Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ತಾರಾಪತಿ ಕಡಲ ಕಿನಾರೆಯಲ್ಲಿ ಕಳೆದ 50 ದಿನಗಳಿಂದ ಕಡಲಾಮೆಗಳ ಮೊಟ್ಟೆ ಸಂರಕ್ಷಣೆ ಕಾರ್ಯ ನಡೆಯುತ್ತಿದ್ದು, ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆಯಿಂದ ಮೊಟ್ಟೆಗಳು ಒಡೆದು 100ಕ್ಕೂ ಅಧಿಕ ಮರಿಗಳು ಹೊರಬಂದು ಕಡಲು ಸೇರಿವೆ. ತಾರಾಪತಿಯಲ್ಲಿ ನಿರ್ಮಿಸಲಾದ ಎರಡು ಹ್ಯಾಚರಿಗಳ ಪೈಕಿ ಒಂದರಲ್ಲಿ ಕಳೆದ ವಾರ 85 ಮರಿಗಳು, ಉಳಿದಂತೆ ಕೊನೆಯ ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆ 105 ಕಡಲಾಮೆ ಮರಿಗಳನ್ನು ಸುರಕ್ಷಿತವಾಗಿ ಕಡಲು ಸೇರಿದ್ದವು. ಮರವಂತೆಯಲ್ಲಿ ಒಂದು ಹ್ಯಾಚರಿಯಿಂದ 2 ವಾರಗಳ ಹಿಂದೆ 115 ಮರಿಗಳು ಸಮುದ್ರ ಸೇರಿದ್ದವು. ಒಟ್ಟು 3 ಹ್ಯಾಚರಿಗಳಿಂದ 300ಕ್ಕೂ ಅಧಿಕ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು. ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ, ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಸ್ಥಳೀಯರ ಮಾಹಿತಿಯಂತೆ ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳು ಮುತುವರ್ಜಿ ವಹಿಸಿ ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ರೈಲ್ವೆ ಓವರ್‌ ಬ್ರಿಜ್‌ ಬಳಿ ನಡೆದ ಅಪಘಾತದಲ್ಲಿ ಟ್ರಾಕ್‌ ಮೆನ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಬಿಜೂರು ಗ್ರಾಮದ ಆನಂದ ಪೂಜಾರಿ (43) ಅವರ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರೀಯಗೊಂಡು ಮೃತಪಟ್ಟ ಖೇದಕರ ಘಟನೆ ನಡೆದಿದೆ. ಮೂಡ್ಲಕಟ್ಟೆ ಕೊಂಕಣ್ ರೈಲ್ವೆ ಓವರ್‌ ಬ್ರಿಜ್‌ ಬಳಿಯಲ್ಲಿ ಹೈಟ್‌ ಗೇಜ್‌ ದುರಸ್ತಿ ನಡೆಯುತ್ತಿದ್ದ ಸಂದರ್ಭ, ಸೋಮವಾರ ಕರ್ತವ್ಯದಲ್ಲಿದ್ದ ಆನಂದ ಪೂಜಾರಿ ಅವರ ತಲೆಗೆ ಹೈಟ್‌ ಗೇಜ್‌ನ ಕಂಬಿ ತಾಕಿ ಕೆಳಕ್ಕೆ ಬಿದ್ದದ್ದರಿಂದ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಆನಂದ ಪೂಜಾರಿ ಅವರ ಮೆದುಳು ನಿಷ್ಕ್ರೀಯಗೊಂಡಿರುವ ಬಗ್ಗೆ ತಿಳಿಸಿದ್ದರು. ಎರಡು ದಿನದ ಬಳಿಕ ಅವರು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ. ಜನಾನುರಾಗಿ ಯುವಕ:ಬೈಂದೂರು ಬಿಲ್ಲವ ಸಂಘಟನೆ, ನಾರಾಯಣಗುರು ಕಲಾ ಮತ್ತು ಕ್ರೀಡಾ ಸಂಘ ಬಿಜೂರು, ಫ್ರೆಂಡ್ಸ್‌ ಕ್ಲಬ್‌ ಉಪ್ಪುಂದ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ಆನಂದ ಪೂಜಾರಿ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಬೇಸಿಗೆ ಶಿಬಿರಕ್ಕಾಗಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕುಂದಾಪುರ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ 66 ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಬಾಲಕ ಸ್ಥಳೀಯ ಎಸ್ ಎಮ್ ಎಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ವಕ್ವಾಡಿ ಹೆಬ್ಬಾಗಿಲು ಮನೆ ಸಂತೋಷ್‌ ಶೆಟ್ಟಿ ಎಂಬುವರ ಪುತ್ರ ವಂಶಿ ಜಿ. ಶೆಟ್ಟಿ (14) ಎಂದು ಗುರುತಿಸಲಾಗಿದೆ. ಬಾಲಕ ವಂಶಿ ಜಿ. ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮನುಷ್ಯನ ಬದುಕಿನಲ್ಲಿ ನೈತಿಕ ಮೌಲ್ಯಗಳು ಪ್ರಧಾನ ಭೂಮಿಕೆಯನ್ನು ವಹಿಸುತ್ತವೆ. ಮಾನವೀಯ ಮೌಲ್ಯಗಳಾದ ಶಾಂತಿ, ಪ್ರೀತಿ, ಪ್ರೇಮ, ಕರುಣೆ, ಅಹಿಂಸೆ, ಸಹಿಷ್ಣುತೆ ಮುಂತಾದ ಉತೃಷ್ಠ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜವನ್ನು ಕಟ್ಟಬಹುದಾಗಿದೆ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳ ಮಹಾಮೇರುಗಳಾಗಿ ಭವಿಷ್ಯದಲ್ಲಿ ವಿಜೃಂಭಿಸಲು ಕುವೆಂಪು ಸೃಜಿಸಿದ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಓದು ಸಹಕಾರಿಯಾಗುತ್ತದೆಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರವಿರಾಜ ಶೆಟ್ಟಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ, ಕಾಲೇಜಿನ ಐಕ್ಯೂಎಸಿ ಮತ್ತು ಕನ್ನಡ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಅನಲೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಕರ್ತವ್ಯದಲ್ಲಿದ್ದಾಗ ಡಿ.24ರಂದು ಸೇನಾ ವಾಹನ ದುರಂತದಲ್ಲಿ ಹುತಾತ್ಮರಾದ ಯೋಧ ಅನೂಪ್ ಪೂಜಾರಿ ಅವರ ಕುಟುಂಬಕ್ಕೆ ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘದ ಮೂಲಕ ಭಟ್ಕಳದ ಮಾಜಿ ಸೈನಿಕರು ಹಾಗೂ ಸೇವಾನಿರತ ಸೈನಿಕರ ರೂ. 60,000ನೆರವು ನೀಡಿದರು. ಭಟ್ಕಳದ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಅವರ ನೇತೃತ್ವದಲ್ಲಿ ಮಾಜಿ ಸೈನಿಕ ಸಂಘದ ಸದಸ್ಯರಾದ ಹನುಮಂತ ನಾಯ್ಕ, ಕೇಶವ ನಾಯ್ಕ ಹಾಗೂ ಊರಿನ ಪ್ರಮುಖರಾದ ಭವಾನಿಶಂಕರ ನಾಯ್ಕ ಅವರು ಕುಂದಾಪುರದ ಬೀಜಾಡಿಯಲ್ಲಿನ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ನಿವಾಸಕ್ಕೆ ತೆರಳಿ ಅವರ ಧರ್ಮಪತ್ನಿ ಹಾಗೂ ಅವರ ತಾಯಿಯವರಿಗೆ ಸಾಂತ್ವನ ಹೇಳಿ, ತಲಾ 30 ಸಾವಿರದಂತೆ (ಒಟ್ಟೂ 60 ಸಾವಿರ) ಅವರ ಧರ್ಮಪತ್ನಿ ಹಾಗೂ ತಾಯಿಯವರಿಗೆ ಡಿ.ಡಿ. ಮೂಲಕ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಎಮ್ ಡಿ ಪಕ್ಕಿ ಅವರು ಪೋನ್ ಕರೆ ಮೂಲಕ ಅನೂಪ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ’ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳಿಗೆ ಕೊರತೆ ಇರದು. ಆದರೆ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ  ಉಪಯೋಗಿಸಿಕೊಳ್ಳುವ ಜಾಣ್ಮೆ ಪ್ರತಿಯೊಬ್ಬರಲ್ಲಿರಬೇಕು  ಎಂದು ದ.