Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಮ್ಮಲ್ಲಿರುವ ಸಂಪತ್ತಿನ ಒಂದು ಅಂಶವನ್ನು ಶಾಲೆಗೆ ಕೊಡುಗೆಯಾಗಿ ನೀಡುವುದರಿಂದ ಸಂತೃಪ್ತಿಯ ಜೊತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ. ನಮಗೆ ಸಾಮರ್ಥ್ಯ ಇರುವಾಗ ಒಂದಿಷ್ಟು ಕೊಡುಗೆಗಳನ್ನು ಸಮಾಜಕ್ಕೆ ನೀಡಿದಾಗ ಸಂತೃಪ್ತಿ ಮೂಡುತ್ತದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಶುಕ್ರವಾರ ಮೈಕ್ರೋಸಾಪ್ಟ್ ಕಾರ್ಪೊರೇಶನ್ ಇಂಡಿಯಾ ಪ್ರೈ.ಲಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಇದರ ಜಂಟಿ ಆಶ್ರಯದಲ್ಲಿ ಬಿಜೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದರು. ಬೈಂದೂರು ವ್ಯಾಪ್ತಿಯಲ್ಲಿ ಟ್ರಸ್ಟ್ ಹಾಗೂ ಗೋವಿಂದ ಬಾಬು ಪೂಜಾರಿ ಅವರ ವೈಯಕ್ತಿಕ ನೆಲೆಯಲ್ಲಿ ಅನೇಕ ಶಾಲೆಗಳಿಗೆ ಕೊಡುಗೆಗಳನ್ನು ನೀಡುತ್ತಿದ್ದು ಸರಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು. ಉದ್ಯಮಿ ಹಾಗೂ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಮ್ಯಾನೆಜಿಂಗ್‌ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ, ದೇವರು ಅವಕಾಶ ನೀಡಿದಾಗ ಕೈಲಾದಷ್ಟು ಶಾಲೆಗಳಿಗೆ ಕೊಡುಗೆಯಾಗಿ ನೀಡುತ್ತಿರುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು, ಸಿ.ಇ.ಓ ಮತ್ತು ಸಿಬ್ಬಂದಿ ವರ್ಗದವರು ಸಹಿತ ನಿಯೋಗವು ಸಂಘಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಉಪಸ್ಥಿತರಿದ್ದು ನಿಯೋಗವನ್ನು ಬರಮಾಡಿಕೊಂಡರು ಮತ್ತು ಸಂಘದ ಕಾರ್ಯ ವೈಕರಿ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಚಯಿಸಿದರು. ಸಂಘವು ವರದಿ ವರ್ಷದಲ್ಲಿ ರೂ. 1500 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ ನಡೆಸುವುದರೊಂದಿಗೆ ರೂ. 7 ಕೋಟಿಗೂ ಮಿಕ್ಕಿ ವಾರ್ಷಿಕ ಲಾಭ ಗಳಿಸಲು ಸಹಕರಿಸಿದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಸಂಘವು ಈಗಾಗಲೇ ಕೈಗೊಂಡಿರುವ ರೈತ ಸಿರಿ ಅಗ್ರಿಮಾಲ್ ಇದರ ಕಟ್ಟಡ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು ಮುಂದಿನ ವ್ಯವಹಾರ ಅಭಿವೃದ್ಧಿಯ ಬಗ್ಗೆ ಹಾಗೂ ಒಳ ವಿನ್ಯಾಸ ಇತ್ಯಾದಿ ಕಾಮಗಾರಿ ಶೀಘ್ರದಲ್ಲಿ ಕೈಗೊಂಡು ಸದಸ್ಯರಿಗೆ ಸೇವೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ ರಾತ್ರಿಯೇ ಆಗಮಿಸಿದ್ದ ‌ ಅವರು ಶನಿವಾರ ಬೆಳಗಿನ ಜಾವವೇ ಗಣಹೋಮದಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿರುವುದು ವಿಶೇಷವಾಗಿದೆ. