪಾಲರಾದ ವಾಲ್ಟರ್ ಫೆರ್ನಾಂಡೀಸ್ ಅವರು ಕಂಪ್ಯೂಟರ್ ತರಬೇತಿ ನೀಡುವ ತಮ್ಮ ಸುದೀರ್ಘ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 19 ವರ್ಷಗಳಿಂದ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಜಿ. ದಯಾನಂದ ಗಾಣಿಗ ಅವರನ್ನು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ವತಿಯಿಂದ ಬೀಳ್ಕೊಡಲಾಯಿತು. ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಅವರು ದಯಾನಂದ ಗಾಣಿಗ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್, ನಿರ್ದೇಶಕರಾದ ಹರೀಶ ಮೇಸ್ತ, ಗೋಪಾಲ ನಾಯ್ಕ್, ನಾಗರಾಜ ಎಂ., ಲಕ್ಷ್ಮಣ, ಯಮುನಾ, ಪ್ರೇಮಾ ಪೂಜಾರಿ, ಚಂದ್ರಮತಿ ಹೆಗ್ಡೆ, ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಪೂಜಾರಿ, ಆಶಾಲತಾ ಡಿ.ಗಾಣಿಗ, ಪತ್ರಕರ್ತ ಬಿ.ರಾಘವೇಂದ್ರ ಪೈ, ನಿವೃತ್ತ ವ್ಯವಸ್ಥಾಪಕ ಮುತ್ತ ಕುಂದರ್, ಬ್ಯಾಂಕಿನ ಮಾಜಿ ನಿರ್ದೇಶಕರು, ಬ್ಯಾಂಕಿನ ವಿವಿಧ ಶಾಖೆಗಳ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಪೂಜಾರಿ ಸ್ವಾಗತಿಸಿದರು. ಬ್ಯಾಂಕಿನ ಸಿಬ್ಬಂದಿ ಜಗದೀಶ ಪೂಜಾರಿ ಪ್ರಾಸ್ತಾವಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧಿಕೃತ ವೆಬ್‌ಸೈಟ್ ಹಾಗೂ ನೂತನ ಗ್ರಂಥಾಲಯದ ಉದ್ಘಾಟನೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಸಾಲ್ಗದ್ದೆ ಶಶಿಧರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ಗೋಕುಲ್ ಶೆಟ್ಟಿ ಉಪ್ಪುಂದ, ಕರುಣಾಕ‌ರ್ ಶೆಟ್ಟಿ ತಗ್ಗರ್ಸೆ, ಮಾಜಿ ಅಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ ಪದಾಧಿಕಾರಿಗಳಾದ ಚುಚ್ಚಿನಾರಾಯಣ ಶೆಟ್ಟಿ ನಿತಿನ್ ಶೆಟ್ಟಿ ಬೈಂದೂರು, ಜೈರಾಮ್ ಶೆಟ್ಟಿ ಗಂಟಿಹೊಳೆ, ಜೈರಾಮ್ ಶೆಟ್ಟಿ ಬಿ., ಸಂತೋಷ್ ಶೆಟ್ಟಿ ಬೈಂದೂರು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ದಿವಾಕರ್ ಶೆಟ್ಟಿ ನೆಲ್ಯಾಡಿ, ದಿವಾಕ‌ರ್ ಶೆಟ್ಟಿ ಉಪ್ಪುಂದ, ಮಹಿಳಾ ಪದಾಧಿಕಾರಿಗಳಾದ ಮಮತಾ ಶೆಟ್ಟಿ ಉಷಾ ಶೆಟ್ಟಿ ಕುಂದಾಪುರದ ಫೋರ್ಥ್ ಫೋಕಸ್ ಸಂಸ್ಥೆಯ ನಿರ್ದೇಶಕರಾದ ವಿ.ಗೌತಮ್ ನಾವಡ ಉಪಸ್ಥಿತರಿದ್ದರು. ಕಾರ್ಯದರ್ಶಿ ನಿತಿನ್ ಶೆಟ್ಟಿ ಬೈಂದೂರು ಸ್ವಾಗತಿಸಿದರು. ಜಯರಾಮ್ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಶ್ರೀ ಪಟ್ಟಾಭಿರಾಮಚಂದ್ರ ದೇಗುಲದಲ್ಲಿ ಶ್ರೀ ಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರ ಚಾತುರ್ಮಾಸ ವ್ರತವನ್ನು ಆಚರಿಸಲು ಸಕಲ ಸಿದ್ಧತೆ ನಡೆದಿದೆ. ಜು. 