ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.12: ನಿವೃತ್ತ ಉಪನ್ಯಾಸಕ, ಸಾಹಿತಿ, ರಂಗಕರ್ಮಿ ಕೋಣಿ ಶಿವಾನಂದ ಕಾರಂತ (80) ಅವರು ಫೆ.11ರಂದು ದೈವಾಧೀನರಾದರು. ಗುಜ್ಜಾಡಿ ನಿವಾಸಿಯಾಗಿದ್ದ ಅವರು ಗಂಗೊಳ್ಳಿಯ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಾಹಿತಿಯಾಗಿದ್ದ ಕೋ.ಶಿ ಕಾರಂತರು 5 ಸಾವಿರಕ್ಕೂ ಹೆಚ್ಚು ಅಂಕಣ ಬರಹಗಳನ್ನು ಕುಂದಪ್ರಭ ವಾರಪತ್ರಿಕೆಯಲ್ಲಿ ಮೂರುವರೆ ದಶಕಗಳ ಕಾಲ ಬರೆದಿದ್ದರು. ಸಂಗೀತ, ರಂಗಭೂಮಿ, ಸಾಹಿತ್ಯ ಕ್ಷೇತ್ರಗಳಲ್ಲಿ ಅಪಾರ ಜ್ಞಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆಕಾಶವಾಣಿ ಕಾರ್ಯಕ್ರಮ, ರಂಗಭೂಮಿಯಲ್ಲಿ ಆಸಕ್ತಿ ಹೊಂದಿ ನಟನೆ ಮತ್ತು ನಾಟಕ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. 10ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು, ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರಿಗೆ ಕೋಟ ಶಿವರಾಮ ಕಾರಂತ ಸದ್ಭಾವನಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೃತರು ಪತ್ನಿ ಪುತ್ರಿಯನ್ನು ಅಗಲಿದ್ದಾರೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಸಮೀಪ ಬೀಜಾಡಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಮೂಡುಗೋಪಾಡಿ ರೋಶನಿ ಧಾಮದ ನಿವಾಸಿ ರಮೇಶ (60) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರುಡ್ಸೆಟ್ ಸಂಸ್ಥೆ, ಬ್ರಹ್ಮಾವರ ಇದರ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಮ್. ಇವರ ನೇತೃತ್ವದಲ್ಲಿ ವಿವಿಧ ರಾಜ್ಯಗಳ 65 ಮಂದಿ ಕೆನರಾ ಬ್ಯಾಂಕಿನ ಪ್ರೊಬೆಷನರಿ ಸಿಬ್ಬಂದಿಗಳು ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಇತ್ತೀಚಿಗೆ ಭೇಟಿ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಅವರು ಸಂಘವು ನಡೆದು ಬಂದ ದಾರಿ, ಸದಸ್ಯತ್ವ, ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಸಾಲಗಳು, ಸ್ವ ಸಹಾಯ ಸಂಘ ರಚನೆ, ಉಳಿತಾಯ ಕ್ರೋಢೀಕರಣ, ಸಾಲ ವಿತರಣೆ ಮತ್ತು ವಸೂಲಾತಿ, ಸಂಘದ ಸ್ವಂತ ಕಟ್ಟಡಗಳು ಮತ್ತು ಗೋದಾಮುಗಳು, ಸಂಘದ ವ್ಯವಹಾರ ಅಭಿವೃದ್ಧಿ, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ವಿವರವಾಗಿ ಮಾಹಿತಿ ನೀಡಿದರು. ಸಂಘದ ಆರ್ಥಿಕ ಅಭಿವೃದ್ಧಿ, ಸಾಲ ನೀಡುವಿಕೆ ಮತ್ತು ವಸೂಲಾತಿ, ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆ ಮತ್ತು ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಚರ್ಚೆಯ ಮೂಲಕ ವಿಚಾರ ವಿನಿಮಯ ಮಾಡಿಕೊಂಡರು. ಸಂಘದ ವ್ಯವಸ್ಥಿತ ಕಾರ್ಯವೈಖರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ”ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದ ಕುರಿತು ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು. ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪಿ.ವಿ. ಭಂಡಾರಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ , ಪೋಷಕರಿಗೆ ” ಮಕ್ಕಳಿಗೆ ಒತ್ತಡವನ್ನು ಹೇರದೆ, ಅವರ ಬೇಕು ಬೇಡಗಳನ್ನು ಅರಿತು, ಸ್ನೇಹಿತರಂತೆ ವರ್ತಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಮಕ್ಕಳಲ್ಲಿ ಇದ್ದ ಭಯದ ವಾತಾವರಣವನ್ನು ತೊಡೆದು ಹಾಕಿ, ಸ್ವಚ್ಛಂದವಾಗಿ ಓದುವ ಪರಿಸರವನ್ನು ನಿರ್ಮಿಸಬೇಕು” ಎಂದು ತಿಳಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಣ್ಸ್ ಡ್ರಾಗನ್ ಫಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ವತಿಯಿಂದ ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಇಂಟರ್ ಡೋಜೋ ಕರಾಟೆ ಚಾಂಪಿಯನ್ಶಿಪ್ನಲ್ಲಿ ಅಂಪಾರಿನ ಸಂಜಯಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕುಮಿಟೆ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಶಾಲೆಯ 16 ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಗೆದ್ದು ಶಾಲೆಯ ಕೀರ್ತಿಯನ್ನು ರಾಜ್ಯ ಮಟ್ಟದಲ್ಲಿ ಎತ್ತಿಹಿಡಿದಿದ್ದಾರೆ. ತರಬೇತುದಾರ ಅಬ್ಜಲ್ ಯೂಸಫ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ಈ ಸಾಧನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಂಜಯ ಗಾಂಧಿ ಚಾರಿಟೆಬಲ್ ಟ್ರಸ್ಟ್ ಅಂಪಾರು ಇಲ್ಲಿನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಹಾಗೂ ಕಾರ್ಯದರ್ಶಿ ಮತ್ತು ಎಲ್ಲಾ ನಿರ್ದೇಶಕರು , ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ, ಮತ್ತು ಎಲ್ಲಾ ಶಿಕ್ಷಕ – ಶಿಕ್ಷಕಿಯರು, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಶಸ್ತಿಗಳನ್ನು ಗೆದ್ದು ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾಗಾರಾಧನೆಯಿಂದ ಸಮಾಜದ ಉದ್ಧಾರಗೊಳ್ಳುವ ಜತೆಗೆ ಸೌಹಾರ್ದತೆಯನ್ನು ಸಾರುತ್ತದೆ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸಿ.ಎ. ದೇವಾನಂದ ಹೇಳಿದರು. ಅವರು ಸಾಸ್ತಾನದ ಚೆಲ್ಲೆಮಕ್ಕಿ ಶ್ರೀ ನಾಗಬನ ಇದರ ಪುನರ್ ನಿರ್ಮಾಣ ಜೀರ್ಣೋದ್ಧಾರ ಹಾಗೂ ವರ್ಧಂತಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಆಚರಣೆಗಳಿರಬಹುದು ಅಲ್ಲಿ ಶ್ರದ್ಧೆ ಮತ್ತು ಭಕ್ತಿಯ ಜತೆಗೆ ನಂಬಿಕೆಯಿಂದ ದೇವರಿಗೆ ಸೇವೆ ಸಲ್ಲಿಸಿದರೆ ಅವನ ಶ್ರೀರಕ್ಷೆ ಸದಾ ಭಕ್ತರ ಮೇಲಿರುತ್ತದೆ. ಈ ಕಾರ್ಯದೊಂದಿಗೆ ಸಾಧಕರನ್ನು ಗುರುತಿಸುವ ಕಾಯಕ ಕೂಡಾ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆಗೈದ ಸ್ಥಳೀಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅಲ್ಲದೆ ಸಿಎ ಪರೀಕ್ಷೆಯನ್ನು ಉತ್ತಿರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಂದಾರ್ತಿ ದೇಗುಲದ ಮಾಜಿ ಟ್ರಸ್ಟಿ ಶಂಭು ತಿಂಗಳಾಯ ಅವರನ್ನು ಅಭಿನಂದಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ನಾಗಬನದ ಅಧ್ಯಕ್ಷರಾದ ಸುಧಾಕರ್ ಜಿ.ಆರ್. ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರ ಶ್ರೀ ವೇಣುಗೋಪಾಲಕೃಷ್ಣ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಆಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಆಯೋಜಿಸುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೇವಲ 6 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 40,000 ಯೂನಿಟ್ ರಕ್ತ ಸಂಗ್ರಹಿಸಿರುವುದು ಅಭಯಹಸ್ತ ಸಂಸ್ಥೆಯ ಸಮಾಜದ ಸೇವೆಗೆ ಹಿಡಿದ ಕೈಗನ್ನಡಿ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಮಾನ ಮನಸ್ಕರ ಸಹಕಾರದಲ್ಲಿ ಅಭಯಹಸ್ತವು ಇಂತಹ ಸಾಧನೆ ಮಾಡಿರುವುದು ಇತರ ಸಮಾಜಸೇವಾ ಸಂಸ್ಥೆಗಳಿಗೆ ಪ್ರೇರಣೆಯಾಗಿದೆ ಎಂದರು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಇದರ ಸಾರಥ್ಯದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವಾದ ಹೆಗ್ಗುರುತು – 300 ( ಪೊಡವಿಗೊಡೆಯನ ಪದತಲದಲ್ಲಿ ಅಭಯಹಸ್ತ 300ನೇ ರಕ್ತದಾನ ಶಿಬಿರದ ಮೈಲುಗಲ್ಲು) ಎಂಬ ಯಶಸ್ವಿ ಸಮಾರಂಭವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೇದಮೂರ್ತಿ ರಾಮಚಂದ್ರ ಭಟ್ಟರ ಸ್ಮರಣಾರ್ಥ ಆರಾಧನೆ ಕಾರ್ಯಕ್ರಮದ ಭಾಗವಾಗಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತಾಯಿ-ತಂದೆಯರ ಆಶೀರ್ವಾದವನ್ನು ಪಡೆಯಲು ’ನಮಾಮಿ ಶಕ್ತಿಚರಣಮ್’ ಎಂಬ ಹೆಸರಿನಲ್ಲಿ ಮಾತೃವಂದನಾ ಕಾರ್ಯಕ್ರಮವು ನೆರವೇರಲ್ಪಟ್ಟಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗಳ ಪಾದ ತೊಳೆದು, ಆರತಿ ಬೆಳಗಿ, ಗೌರವಿಸಿದರು. ಬಾರ್ಕೂರಿನ ಖ್ಯಾತ ವಾಗ್ಮಿಗಳಾದ ಎನ್. ಆರ್. ದಾಮೋದರ ಶರ್ಮರು ಪೋಷಕರು ಮತ್ತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಭಾರತ ದೇಶವನ್ನು ವೇದಗಳು ಮತ್ತು ಇತಿಹಾಸಗಳು ಕರ್ಮದ ನೆಲ, ಧರ್ಮದ ನೆಲ ಹಾಗೂ ಸಾಧನೆಯ ನೆಲವೆಂದು ಕೊಂಡಾಡಿವೆ. ಇಲ್ಲಿ ಜನಿಸುವ ಜನರು ಮೌಲ್ಯಗಳನ್ನೊಳಗೊಂಡ ಭಾವನಾತ್ಮಕ ಜೀವನ ನಡೆಸುತ್ತಾರೆ. ನಮ್ಮ ದೇಶವು ಉತ್ತಮವಾಗಿ ಅಭಿವೃದ್ಧಿ ಹೊಂದಬೇಕಾದರೆ ವಿದ್ಯಾರ್ಥಿಗಳಲ್ಲಿ ಸತ್ಸಂಸ್ಕಾರ ಹಾಗೂ ಉತ್ತಮ ಗುಣಗಳನ್ನು ಬೆಳೆಸುವುದು ಅಗತ್ಯ. ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಸ್ಪಷ್ಟ ಜ್ಞಾನ ನೀಡಬೇಕು. ಇತಿಹಾಸವನ್ನು ಅರಿತ ವ್ಯಕ್ತಿಯು ಭವಿಷ್ಯವನ್ನು ದೃಢವಾಗಿ ನಿರ್ಮಿಸಬಹುದು. ಮಕ್ಕಳು ’ಮಾತೃದೇವೋ ಭವ’ ಎಂಬ ಮಹತ್ವದ ಮಾತಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ಕಳಿಹಿತ್ಲುಮನೆ ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಸಂಪನ್ನಗೊಂಡಿತು. ಶ್ರೀ ಸೀತಾಳಿ ನವದುರ್ಗೆ ಹಾಗೂ ಪರಿವಾರ ದೈವಗಳ ಪುನ: ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಮಂಗಳವಾರ ಸಂಜೆ ಗುರು ಗಣಪತಿ ಪೂಜೆ, ಮಹಾಸಂಕಲ್ಪದೊಂದಿಗೆ ಆರಂಭಗೊಂಡಿತು. ಬಳಿಕ ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಪ್ರತಿಷ್ಠಾ ಅಧಿವಾಸ ಪೂಜೆ, ಪ್ರತಿಷ್ಠಾ ಹೋಮ, ಪಂಚವಿಂಶತಿ ಕಲಶ ಸ್ಥಾಪನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬುಧವಾರ ಬೆಳಿಗ್ಗೆ 10.11 ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ಸೀತಾಳಿ ನವದುರ್ಗೆ ಹಾಗೂ ಪರಿವಾರ ದೈವಗಳ ಪುನ: ಪ್ರತಿಷ್ಠಾ ಮಹೋತ್ಸವ ನಡೆಯಿತು. ಬಳಿಕ ಜೀವ ಕುಂಭಾಭಿಷೇಕ, ಕಲಾಭಿವೃದ್ಧಿ ಹೋಮ, ತತ್ವ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಪುರೋಹಿತರಾದ ಜಿ. ಲಕ್ಷ್ಮೀನಾರಾಯಣ ಭಟ್ ಮತ್ತು ಜಿ.ರವೀಶ್ ಭಟ್ ನೇತೃತ್ವದಲ್ಲಿ ಪುನ: ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ಗಳ ಸಹಯೋಗದಲ್ಲಿ ಇನ್ನೋಹೆಲ್ತ್ ಹೆಲ್ತ್ಕೇರ್ ಸೆಮಿನಾರ್ 2026 ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಉದಯಕುಮಾರ್ ಶೆಟ್ಟಿ ಅವರು ಶಿಸ್ತಿನ ಮಹತ್ವ, ಆರೋಗ್ಯಕರ ಜೀವನಶೈಲಿ ಮತ್ತು ಆಧುನಿಕ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಬಗ್ಗೆ ಮಾತನಾಡಿದರು. ಅವರ ಪ್ರೇರಣಾದಾಯಕ ಭಾಷಣವು ವಿದ್ಯಾರ್ಥಿಗಳನ್ನು ಸೆಮಿನಾರ್ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಭವಿಷ್ಯದ ವೃತ್ತಿಜೀವನ ಸವಾಲುಗಳಿಗೆ ಸಿದ್ಧರಾಗಲು ಉತ್ತೇಜಿಸಿತು. ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ ಅವರು ಮಾತನಾಡಿ, ಇಂತಹ ಸೆಮಿನಾರ್ಗಳು ವೃತ್ತಿ ನಿರ್ಮಾಣಕ್ಕೆ ಹೇಗೆ ಸಹಕಾರಿಯಾಗುತ್ತವೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಭವಿಷ್ಯದ ಉದ್ಯೋಗಾವಕಾಶಗಳಿಗೆ ವಿದ್ಯಾರ್ಥಿಗಳನ್ನು ಹೇಗೆ ಸಿದ್ಧಗೊಳಿಸುತ್ತವೆ ಎಂಬುದನ್ನು ವಿವರಿಸಿದರು. ವಿದ್ಯಾರ್ಥಿಗಳು ಇಂತಹ ಶೈಕ್ಷಣಿಕ ಕಾರ್ಯಕ್ರಮಗಳನ್ನು ತಮ್ಮ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಉದ್ಘಾಟನಾ ಕಾರ್ಯಕ್ರಮವು ಸಾಂಪ್ರದಾಯಿಕ…