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ Z-ಪ್ಲಸ್ ಭದ್ರತೆ ಕಲ್ಪಿಸಲಾಗಿತ್ತು, ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ರೀತಿಯಲ್ಲಿ ಭಕ್ತರಿಗೆ ಅಡ್ಡಿಪಡಿಸಲಾಗಿಲ್ಲ. ಪೂಜೆ ಬಳಿಕ ‌ದೇವಾಲಯದ ಆಡಳಿತ ‌ ಮಂಡಳಿ ‌ ವತಿಯಿಂದ ಮುಖ್ಯಮಂತ್ರಿ ಸತೀಶನ್ ‌ ಅವರಿಗೆ, ಸಮ್ಮಾನಿಸಿ ಗೌರವ ಸಲ್ಲಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್‌ ಕುಂದಾಪುರ ಮಿಡ್‌ಟೌನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಕಾರ್ಯದರ್ಶಿಯಾಗಿ ಪ್ರವೀಣ್‌ ಶೆಟ್ಟಿ ಅಂಪಾರು ಆಯ್ಕೆಯಾಗಿದ್ದು, ನೂತನ ಕೋಶಾಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ಶಾನಾಡಿ ಆಯ್ಕೆಗೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕೋಟೇಶ್ವರ ಅಂಕದಕಟ್ಟೆಯ ಸಹನಾ ಕನ್ವೆನ್ಸನ್ ಹಾಲ್‌ನಲ್ಲಿ ಜು. 11ರಂದು ಸಂಜೆ 7.00ರಿಂದ ಜರುಗಲಿದ್ದು, ವಲಯ-1ರ ಅಸಿಸ್ಟೆಂಟ್ ಗವರ್ನರ್ ಪಿಹೆಚ್‌ಎಫ್ ಜೆ. ಶ್ರೀನಾಥ್ ರಾವ್ ಪದಗ್ರಹಣ ನೆರವೇರಿಸಲಿದ್ದಾರೆ. ಸಮಾರಂಭದ ಮುಖ್ಯ ಅತಿಥಿಯಾಗಿ ಕಾರ್ಕಳದ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ರೋಟರಿ ಕ್ಲಬ್‌ನ ಸುದ್ದಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ಸಂಸ್ಥೆಗಳ ವತಿಯಿಂದ “ಭಾರತದ ವೈಜ್ಞಾನಿಕ ಪರಂಪರೆ” (Scientific Heritage of India) ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಐಐಟಿ ಕಾನ್ಪುರದಿಂದ ಪಿಎಚ್.ಡಿ. ಪದವಿ ಪಡೆದ ಹಿರಿಯ ಶಿಕ್ಷಣತಜ್ಞರು ಹಾಗೂ ಭಾರತೀಯ ಇತಿಹಾಸ, ತತ್ವಶಾಸ್ತ್ರ ಮತ್ತು ವೈಜ್ಞಾನಿಕ ಪರಂಪರೆಯ ಅಧ್ಯಯನಕಾರರಾಗಿದ್ದ ಡಾ. ಪಿ. ಸುಬ್ಬಣ್ಣ ಭಟ್ ಅವರು ಈ ವಿಷಯದ ಕುರಿತು ಅತ್ಯಂತ ಮನೋಜ್ಞ ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ ಭಾರತವೇ ಜಗತ್ತಿಗೆ ಸಂಖ್ಯಾ ಪದ್ಧತಿಯನ್ನು ನೀಡಿದ ಏಕೈಕ ದೇಶ ಎಂಬ ಐತಿಹಾಸಿಕ ಸತ್ಯವನ್ನು ಅವರು ಒತ್ತಿ ಹೇಳಿದರು. ಪ್ರಾಚೀನ ಭಾರತೀಯ ಗಣಿತಜ್ಞರಾದ ಆರ್ಯಭಟ ಮತ್ತು ಭಾಸ್ಕರಾಚಾರ್ಯರು ಸಾವಿರಾರು ವರ್ಷಗಳ ಹಿಂದೆಯೇ ಸಂಕೀರ್ಣ ಗಣಿತ ಸಮಸ್ಯೆಗಳಿಗೆ ಅತ್ಯಂತ ನಿಖರವಾದ ಪರಿಹಾರಗಳನ್ನು ಕಂಡುಹಿಡಿದಿದ್ದರು ಎಂದು ವಿವರಿಸಿದರು.