Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಾದೇಶಿಕ ಅಸಮತೋಲನೆಯು ಸ್ಥಳೀಯ ಜನರ ಕಾರ್ಯಚಟುವಟಿಕೆ ಹಾಗೂ ಆರ್ಥಿಕ ಅಭಿವೃದ್ಧಿಯ ಆಧಾರದ ಮೇಲೆ ಅವಲಂಬನೆಯಾಗಿರುತ್ತದೆ. ಉಡುಪಿ ಜಿಲ್ಲೆಯು ಸಾಕಷ್ಟು ಅಭಿವೃದ್ಧಿಯು ಖಾಸಗಿ ಸಹಭಾಗಿತ್ವದಲ್ಲಿ ಆಗಿದೆ. ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಅಧ್ಯಕ್ಷ ಪ್ರೊ. ಎಂ. ಗೋವಿಂದರಾವ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಡಾ.ಡಿ.ಎಂ ನಂಜುಂಡಪ್ಪ ವರದಿಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ, ಬ್ಯಾಂಕಿAಗ್ ಸೆಕ್ಟರ್‌ಗಳು ಸೇರಿದಂತೆ ಮತ್ತಿತರ ಕಾರ್ಯಚಟುವಟಿಕೆಗಳಿಂದ ಜಿಲ್ಲೆಯು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. ಇದಕ್ಕೆ ಪೂರಕವಾಗಿ ಸರಕಾರವೂ ಸಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಜಿಲ್ಲೆಯು ಸಾಗಬೇಕಿದೆ ಎಂದರು. ನಂಜುಂಡಪ್ಪ ಸಮಿತಿ ವರದಿಯು ಅತ್ಯಂತ ಹಿಂದುಳಿದವರು 39, ಹೆಚ್ಚು ಹಿಂದುಳಿದವರು 40,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಸಂಸ್ಥೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಾತೃ ಪಿತೃ ಪೂಜನ್ ದಿವಸ್ ಎಂಬ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಇತ್ತೀಚಿಗೆ ನಡೆಸಲಾಯಿತು.  ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮೈಸೂರು ಅಂತರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತಿದಾರರಾದ ಸತೀಶ್ ಆರ್. ಅವರು ಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ಅಲ್ಲಿ ಮುಖ್ಯವಾಗಿ ಕಂಡು ಬರುವುದು ಕುಟುಂಬ ಮತ್ತು ಶಿಕ್ಷಣ ವ್ಯವಸ್ಥೆ. ಅದರಲ್ಲೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಾಮರಸ್ಯ ಹಾಗೂ ಶಿಕ್ಷಣ ಮತ್ತು ಶಿಕ್ಷಕರ ಮಹತ್ವವನ್ನು ತಿಳಿಸಿದರು. ಜೊತೆಗೆ ಇಂದು ಕುಟುಂಬ ತನ್ನ ಹೃದಯವಂತಿಕೆಯನ್ನು ಕಳೆದುಕೊಳ್ಳುತ್ತಿರುವ ಮತ್ತು ಮಕ್ಕಳು ತಮ್ಮ ಪೋಷಕರ ಮಹತ್ವಗಳನ್ನು ಅರ್ಥ ಮಾಡಿಕೊಳ್ಳದೆ ಎಲ್ಲರೂ ತಮ್ಮ ಸ್ವತಂತ್ರ ಬದುಕಿನ ಮೋಹದಿಂದ ಹಿರಿಯರಿಂದ ದೂರವಾದರೆ, ಮಕ್ಕಳು ಕೂಡ ಅವರ ಪ್ರೀತಿಯಿಂದ ದೂರವಾಗುತ್ತಾ ಆಧುನಿಕ ತಂತ್ರಜ್ಞಾನ ಹಿಂದೆ ಓಡುತ್ತಿರುವುದು ಮಾತ್ರ ನಿಜಕ್ಕೂ ವಿಪರ್ಯಾಸ. ಈ ಎಲ್ಲಾ ವಿಷಯಗಳನ್ನು ಒಟ್ಟುಗೂಡಿಸಿ ಮಕ್ಕಳ ಬದುಕಿನಲ್ಲಿ ಪೋಷಕರ ಪಾತ್ರ ಏನು ಎಂಬುದನ್ನು ಜೊತೆ ಜೊತೆಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷ ಸೌರಭ ಶ್ರೀ ಹಿರೇಮಹಾಲಿಂಗೇಶ್ಚರ ಕಲಾರಂಗ ಕೋಟ ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವು ಇದೇ ಬರುವ ಎ.26ರಂದು ಕೋಟ ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿ ನಡೆಯಲಿದ್ದು ಇದರ ಪೋಸ್ಟರ್ ಬಿಡುಗಡೆಯನ್ನು ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಸೌರಭ ಶ್ರೀ ಹಿರೇ ಮಹಾಲಿಂಗೇಶ್ವರ ಕಲಾ ರಂಗದ ಅಧ್ಯಕ್ಷ ರಾಘವೇಂದ್ರ ಕರ್ಕೇರ ಕೋಡಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ ಕಾರ್ಕಡ, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಶಿವಾನಂದ ಮಯ್ಯ, ನಿವೃತ್ತ ಶಿಕ್ಷಕ ಕೆ. ರಾಜಾರಾಮ ಐತಾಳ್, ಯಕ್ಷ ಸೌರಭದ ಕಾರ್ಯದರ್ಶಿ ಶ್ರೀನಾಥ್ ಉರಾಳ, ಸ್ಥಾಪಕಾಧ್ಯಕ್ಷ ಹರೀಷ್ ಭಂಢಾರಿ, ಸದಸ್ಯರಾದ ಗಿರೀಶ್ ಬೆಟ್ಲಕ್ಕಿ, ಪ್ರಶಾಂತ್ ಪಡುಕರೆ, ವಿಘ್ನನೇಶ್ ದೇವಾಡಿಗ, ಕೋಟ ಅಮೃತೇಶ್ವರಿ ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಣದೊಂದಿಗೆ ಸಂಸ್ಕಾರ ದೊರೆತಾದ ಯಾವುದೇ ಮುಗು ಸಮಾಜದಲ್ಲಿ ಸತ್ಪ್ರಜೆಯಾಗಿ ಬೆಳೆಯಲು ಸಾಧ್ಯವಿದೆ. ಮಕ್ಕಳಿಗೆ ವಿದ್ಯಾಬ್ಯಾಸ ಕೊಡಿಸುವ ಜೊತೆಗೆ ಸಂಸ್ಕಾರದ ಪಾಠವನ್ನು ಅಗತ್ಯವಾಗಿ ಕಲಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದೆ ಎಂದು ಉದ್ಯಮಿ ಸದಾನಂದ ಪ್ರಭು ಹೇಳಿದರು. ಅವರು ಸೋಮವಾರ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಿ ಬಳಿಕ ಮಾತನಾಡಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ನೆರವು ನೀಡಲಾಗುತ್ತಿದೆ. ಪ್ರಾಥಮಿಕ ಶಿಕ್ಷಣದಿಂದ ಪದವಿಯ ತನಕದ ವಿದ್ಯಾರ್ಥಿಗಳಿಗೆ ಈ ಗ್ರಾಮೀಣ ಪ್ರದೇಶದಲ್ಲಿ ಪ್ರತಿವರ್ಷ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕಳೆದ ಎರಡೂವರೆ ದಶಕದೀಂದ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಲಿಕೆಗೆ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ. ಕುಟೀರದ ಮೂಲಕ ಹಲವು ಸಾಮಾಜಿಕ, ಧಾರ್ಮಿಕ ಕಾರ್ಯಗಳನ್ನು ಮಾಡಲಾಗಿತ್ತು. ದಾನಿಗಳ ನೆರವಿನಿಂದ ಸೇವಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು ನಡೆಸುವುದು ನಿಜಕ್ಕೂ ಒಂದು ಸವಾಲಿನ ಸಂಗತಿ ಎಂದು ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಮುಖಿ ಚಿಂತನೆಯ ಸದುದ್ದೇಶದಿಂದ ಬೇಸಿಗೆ ಶಿಬಿರವನ್ನು ಈ ಸಂಸ್ಥೆಯು ಆಯೋಜಿಸಿರುವುದು ಇತರರಿಗೆ ಮಾದರಿ. ಜೀವನದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನೆಡೆದಾಗ ನಮ್ಮ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಮಕ್ಕಳು ಈ ಶಿಬಿರದಲ್ಲಿ ಕಲಿಸುವ ಎಲ್ಲಾ ಚಟುವಟಿಕೆಗಳನ್ನು ,ವಿಚಾರಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಂಡು ಸವಾಲುಗಳನ್ನು ಎದುರಿಸುವ ಗುಣವನ್ನು ಕಲಿಯಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅನವಶ್ಯಕ ಕೇಸು ದಾಖಲಿಸಿ ಕಿರಿಕುಳ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಎದುರು ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿ ಮುದ್ದುಗುಡ್ಡೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಸರಕಾರಿ ಜಾಗವನ್ನು ಒತ್ತುವರಿ ಮಾಡಿರುವವರ ಪರ ನಿಂತು ದಲಿತ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ ನ್ಯಾಯಕ್ಕಾಗಿ ಹೋರಾಟ ನಡೆಸಿದ ತನ್ನ ಮೇಲೆ ಪೊಲೀಸರು, ವಕೀಲರು, ಗ್ರಾಪಂ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದರು. ಪ್ರತಿಭಟನೆ ಸ್ಥಳಕ್ಕೆ ಡಿವೈಎಸ್ಪಿ ಎಚ್. ಡಿ. ಕುಲಕರ್ಣಿ, ತಹಸೀ ಲ್ದಾರ್ ಪ್ರದೀಪ ಕುರುಡೇಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಡಾ. ಬಿ. ಆರ್ ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ಜಯಂತಿ ಹಾಗೂ ಸಂಘದ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಇಲ್ಲಿನ ಶಾರದ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಸಚಿವೆ ಮೋಟಮ್ಮ ಅವರು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಆರ್ಥಿಕವಾಗಿ ಶೈಕ್ಷಣಿಕವಾಗಿ ಸಬಲರಾಗಬೇಕು ಎಂದರು ಹಾಗೂ ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಯ ಉಸಿರಿದ್ದಂತೆ ಸಂವಿಧಾನವನ್ನು ಬದಲಾಯಿಸಲು ಮುಂದಾದಲ್ಲಿ ದಲಿತ ಸಮುದಾಯದ ಜೇನುಗೂಡಿಗೆ ಕೈ ಇತ್ತಂತೆ ಎನ್ನುವ ಎಚ್ಚರಿಕೆ ಮಾತುಗಳನ್ನು ಸಹ ಈ ಸಂದರ್ಭದಲ್ಲಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಾಗರತ್ನ ಭಾಸ್ಕರ್ ವಹಿಸಿದ್ದರು. ಸಭೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸುಲೋಚನಾ ಹಾಗೂ ಸಾಮಾಜಿಕ ಕಲಾಕ್ಷೇತ್ರದಲ್ಲಿ ಗುರುತಿಸಿಕೊಂಡ ಬೆಂಕಿ ಚಿರಂತ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬ್ಯಾಗ ವಿತರಣೆ ಮತ್ತು ಎಸ್. ಎಸ್.ಎಲ್.ಸಿ , ಪಿಯುಸಿ, ಡಿಗ್ರಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಿಸ್ವಾರ್ಥ ಸೇವಾ ಟ್ರಸ್ಟ್ ಹೆಸರಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದೆ, ಸಮಾಜದ ಬಡ ಹಾಗೂ ಅನಾರೋಗ್ಯ ಪೀಡಿತರ ನೆರವಿಗೆ ಧಾವಿಸುವ ಜೊತೆಗೆ ಯಾವುದೇ ಪ್ರಚಾರದ ಗೀಳು ಇಲ್ಲದೆ ಪ್ರತಿ ತಿಂಗಳು ಸಹಾಯದ ನೆರವು ನೀಡುತ್ತಿದ್ದಾರೆ ಇದೊಂದು ಶ್ರೇಷ್ಠವಾದ ಮಹತ್ಕಾರ್ಯವಾಗಿದೆ ಎಂದು ಪತ್ರಕರ್ತ ರವೀಂದ್ರ ಕೋಟ ಪ್ರಶಂಸನೀಯ ಮಾತುಗನ್ನಾಡಿದರು. ಅವರು ಕೋಟದ ನಿಸ್ವಾರ್ಥ ಸೇವಾ ಟ್ರಸ್ಟ್ ತಿಂಗಳ ಸರಣಿ ಸಹಾಯಹಸ್ತ ಯೋಜನೆಯಡಿ ಕೋಟದಲ್ಲಿ ವಾಸ್ತವ್ಯವಿರುವ ಬಡ ಕುಟುಂಬದ ವಿಜಯಲಕ್ಷ್ಮೀ ಶಾಸ್ತ್ರಿ ಅವರಿಗೆ ದಿನಸಿ ಪರಿಕರ ಹಸ್ತಾಂತರಿಸಿ ಮಾತನಾಡಿದರು. ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಕಾರ್ಯ ಭಗವಂತನಿಗೆ ಅತಿ ಹತ್ತಿರವಾದ ಕಾರ್ಯವಾಗಿದೆ ಈ ದಿಸೆಯಲ್ಲಿ ನಿಸ್ವಾರ್ಥ ಸೇವಾ ಟ್ರಸ್ಟ್ ನಂತೆ ಒಂದಿಷ್ಟು ಒಂದಿಷ್ಟು ಸಂಘಟನೆಗಳು ಕಾರ್ಯಾಚರಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕಿ ಸವಿತಾ ವೆಂಕಟೇಶ ಉಡುಪ, ನಿಸ್ವಾರ್ಥ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕೋಟ, ಕಾರ್ಯದರ್ಶಿ ಪ್ರದೀಪ್ ಪೂಜಾರಿ ಕೋಟ, ಟ್ರಸ್ಟ್ ಪ್ರಮುಖರಾದ ಗೋಪಿನಾಥ್ ಕಿಣಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು. ರಾಜ್ಯದ ಪ್ರತಿಷ್ಠಿತ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯು ಎ. 26 ಶನಿವಾರದಂದು ನಡೆಯಲಿದೆ. ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ಸಹಕಾರ ಭಾರತೀಯ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರಾತಿನಿಧ್ಯ ಕೊಟ್ಟು ಈ ಬಾರಿ ಹೊಸ ಉತ್ಸಾಹಿ ಹೈನುಗಾರರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದ್ದು. ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಕುಂದಾಪುರ ತಾಲೂಕಿನಿಂದ ಕಾಡೂರ ಸುರೇಶ್ ಶೆಟ್ಟಿ, ಬೈಂದೂರು ತಾಲೂಕಿನಿಂದ ಸುಬ್ಬಣ್ಣಶೆಟ್ಟಿ, ಟಿ.ವಿ ಪ್ರಾಣೇಶ್ ಯಡಿಯಾಳ್, ಕಾರ್ಕಳ ತಾಲೂಕಿನಿಂದ ಕೆ. ಮೋಹನ್ ದಾಸ್ ಅಡ್ಯಾಂತಾಯ, ಹೆಬ್ರಿ ತಾಲೂಕಿನಿಂದ ಭೋಜ ಪೂಜಾರಿ, ಕಾಪುಯಿಂದ ಅಶೋಕ್ ರಾವ್, ಉಡುಪಿಯಿಂದ ಹೆರ್ಗ ದಿನಕರ್ ಶೆಟ್ಟಿ ಮತ್ತುಉಡುಪಿ ಜಿಲ್ಲೆಯ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದಲ್ಲಿ ನಡೆದ ಅಖಿಲ ಭಾರತ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ಗ್ರಾಮದ ನಾಗಶ್ರೀ 76 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮೇ ತಿಂಗಳಲ್ಲಿ ನಡೆಯುವ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ಗೆ ಕರ್ನಾಟಕದ ಮಹಿಳಾ ವಿಭಾಗದಿಂದ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶದ ಅವರು ಕಠಿಣ ಪರಿಶ್ರಮದಿಂದ ವೇಯ್ಟ್‌ ಲಿಫ್ಟಿಂಗ್ ಹಾಗೂ ಪವರ್ ಲಿಫ್ಟಿಂಗ್ ಸಾಧನೆ ಮಾಡಿ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದುಕೊಂಡಿದ್ದಾರೆ.

Read More