Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಸತತ 12 ನೇ ಬಾರಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸ್ನೇಹ ಎಸ್. ಆಚಾರ್ಯ (455), ಕೀರ್ತನಾ ಶೆಟ್ಟಿ (453), ಆಯಿಷಾ ಸಮಾ (447), ಹಂಸವಿ ಕಾಂಚನ್ (444), ಸೈಯದ್ ಅನಾಸ್ (435), ಕೀರ್ತನಾ ಕೆ. ಶೆಟ್ಟಿ (426), ಹರ್ಷಿತಾ ಶೆಟ್ಟಿ (410), ದೀಪ್ತಿ (408), ತುಷಾರ ಜಿ. ಆಚಾರ್ಯ (401) ಅಂಕಗಳನ್ನು ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದು ಒಟ್ಟು 60 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲಿ, 12 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಶಾಲಾ ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡಾ ತಿಳಿಸಿದರು. ಉತ್ತಮ ಫಲಿತಾಂಶವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಗೆ ಹಾಗೂ ಸಹಕರಿಸಿದ ಪೋಷಕರಿಗೆ ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೋಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ 27 ಅಡಿ ಎತ್ತರದ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಹಾಗೂ 21 ಅಡಿ ಎತ್ತರದ ಶ್ರೀ ರಾಮಚಂದ್ರ ದೇವರ ಏಕಶಿಲಾ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು. ಆಚಾರ್ಯ ಶ್ರೀ ಗುಲಾಬ್‌ ಭೂಷಣ ಮುನಿಮಹಾರಾಜರ ಸಾನಿಧ್ಯ ಹಾಗೂ ಸ್ವಸ್ತೀಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮೀಜಿ ಹುಂಬುಚ, ಸೋಂದಾ ಶ್ರೀ ಕ್ಷೇತ್ರ ಜೈನ ಮಠದ ಜಗದ್ಗುರು ಅಕಲಂಕ ಕೇಸರಿ ಸ್ವಸ್ತಿ ಶ್ರೀ ಭಟ್ಟ ಕಲಂಕ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಪ್ರತಿಷ್ಠಾಪನಾ ಕಾರ್ಯ ನೆರವೇರಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ವಿರೇಂದ್ರ ಹೆಗ್ಡಡೆಯವರು ಶ್ರೀ ಕ್ಷೇತ್ರ ಬೋಳಂಬಳ್ಳಿಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಭಗವಾನ್‌ ಬಾಹುಬಲಿ ಮತ್ತು ಶ್ರೀ ರಾಮಚಂದ್ರ ಮೂರ್ತಿ ಅದನ್ನು ನಿರ್ಮಾಣ ಮಾಡಿರುವವರ ಮನಸ್ಸಿನ ಪ್ರತೀಕ ಎಂಬಂತೆ ಮೂಡಿಬಂದಿದೆ. ಈ ಪವಿತ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ – 2025 ಕೈಗೊಂಡು ಎಲ್ಲಾ ವರ್ಗದವರಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಒದಗಿಸುವುದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಉದ್ದೇಶವಾಗಿದೆ. ಎಲ್ಲಾ ಕಾಲದಲ್ಲಿಯೂ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿರುತ್ತದೆ. ಮೀಸಲಾತಿಯ ಪ್ರಯೋಜನವು ಎಲ್ಲಾ ಜಾತಿಗಳಿಗೆ ಸಮಾನವಾಗಿ ತಲುಪುವಂತೆ ಮಾಡಲು ಪರಿಶಿಷ್ಟ ಜಾತಿಗಳ ವರ್ಗಿಕರಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆಯಿರುತ್ತದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಭಾರತದ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಅಡಿಯಲ್ಲಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿಗಳ ಒಳ ವರ್ಗಿಕರಣ ಮಾಡಬಹುದಾಗಿದೆ ಎಂದು State of Punjab and Others v/s Devinder Singh…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗುಂಡ್ಮಿ ಪೆಟ್ರೋಲ್ ಬಂಕ್ ಎದುರುಗಡೆ ಸಾಸ್ತಾನ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಟಿ ವಾಹನ ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ರವೀಂದ್ರ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಟಿಟಿ ವಾಹನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಬಗ್ಗೆ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವಿಶ್ವ ಜೇನುನೊಣ ದಿನಾಚರಣೆಯ ಅಂಗವಾಗಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪ್ರಾಣಿಶಾಸ್ತ್ರ ವಿಭಾಗದ ‘ಜೇನುನೊಣ ಕೃಷಿ’ ಸರ್ಟಿಫಿಕೇಟ್ ಕೋರ್ಸ್‌ನ ವಿದ್ಯಾರ್ಥಿಗಳು ಜೇನುಸಾಕಣೆಯ ಪ್ರಾಯೋಗಿಕ ತರಬೇತಿಗಾಗಿ ಸಂಪಿಗೆ ಬಳಿಯ ಜೇನುಸಾಕಣೆ ಘಟಕಕ್ಕೆ ಭೇಟಿ ನೀಡಿದರು. ಸಂಪಿಗೆಯ ರೋಶು’ಸ್ ಹನಿ ಫಾರ್ಮ್ನ, ಅನುಭವಿ ಜೇನುಸಾಕಣೆದಾರ ಮತ್ತು ತರಬೇತುದಾರ ರೋಶನ್ ಲಾರೆನ್ಸ್ ಫೆರ್ನಾಂಡಿಸ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪ್ರಕೃತಿಯಲ್ಲಿ ಮನುಷ್ಯನಿಲ್ಲವಾದರೂ ಭೂಮಿ ಉಳಿದಿತು ಆದರೆ ಜೇನುನೊಣಗಳಿಲ್ಲದೆ  ಭೂಮಿಯನ್ನು ಊಹಿಸಲು ಸಾಧ್ಯವಿಲ್ಲ. ಪ್ರಕೃತಿಯಲ್ಲಾಗುವ ಶೇಕಡಾ 80 ಪರಾಗಸ್ಪರ್ಶ ಜೇನುನೊಣಗಳಿಂದ ನಡೆಯುತ್ತದೆ.  ಆದ್ದರಿಂದ ಭೂಮಿಯ ಮೇಲೆ ಜೇನು ಜಾತಿಯೇ ಶ್ರೇಷ್ಠ ಜಾತಿ ಎಂದರು.ಅವರು ಜೇನುನೊಣಗಳ ಸಾಕಣೆ, ಜೇನುನೊಣ ಘಟಕದ ಸ್ಥಾಪನೆ, ಗಂಡು ಮತ್ತು ಹೆಣ್ಣು ಜೇನುನೊಣಗಳ ನಡುವಿನ ವ್ಯತ್ಯಾಸ, ಅವುಗಳ ಜೀವಿತಾವಧಿ ಮತ್ತು ಜೇನುಸಾಕಣೆಯ ಅಗತ್ಯ ಅಂಶಗಳಾದ ಜೇನುಸಾಕಣೆ ಪೆಟ್ಟಿಗೆ, ಪ್ರವೇಶ ದ್ವಾರ ಕಡಿತಗೊಳಿಸುವ ಸಾಧನ ಇತ್ಯಾದಿಗಳ ಬಗ್ಗೆ ಆಳವಾದ ಒಳನೋಟಗಳನ್ನು ಒದಗಿಸಿದರು. ವಿದ್ಯಾರ್ಥಿಗಳು ಜೇನು ತೆಗೆಯುವ ಪ್ರಕ್ರಿಯೆಯನ್ನು ಕೈಯಿಂದ ತಯಾರಿಸಿದ ಜೇನುತುಪ್ಪ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಓರ್ವ ಕಲಾವಿದನ ಬದುಕು ರಂಗಸ್ಥಳದಲ್ಲಿಯೇ ಗುರುತಿಸುವಂತಾಗಬೇಕು. ಕಲೆಯ ಮೇಲಿನ ಶೃದ್ಧೆ ಅವರ ಬದುಕಿಗೆ ದಾರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಯಕ್ಷಗಾನ ಕಲಾವಿದ ಮಾಧವ ನಾಗೂರು ಅಭಿನಂದನಾ ಸಮಿತಿ ವತಿಯಿಂದ ಮಾಧವ ನಾಗೂರು ಅವರ ಯಕ್ಷಯಾನದ ರಜತ ಸಂಭ್ರಮದ ಬೆಳ್ಳಿಪಥ ಅಭಿನಂದನೆ, ಗುರುವಂದನೆ, ನಿಧಿ ಸಮಪರ್ಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಕ್ಷಗಾನದಲ್ಲಿಬೆಳೆದು ಬರಲು, ಶಕ್ತಿ ತುಂಬಲು ಪ್ರೇರಣೆ, ಪ್ರೋತ್ಸಾಹಿಸುವುದರ ಜತೆಗೆ ಗುರುತಿಸುವ ಕೆಲಸ ಮಾಡುವುದು ಒಳ್ಳೆಯ ಕೆಲಸ. ಯಕ್ಷಗಾನ ಕಲಾವಿದರ ಬದುಕು ರೂಪಿಸುವ ಕೆಲಸವಾಗಬೇಕು. ಈ ಬಗ್ಗೆ ಸರ್ಕಾರದ ನೆಲೆಯಲ್ಲಿ ಹೆಚ್ಚಿನ ಕೆಲಸವಾಗಬೇಕು. ಓರ್ವ ಕಲಾವಿದನಿಗೆ ಸರ್ಕಾರ ನೀಡುವ ಪ್ರಶಸ್ತಿಗಳಿಗಿಂತಲೂ ಅಭಿಮಾನಿಗಳು ನೀಡುವ ಪ್ರಶಸ್ತಿಯೇ ದೊಡ್ಡದು ಎಂದು ಹೇಳಿದರು. ಇದಕ್ಕೂ ಮುನ್ನ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಧವ ನಾಗೂರು ಅಭಿನಂದನಾ ಸಮಿತಿಯ ಅಧ್ಯಕ್ಷ ಆನಂದ ಸಿ. ಕುಂದರ್‌ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಹಳೆಯ ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಛಲ ಬದ್ಧತೆ ಮತ್ತು ಪರಿಶ್ರಮದಿಂದ  ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ  ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು.  