Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳು ನಮ್ಮ ಜೀವನದ ದೊಡ್ಡ ಆಸ್ತಿ ಅವರ ಶಿಕ್ಷಣ, ಪ್ರತಿಭೆ, ಯೋಚನೆ, ಮೊದಲಾದವುಳಿಗೆ ಸೂಕ್ತ ಮಾರ್ಗದರ್ಶನಗಳ ಅಗತ್ಯವಿದೆ ಎಂದು ಸಂಸ್ಕೃತಿಕ ಚಿಂತಕರಾದ ವೆಂಕಟೇಶ್ ಭಟ್ ನುಡಿದರು. ಅವರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ, ಉಸಿರು ಕೋಟ. ಇವರ ಆಸರೆಯಲ್ಲಿ ನಡೆದ 24ನೇ ವರ್ಷದ ಮಕ್ಕಳ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟೇಶ ಉಡುಪರು ಮಕ್ಕಳ ದಿನಾಚರಣೆಯ ಮಹತ್ವ ಮತ್ತು ಉದ್ದೇಶ ಶಾಲೆ ಮತ್ತು ಪೋಷಕರ ಸಂಬಂಧ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ವಿವಿಧ ಸ್ಪರ್ಧೆಗಳು ನಡೆದವು. ಶಾಲಾ ವಿದ್ಯಾರ್ಥಿ ನಾಯಕಿ ಇಂಪನ ಸ್ವಾಗತಿಸಿ, ಉಪನಾಯಕಿ ಪ್ರಿಯ ಧನ್ಯವಾದ ನೀಡಿದಳು. ಪಂಚಮಿ, ಸಾನ್ವಿ, ರಶ್ಮಿತಾ, ದೀಪಿಕಾ, ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಅಭಿಯಾನದ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ದೇಶ ವ್ಯಾಪ್ತಿ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸಹ್ಯಾದ್ರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಿ ಹಾಕಿರುವ ಬಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಮತ್ತು ಇದರಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರ ಮೇಲೆ ಆರೋಪ ಮಾಡಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವಾಗಿದೆ. ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ದೇಶದ ಭವಿಷ್ಯವಾಗಿರುವ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವ ಒಂದು ಸಂಸ್ಥೆ. ಇಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಪ್ರಬುದ್ಧತೆ ಹೊಂದಿರುವ, ರಾಜಕೀಯ ಪ್ರಜ್ಞೆ ಇರುವ, ಹದಿನೆಂಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಗ್ರಾಮೀಣ ಕ್ರೀಡೆಗಳಿಂದ ದೂರ ಸರಿಯುತ್ತಿದ್ದಾರೆ. ಗ್ರಾಮೀಣ ಕ್ರೀಡೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಇತರ ಕ್ರೀಡೆಗಳಿಂದ ಗ್ರಾಮೀಣ ಕ್ರೀಡೆಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹೆಚ್ಚು ಲಾಭವಿದೆ. ಗ್ರಾಮೀಣ ಕ್ರೀಡೆಗಳನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಿವುದರ ಜೊತೆಗೆ ಅದರ ಬೆಳವಣಿಗೆಗೂ ನಾವು ಕೈಜೋಡಿಸಬೇಕು ಎಂದು ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಹೇಳಿದರು. ಅವರು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಗಂಗೊಳ್ಳಿ, ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಗಂಗೊಳ್ಳಿ ಇವರ ಸಹಭಾಗಿತ್ವದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಗ್ರಾಮೀಣ ಕ್ರೀಡೆಗಳ ಹಬ್ಬ ’ಆಡುಂಬೋಲ’ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಹಿರಿಯ ಸದಸ್ಯ ಜಿ.