ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್, ಲೈಟ್ ಹೌಸ್ ಗಂಗೊಳ್ಳಿ ಇದರ 34ನೇ ವಾರ್ಷಿಕೋತ್ಸವದ ಅಂಗವಾಗಿ ಅಖಿಲ ಕರ್ನಾಟಕ ಕೊಂಕಣ ಖಾರ್ವಿ ಕಬ್ಬಡಿ ಅಸೋಸಿಯೇಶನ್ ಮತ್ತು ಶ್ರೀ ಜಟ್ಟಿಗೇಶ್ವರ ಮಹಿಳಾ ಮಂಡಳಿ ಲೈಟ್ಹೌಸ್ ಗಂಗೊಳ್ಳಿ ಸಹಕಾರದೊಂದಿಗೆ ಕೊಂಕಣಿ ಖಾರ್ವಿ ಸಮಾಜ ಬಾಂಧವರಿಗಾಗಿ ಲೈಟ್ಹೌಸ್ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟದಲ್ಲಿ ಮದ್ದುಗುಡ್ಡೆ ಫ್ರೆಂಡ್ಸ್ ಕುಂದಾಪುರ ತಂಡ ಪ್ರಥಮ ಸ್ಥಾನ ಪಡೆದು ’ಶ್ರೀ ಜಟ್ಟಿಗೇಶ್ವರ ಟ್ರೋಫಿ-2025 ನ್ನು ತನ್ನದಾಗಿಸಿಕೊಂಡಿತು. ಕೋಟೆ ಜಟ್ಟಿಗೇಶ್ವರ ತಂಡ ದ್ವಿತೀಯ ಸ್ಥಾನ, ಸಹರಾ ಗಂಗೊಳ್ಳಿ ತಂಡ ತೃತೀಯ ಸ್ಥಾನ ಹಾಗೂ ನವದುರ್ಗ ಹೊನ್ನಾವರ ತಂಡ ನಾಲ್ಕನೇ ಸ್ಥಾನ ಪಡೆದುಕೊಂಡಿತು. ಸುಮಾರು 15 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಖಾರ್ವಿ, ಅತಿಥಿಯಾಗಿದ್ದ ಅಖಿಕ ಕರ್ನಾಟಕ ಕೊಂಕಣ ಖಾರ್ವಿ ಕಬ್ಬಡಿ ಅಸೋಸಿಯೇಷನ್ ಉಪಾಧ್ಯಕ್ಷ ಜಗದೀಶ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಿರಿಯ ದಂತ ವೈದ್ಯ ಡಾ. ಎನ್.ಪಿ. ಕಮಾಲ್ ( 93) ನಿಧನರಾಗಿದ್ದಾರೆ. ಕುಂದಾಪುರದ ಹಳೆ ಬಸ್ ನಿಲ್ದಾಣದ ವಠಾರದಲ್ಲಿ ದಂತ ವೈದ್ಯಕೀಯ ಕೇಂದ್ರ ಹಾಗೂ ಕನ್ನಡಕ ಮಳಿಗೆ ಹೊಂದಿದ್ದ ಅವರು ಹಿರಿಯ ತಲೆಮಾರಿನ ಜನಪ್ರಿಯ ವೈದ್ಯರಾಗಿದ್ದರು. ರೋಟರಿ ಸಂಸ್ಥೆಯಲ್ಲಿ ರೋಟರಿ ಮಾಜಿ ಅಧ್ಯಕ್ಷ ಹಾಗೂ ರೋಟರಿ ಜಿಲ್ಲಾ ಅಸಿಸ್ಟಂಟ್ ಗವರ್ನರ್ ಸೇವೆ ಸಲ್ಲಿಸಿ ಜನಾನುರಾಗಿ ಆಗಿದ್ದರು. ವಕ್ವಾಡಿಯಲ್ಲಿ ಕನ್ನಡಕ ಉತ್ಪಾದನಾ ಘಟಕವನ್ನು ಆರಂಭಿಸಿ ಬಹಳ ವರ್ಷ ನಡೆಸಿದ್ದರು. ಮೂಲತಃ ಉತ್ತರ ಕೇರಳದವರಾಗಿದ್ದು ಅನೇಕ ವರ್ಷಗಳ ಹಿಂದೆ ಕುಂದಾಪುರಕ್ಕೆ ಬಂದು ನೆಲೆಸಿದ್ದರು. ಅವರು 4 ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ನಡೆಸುವ ರಾಷ್ಟ್ರಮಟ್ಟದ ಎನ್ಐಎಫ್ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ., ಚರಣ್ ಜಿಎಂ., ಚಿನ್ಮಯಿ ಆರ್., ಹರ್ಷ ಎಸ್. ಗೌಡ, ಜೀವಿತ ಜಿ. ಆರ್., ಮಾನಸಿ ಪಿ., ನವ್ಯ ಕೆ. ಆರ್., ಪೂರ್ವಿಕ್ ಕೆ.ಸಿ., ಪ್ರಾಪ್ತಿ ಎಂ. ಗೌಡ, ರಕ್ಷಾ, ಸುಖಿ ಆರ್. ಗೌಡ, ವಿಕಾಸ್ ಡಿ. ಸಿ. ಆಯ್ಕೆಯಾಗಿದ್ದಾರೆ. ಪಿಯು ವಿದ್ಯಾರ್ಥಿಗಳು ಎದುರಿಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅತ್ಯುತ್ತಮ ತರಬೇತಿಯನ್ನು ನೀಡುತ್ತಾ ಬಂದಿದ್ದು ಎಲ್ಲಾ ವಿಭಾಗದಲ್ಲೂ ಯಶಸ್ವೀ ಫಲಿತಾಂಶ ನೀಡುತ್ತಿದೆ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, ಎನ್ಐಎಫ್ಟಿ ಪರೀಕ್ಷೆಯ ಸಂಯೋಜಕರಾದ ರಕ್ಷಿತ್, ಸುಮಂತ್ ದಾಮ್ಲೆ, ಶರತ್ ಅಭಿನಂದಿಸಿದ್ದಾರೆ.
ಕುಂದಾಪರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತುಳುನಾಡು ಸರ್ವಧರ್ಮೀಯರ ನಾಡು. ಇಲ್ಲಿ ಜಾತಿ ಮತ ಪಂಥವೆಂಬ ಭೇದವಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ನುಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ತುಳು ಸಂಘದ ಸಹಯೋಗದಲ್ಲಿ ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು ಕಾರ್ಯಕ್ರಮ ಶುಕ್ರವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಿತು. ಶೈಕ್ಷಣಿಕ ಕ್ಷೇತ್ರಕ್ಕೆ ಯಾವ ಭಾಷೆ ಪ್ರವೇಶಿಸುತ್ತದೆಯೋ ಆ ಭಾಷೆಯ ಮೌಲ್ಯ ಮತ್ತು ವಿಸ್ತಾರಗೊಳ್ಳುತ್ತದೆ. ಇಂತಹ ಕಾರ್ಯಕ್ರಮಗಳು ತುಳು ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬಲ್ಲದು. ತುಳುನಾಡಿನಲ್ಲಿ 160ಕ್ಕೂ ಹೆಚ್ಚಿನ ಕ್ರೀಡೆಗಳಿವೆ. ತುಳುನಾಡಿನ ಔಷದೋಪಚಾರ ವಿಶಿಷ್ಟವಾಗಿದೆ. ಪ್ರತಿಯೊಂದು ಊರಿನ ಹೆಸರಿಗೂ ಪ್ರಾಚೀನ ಇತಿಹಾಸವಿದೆ. ಇದರ ಬಗ್ಗೆ ಅಧ್ಯಯನ ಮಾಡಿ ತುಳುವನ್ನು ಸಮಗ್ರ ನೆಲೆಯಲ್ಲಿ ಕಟ್ಟುವ ಕೆಲಸವಾಗಬೇಕಿದೆ. ಸುಮಾರು 5,000 ಕ್ಕೂ ಹೆಚ್ಚಿನ ತುಳು ಪುಸ್ತಕಗಳು ತುಳು ಸಾಹಿತ್ಯ ಅಕಾಡೆಮಿಯಲ್ಲಿ ಲಭ್ಯವಿದೆ. ಇದರ ಮೂಲಕ ತುಳುನಾಡಿನ ಪರಂಪರೆಯನ್ನು ತಿಳಿದುಕೊಳ್ಳಬಹುದಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಧಾರ್ಮಿಕ ಪರಿಷತ್ತಿನ ಜಿಲ್ಲಾ ಧಾರ್ಮಿಕ ಪರಿಷತ್ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಮೇ 5 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದ ನಂತರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಅರಸ್ 595 ಅಂಕದೊಂದಿಗೆ ರಾಜ್ಯ ಮಟ್ಟದಲ್ಲಿ 5 ನೇ ರ್ಯಾಕ್ ಪಡೆದುಕೊಂಡು, ಉಡುಪಿ ಜಿಲ್ಲೆಗೆ ದ್ವಿತೀಯ, ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿ ಅವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ ಮೊಗವೀರ ಅವರಿಗೆ ಶುಕ್ರವಾರದಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ಗಣೇಶ ಮೊಗವೀರ ಅವರು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಎರಡು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆ ಹಾಗೂ ಸೇವೆಯನ್ನು ಪರಿಗಣಿಸಿ ಶ್ರೀ ಗಣೇಶ ಮೊಗವೀರ ಅರವಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯು ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಿ ಸಮೀಕ್ಷೆ ನಡೆಸುವ ಕಾರ್ಯವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಬಿ. ಜಯಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಮಕ್ಕಳಲ್ಲಿರುವ ಪ್ರತಿಭೆಯ ಅನಾವರಣಕ್ಕಾಗಿ ಸರಕಾರವು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಆರಂಭಿಸಿದೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಅನಾವರಣಗೊಳಿಸುವ ಪ್ರಯತ್ನ ಆಗಬೇಕು. ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಬೇಸಿಗೆ ಶಿಬಿರಗಳು ಕೂಡ ಮಕ್ಕಳಿಗೆ ಉತ್ತಮ ವೇದಿಕೆಯಾಗಿದ್ದು ಅಲ್ಲಿ ಕಲಿಸಿಕೊಡುವ ಕೌಶಲಗಳು, ಸಂಸ್ಕಾರವನ್ನು ಮಕ್ಕಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಂಡು ಭವಿಷ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳ ಭೌತಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಅವರು ಶುಕ್ರವಾರ ಕೋಟದ ಕಾರಂತ ಥೀಮ್ ಪಾಕ್೯ನಲ್ಲಿ ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ, ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು, ಕೋಟ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಕರಾವಳಿ ಕಣ್ಮಣಿ ದಿ| ಕೆ.ಸಿ. ಕುಂದರ್ ಸ್ಮರಣಾರ್ಥ ಬೆಳ್ಳಿ ವರ್ಷಾಚರಣೆಯ ಹಿನ್ನಲ್ಲೆಯಲ್ಲಿ ವಿದ್ಯಾರ್ಥಿಗಳ ಬೇಸಿಗೆ ಶಿಬಿರ ವಿಕಸನ 2025 ಪ್ರತಿಭೆಗಳ ದಿಬ್ಬಣ ಶೀರ್ಷಿಕೆಯಡಿ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು. ಇಪ್ಪತೈದು ಸಂವತ್ಸರಗಳನ್ನು ಸಮಾಜಕ್ಕೆ ಶಿಬಿರದ ಮೂಲಕ ಒಂದಿಷ್ಟು ಪ್ರತಿಭೆಗಳನ್ನು ಸಮಾಜಕ್ಕೆ ಧಾರೆ ಎರೆಯುವ ಕಾರ್ಯ ನಿಜಕ್ಕೂ ಪ್ರಶಂಸನೀಯ ಕಾರ್ಯ, ಶಿಬಿರದಲ್ಲಿ ಅರ್ಥಪೂರ್ಣ ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಭೆಗಳು ಹೊರಹೊಮ್ಮಲಿದೆ ಎಂದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳ ನಾಲ್ಕು ತಂಡಗಳನ್ನು ವಿಗಂಡಿಸಿ ಅವರ ತಂಡದ ನಾಯಕರುಗಳಿಗೆ ದಾಖಲೆಗಳನ್ನು ಗಣ್ಯರ…