ಅವರು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ  ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.  ಈ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ರಾಂಕ್ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಸುಶ್ಮಿತಾ ಎಸ್. ಗಾಣಿಗ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಅಗ್ರಸ್ಥಾನಿ ಕ್ಷಮಾ ಆರ್ ಆಚಾರ್ಯ, ಪಿಯುಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಜಯಶ್ರೀ ಮತ್ತು ಜ್ಯೋತಿಕಾ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ರಿಷಿಕೇಶ, ಜ್ಯೋತಿಕಾ, ಸಂಜನಾ ಖಾರ್ವಿ ಮತ್ತು ಭಾಸ್ಕರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ಯಲ್ಲಿ ವಿವಿಧ ತಾಂತ್ರಿಕ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.cite.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ಅವರ  ಜನ್ಮ ದಿನದ ಅಂಗವಾಗಿ ವಿಶ್ವ ದಾದಿಯರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದಾದಿಯರ ದಿನದ ಪ್ರಯುಕ್ತ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೇಸಿಕ್ ಲೈಫ್ ಸಪ್ಪೋರ್ಟ್ ಮತ್ತು ಪ್ರಥಮ ಚಿಕಿತ್ಸಾ ತರಬೇತಿಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿ ಮೆಡಿಷುರ್ ಹೆಲ್ತ್ ಕೇರ್ ಅಕಾಡೆಮಿಯ ಡೈರೆಕ್ಟರ್ ಹಾಗೂ ಪ್ರಮಾಣಿತ ತರಬೇತುದಾರರಾದ ಡಾ. ಆಸಿಫ್ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ದಾದಿಯರ ದಿನಾಚರಣೆಯಂದು ದಾದಿಯರಿಗೆ ಪ್ರಾಮಾಣಿಕತೆ ಮತ್ತು ವಿನಮ್ರತೆಯು ಮುಖ್ಯ ಎಂದರು. ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ಸಲಹೆಗಾರರಾದ ಚಂದ್ರಶೇಖರ್ ಅವರು ದಾದಿಯರ ದಿನದ ಮಹತ್ವವನ್ನು ಸಾರಿದರು. ವಿದ್ಯಾರ್ಥಿನಿಯಾದ ಆಯೇಷಾ ರಫೀದ ಕಾರ್ಯಕ್ರಮ ನಿರೂಪಿಸಿ, ಪ್ರಾಂಶುಪಾಲರಾದ ಜೆನಿಫರ್ ಫ್ರೀಡಾ ಮನೆಜಸ್ ಸ್ವಾಗತಿಸಿ, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್. ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪ ವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆಗಾಲದಲ್ಲಿ ಮಳೆಯ ನೀರು ಹೆಚ್ಚಾಗಿ ಕೃತಕ ನೆರೆಗಳು ಉಂಟಾಗಿ ಮನೆಗಳಿಗೆ ಹಾಗೂ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಹಾನಿ ಉಂಟಾಗುತ್ತದೆ. ಕಳೆದ ಮಳೆಗಾಲದಲ್ಲಿ ಇಂತಹ ಪ್ರಕರಣಗಳು ಉಂಟಾಗಿ ಸಾರ್ವಜನಿಕರು ತೊಂದರೆಯನ್ನು ಅನುಭವಿಸಿದ್ದಾರೆ. ಈ ಬಾರಿ ಹೀಗಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜ ಕಾಲುವೆ, ತೋಡುಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸಲು ಈಗಾಗಲೇ ಕಳೆದ ಎರಡು ಮೂರು ತಿಂಗಳಿನ ಹಿಂದೆ ಸೂಚಿಸಲಾಗಿದೆ.…

Read More