ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಭಾಗದಲ್ಲಿ ಹತ್ತಾರು ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಸಿದ್ಧ ಸಮಾಧಿ ಯೋಗ ಬೈಂದೂರು ವಲಯದ ಮೂಲಕ ಪಾದಯಾತ್ರೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರೊಂದಿಗೆ ಇದೀಗ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಿರುವುದು ಸಂತಸದ ವಿಚಾರವಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಹಾರೈಸುವುದಾಗಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಸಿದ್ಧ ಸಮಾದಿ ಯೋಗ ಬೈಂದೂರು ವಲಯದ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಜಗದೊಡೆಯ ಶ್ರೀ ಶ್ರೀನಿವಾಸ ಮತ್ತು ಶ್ರೀ ಪದ್ಮಾವತಿಯವರ ಸಾರ್ವಜನಿಕ ವೈಭವದ ಕಲ್ಯಾಣೋತ್ಸವವು ಮೇ.10 ರಂದು ಇಲ್ಲಿನ ಯಡ್ತರೆ ಗ್ರಾಮದ ನೆಲ್ಯಾಡಿ ಬೈಲಿನಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಿದ್ಧ ಸಮಾದಿ ಯೋಗದ ಆರ್ಚಾರ್ಯ ಕೇಶವಜೀ ಮಾತನಾಡಿ, ಮೇ.10ರಂದು ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದ್ದು ಅಂದು ಬೆಳ್ಳಿಗೆ 8.00 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬಳಿಕ 9.30ರಿಂದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಕಲ್ಯಾಣೋತ್ಸವ ನಡೆಯುವ ಸ್ಥಳಕ್ಕೆ ಪುರಮೆರವಣೆಗೆ ಮೂಖಾಂತರ ಶ್ರೀ ಶ್ರೀನಿವಾಸ ದೇವರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಚಿಣ್ಣರ ಬೇಸಿಗೆ ಶಿಬಿರ ಅಪರಂಜಿ 2.0 ಉದ್ಘಾಟನಾ ಸಮಾರಂಭವು ಮಂಗಳವಾರದಂದು ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರಾವಳಿ ಭಾಗದಲ್ಲಿ ಮರೀಚಿಕೆಯಾಗಿ ರುವ ಆಂಗ್ಲ ಭಾಷಾ ಸಂವಹನ ಕೌಶಲ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವುದು ನಮ್ಮ ಶಿಕ್ಷಣ ಸಂಸ್ಥೆಯ ಗುರಿಯಾಗಿದೆ. ಪ್ರತಿಯೊರ್ವ ಶಿಬಿರಾರ್ಥಿಯು ಇದರ ಸದುಪಯೋಗವನ್ನು ಪಡೆದುಕೊಂಡಾಗ ಈ ಕಾರ್ಯಕ್ರಮವು ಯಶಸ್ವಿಯಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬೈಂದೂರು ವಲಯದ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಅವರು ಶೈಕ್ಷಣಿಕ ಗುಣಮಟ್ಟ ಹಾಗೂ ಉತ್ತಮ ಫಲಿತಾಂಶವನ್ನು ನೀಡುವಲ್ಲಿ ಈ ಸಂಸ್ಥೆಯು ಮುಂಚೂಣಿಯಲ್ಲಿದೆ. ಮಗು ಶಾಲಾ ವ್ಯವಸ್ಥೆಯಲ್ಲಿದ್ದಾಗ ಮಾತ್ರ ತನ್ನ ಗುರಿಯನ್ನು ತಲುಪಲು ಸಾಧ್ಯ. ಈ ಕಾರ್ಯಕ್ರಮದಲ್ಲಿ ಪಡೆದುಕೊಂಡ ಶಿಕ್ಷಣವನ್ನು ತಮ್ಮ ಸ್ನೇಹಿತರು ಹಾಗೂ ಪೋಷಕರೊಂ ದಿಗೆ ಹಂಚಿಕೊಂಡಾಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಅಂತಿಮ ವರ್ಷದ ಎಐಅಂಡ್ ಎಂಎಲ್ ವಿದ್ಯಾರ್ಥಿನಿ ಮೇಘನಾ ವಿಜಯ್ ಕುಮಾರ್, ಕಾನ್ಫರೆನ್ಸ್ ಸಂಯೋಜಕಿ ಜೀನ್ ಆಶ್ಲೇ ಅವರ ಅಧಿಕೃತ ಆಹ್ವಾನದ ಮೇರೆಗೆ, ಎಸಿಎಸ್ ಟಿಎಂ ಇಂಟೆರ್ ರ್ನ್ಯಾಷನಲ್ ಕಾನ್ಫರೆನ್ಸ್ ದುಭಾಯ್ ನಲ್ಲಿ ವರ್ಚುವಲ್ ಆಗಿ ಪ್ರಬಂಧ ಮಂಡಿಸಿದ್ಧಾರೆ. ವಿಭಾಗ ಮುಖ್ಯಸ್ಥರಾದ ಡಾ. ಇಂದ್ರ ವಿಜಯ್ ಸಿಂಗ್ ಮತ್ತು ಟಿ. ದಿಲೀಪ್ ಅವರು ಸಹ-ಲೇಖಕರಾಗಿ ಬರೆದ ಸೆಲ್ ಫೋನ್ ಮತ್ತು ಸೆಲ್ ಟವರ್ ವಿಕಿರಣಕ್ಕೆ ಒಡ್ಡಿಕೊಂಡ ಮಕ್ಕಳಲ್ಲಿ ಆಕ್ಸಿಡೇಟಿವ್ ಒತ್ತಡದ ಸೂಚಕಗಳ ಅಧ್ಯಯನ ಎಂಬ ಕಾನ್ಫರೆನ್ಸ್ ಪ್ರಬಂಧವನ್ನು ಸಮ್ಮೇಳನದಲ್ಲಿ ಪ್ರಸ್ತುತಪಡಿಸಲು ಆಯ್ಕೆ ಮಾಡಿದ್ದರಿಂದ ಈ ಆಹ್ವಾನವನ್ನು ನೀಡಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಮನಿತರ ಧನಿಯಾಗಿ, ಅಸ್ಪೃಶ್ಯತೆ ಮತ್ತು ಜಾತಿ ಪದ್ಧತಿಯನ್ನು ಹೋಗಲಾಡಿಸಿ ನ್ಯಾಯೋಚಿತವಾಗಿ ಬದುಕುವ ಹಕ್ಕನ್ನು ಸಂವಿಧಾನ ರಚನೆಯ ಮೂಲಕ ಕೊಡಮಾಡಿಸಿದ ಹಿರಿಯ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಸಮೃದ್ಧ ಭಾರತದ ಕನಸು ಕಂಡರು. ಸಾಮರಸ್ಯ, ಸಮಾನತೆ, ಸಹಬಾಳ್ವೆ, ಧಾರ್ಮಿಕ ಸೌಹಾರ್ದತೆ ಇಂದಿನ ಅಗತ್ಯವಾಗಿದ್ದು ಯುವ ಜನತೆ ಇದನ್ನು ಅರ್ಥೈಸಿಕೊಂಡು ಅಂಬೇಡ್ಕರ್ರವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಭವ್ಯ ಭಾರತದ ಅಭಿವೃದ್ಧಿಗೆ ಪಣತೊಡಬೇಕೆಂದು ನಾಗರಾಜ ವೈದ್ಯ ಎಂ. ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯ ಬಗ್ಗೆ ತಿಳಿಸಿ ಅವರ ತತ್ವಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ 2024-25 ನೇ ಸಾಲಿನಲ್ಲಿ ಕನಕದಾಸರ ಮುಂಡಿಗೆ ಸಾಹಿತ್ಯ-ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ-ತಾತ್ವಿಕ ಅಧ್ಯಯನ ಹಾಗೂ ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋ-ಸಾಂಸ್ಕೃತಿಕ ಅಧ್ಯಯನ ಈ ವಿಷಯಗಳ ಕುರಿತು ಕಿರು ಅಧ್ಯಯನ ನಡೆಸಲು ತಲಾ 1.50 ಲಕ್ಷ ರೂ. ಗಳಂತೆ ಫೆಲೋಶಿಪ್ ನೀಡಲಿದ್ದು, ಆಸಕ್ತ ಯುವ ಸಂಶೋಧನಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ 20 ರಿಂದ 55 ವರ್ಷದೊಳಗಿನ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರಗಳ ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯವನ್ನು ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಆಕರ ಸಾಮಾಗ್ರಿಗಳನ್ನು ಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿ, ಅಧ್ಯಯನ ಕೇಂದ್ರದ ಇ-ಮೇಲ್ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೀಡೆಯಿಂದ ವ್ಯಕ್ತಿಯ ಜೀವನಕ್ಕೆ ಹಲವು ಉಪಯುಕ್ತ ಸಂದೇಶಗಳು