ಉದಯಶಂಕರ ರಾವ್ ಕ್ರೀಡಾ ಹಬ್ಬಕ್ಕೆ ಚಾಲನೆ ನೀಡಿದರು. ಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಕಾನೂನು ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಜುನಾಥ ಗಿಳಿಯಾರ್ ಮಾತನಾಡಿ, ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಅರಿವಿನ ಅಗತ್ಯ ಇದೆ. ಕಾನೂನನ್ನ ಅರಿತುಕೊಂಡು ಅದನ್ನು ಗೌರವಿಸಿ ಜೀವನ ನಡೆಸಿದಾಗ ಚಿಂತೆ ಮುಕ್ತ ಜೀವನ ನಮ್ಮದಾಗುತ್ತದೆ. ಪ್ರತಿಯೊಂದು ಕಾನೂನು ನಮಗೆ ಜವಾಬ್ದಾರಿ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾನೂನು ನಮ್ಮ ದೈನಂದಿನ ಜೀವನ ಹಾಗೂ ಸಾಮಾಜಿಕ ವ್ಯವಹಾರಿಕ ಬದುಕಿನಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದರೆ ವ್ಯವಹಾರ ಕ್ಷೇತ್ರದಲ್ಲಿ ಕಾನೂನನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಉದ್ಯಮವು ನಿರೀಕ್ಷಿತ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಇಂದು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ನೀಡುವ ಸಲುವಾಗಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಿಕ್ಟರಿ 2K25 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲೆಯ ಬಹಳಷ್ಟು ಶಾಲೆಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಈ ಕಾರ್ಯಕ್ರಮದಲ್ಲಿ ಸಮೂಹ ಗಾಯನ, ಸಮೂಹ ನೃತ್ಯ, ನಿಧಿ ಅನ್ವೇಷಣೆ, ಚಿತ್ರಕಲೆ, ಏಕಪಾತ್ರಾಭಿನಯ, ಕಂಪ್ಯೂಟರ್ ಟೈಪಿಂಗ್, ವಿಜ್ಞಾನ ಮಾದರಿ ತಯಾರಿಕೆ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಿತ್ತು. ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಿಂದ ಸಮೂಹಗಾಯನ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ದಾಕ್ಷಾಯಣಿ ಎಸ್.ಕೆ., ಪೂರ್ವೀ ಜೆ. ಮೊಗೇರ, ಶ್ರೀನಿಧಿ ಕೊಠಾರಿ, 9ನೇ ತರಗತಿಯ ವಿದ್ಯಾರ್ಥಿಗಳಾದ ಕೃಪಾಲಿ ಮತ್ತು ಸಾನ್ವೀ ಎಸ್.ಬಿ. ಭಾಗವಹಿಸಿದ್ದರು. ಸಮೂಹ ನೃತ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಬ್ರಾಹ್ಮೀ ಪಿ. ಶೆಟ್ಟಿ, ಹನಿ ಎಸ್. ಭಂಡಾರಿ, ಪೃಥಾ, 9ನೇ ತರಗತಿಯ ವಿದ್ಯಾರ್ಥಿಗಳಾದ ದಿಶಾ ಶೆಟ್ಟಿ, ಸಾನ್ವೀ, ಸುರಕ್ಷಾ ಭಾಗವಹಿಸಿದ್ದರು. ನಿಧಿ ಅನ್ವೇಷಣೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಪಲ್ಲವಿ ಎಮ್.ಎಚ್., ಸಮೃದ್ಧಿ, ಅನುಶ್ರೀ ಎಸ್.ಎಮ್. ಭಾಗವಹಿಸಿದ್ದರು. ಚಿತ್ರಕಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾದ ಪೂರ್ವಿಕಾ ಎಲ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ – ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಹಪ್ಪಳ, ಉಪ್ಪಿನಕಾಯಿ ಹಾಗೂ ವಿವಿಧ ರೀತಿಯ ಮಸಾಲ ಪೌಡರ್ ತಯಾರಿಕೆ ತರಬೇತಿಯ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಹಾಯಕ ಮಹಾ ಪ್ರಭಂದಕರಾದ ಮಾಲಿನಿ ಸುವರ್ಣ ಅವರು ಮಾತನಾಡಿ, ಬ್ಯಾಂಕಿನ ಹೆಚ್ಚಿನ ಯೋಜನೆಗಳು ಕಿರು ಉದ್ಯಮಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸುತ್ತದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವುದರ ಬಗೆಗೆ ಪ್ರಯತ್ನ ಮಾಡಿ, ಹಾಗೂ ಉತ್ಪನ್ನವನ್ನು ತಯಾರಿಸುವಾಗ ಗುಣಮಟ್ಟದೊಂದಿಗೆ ಶುಚಿತ್ವದ ಕಡೆಗೆ ಗಮನ ನೀಡಿ ಎಂದರು. ನಂತರ ನಾವು ತಯಾರಿಸುವ ಉತ್ಪನ್ನಗಳಲ್ಲಿ ಹಿಂದಿನ ಕಾಲದ ಅಡುಗೆಯ ರುಚಿ ಹಾಗು