ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕುಂದಾಪುರ ತಾಲೂಕು ಆರೋಗ್ಯ ಕೇಂದ್ರದ ಸಿಬ್ಬಂದಿ ಭ್ಯಾಗ್ಯಲಕ್ಷ್ಮೀ ಮಾತನಾಡಿ, ತಂಬಾಕು ಸೇವನೆಯಿಂದ ಕುಟುಂಬ ಸಮಾಜ ಮತ್ತು ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ತಂಬಾಕು ಸೇವನೆಯಿಂದ ಆಗುವ ಶ್ವಾಸಕೋಶ, ಧ್ವನಿ ಪೆಟ್ಟಿಗೆ, ಅನ್ನನಾಳ ಹೀಗೆ ಹಲವು ರೀತಿಯ ಕ್ಯಾನ್ಸರ್ಗಳಿಗೆ ಕಾರಣವಾಗಿದೆ. ಆದ್ದರಿಂದ ಯುವ ಜನತೆ ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ತಂಬಾಕು ಸೇವನೆಯ ತೀವ್ರತೆಯ ಬಗ್ಗೆ ತಿಳಿದುಕೊಳ್ಳಬೇಕಾದರೆ ಕ್ಯಾನ್ಸರ್ ಆಸ್ಪತ್ರೆ ಭೇಟಿ ನೀಡಿದರೆ ತಿಳಿಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಾದ ಶ್ವೇತಾ ಕಾರ್ಯಕ್ರಮವನ್ನುದ್ದೇಶಿಸಿ ದುಶ್ಚಟ ಮತ್ತು ಮಾನಸಿಕ ಆರೋಗ್ಯದ ಬಗ್ಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ವಿಶಿಷ್ಟ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಬಲಾಡಿ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ನೆರವೇರಿಸಿದರೆ, ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅವರು ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು. ಕಿಂಡರ್ಗಾರ್ಟನ್ ಮಕ್ಕಳನ್ನೊಳಗೊಂಡ ವಿದ್ಯಾರ್ಥಿಗಳ ತಂಡ ಜ್ಞಾನ, ದೈವಿಕತೆ, ಸಮೃದ್ಧಿಯ ಪ್ರತೀಕವಾಗಿರುವ ಮಂಗಳಕರ ಹಣತೆಯನ್ನು ಬೆಳಗುವ ಮೂಲಕ ಶುಭಾರಂಭ ಮಾಡಿದರು. ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಅವರು ಮಕ್ಕಳಿಗೆ ಆರತಿ ಬೆಳಗಿ ಹೂವು, ಅಕ್ಷತೆಯೊಂದಿಗೆ ಬರಮಾಡಿಕೊಂಡರು. ಮುಖ್ಯ ಶಿಕ್ಷಕಿ ವಿಲಾಸಿನಿ ಶೆಟ್ಟಿ ಸ್ವಾಗತಿಸಿದರೆ, ಸಂಯೋಜಕಿ ಸರೋಜ ಅವರು ವಂದಿಸಿದರು. ಸಂಸ್ಥೆಯ ಶಿಕ್ಷಕ – ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕುಂದಾಪುರ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಲಭ್ಯವಿದ್ದು, ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಅನಾನಸ್ಸು, ಅಂಗಾಂಶಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೋಸ್ಟೀನ್ ಮತ್ತು ಡ್ರಾಯಗನ್ ಫ್ರೂಟ್ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ನೀರು ಸಂಗ್ರಹಣ ಘಟಕ ನಿರ್ಮಾಣಕ್ಕೆ, ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ, ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಪ್ರತಿ ಹೆಕ್ಟೇರಿಗೆ 1,500 ಹಾಗೂ ಅಡಿಕೆ ತೋಟ ಹೊಂದಿರುವ ರೈತರಿಗೆ ಅಡಿಕೆ ಸಂರಕ್ಷಣೆ/ ಒಣಗಿಸಲು ಸೋಲಾರ್ ಶೀಟ್ ಖರೀದಿಗೆ ಶೇ.40 ರ ಸಹಾಯಧನ ಲಭ್ಯವಿದೆ. ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ.40 ರ ದರದಲ್ಲಿ (ಗರಿಷ್ಠ 12.25 ಲಕ್ಷಗಳವರೆಗೆ), ಪ್ಯಾಕ್ ಹೌಸ್ಗಳ ನಿರ್ಮಾಣಕ್ಕೆ ಗರಿಷ್ಠ 2.40 ಲಕ್ಷಗಳವರೆಗೆ ಶೇ.50 ರ ವರೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಪಿಯು ಶಿಕ್ಷಣವು ಉತ್ತಮವಾದ ತಳಹದಿಯನ್ನು ನೀಡುತ್ತದೆ ಹಾಗಾಗಿ ಸರಿಯಾದ ರೀತಿಯಲ್ಲಿ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಹೇಳಿದರು. ಅವರು ಇಲ್ಲಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್. ಸಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ನಿಸರ್ಗ, ಮನಾಲಿ, ಪ್ರಾರ್ಥನಾ, ಪೂರ್ವಿಕ, ಅದಿತಿ, ಸ್ಕಂದ, ಬಿಂದುಶ್ರೀ ಅವರನ್ನು ಅಭಿನಂದಿಸಲಾಯಿತು. ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಕಛೇರಿಯ ಮುಖ್ಯಸ್ಥೆ ಪ್ರಮೋದ ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಐದು ಸಾವಿರ ರ್ಯಾಂಕ್ನ ಒಳಗೆ ಹಾಗೂ 13 ಜನ ವಿದ್ಯಾರ್ಥಿಗಳು ಹತ್ತು ಸಾವಿರ ರ್ಯಾಂಕ್ನ ಒಳಗಡೆ ಸ್ಥಾನ ಪಡೆದಿದ್ದಾರೆ. ಕೆಟಗರಿ ವಿಭಾಗದಲ್ಲಿ ಆಕಾಶ ಪೂಜಾರ್ (924 ರ್ಯಾಂಕ್), ತನುಶ್ರೀ ಹೆಚ್ಟಿ (1295 ರ್ಯಾಂಕ್), ಪುನೀತ್ ಕುಮಾರ್ ಬಿಜಿ(2030 ರ್ಯಾಂಕ್), ತುಷಾರ್ ಘನಶ್ಯಾಮ್ (3027 ರ್ಯಾಂಕ್), ಸುಮಿತ್ (3359 ರ್ಯಾಂಕ್) ಮೋಹನ್ ಶಿವಶಂಕರ್ ಪೈ (3510 ರ್ಯಾಂಕ್), ಜೀವನ್ ಪಿ ವಿ (4164 ರ್ಯಾಂಕ್), ಪಾಡುರಂಗ ಜಿವಿ (4222 ರ್ಯಾಂಕ್), ರೋಶನ್ ಶೆಟ್ಟಿ (5857 ರ್ಯಾಂಕ್), ಗಣೇಶ್ (6073 ರ್ಯಾಂಕ್), ಭಾನು ಹರ್ಷ (6485 ರ್ಯಾಂಕ್), ಶೋಹೆಬ್ ರೆಹ್ಮಾನ್ (7184 ರ್ಯಾಂಕ್), ವಿಜೇತ್ ಜಿ. ಗೌಡ (8993 ರ್ಯಾಂಕ್) ಪಡೆದಿದ್ದಾರೆ. ಒಟ್ಟು ಸಂಸ್ಥೆಯ 20 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಪ್ರಥಮ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು ತಂಬಾಕಿ ನಿಂದಾಗುವ ದುಷ್ಟಪರಿಣಾಮಗಳನ್ನು ತೋರಿಸುವ ಒಂದು ಕಿರು ನಾಟಕವನ್ನು ಪ್ರದರ್ಶಿಸುವ ಮೂಲಕ ಜನಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಜನಜಾಗೃತಿ ಮೂಡಿಸುವ ಪ್ರಯತ್ನವನ್ನು ಹೊಗಳಿದರು. ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಸಿಸ್ಟೆಂಟ್ ಪ್ರೊಫೆಸರ್ ಚೈತಾಲಿ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ 19 ರಿಂದ 45 ವರ್ಷದ ಒಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂರವಾಣಿ ಸಂಖ್ಯೆ 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಎನ್.ಎಸ್. ಎಸ್ ಕೋಶ ಹಾಗೂ ಯೇನಪೋಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರು ದೇರಳಕಟ್ಟೆಯ ಯೇನಪೋಯ ವಿಶ್ವವಿದ್ಯಾಲಯ ದೀಮ್ದ್ ಕ್ಯಾಂಪಸ್ ನಲ್ಲಿ ಜೂನ್ 4 ರಿಂದ 7 ರವರೆಗೆ ನಡೆಯುವ ಜಾಗತಿಕ ಯುವಶೃಂಗ ಸಭೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಧನ್ಯ ಯು ಆಯ್ಕೆಯಾಗಿದ್ದಾರೆ. ಈಕೆ ಗುಜ್ಜಾಡಿ ನಾಯಕವಾಡಿಯ ಉದಯ್ ಎಮ್. ಪೂಜಾರಿ ಮತ್ತು ಶಾರದಾ ಯು. ಪೂಜಾರಿ ದಂಪತಿ ಪುತ್ರಿ .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಣಹೋಮ ಮತ್ತು ವಿದ್ಯಾ ಸರಸ್ವತಿ ಹೋಮದೊಂದಿಗೆ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವು ಅತ್ಯಂತ ವಿಜ್ರಂಭಣೆಯಿಂದ ನೆರವೇರಿತು. ಪುಟಾಣಿ ಮಕ್ಕಳನ್ನು ಭವ್ಯ ಮೆರವಣಿಗೆಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರ ಅವರು ಮಾತನಾಡಿ, ಶಿಕ್ಷಣ ಕೇವಲ ನಾಲ್ಕು ಗೋಡೆಯ ನಡುವಿನ ಪಾಠ ಪ್ರವಚನಕ್ಕೆ ಸೀಮಿತವಾಗಿರದೆ ಮಕ್ಕಳನ್ನು ಕ್ರೀಡೆ ಸಾಂಸ್ಕೃತಿಕ ರಂಗದಲ್ಲಿಯೂ ಸಜ್ಜುಗೊಳಿಸುವ ಪಣತೊಟ್ಟಿದ್ದೇವೆ, ವಿದ್ಯಾರ್ಥಿಗಳಿಗೆ ಬೇಕಾದ ಇಂಗ್ಲೀಷ್ ಸಂವಹನ ಕೌಶಲ್ಯವನ್ನು ಉತ್ತಮಗೊಳಿಸಲು ಬೇಕಾದ ತರಬೇತಿಯನ್ನು ನಮ್ಮ ಶಾಲೆಯಲ್ಲಿ ನೀಡಲಾಗುತ್ತಿದೆ ಎಂದರು. ಅತಿಥಿಯಾದ ವಿಷ್ಣುಮೂರ್ತಿ ಐತಾಳ್ ಅವರು “ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ” ಎಂದು ಹೇಳುವ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸನ್ನಡತೆಯನ್ನು ಬೆಳೆಸಿಕೊಂಡು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು. ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಅವರು ಎಲ್ಲರನ್ನು ಸ್ವಾಗತಿಸುತ್ತಾ, ವಿದ್ಯಾರ್ಥಿಗಳು ಹಿಂದಿನ ವರ್ಷ ಸಾಧಿಸಲಾಗದ ವಿಷಯಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ದಾನಿಗಳು ಮಕ್ಕಳಿಗೆ ಪುಸ್ತಕ ಮೊದಲಾದ ಶೈಕ್ಷಣಿಕ ಪೂರಕ ವಸ್ತುಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ದಾನಿಗಳ ಉದ್ದೇಶ ಈಡೇರಬೇಕಾದರೆ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಂಡು ಉತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು. ಉಚಿತವಾಗಿ ನೀಡಿದ ಶೈಕ್ಷಣಿಕ ಸಾಮಾಗ್ರಿಗಳ ಬಗ್ಗೆ ತಾತ್ಸಾರ ಮನೋಭಾವ ಬೆಳೆಸಿಕೊಳ್ಳಬಾರದು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿ ಲೈಟ್ಹೌಸ್ನ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ವತಿಯಿಂದ ಗಂಗೊಳ್ಳಿಯ ಶ್ರೀ ರಾಮ ಮಂದಿರದಲ್ಲಿ ನಡೆದ 22ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಉದ್ಯಮಿ ಶರತ್ ಕುಮಾರ್ ರಾವ್ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಇದೇ ಸಂದರ್ಭ ಎಸ್ಎಸ್ಎಲ್ಎಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದ ಸುಶ್ಮಿತಾ ಎಸ್. ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ…