ಕ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ  ನುಡಿದರು. ಅವರು ಇಲ್ಲಿನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ವಿವಿಧ ವಿದ್ಯಾರ್ಥಿ ಘಟಕಗಳ ವಾರ್ಷಿಕ ದಿನಾಚರಣೆ ’ಇನಾಮು – 2025’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯುವಜನತೆ ತಮ್ಮ ಇಚ್ಛಾಶಕ್ತಿಯ ಸಾಮರ್ಥ್ಯವನ್ನು ಅರಿತು, ತಮ್ಮ ಗುರಿಯನ್ನು ತಲುಪುವಲ್ಲಿ ಕಾರ್ಯಪ್ರವೃತ್ತರಾಗಬೇಕು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬಹಳ ಎತ್ತರಕ್ಕೆ ಬೆಳೆದು, ಎಲ್ಲರಿಗೂ ಮಾದರಿಯಾಗಿ ದೇಶಕ್ಕೆ ಹೆಮ್ಮೆ ತರುವ ಕಾರ್ಯ ನೆರವೇರಲಿ ಎಂದು ಆಶಿಸಿದರು. ವ್ಯಕ್ತಿತ್ವ ವಿಕಸನದಲ್ಲಿ ತರಗತಿ ಶಿಕ್ಷಣ ಒಂದು ಭಾಗವಷ್ಟು. ಅದನ್ನು ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳು ಸಾಕಷ್ಟಿವೆ. ಇಂತಹ ವಿಫುಲ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಆಳ್ವಾಸ್ ಕಲ್ಪಿಸುತ್ತಿರುವುದು ಶ್ಲಾಘಿನೀಯ. ಹಳೆ ವಿದ್ಯಾರ್ಥಿಗಳ ಪುನರ್ಮಿಲನದಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಸ್ಥೆ ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಭಾಂದವ್ಯವನ್ನು ಬೆಸೆಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ತಾಲೂಕಿನ ಆಜ್ರಿ ಗ್ರಾಮದ ನಿವಾಸಿ ಸುಶೀಲಾ (48) ಅವರು ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗ್ಗೆ8 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ಮನೆಯವರೊಂದಿಗೆ ಇದ್ದ ಅವರು ಮಧ್ಯಾಹ್ನ ಊಟ ಮುಗಿಸಿ ತಾನು ಸಂಘದಲ್ಲಿ ಸಾಲ ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದರು. ನಂತರ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಡಿದಾಗ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂಘದಲ್ಲಿ ಮಾಡಿರುವ ಸಾಲ ತೀರಿಸಲಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಕೃತ್ಯ ಎಸಗಿದ್ದಾರೆ ಎಂದು ಪುತ್ರ ಪ್ರಶಾಂತ್ ದೂರು ನೀಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಸ್ತೆ ದಾಟುತ್ತಿದ್ದ ಗಿಳಿಯಾರು ನಿವಾಸಿ ಗಣಪ ದೇವಾಡಿಗ (68) ಅವರು ಬಸ್ಸು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಪಶು ಆಸ್ಪತ್ರೆ ಎದುರು ಇತ್ತೀಚಿಗೆ ಸಂಭವಿಸಿದೆ. ಅವರು ಸಂಜೆ ಕೆಲಸ ಮುಗಿಸಿ ಮನೆಗೆ ಹೋಗಲೆಂದು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಬಸ್ಸು ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ‌ ‌ಗಾಯಗೊಂಡಿದ್ದ ‌ ಅವರನ್ನು ಸ್ಥಳೀಯರು ತಕ್ಷಣ ಕೋಟ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು ಎಂದು ಪರೀಕ್ಷಿಸಿದ ವೈದ್ಯರು ತಿಳಿಸಿದರು. ಮೃತರು ಕೃಷಿಕರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಲುವಿನ ಜನಾರ್ದನ ಎಂಬುವವರ ಮನೆಗೆ ಮಾರ್ಚ್‌ 10ರ ರಾತ್ರಿ ಯಾರೂ ಇಲ್ಲದೇ ವೇಳೆ ಬಾಗಿಲು ಮುರಿದು ನುಗ್ಗಿ ಕೊಠಡಿಯ ಕಪಾಟಿನಲ್ಲಿರಿಸಿದ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಅಭರಣಗಳನ್ನು ನಗದು ಹಣ ಮತ್ತು ಲ್ಯಾಪ್‌ಟಾಪ್‌ ಕಳವು ಮಾಡಿಕೊಂಡು ಹೋಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆ ಕಳವಾಗಿರುವ ಬಗ್ಗೆ  ಜನಾರ್ದನರವರು ಬೈಂದೂರು ಪೊಲೀಸ್‌ ಠಾಣೆಗೆ ನೀಡಿರುವ ದೂರಿನಂತೆ ಬೈಂದೂರು ವೃತ್ತ ನಿರೀಕ್ಷಕರಾದ ಸವಿತೃತೇಜ, ಬೈಂದೂರು ಠಾಣೆಯ ಪಿಎಸೈ ತಿಮ್ಮೇಶ್‌  ಬಿ.ಎನ್‌ ಮತ್ತು ನವೀನ ಪಿ. ಬೋರ್ಕರ್  ಹಾಗೂ ಸಿಬ್ಬಂದಿಗಳಾದ ಚಿದಾನಂದ, ಮಾಳಪ್ಪ, ಪರಯ್ಯ ಮಠಪತಿ , ನವೀನ್‌, ರವೀಂದ್ರ,  ಅಶೋಕ ರಾಥೋಡ್‌, ಶಂಕರ  ಮತ್ತು ಚಂದ್ರರವರ ತಂಡ  ಮಾರ್ಚ್‌ 30ರಂದು ಈ ಕೃತ್ಯದಲ್ಲಿ  ಭಾಗಿಯಾಗಿರುವ  ಆರೋಪಿಗಳಾದ ಯತಿರಾಜ್‌, ಉಪ್ಪುಂದ, ಮಹೇಶ್‌ ಯಳಜಿತ್‌ ಹಾಗೂ ಕಾರ್ತಿಕ್‌ ನಾಗೂರು ಎಂಬವರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿಗಳು ಕಳವು ಮಾಡಿರುವ ಚಿನ್ನಾಭರಣ, ಲ್ಯಾಪ್‌ಟಾಪ್‌ ಮತ್ತು ಆರೋಪಿಗಳು ಕೃತ್ಯಕ್ಕೆ ಬಳಸಿಕೊಂಡಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದು, ಈ ಪ್ರಯುಕ್ತ ಪಂಚಾಂಗ ಶ್ರವಣ ಕಾರ್ಯ ಜರುಗಿತು. ಸಂಸ್ಥೆಯ ಸಂಸ್ಕೃತ ಅಧ್ಯಾಪಕರಾದ ರಾಮಕೃಷ್ಣ ಉಡುಪರು ಪಂಚಾಗ ಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಕಾಲವೇ ಎಲ್ಲವನ್ನು ನಡೆಸಿಕೊಂಡು ಹೋಗುತ್ತದೆ. ’ಲಲಾಟಲಿಖಿತಾ ರೇಖಾ ಪರಿಮಾರ್ಷ್ಟುನ ಶಕ್ಯತೇ’ ಎಂಬಂತೆ ಭಗವಂತನು ತನ್ನಿಷ್ಟದಂತೆ ಜಗತ್ತನ್ನು ನಡೆಸಿಕೊಂಡು ಹೋಗುತ್ತಾನೆ. ಅವನ ಆಟದ ಬೊಂಬೆಗಳು ನಾವು. ಅವನ ಇಚ್ಛೆ ಇಲ್ಲದೆ ಹುಲ್ಲು ಕಡ್ಡಿಯೂ ಅಲುಗಾಡಲಾರದು ಎಂಬೆಲ್ಲ ಮಾತುಗಳು ಕಾಲಪುರುಷನ ಮಹತ್ವವನ್ನು ತಿಳಿಸುತ್ತವೆ. ವೇದಗಳ ಅರ್ಥವನ್ನರಿಯಬೇಕಾದರೆ ವೇದಾಂಗಗಳ ಜ್ಞಾನ ಅಗತ್ಯ. ಅವುಗಳಲ್ಲಿ ಒಂದು ಜ್ಯೋತಿಶ್ಶಾಸ್ತ್ರ. ಆಕಾಶದಲ್ಲಿರುವ ನಕ್ಷತ್ರ ಗ್ರಹಗಳ ಚಲನವಲನಗಳ ಲೆಕ್ಕಾಚಾರದಂತೆ ದಿನದ ಸ್ಪಷ್ಟ ಮಾಹಿತಿಗಳೇ ಪಂಚಾಂಗ. ಭಾರತೀಯ ಪರಂಪರೆಯಂತೆ ವರ್ಷದ ಬದಲಾವಣೆಯನ್ನು ಯುಗಾದಿ ಶಬ್ದದಿಂದ ಕರೆದು ಆಚರಿಸಿಕೊಂಡು ಬಂದಿದ್ದೇವೆ. ಪ್ರಕೃತಿಯೂ ಕೂಡ ಹೊಸತನವನ್ನು ಕಾಣುವ ಸಮಯವಾದ್ದರಿಂದ ಇದು ಮಹತ್ವವನ್ನು ಪಡೆದುಕೊಂಡಿದೆ. ಸಿಂಹಾವಲೋಕನ ಎಷ್ಟು ಮುಖ್ಯವೋ ಅದೇ ರೀತಿ ಮುಂದಿನ ಗುರಿಗಳ, ಮಾರ್ಗಗಳ…

Read More