ಖಗೋಳ ವಿಜ್ಞಾನದ ಕ್ಷೇತ್ರದಲ್ಲಿಯೂ ಪ್ರಾಚೀನ ಭಾರತೀಯರ ಸಾಧನೆಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದ ಅವರು, ಆಧುನಿಕ ವಿಜ್ಞಾನ ಉದಯಿಸುವುದಕ್ಕೂ ಮುನ್ನವೇ ಭಾರತೀಯರು ಗ್ರಹಗಳ ಚಲನೆ, ಗ್ರಹಣಗಳ ಲೆಕ್ಕಾಚಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ವತಿಯಿಂದ ವೈದ್ಯರ ದಿನಾಚರಣೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಮ್.ಜೆ.ಎಫ್ ಲಯನ್ ಬನ್ನಾಡಿ ಪ್ರಭಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷರಾದ ಲಯನ್ ಬನ್ನಾಡಿ ಸೋಮನಾಥ್ ಹೆಗ್ಡೆ ಅವರ ನಿವಾಸದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೋಟೇಶ್ವರದ “ಸ್ವಾತಿ” ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿದ ಮಾತನಾಡಿದ ಅವರು ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸದಸ್ಯರಿಗೆ ಕೃತಜ್ಞತೆಗಳನ್ನು ಅರ್ಪಿಸಿದರು. ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸ್ಥಾಪಕ ಕಾರ್ಯದರ್ಶಿ ಲಯನ್ ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿ ವೈದ್ಯರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಮಾಜಿ ಅಧ್ಯಕ್ಷರಾದ ಲಯನ್ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಯವರ ಪರಿಚಯ ಮಾಡಿದರು. ಲಯನ್ಸ್ ಜಿಲ್ಲೆ-317 ಸಿ, ಪ್ರಾಂತ್ಯ…

Read More

ಕುಂದಾಪ್ರ ಡಾಟ್‌ ಕಾಂ ಸದ್ದಿ.ಕೋಟ: ಪ್ರತಿಯೊಂದು ವಿದ್ಯಾರ್ಥಿಯು ತನ್ನದೇ ಆದ ಗುಣವಿಶೇಷತೆಗಳನ್ನು ಹೊಂದಿರುತ್ತಾನೆ. ಅದನ್ನು ಆತ ಅರಿತು ತನ್ನಲ್ಲಿ ಅವಿರತ ಪ್ರಯತ್ನ, ಪರಿಶ್ರಮ, ಅಧ್ಯಯನ ಶೀಲತೆ ಮೈಗೂಡಿಸಿಕೊಂಡರೆ ಸಾಧಕನಾಗಬಹುದು. ಈ ಸಾಧನೆಗೆ ನಿಮ್ಮ ಸುತ್ತಮುತ್ತಲಿನ ಪರಿಸರದ ವ್ಯಕ್ತಿಗಳು, ಪೋಷಕರು, ಶಿಕ್ಷಕರು ಪ್ರೇರಣೆಯಾಗಬಹುದು. ಶೈಕ್ಷಣಿಕ ಸಂತ ಕೆ.ಎಲ್. ಕಾರಂತರ ಬದುಕು ನಮಗೆ ಆದರ್ಶವಾಗಲಿ ಎಂದು ಪೂರ್ಣಪ್ರಜ್ಞ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಡಾ| ಅನಂತ ಪದ್ಮನಾಭ ಭಟ್ ನುಡಿದರು. ಅವರು ಇತ್ತೀಚಿಗೆ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ಕೃಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ 89 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಅಧ್ಯಕ್ಷರಾದ ಪಿ. ಭಾಸ್ಕರ ಹಂದೆ ವಹಿಸಿದ್ದರು. ಕೋಟ ವಿದ್ಯಾಸಂಘದ ಕಾರ್ಯದರ್ಶಿ ಎಂ. ರಾಮದೇವ ಐತಾಳ್ ಶುಭಾಶಂಸನೆಗೈದರು. ಆಡಳಿತ ಮಂಡಳಿಯ ಸದಸ್ಯರಾದ ಶ್ರೀಪತಿ ಹೇರ್ಳೆ, ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚೇಂಪಿ ರಮಾನಂದ ಭಟ್ ಹಿತನುಡಿಗೈದರು. ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಚೈತನ್ಯಶ್ರೀ ಉಡುಪ, ನಾಲ್ಕನೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜು10: ಕುಂದಾಪುರದ ತಹಶೀಲ್ದಾರರಾಗಿ ವಸಂತ ಕುಮಾರ ಅವರು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಉಪ ತಹಶೀಲ್ದಾರರಾಗಿದ್ದು, ಗ್ರೇಡ್ -2 ತಹಶೀಲ್ದಾರರಾಗಿ ಪದೊನ್ನತಿ ಹೊಂದಿ ಕುಂದಾಪುರ ತಾಲೂಕು ಕಛೇರಿಯಲ್ಲಿ ಅವರು ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜುಲೈ10:  ಕುಂದಾಪುರ ಮಂಡಲ ಬಿಜೆಪಿ ವತಿಯಿಂದ ಕುಂದಾಪುರ ನಗರ ಸೆಂಟ್ರಲ್ ಶಕ್ತಿ ಕೇಂದ್ರಕ್ಕೆ ನೂತನ ಪದಾಧಿಕಾರಿಗಳನ್ನು ಗುರುವಾರ ಕುಂದಾಪುರ ನಗರದ ವಿಶ್ವಕರ್ಮ ಕನ್ವೆನ್ಷನ್ ಹಾಲ್‌ನಲ್ಲಿ ಆಯ್ಕೆ ಮಾಡಲಾಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ನೂತನ ತಂಡವು ಜನರೊಂದಿಗೆ ನೇರ ಸಂಪರ್ಕ ಇಟ್ಟುಕೊಂಡು ಪಕ್ಷದ ಕಾರ್ಯವೈಖರಿಯ ಬಗ್ಗೆ ಮನೆ ಮನೆಗೆ ತಲುಪಿಸಬೇಕು ಎಂದು ತಿಳಿಸಿದರು. ಚುನಾವಣಾ ಗೆಲುವಿನ ಮೂಲ ಬೂತ್ ಮಟ್ಟದಲ್ಲಿದೆ ಶಕ್ತಿಕೇಂದ್ರವೇ ನಮ್ಮ ಯುದ್ಧ ತಂತ್ರದ ಕೇಂದ್ರಬಿಂದು ಎಂದರು. ಸಭೆಯ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿ ಮುಂಬರುವ ಸ್ಥಳೀಯ ಚುನಾವಣೆಯನ್ನು ಗಮನದಲ್ಲಿಟ್ಟು ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದೇ ನಮ್ಮ ಆದ್ಯತೆಯಾಗಿದೆ ಎಂದರು. ಇದೆ ವೇಳೆ ಬೂತ್ ಸಂಖ್ಯೆ 10, 11 ಮತ್ತು13ನೇ ಬೂತ್‌ಗಳಿಗೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಉದಯ ಹೊನ್ನನಕೇರಿ ಹಾಗೂ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಇವರನ್ನು ಆಯ್ಕೆ ಮಾಡುವುದರ ಜೊತೆಗೆ 3 ಬೂತ್‌ಗಳ ಅಧ್ಯಕ್ಷ ಕಾರ್ಯದರ್ಶಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಕುಂಭಾಶಿಯ ಯು. ಸಂಗೀತಾ ಶೆಣೈಗೆ “ಡಾಕ್ಟರ್ ಆಫ್ ಫಿಲಾಸಫಿ” ಪದವಿ ಪ್ರದಾನ ಮಾಡಿದೆ. ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸಾಯನ್ಸ್ ನಲ್ಲಿ ಅಧ್ಯಯನ ಮಾಡುತ್ತಿದ್ದ ಅವರು ಡಾ. ರಘು ರಾಧಾಕ್ರೃಷ್ಣನ್ ಹಾಗೂ ಡಾ. ಶ್ಯಾಮ ಪ್ರಸಾದ್ ಕೆ. ಅವರ ಮಾರ್ಗದರ್ಶನದಲ್ಲಿ “ಓರಲ್ ಕ್ಯಾನ್ಸರ್ ” ವಿಷಯದಲ್ಲಿ ಸಂಶೋಧನೆ ನಡೆಸುತ್ತಿದ್ದರು. ಈಕೆ ಕುಂದಪ್ರಭ ವಾರಪತ್ರಿಕೆ ಸಂಪಾದಕರಾದ ಯು.ಎಸ್. ಶೆಣೈ., ಸಾಧನಾ ಎಸ್. ಶೆಣೈ ಅವರು ದ್ವಿತೀಯ ಪುತ್ರಿ.

Read More