ಉತ್ಪನ್ನದಲ್ಲಿ ವೈವಿಧ್ಯತೆಯ ಜೊತೆಗೆ ಶುಚಿತ್ವದ ಕಡೆಗೆ ಗಮನ ಕೊಟ್ಟರೆ, ಗ್ರಾಹಕರು ತಮ್ಮನ್ನು ಹುಡುಕಿಕೊಂಡು ಬರುವ ಮಟ್ಟಿಗೆ ಬೆಳೆಯಲು ಸಾಧ್ಯವಾಗುತ್ತದೆ. ಜೊತೆಗೆ ಮುಖ್ಯವಾಗಿ ಈಗಿನ ಉದ್ಯಮದಾರರು ತ್ವರಿತ ಯಶಸ್ಸಿಗೆ ಹಾಗೂ ಲಾಭಕ್ಕಾಗಿ ಹಾತೊರೆದು, ಉತ್ಪನ್ನದ ಗುಣಮಟ್ಟವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಂಗಿಯ ಮನೆಯಲ್ಲಿ ಅಣ್ಣನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಿದ್ದಾಪುರದಲ್ಲಿ ಗುರುವಾರ ನಡೆದಿದೆ. ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ ಬಸವ ಕುಲಾಲ (66) ಆತ್ಮಹತ್ಯೆ ಮಾಡಿಕೊಂಡವರು. ಹಲವು ವರ್ಷಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಬಸವ ಕುಲಾಲ್ ನ.13ರಂದು ಸಿದ್ದಾಪುರ ಐರಬೈಲಿನಲ್ಲಿರುವ ತನ್ನ ತಂಗಿಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾಂಗ್ರೆಸ್‌ನ ಹಿರಿಯ ಮುಂದಾಳು, ರೋಟರಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಡಾ. ಅಭಿಷೇಕ್ ಮನು ಸಿಂಘ್ವಿ ಯವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ. ಕುಂದರ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಶಿಫಾರಸಿನೊಂದಿಗೆ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಸಿ. ಎಂ. ಧನಂಜಯ ಅವರು ನೇಮಕಾತಿ ಮಾಡಿ ಆದೇಶ ನೀಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೌಡ ಸಾರಸ್ವತ ಸಮಾಜ ಬಾಂಧವರು ಆರಾಧಿಸಿಕೊಂಡು ಬರುತ್ತಿರುವ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ದೇವಳದ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಗೋಕರ್ಣ ಪರ್ತಗಾಳಿ ಜೀವೋತ್ತಮ‌ ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಣಪತಿ ಭಟ್ ರವರ ನೇತ್ರತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಗಣೇಶ ಪ್ರಭು, ಉಪಾಧ್ಯಕ್ಷ ರವಿಕಾಂತ ಶ್ಯಾನುಭಾಗ, ಕಾರ್ಯದರ್ಶಿ ನಾಗರಾಜ ವೆಂಕಟದಾಸ ಪ್ರಭು, ಕೋಶಾಧಿಕಾರಿ ನಾಗರಾಜ ರತ್ನಾಕರ ಪ್ರಭು, ಮಹಿಳಾ ಮಂಡಳಿ ಅಧ್ಯಕ್ಷೆ ಮೇಘಾ ಪೈ, ಕಾರ್ಯದರ್ಶಿ ಅಶ್ವಿನಿ‌ ಕಾಮತ್, ಹಿರಿಯರಾದ ಬಾಬುರಾಯ ಕಾಮತ್, ಪ್ರಕಾಶ ಪ್ರಭು, ವೆಂಕಟೇಶ ಪ್ರಭು, ಚಂದ್ರಕಾಂತ ನಾಯಕ್ ಜಿ.ಎಸ್.ಬಿ.ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಆಯಾ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ನವೆಂಬರ್ 26 ರ ಒಳಗಾಗಿ ಇಲಾಖೆಯ ಕಛೇರಿಗೆ ಖುದ್ದಾಗಿ ಅಥವಾ https://udupi.nic.in ವೆಬ್‌ಸೈಟ್ ನಲ್ಲಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಮತ್ತು ಸರಾಸರಿ ಕನಿಷ್ಠ ಶೇ.45 ಅಂಕಗಳೊAದಿಗೆ ಉತ್ತೀರ್ಣರಾಗಿರುವ ಪ್ರವರ್ಗ-1 ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ ಮತ್ತು 3ಬಿ ಕುಟುಂಬದ ವಾರ್ಷಿಕ ಆದಾಯ ರೂ. 1.00 ಲಕ್ಷ ಮೀರದ 26-11-2005 ರಿಂದ 26-11-2008ರ ನಡುವಿನ ಅವಧಿಯಲ್ಲಿ ಜನಿಸಿರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ತರಬೇತಿಯನ್ನು ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ…

Read More