Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ಅವರ ಜಿಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ಇರಿಸಿದ್ದ ಮಾರುತಿ ಸಿಫ್ಟ್ ಕಾರನ್ನು ಕಳವುಗೈದಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಬೈಂದೂರು ಪೋಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪೌಜಾನ್ ಅಹ್ಮದ್ ಎಂಬುವರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ನಾಗೂರಿನ ಗೋವಿಂದ ರಾವ್ ಅವರ ಜಿಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ಇರಿಸಿದ್ದ ಅಂದಾಜು ಮೌಲ್ಯ 8 ಲಕ್ಷದ ಮಾರುತಿ ಸಿಫ್ಟ್ ಕಾರನ್ನು ಮೇ.1ರಂದು ಬೆಳಗಿನ ಜಾವ 4.30 ಗಂಟೆಗೆ ಕಳವುಗೈಯಲಾಗಿತ್ತು. ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ಅವರು ನೀಡಿರುವ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಕಾರು ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತಂಡ ವಿಶೇಷ ತಂಡವು ಮೇ.2ರಂದು ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಾದೀನಪಡಿಸಿಕೊಂಡಿರುತ್ತಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.ರಕ್ಷಕ್ ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ. ಈ ಪ್ರಕರಣದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತದಲ್ಲಿ ಎಸ್‌ಟಿಇಎಮ್‌ ಶಿಕ್ಷಣ ಮತ್ತು ವೈಜ್ಞಾನಿಕ ಚಿಂತನೆಯ ಕುರಿತು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಚಿಂತನ – ಮಂಥನ ಓದುಗರ ವೇದಿಕೆಯು ಅತಿಥಿ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುಲಪತಿ ಹಾಗೂ ಪ್ರಖ್ಯಾತ ಭೌತಶಾಸ್ತ್ರಜ್ಞರಾದ ಡಾ. ಶರತ್ ಅನಂತಮೂರ್ತಿ ಅವರು ಭಾರತದಲ್ಲಿ ಎಸ್‌ಟಿಇಎಮ್‌ (ಸೈನ್ಸ್, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ) ಶಿಕ್ಷಣದ ಸ್ಥಿತಿಗತಿಗಳು ಮತ್ತು ವಿಜ್ಞಾನ ಚಿಂತನೆಯ ಇತಿಹಾಸದ ಕುರಿತು ಮಾತನಾಡಿದರು. ಭಾರತೀಯ ಜಿಡಿಪಿಯ ಶೇ.0.3 ರಷ್ಟು ಮಾತ್ರ ಸಂಶೋಧನೆಗೆ ಖರ್ಚು ಮಾಡಲಾಗುತ್ತಿದೆ ಎಂಬುದರ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಹೆಚ್ಚು ಹೂಡಿಕೆ ಮಾಡಿದರೆ ಉತ್ತಮ ಸಂಶೋಧನೆ ಸಾಧ್ಯವಾಗುತ್ತದೆ. ವಿಶ್ವವಿದ್ಯಾಲಯಗಳು ಪಾರದರ್ಶಕವಾದ ಅಂತಾರಾಷ್ಟ್ರೀಯ ಸಂವಾದ ಹೊಂದಿರಬೇಕು ಹಾಗೂ ಸೃಜನಶೀಲತೆ, ಜ್ಞಾನ ವಿಕಾಸ ಮತ್ತು ಸಾಮಾಜಿಕ ಬದಲಾವನೆಗಳ ಕೇಂದ್ರಗಳಾಗಿರಬೇಕು ಎಂದರು. ಭಾರತೀಯರು ಯುರೋಪಿಯನ್ ಚಿಂತನೆಗಷ್ಟೇ ಆಧಾರವಾಗಿರುವ ಶಿಕ್ಷಣವನ್ನು ಅನುಸರಿಸುತ್ತಿದ್ದೇವೆ. ಭಾರತೀಯ ಜ್ಞಾನ ಪದ್ಧತಿಗೆ ಪರಿಸರ ಅಗತ್ಯವಿದೆ. ಅದು ಇತಿಹಾಸವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ವಿಶ್ಲೇಷಿಸಬೇಕು ಮತ್ತು ಸತ್ಯತೆಯನ್ನು ಒಪ್ಪಿಕೊಳ್ಳುವಂತಿರಬೇಕು. ಕೌಶಲ್ಯ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟಕ್ಕೆ 2ನೇ ರ್ಯಾಂಕ್‌ ಪಡೆದ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್. ಗಾಣಿಗ ಅವರನ್ನು ಅವರ ಮನೆಯಲ್ಲಿ ನಾಯಕವಾಡಿ-ಗುಜ್ಜಾಡಿ ಗಾಣಿಗ ಸಮಾಜ ಬಾಂಧವರ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಗಾಣಿಗ ಸಮಾಜದ ಮುಖಂಡರಾದ ನಾರಾಯಣ ಗಾಣಿಗ ಮೇಲಂಡಿ, ಸೀತಾರಾಮ ಗಾಣಿಗ ಗಂಗೊಳ್ಳಿ, ಪ್ರಮೋದ ಗಾಣಿಗ ಗಂಗೊಳ್ಳಿ, ಗುರುರಾಜ್ ಗಾಣಿಗ ಗುಜ್ಜಾಡಿ, ಸನತ್ ಗಾಣಿಗ, ಸುಮಿತ್ ಗಾಣಿಗ, ನಿತಿನ್ ಗಾಣಿಗ, ಉದಯ ಗಾಣಿಗ ಗಂಗೊಳ್ಳಿ, ಗಂಗಾಧರ ಗಾಣಿಗ ಗಂಗೊಳ್ಳಿ ಮತ್ತು ಗೋವಿಂದ ಗಾಣಿಗ ಗಂಗೊಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.   ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಕಾವಡಿ ಪ್ರಾಥಮಿಕ ಉಪಕೇಂದ್ರದ ಸಮೀಪ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖರಾದ ಉದಯಶ್ಚಂದ್ರ ಶೆಟ್ಟಿ, ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ಪರವಾಗಿ ಆಕ್ಷೇಪ ವ್ಯಕ್ತಪಡಿಸಿ ಗ್ರಾಮವು ತನ್ನದೇ ಆದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ ಇಲ್ಲಿಯ ಶೇಕಡ ೯೦% ಭಾಗ ಜನರು ಹೆಚ್ಚಾಗಿ ಕೃಷಿ ಹಾಗೂ ಹೈನುಗಾರಿಕೆಯನ್ನು ಅವಲಂಬಿತರಾಗಿದ್ದಾರೆ.ಇಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯನ್ನು ಹೊಂದಿದ್ದು, ಜನನಿಬಿಡರು ವಸತಿಯನ್ನು ಹೊಂದಿದ್ದು, ಅಂಗನವಾಡಿ ಕೇಂದ್ರ, ಸಮುದಾಯ ಆರೋಗ್ಯ ಉಪಕೇಂದ್ರ ಮತ್ತು ಶತಮಾನಕ್ಕೂ ಹಳೆಯದಾದ ದೇವಸ್ಥಾನ, ದೈವಸ್ಥಾನ, ಹಾಗೂ ಗರಡಿಯನ್ನು ಹೊಂದಿದ್ದು, ಇಲ್ಲಿಯ ಜನರು ಹೆಚ್ಚಾಗಿ ಬಾವಿ ಹಾಗೂ ಕೆರೆಯ ನೀರನ್ನು ಕೃಷಿ ಮಾಡಲು ಮತ್ತು ಕುಡಿಯುವ ಬಗ್ಗೆ ನೀರನ್ನು ಉಪಯೋಗಿಸುತ್ತಿದ್ದಾರೆ, ಹೀಗಿರುವಾಗ ಸಾರ್ವಜನಿಕರಿಗೆ ಯಾವುದೇ ಸದ್ದಿಲದೆ,ಮಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸಂಯೋಜನೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಟೇಶ್ವರ ಇವರ ಸಹಭಾಗಿತ್ವದಲ್ಲಿ ಹೆಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ತಾಲೂಕು ಆರೋಗ್ಯ ಕೇಂದ್ರ ಹಾಗೂ ಆಪ್ತ ಸಮಾಲೋಚಕರುರಾದ ನಳಿನಾಕ್ಷಿ ಅವರು ಮಾತನಾಡಿ, ರೋಗ ಲಕ್ಷಣಗಳ ಕುರಿತಾದ ತಿಳಿವಳಿಕೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಅಡಿಪಾಯ. ವಿದ್ಯಾರ್ಥಿ ದೆಸೆಯಲ್ಲಿ ಆಕರ್ಷಣೆಗಳಿಗೆ ಬಲಿಯಾಗದೆ ನೈತಿಕ ಶುದ್ಧಿಯುಳ್ಳ ಜೀವನವನ್ನು ರೂಪಿಸಿಕೊಳ್ಳುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು. ಲೈಂಗಿಕ ಶಿಕ್ಷಣದ ಜ್ಞಾನ, ಸವಾಲಿನ ಸಂದರ್ಭದಲ್ಲಿ ಧೃತಿಗೆಡದ ಆತ್ಮವಿಶ್ವಾಸ ಅತಿ ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಜೈನ್ ಅವರು ವೈಯಕ್ತಿಕ ಜೀವನದಲ್ಲಿ ಪಾಳಿಸಬೇಕಾದ ಆರೋಗ್ಯ ಪೂರ್ಣ ಹವ್ಯಾಸಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೃಷಿ ಉತ್ಪಾದನೆ ಹೆಚ್ಚಿಸುವ ಕಾರ್ಯಕ್ರಮಗಳು ಆಗಾಗ ನಡೆಯಬೇಕು ಈ ಮೂಲಕ ಕೃಷಿ ಆದಾಯ ದ್ವಿಗುಣಗೊಳ್ಖಬೇಕು ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್ ಗುದ್ಯಾಳ್ ನುಡಿದರು. ಅವರು ಭಾನುವಾರ ಕೋಟದ ಗಾಂಧಿ ಮೈದಾನದಲ್ಲಿ ಸಂಸ್ಕ್ರತಿ ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ. ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಸಹಕಾರಿ ವ್ಯವಸಾಯಕ ಸಂಘ ಇವರುಗಳ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಮಾವು ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೃಷಿ ಉತ್ಸವಗಳು ಕೃಷಿಗೆ ಪೂರಕ ವಾತಾವರಣವನ್ನು ಕಲ್ಪಿಸುತ್ತದೆ ಈ ದಿಸೆಯಲ್ಲಿ ಇಂತಹ ಕಾರ್ಯಕ್ರಮಗಳು ಎಲ್ಲಾ ಭಾಗದಲ್ಲಿ ಹೆಚ್ಚು ನಡೆಯಬೇಕು ಎಂದರು. ಇದೇ ವೇಳೆ ಸ್ಥಳೀಯ ರೈತ ಸಾಧಕರಾದ ಒಳಮಾಡು ಆನಂದ ಮರಕಾಲ, ಚಂದ್ರಶೇಖರ್ ಗಾಣಿಗ, ನಿಶಾ ದೇವಾಡಿಗ ಬೇಳೂರು ಅವರುಗಳನ್ನು ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಕ್ರತಿ ಸಂಭ್ರಮ ಟ್ರಸ್ಟ್ ನ ಶ್ರೀಧರ ಮರವಂತೆ ವಹಿಸಿದ್ದರು. ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮವು ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ ಸಂಚಾಲಕರಾದ ಅಪ್ಪಣ್ಣ ಹೆಗ್ಡೆ, ಪ್ರಾಸ್ತಾವಿಕ ಮಾತನಾಡಿ, ಮಕ್ಕಳು ಉತ್ತಮವಾದ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ದೃಢತೆಯನ್ನು ಬೆಳೆಸಬೇಕು ಎಂದು ಹೇಳಿದರು. ಮಾನ್ಯ ಅತಿಥಿಗಳಾಗಿ ಆಗಮಿಸಿದ ವಿಶ್ರಾಂತ ಪ್ರಾಂಶುಪಾಲರಾದ ಹಾಗೂ ಮಾಹೆಯ ಆಡಳಿತಾಧಿಕಾರಿಯಾದ ಡಾ. ವಿ. ಜಗದೀಶ ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು. ಶಿಕ್ಷಣ ಮಕ್ಕಳ ಪರಿಪೂರ್ಣತೆ, ಆತ್ಮ ವಿಶ್ವಾಸ, ಸ್ವತಂತ್ರವಾದ ತಿಳುವಳಿಕೆ, ಸೇವಾ ಮನೋಭಾವ ದೇಶಾಭಿಮಾನ, ಬೆಳೆಸುವಂತೆ ಮಾಡಬೇಕು ಹಾಗೂ ಶಿಕ್ಷಕರು ಮಕ್ಕಳಲ್ಲಿ ಜ್ಞಾನ ಹೆಚ್ಚಿಸುವ, ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದರು. ಕಾಲೇಜಿನ ಪ್ರಾಕ್ತಾನ ವಿದ್ಯಾರ್ಥಿ ಮತ್ತು ಎಕ್ಸಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಸ್ವಸ್ತಿ ವಾಚನ ಗೈದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ. ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಜಯಶೀಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ‌ ಗಾಯಗೊಂಡಿದ್ದು ಮಣಿಪಾಲ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More