ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟೀಮ್ ಊರ್ಮನಿ ಮಕ್ಕಳ ಸಮಾಜ ಸೇವಾ ತಂಡ ಕೊರ್ಗಿ 5ನೇ ವರ್ಷದ ಪೂರೈಸಿದ ಅಂಗವಾಗಿ ಬಡ ಇಳಿವಯಸ್ಸಿನ ಹಿರಿಯ ಜೀವಗಳಿಗೆ ನಡಿಗೆಗೊಂದು ಊರುಗೋಲು ಕಾರ್ಯಕ್ರಮದಡಿ ಅಗತ್ಯವುಳ್ಳ ಫಲಾನುಭವಿಗಳಿಗೆ ಉಚಿತ ವಾಕರ್ ಮತ್ತು ಸ್ಟಿಕ್ನ್ನು ಅವರ ಮನೆಗೆ ತೆರಳಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೊರ್ಗಿ ಮತ್ತು ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈಧ್ಯಾಧಿಕಾರಿ ಡಾ. ಅರ್ಪಿತಾ, ಕೊರ್ಗಿ ಆಶಾ ಕಾರ್ಯಕರ್ತೆ ಗಂಗೆ ಕುಲಾಲ್, ಟೀಮ್ ಊರ್ಮನಿ ಮಕ್ಕಳ್ ತಂಡದ ಸದಸ್ಯರಾದ ಸಂತೋಷ ಕೊರ್ಗಿ, ನಾಗೇಶ್ ಗಾವಳಿ, ಕೃಷ್ಣ ಕೊರ್ಗಿ, ನಾಗೇಶ್ ಸಿದ್ದಾಪುರ, ಚಂದ್ರ ಕೊರ್ಗಿ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಸುತ್ತಮುತ್ತಲಿನ ಪರಿಸರದಲ್ಲಿ ಮೊಟ್ಟ ಮೊದಲ ಬಾರಿಗೆ ವೈಯಕ್ತಿಕ ಸೌಂದರ್ಯ ಹಾಗೂ ಆರೈಕೆ ಕ್ಷೇತ್ರಕ್ಕೆ ಸಂಬಂದಿಸಿದ ಆಳ್ವಾಸ್ ಅಕಾಡೆಮಿ ಆಫ್ ಮೇಕಪ್ ಆರ್ಟಿಸ್ಟ್ರಿ, ಪೋಲಿಶ್- ನೈಲ್ಸ್ ಆಂಡ್ ಬ್ಯೂಟಿ, ಹೆಲ್ದೀ ಸಿಪ್ ಹಾಗೂ ಲ್ಯಾಕ್ಟೇಶನ್ ಕನ್ಸಲ್ಟೇನ್ಸಿ ಸರ್ವೀಸಸ್ ಅನ್ನು ಮೂಡುಬಿದಿರೆಯ ಆಳ್ವಾಸ್ ಆಸ್ಥೇಟಿಕ್ ರಿಜುವನೇಶನ್ ಸೆಂಟರ್ ಆವರಣದಲ್ಲಿ ಯುಗಾದಿಯ ಶುಭ ಸಂದರ್ಭದಂದು ಉದ್ಘಾಟನೆಗೊಳಿಸಲಾಯಿತು. ಮಂಗಳೂರಿನ ಕಾಸ್ಮೆಟಿಕ್ ಸ್ತ್ರೀರೋಗ ತಜ್ಞೆ ಹಾಗೂ ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ನ್ಯಾಷನಲ್ ಖ್ಯಾತಿಯ ಡಾ. ನಿಶಿತಾ ಶೆಟ್ಟಿಯಾನ್ ಫೆನಾಂಡಿಸ್ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ನಿಶಿತಾ ಶೆಟ್ಟಿಯಾನ್ ಫೆನಾಂಡಿಸ್, ನಿಮ್ಮ ಕನಸ್ಸನ್ನು ನನಸಾಗಿಸಲು ಸದಾ ಕಾರ್ಯಪ್ರವೃತ್ತರಾಗಿರಿ. ಎಂದೂ ಹಿಂಜರಿಕೆ ಬೇಡ. ನಿಮ್ಮ ಗುರಿಗಳನ್ನು ಸಾಧಿಸಲು ನಿಮಗೆ ಉತ್ಸಾಹವಿದ್ದರೆ ಖಂಡಿತ ಸಮಯ ಲಭಿಸುತ್ತದೆ ಎಂದರು. ಮೇಕಪ್ ಕಲೆ ಸಾಮಾನ್ಯವಾಗಿ ಮಹಿಳೆಯರಿಗೆ ಮಾತ್ರ ಎಂಬ ತಪ್ಪು ಕಲ್ಪನೆ ಇದೆ. ಆದರೆ, ಈ ಕಲೆಯು ಲಿಂಗಭೇದವನ್ನು ಮೀರಿ ಎಲ್ಲರಿಗೂ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ರೆಡ್ಕ್ರಾಸ್ ಘಟಕದ ಸಭಾಪತಿಗಳಾಗಿದ್ದ ಬಸ್ರೂರು ರಾಜೀವ್ ಶೆಟ್ಟಿ ಅವರು ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾಗಿರುತ್ತಾರೆ. ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಚುನಾವಣೆ ನಡೆದಿದ್ದು, ರಾಜ್ಯ ಕರ್ನಾಟಕ ಸರಕಾರದ ಹಣಕಾಸು ಕಾರ್ಯದರ್ಶಿಗಳಾದ ಡಾ. ವಿಶಾಲ್ ಆರ್. ಅವರನ್ನು ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಕರ್ನಾಟಕದ ರಾಜ್ಯಪಾಲರು ಚುನಾವಣಾಧಿಕಾರಿಯಾಗಿ ನೇಮಕ ಮಾಡಿದ್ದರು. ಚುನಾವಣೆಯಲ್ಲಿ 30 ಜಿಲ್ಲೆಗಳನ್ನು ಪ್ರತಿನಿಧಿಸುವ ಪ್ರತಿನಿಧಿಗಳು ಭಾಗವಹಿಸಿದ್ದು, ಅಂತಿಮವಾಗಿ ಬಸ್ರೂರು ರಾಜೀವ್ ಶೆಟ್ಟಿ ಅವರು ರಾಜ್ಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಡಾ. ವಿಶಾಲ್ ಅವರು ರಾಜೀವ್ ಶೆಟ್ಟಿ ಅವರಿಗೆ ಪ್ರಮಾಣ ಪತ್ರ ನೀಡಿದರು. ಇದೇ ಸಂದರ್ಭದಲ್ಲಿ ಕೊಪ್ಪಳ ಘಟಕದ ಡಾ. ಶ್ರೀನಿವಾಸ ಹ್ಯಾಟಿ ಅವರನ್ನು ಉಪಸಭಾಪತಿಗಳಾಗಿ ಆಯ್ಕೆ ಮಾಡಲಾಯಿತು. ರಾಜೀವ್ ಶೆಟ್ಟಿ ಅವರು ಈ ಹಿಂದೆ ಎರಡು ಬಾರಿ ರಾಜ್ಯ ಸಭಾಪತಿಯಾಗಿ ಕಾರ್ಯ ನಿರ್ವಹಿಸಿದ್ದರು. ಲಯನ್ಸ್ ಜಿಲ್ಲಾ ಗವರ್ನರ್ರಾಗಿ, ಕೇಂದ್ರ ಸರಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಮಾತನಾಡುತ್ತಿದ್ದರು. ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ವತಿಯಿಂದ ವೆಲ್ಡಿಂಗ್ ಕಾರ್ಯದ ಗುಣಮಟ್ಟವನ್ನು ಸ್ಥಳೀಯವಾಗಿ ಇನ್ಸ್ಪೆಕ್ಷನ್ ನಡೆಸಲಾಗಿದೆ. ಅಂತಿಮವಾಗಿ ರೈಲ್ವೇ ಡಿಸೈನ್ ಮತ್ತು ಸೇಫ್ಟಿ ಆರ್ಗನೈಸೇಷನ್ ಲಕ್ನೋ ಅವರಿಂದ ತ್ವರಿತವಾಗಿ ಕೈಗೊಳ್ಳಬೇಕು ಎಂದರು. ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ಅನ್ನು ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುವುದರೊಂದಿಗೆ ರೈಲ್ವೇ ಇಲಾಖೆಯ ವತಿಯಿಂದ ನಿಗಧಿಪಡಿಸುವ ದಿನಾಂಕದಂದು ರೈಲ್ವೇ ಸಂಚಾರವನ್ನು ಸ್ಥಗಿತಗೊಳಿಸಿ, ಅಳವಡಿಸುವ ಕಾರ್ಯವನ್ನು ಕೈಗೊಳ್ಳಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಬದುಕನ್ನು ತಾವೇ ರೂಪಿಸಿಕೊಳ್ಳಬೇಕು ಹಾಗೆಯೇ ಜೀವನದಲ್ಲಿ ನಾವು ಎಂದೂ ಹಿಂದೇಟನ್ನು ಹಾಕದೇ ಧೈರ್ಯಶಾಲಿಗಳಾಗಿ ಬದುಕಬೇಕು. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಯಾಗಿದೆ ಎಂದು ಬಸ್ರೂರು ಶ್ರೀ ಶಾರದ ಕಾಲೇಜಿನ ಉಪನ್ಯಾಸಕರಾದ ಅಕ್ಷಯ ಹೆಗ್ಡೆ ಮೊಳಹಳ್ಳಿ ತಿಳಿಸಿದರು. ಅವರು ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್ಇ ಸ್ಕೂಲ್ನಲ್ಲಿ ಯು.ಕೆ.ಜಿ. ಮಕ್ಕಳ ಗ್ರಾಜ್ಯುಯೇಶನ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬಂದ್ದಿಯವರು ಉಪಸ್ಥಿತರಿದ್ದರು. ಸೆಲ್ಫಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮಾಂತರ ಪ್ರದೇಶದಲ್ಲಿ ಸಮಪರ್ಕಕ ಕೆಎಸ್ಆರ್ಟಿಸಿ ಬಸ್ ಸೌಲಭ್ಯವಿಲ್ಲದ ಕಾರಣ ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಿಂದ ಮಹಿಳೆಯರು ವಂಚಿತರಾಗುವಂತಾಗಿದೆ. ಕೆಎಸ್ಆಟರ್ಟಿಸಿ ಫರ್ಮಿಟ್ ಹೊಂದಿರುವ ಎಲ್ಲಾ ಭಾಗಕ್ಕು ಬಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಎಸ್ಆಟ್ಟಿಸಿ ಅಧಿಕಾರಿ, ತಾಲೂಕು ವ್ಯಾಪ್ತಿಯಲ್ಲಿರುವ ಪರ್ಮಿಟ್ ಹೊಂದಿರುವ ಎಲ್ಲಾ ಭಾಗಗಳಿಗೂ ಬಸ್ ವ್ಯವಸ್ಥೆ ಕಲ್ಪಿಸಲು ನಮ್ಮಲ್ಲಿ ಅಗತ್ಯ ಬಸ್ಗಳಿವೆ, ಆದರೆ ಚಾಲಕ, ನಿರ್ವಾಹಕರು ಸೇರಿದಂತೆ ಸುಮಾರು 35 ಸಿಬ್ಬಂದಿಗಳ ಕೊರತೆಯಿರುವುದರಿಂದ ಪ್ರಸ್ತುತ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ, ಶೀಘ್ರ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಗ್ರಾಮೀಣ ಭಾಗಗಳಿಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2024-25ನೇ ಸಾಲಿನಲ್ಲಿ 677 ಕೋಟಿ ರೂ. ವ್ಯವಹಾರ ನಡೆಸಿದ್ದು, 1.14 ಕೋಟಿ ರೂ. ನಿವ್ವಳ ಲಾಭ ಗಳಿಸಿ, ನಿರಂತರ ಕಳೆದ 4ನೇ ವರ್ಷಗಳಿಂದ 1ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ್ ಭಾಸ್ಕರ್ ಶೆಣೈ ತಿಳಿಸಿದ್ದಾರೆ. ಸಂಘದ ವಾರ್ಷಿಕ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ. 17 ಏರಿಕೆ ಕಂಡಿದೆ. 3 ಶಾಖೆಗಳನ್ನು ಹೊಂದಿರುವ ಸಂಘವು ವರ್ಷಾಂತ್ಯಕ್ಕೆ 85.56 ಕೋಟಿ ರೂ. ಠೇವಣಿ, 82 ಕೋಟಿ ರೂ. ಸದಸ್ಯರ ಸಾಲ, 2.66 ಕೋಟಿ ರೂ. ಪಾಲು ಬಂಡವಾಳ, 5.96 ಕೋಟಿ ರೂ. ಲಾಭದಿಂದ ವಿಂಗಡಿಸಿದ ನಿಧಿಗಳನ್ನು ಹೊಂದಿದ್ದು, ಹಾಗೂ 24.53 ಕೋಟಿ ರೂ. ಸಹಕಾರಿ ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ 100 ಕೋಟಿ ದುಡಿಯುವ ಬಂಡವಾಳ ಹೊಂದಿರುವ ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೇಗವಾಗಿ ಬೆಳೆಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಹಲವಾರು ಮಾಧ್ಯಮಗಳ ಮೂಲಕ ಇ-ಸಂಪನ್ಮೂಲ ಲಭ್ಯವಿದ್ದು ಇವುಗಳನ್ನು ಶಿಕ್ಷಕರು ಸೂಕ್ತ ರೀತಿಯಲ್ಲಿ ಬಳಸಿಕೊಂಡಲ್ಲಿ ತಮ್ಮ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಉತ್ತಮ ಗುಣಮಟ್ಟದ ಸಂಶೋಧನೆ ಸಾಧ್ಯ ಎಂದು ತೀರ್ಥಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ಪ್ರೇಮ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಒಂದು ದೇಶ ಒಂದು ಚಂದಾದಾರತ್ವ ಈ ವಿಚಾರವಾಗಿ ನಡೆದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ವೇದಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಗ್ನಿಪಥ್ ಯೋಜನೆಯಡಿ ಪ್ರಸಕ್ತ ಸಾಲಿನ ಅಗ್ನಿವೀರ್ ಇನ್ಟೇಕ್ ನೇಮಕಾತಿ ಪರೀಕ್ಷೆಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಜಿಲ್ಲೆಯ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಆನ್ಲೈನ್ ನೋಂದಣಿಗೆ ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.joinindianarmy.nic.in ಸಹಾಯವಾಣಿ ಸಂಖ್ಯೆ: 0824-2951279, ಎ.ಆರ್.ಓ ಮೊ.ನಂ: 9805505538 ಅಥವಾ ಮಂಗಳೂರು ಸೇನಾ ನೇಮಕಾತಿ ಕಚೇರಿ/ ಸೈನಿಕ ಮಂಡಳಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಹಿಯುದೀನ್ ಜುಮಾ ಮಸ್ಜಿದ್ ಹೆನ್ನಾಬೈಲ್ ಇಲ್ಲಿಯ ಈದ್ಗಾ ಮೈದಾನದಲ್ಲಿ ಈದುಲ್ ಫಿತರ್ ಪ್ರಾರ್ಥನೆ ನೆರವೇರಿಸಿ, ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯಗಳನ್ನು ಕೋರಿದರು. ಪ್ರಾರ್ಥನೆಯ ನೇತೃತ್ವ ವಹಿಸಿದ ಧರ್ಮಗುರು ಮೌಲಾನಾ ಮುಹಮ್ಮದ್ ಹಫೀಜ್ ರಜ್ವಿ ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಂಜಾನ್ ಇಸ್ಲಾಮಿಕ್ ಧಾರ್ಮಿಕತೆಯ ಅತ್ಯಂತ ಕ್ರಿಯಾಶೀಲ ಮಾಸ. ಉಪವಾಸ, ಗ್ರಂಥ ಪಾರಾಯಣ, ದಾನ, ಆರಾಧನೆಯ ಪರಮೋಚ್ಚ ಅಭಿವ್ಯಕ್ತಿ. ಈ ಅಭಿವ್ಯಕ್ತಿಯಿಂದಲೇ ಮನುಷ್ಯನೊಬ್ಬನ ವ್ಯಕ್ತಿತ್ವ ಮತ್ತು ಭಕ್ತಿ ಪರಿಪೂರ್ಣಗೊಳ್ಳುತ್ತದೆ. ಇಂದು ಜಗತ್ತು ದೈಹಿಕ ಮತ್ತು ಮಾನಸಿಕವಾಗಿ ಹಿಂದೆಂದಿಗಿಂತ ಹೆಚ್ಚು ರೋಗಗ್ರಸ್ತವಾಗಿರಲು ಧಾರ್ಮಿಕತೆಯಿಂದ ದೂರ ಸರಿದದ್ದೇ ಮುಖ್ಯ ಕಾರಣ. ಪ್ರಸ್ತುತ ಜಗತ್ತಿನಲ್ಲಿ ಸ್ವಾರ್ಥಕ್ಕಾಗಿ ಧರ್ಮ ರಾಜಕೀಯದಲ್ಲಿದೆ ಬಿಟ್ಟರೆ ನೈಜ ಆಚರಣೆ ಮತ್ತು ಅಳವಡಿಕೆಯಲ್ಲಿ ಇಲ್ಲ. ಧರ್ಮದ ಆಚರಣೆ ಸೂಕ್ತ ಮತ್ತು ಸದೃಢವಾಗಿ ಜೀವಪರವಾಗಿ ಕಾಣಿಸದೆ ಇದ್ದಾಗ ಧರ್ಮದ ವಿಚಾರಗಳ ಮೇಲೆ ಅಪಚಾರ ಮತ್ತು ಅಪಪ್ರಚಾರಗಳು ನಡೆಯುತ್ತವೆ. ಹೀಗಾಗಿ, ಧಾರ್ಮಿಕರಾದವರು ಧರ್ಮವನ್ನು ಸರಿಯಾಗಿ ಪ್ರತಿನಿಧಿಸುವ ಮತ್ತು ಆಚರಿಸುವ ಮಹತ್ವ…