ಸಿಗುತ್ತವೆ. ವೇಗ, ದೂರ ಮತ್ತು ಎತ್ತರ ಇವು ಮೂರು ಯಶಸ್ಸನ್ನು ಪಡೆಯಲು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಬಾರಕೂರು ನ್ಯಾಷನಲ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ಶೆಟ್ಟಿ ಹೇಳಿದರು. ಅವರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರು ಇದರ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಭಾಸ್ಕರ ಶೆಟ್ಟಿ ಸಲ್ವಾಡಿ ಅವರು ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವುಕ್ಕಿಂತ ಕ್ರೀಡಾಸ್ಪೂರ್ತಿ ಮುಖ್ಯ. ಶಿಸ್ತಿನ ಜೀವನ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಹನೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ, ಬೋಧಕ ಬೋಧಕೇತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಾಯಕ ಪ್ರಾಧ್ಯಾಪಕ ವೀರೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಂಬೇಡ್ಕರ್ ಜೀವನ ಚರಿತ್ರೆ ತಳಹದಿ ವಿಶಿಷ್ಟವಾದದ್ದು. ಅವರ ಚಿಂತನೆಗಳು ದೇಶದ ಹಿತಕ್ಕೆ ಪೂರಕವಾಗಿದ್ದವು ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಸಂಜೀವ ಗುಂಡ್ಮಿ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ ಸಹಯೋಗದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಬಡವರ ಹಾಗೂ ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಅವರ ಕಣ್ಣಿರೊರೆಸುವ ಮತ್ಕಾರ್ಯಕ್ಕೆ ಆಗಿನ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ನೀಡಿದ ಮಹಾನ್ ಚೇತನರಾಗಿದ್ದಾರೆ. ಅವರ ಸಂವಿಧಾನದಲ್ಲಿ ನೀಡಿದ ಮೀಸಲಾತಿ ಎಲ್ಲಾ ವರ್ಗದವರಿಗೂ ನೀಡಿದ್ದಾರೆ. ಬರೆ ಪರಿಶಿಷ್ಟ ಜಾತಿ ಪಂಗಡಕ್ಕೆ ಸೀಮಿತವಾಗಲಿಲ್ಲ, ಅವರೊಬ್ಬ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ವಿಶ್ವ ನಾಯಕ ಆದರೆ ನೋವಿನ ಸಂಗತಿ ಎಂದರೆ ಅವರಿಗೆ ಈ ಭರತ ಭೂಮಿಯಲ್ಲಿ ಸಂವಿಧಾನ ಶಿಲ್ಪಿ ಎಂಬ ಪಟ್ಟ ಸಿಕಿತು ವಿನಹ ಪಂಡಿತರೆಂಬ ಗೌರವ ಸಿಕ್ಕಿರಲಿಲ್ಲ ಇದೇ ಬೇಸರದ ಸಂಗತಿ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ಆಶ್ರಯದಲ್ಲಿ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಇವರ ಸಹಭಾಗಿತ್ವದೊಂದಿಗೆ ಅಂಡರ್ 19 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ ವಿಕ್ರಂ ಟ್ರೋಫಿ – 2025 ಎಪ್ರಿಲ್ 21ರಿಂದ 27ರವರೆಗೆ ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಲಿದ್ದು ಸರ್ವ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ವಿಕ್ರಂ ಕ್ರಿಕೆಟ್ ಕ್ಲಬ್ ಕಾರ್ಯಕಾರಿ ಸಮಿತಿ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಹೇಳಿದರು. ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 1975ರಲ್ಲಿ ಲೆದರ್ ಬಾಲ್ ಆಟವಾಡುವ ಯುವಕರ ತಂಡದಿಂದ ಆರಂಭವಾದ ಸಂಸ್ಥೆ ಮುಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಆಟವನ್ನು ನೆಚ್ಚಿಕೊಂಡು ಜಿಲ್ಲೆಯಲ್ಲಿಯೇ ಪ್ರಥಮ ಭಾರಿಗೆ ನಗದು ಬಹುಮಾನವನ್ನು ಒಳಗೊಂಡ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿತ್ತು. ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಸೇರಿದಂತೆ ಹತ್ತು ಹಲವು ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪಾರಿತೋಷಕಗಳನ್ನು ಪಡೆದಿದೆ. ಕಳೆದ ಎರಡು ವರ್ಷಗಳಿಂದ ಲೆದರ್ ಬಾಲ್ ಕ್ರಿಕೆಟ್ ತರಬೇತಿಯನ್ನು ಆರಂಭಿಸಿ ಯುವ ಆಟಗಾರರನ್ನು ಹುಟ್ಟುಹಾಕುತ್ತಿದೆ. ಇದೀಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಇತ್ತೀಚಿಗೆ ಮಣೂರು ರಾಜಲಕ್ಷ್ಮೀ ಸಭಾಂಗಣದ ಬಳಿ ಸಂಭವಿಸಿದೆ. ಮೃತ ಪಟ್ಟ ಮಹಿಳೆ ಗಿಳಿಯಾರು ನಿವಾಸಿ ಗಿರಿಜಾ ಎಂದು ಗುರುತಿಸಲಾಗಿದೆ ಇವರು ತಮ್ಮ ಮನೆಯಾದ ಹೊನ್ನಾರಿಯಿಂದ ತಾಯಿ ಮನೆಯಾದ ಮಣೂರಿಗೆ ತೆರಳಲು ಸಭಾ ಭವನದ ಎದುರು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ರಸ್ತೆಗೆ ಬಿದ್ದ ಅವರ ತಲೆಗೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು ಕೂಡಲೇ ಅವರನ್ನು ಜೀವನ್ ಮಿತ್ತ ಆ್ಯಂಬುಲೆನ್ಸ್ ನಲ್ಲಿ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಹಿಂದು ಸಮಾಜದ ಹೆಣ್ಣು ಮಕ್ಕಳನ್ನು ಮೋಸದ ಜಾಲಕ್ಕೆ ಬೀಳಿಸುತ್ತಿರುವ ಘಟನೆಗಳು ಹೆಚ್ಚೆಚ್ಚು ನಡೆಯುತ್ತಿದೆ. ಲವ್ ಜಿಹಾದ್ ಜಾಲಕ್ಕೆ ಸಿಲುಕಿದ ಅದೆಷ್ಟೋ ಹೆಣ್ಣು ಮಕ್ಕಳು, ಮಹಿಳೆಯರು ತಮ್ಮ ಜೀವವನ್ನೇ ಕಳೆದುಕೊಂಡರೆ, ಅನೇಕರು ಈ ಜಾಲದಿಂದ ಹೊರಬರಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಹಿಂದು ಸಮಾಜದ ಹೆಣ್ಣು ಮಕ್ಕಳು ಹಾಗೂ ಮಾತೆಯರಿಗೆ ಈ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು. ಅವರು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜರಗಿದ ಕಿಶೋರಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದು ಸಮಾಜದ ಯುವ ಜನರಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ. ಮಕ್ಕಳಿಗೆ ಬಾಲ್ಯದಿಂದಲೇ ಸರಿಯಾದ ಸಂಸ್ಕಾರ ನೀಡಿದರೆ, ಅವರು ತಪ್ಪು ದಾರಿ ಹಿಡಿಯದಂತೆ ಮಾರ್ಗದರ್ಶನ ನೀಡಿದರೆ ಇಂತಹ ದುಷ್ಟ ಶಕ್ತಿಗಳನ್ನು ಸೆದೆಬಡಿಯಲು ಸಾಧ್ಯ. ಸಮಾಜದ…