5 ರಂದು ಶ್ರೀ ಕಾಶಿ ಮಠಾಧೀಶರು ಕೋಟೇಶ್ವರಕ್ಕೆ ಆಗಮಿಸಲಿದ್ದು, ಜು. 15 ರಂದು ಚಾತುರ್ಮಾಸ ವ್ರತ ಸ್ವೀಕರಿಸುವರು. 100 ದಿನಗಳ ಅಖಂಡ ಭಜನೆ:ಸತತ 85 ವರ್ಷಗಳಿಂದ ಪ್ರತಿದಿನ ಭಜನೆ ಹಾಗೂ ವಸಂತ ಪೂಜೆ ಇಲ್ಲಿ ನಡೆಯುತ್ತಿದೆ. ಈ ಬಾರಿ 100 ದಿನಗಳ ಕಾಲ ಅಖಂಡ ಭಜನೆ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದಲ್ಲದೇ ದೇಶ ವಿದೇಶದ ಗೌಡ ಸಾರಸ್ವತ ಸಮಾಜ ಬಾಂಧವರ ಭಜನ ಮಂಡಳಿಗಳು ಶತ ದಿವಸ ಅಖಂಡ ಭಜನೆಯಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸುವರು. ಶತನಮನ, ಶತಸ್ಮರಣ:ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮ ಶತಾಬ್ಧ ಮಹೋತ್ಸವದ ಅಂಗವಾಗಿ ನೂರು ಮಂದಿ ಕಲಾವಿದರ ಶತನಮನ, ಶತಸ್ಮರಣ ಸಂಗೀತ ಕಾರ್ಯಕ್ರಮ ಅ. 18 ರಂದು ನಡೆಯಲಿದೆ. 4 ತಿಂಗಳ ಅವಧಿಯಲ್ಲಿ ಕೋಟೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮರವಂತೆಯ ಬೆಟ್ಟಿನಮನೆ ನಿವಾಸಿ ಲಕ್ಷ್ಮಣ ಪೂಜಾರಿ (48) ಮೃತಪಟ್ಟವರು. ಅವರು ಸ್ಕೂಟರ್‌ನಲ್ಲಿ ತ್ರಾಸಿ ಕಡೆಯಿಂದ ಮರವಂತೆಗೆ ಬಂದು ರಾಷ್ಟ್ರೀಯ ಹೆದ್ದಾರಿ ಬಸ್ ನಿಲ್ದಾಣದ ಸಮೀಪ ಬೈಕ್ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ ಸವಾರ ಲಕ್ಷ್ಮಣ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಗೊಳ್ಳಿ ಪೊಲೀಸ್ ಅಪರಾಧ ವಿಭಾಗದ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಸಂಘಟನೆ ಕೋಟ ಇವರ ಸಂಯೋಜನೆಯೊಂದಿಗೆ ಶಿಶು ಅಭಿವೃದ್ದಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಹಾಗೂ ಎಸ್‌ಎಲ್‌ಆರ್‌ಎಂ ಘಟಕ ಕೋಡಿ ಇವರ ಸಹಯೋಗದೊಂದಿಗೆ ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ, ಸದಸ್ಯ ಪ್ರಭಾಕರ್ ಮೆಂಡನ್ ಮತ್ತು ಕೃಷ್ಣ ಪೂಜಾರಿಯವರ ಮಾರ್ಗದರ್ಶನದಲ್ಲಿ ಮನೆಗೊಂದು ಗಿಡ ನೆಡುವ 2ನೇ ವರ್ಷದ ಮೂರು ತಿಂಗಳ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಹೊಸಬೆಂಗ್ರೆ ಪರಿಸರದಲ್ಲಿ ಕೋಡಿ ಮೀನುಗಾರಿಕೆ ಸೊಸೈಟಿ ನಿರ್ದೇಶಕ ಲಕ್ಷ್ಮಣ್ ಸುವರ್ಣ ಮನೆಯಲ್ಲಿ ಗಿಡ ನಡುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ಮಾಜಿ ಸಂಜೀವಿನಿ ಅಧ್ಯಕ್ಷೆ ದೀಪಾ ಆರ್. ಖಾರ್ವಿ, ಕೋಡಿಕನ್ಯಾನ ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್. ಹಾಗೂ ಕೋಡಿತಲೆ ಅಂಗನವಾಡಿ ಕಾರ್ಯಕರ್ತೆ ನಿರೋಷ, ಎಸ್‌ಎಲ್‌ಆರ್‌ಎಂ ಸಿಬ್ಬಂದಿ ಕಿರಣ್ ಪುತ್ರನ್, ಸ್ತ್ರೀ ಶಕ್ತಿ ಸಂಘದ ಸದಸ್ಯೆ ಸುಮತಿ, ಜ್ಯೋತಿ, ಸುಜಾತ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.karnataka.gov.in/ssppre/ ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.karnataka.gov.in/post_sa/signin.aspx ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪರಿಸರದ ಮೇಲೆ ಮನುಕುಲ ನಿರಂತರ ದರ್ಪ ತೊರಿಸುತ್ತಿದ್ದಾರೆ. ಇದರ ದುಷ್ಪರಿಣಾಮ ಈಗಾಗಲೇ ನಾವುಗಳು ಅನುಭವಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಮುಂದಿನ ಜನಾಂಗಕ್ಕಾಗಿ ಈಗಾಗಲೇ ನಾವುಗಳು ಗಿಡಮರಗಳನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಬೇಕಿದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಅವರು ಸೋಮವಾರ ಸರಕಾರಿ ಹಿ.ಪ್ರಾ. ಶಾಲೆ, ಕೋಟ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ.ಕೋಟ, ಎಸ್ ಸಿಐ ಉಡುಪಿ ಟೆಂಪಲ್ ಸಿಟಿ, ಕೋಟ ಲಿಜನ್, ಜೆಸಿಐ ಕಲ್ಯಾಣಪುರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಆಧುನಿಕ ಕಾಲಘಟ್ಟದಲ್ಲಿ ನಾವಿದ್ದೇವೆ ವೈಭೋಗದ ಜೀವನಕ್ಕಾಗಿ ಕಾಂಕ್ರೀಟ್ ಕಾಡನ್ನು ನಿರ್ಮಿಸುತ್ತಿದ್ದೇವೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೆನರಾ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಸುಮಾರು 30 ವರ್ಷ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಕೆನರಾ ಬ್ಯಾಂಕಿನ ಗಂಗೊಳ್ಳಿ ಶಾಖೆಯ ಸಿಬ್ಬಂದಿ ಜಿ. ಗಂಗಾಧರ ಪೈ ಅವರನ್ನು ಗಂಗೊಳ್ಳಿ ಕೆನರಾ ಬ್ಯಾಂಕಿನ ವತಿಯಿಂದ ಸೋಮವಾರ ಬೀಳ್ಕೊಡಲಾಯಿತು. ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಸೋಮವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ವಾಸು ದೇವಾಡಿಗ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಬ್ಯಾಂಕಿನ ಅಧಿಕಾರಿ ಮಂಜುನಾಥ, ಬ್ಯಾಂಕ್ ಸಿಬ್ಬಂದಿ ರೇಷ್ಮಾ, ನಿವೃತ್ತ ಅಧಿಕಾರಿ ಅಶೋಕ ಜಿ.ವಿ., ಉದ್ಯಮಿ ದಿನಕರ ಶೆಟ್ಟಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ನಿವೃತ್ತ ಸಿಬ್ಬಂದಿ ರಾಜೀವ ಶೇರುಗಾರ್ ಮೊದಲಾದವರು ನಿವೃತ್ತರ ಸೇವೆಯನ್ನು ಸ್ಮರಿಸಿ ಅವರನ್ನು ಅಭಿನಂದಿಸಿದರು. ಬ್ಯಾಂಕ್ ಕಟ್ಟಡ ಮಾಲೀಕ ಎಂ.ಜಿ.ಅಜಿತ್ ನಾಯಕ್, ಅಶ್ವಿತಾ ಜಿ.ಪೈ, ಪ್ರಿಯಾ ಪೈ, ದಿಯಾ ಪೈ, ಬ್ಯಾಂಕಿನ ಸಿಬ್ಬಂದಿಗಳು, ಹಿತೈಷಿಗಳು ಮತ್ತಿತರರು ಉಪಸ್ಥಿತರಿದ್ದರು.

Read More