Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಹಾಗೇ ಅದೇ ರೀತಿ ಪ್ರಸ್ತುತ ವ್ಯವಸ್ಥೆಯಲ್ಲಿ ಮಕ್ಕಳ ಜೀವನ ಕ್ರಮಗಳ ಬಗ್ಗೆ ಪೋಷಕರು ಆಗಾಗ ಕಾಳಜಿ ವಹಿಸುವ ಅಗತ್ಯತೆ ಇದೆ ಎಂದು ಕುಂದಾಪುರ ಯಡಾಡಿ ಮತ್ಯಾಡಿಯ ಸುಜ್ಞಾನ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ ನುಡಿದರು. ಅವರು ಸೋಮವಾರ ಕೋಟ ಗ್ರಾ.ಪಂ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ, ಪಂಚವರ್ಣ ಸಂಘಟನೆ ಕೋಟ, ಕೋಟ ಗ್ರಾಮಪಂಚಾಯತ್, ಡಿಜಿಟಲ್ ಗ್ರಂಥಾಲಯ ಕೋಟ, ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಆಶ್ರಯದಲ್ಲಿ ಬೇಸಿಗೆ ಶಿಬಿರ ಚಿತ್ತಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಮಕ್ಕಳಲ್ಲಿ ಮೊಬೈಲ್ ವ್ಯಾಮೂಹ ಅತಿಯಾಗಿ ವಿಜೃಂಭಿಸುತ್ತಿದೆ ಇದರ ಗೀಳಿನಿಂದ ಹೊರತರಬೇಕಾದ ಪೋಷಕರ ಪಾತ್ರ ಮಹತ್ವವಾದದ್ದು ಅಲ್ಲದೆ ಇತ್ತೀಚಿಗೆ ರಜಾ ದಿನಗಳಲ್ಲಿ ಶಿಬಿರಗಳ ಆಯೋಜನೆಯಿಂದ ಮೊಬೈಲ್ ವ್ಯಾಮೂಹವನ್ನು ತೊಡೆದುಹಾಕಬಹುದಾಗಿದೆ ಎಂದರಲ್ಲದೆ ಸಂಘಸಂಸ್ಥೆಗಳು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಕ್ಲಿಷ್ಟಕರ ಈ ದಿಸೆಯಲ್ಲಿ ಇಂಡಿಕಾ, ಪಂಚವರ್ಣ ಸಂಘಟನೆಗಳು ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೃಷಿ ಪದ್ದತಿಯಲ್ಲಿ ಸಮಗ್ರ ಕೃಷಿ ನೀತಿಯನ್ನು ಅನುಸರಿಸಿ ಎಂದು ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಹೇಳಿದರು. ಅವರು ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಗೆಳೆಯರ ಬಳಗ ಕಾರ್ಕಳ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ರೈತ ರೆಡೆಗೆ ನಮ್ಮ ನಡಿಗೆ 45ನೇ ಮಾಲಿಕೆ ಕೋಟತಟ್ಟು ಪಡುಕರೆ ಅನುಸೂಯ ಹಂದೆ ಅವರನ್ನು ರೈತ ಪುರಸ್ಕಾರ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತರು ಒಂದೇ ಬಗೆಯ ಬೆಳೆ ಬೆಳೆಯದೆ ಕಾಲಕ್ಕನುಗುಣವಾಗಿ ಮಣ್ಣಿಗೆ ಯೋಗ್ಯವಾದ ಬೆಳೆಗಳನ್ನು ಬೆಳೆಯಬೇಕು ಆಗ ಲಾಭದಾಯ ಬೆಳೆಯಾಗಿಸಲು ಸಾಧ್ಯವಿದೆ ಎಂದರಲ್ಲದೆ ಪ್ರಸುತ ರೈತ ಸಮುದಾಯಕ್ಕೆ ಅನುಕೂಲಕರ ಯೋಜನೆಗಳು ಶೂನ್ಯವಾಗಿದೆ, ಸರಕಾರ ಕೃಷಿಕರಿಗೆ ಹೆಚ್ಚಿನ ಉತ್ತೇಜನ ನೀಡಿದರೆ ಕೃಷಿ ಪರಂಪರೆ ಉಳಿಯಲು ಸಾಧ್ಯವಿದೆ, ಪಂಚವರ್ಣ ಸಂಘಟನೆ ರೈತರನ್ನು ಗುರುತಿಸುವ ಕಾಯಕ ಶ್ರೇಷ್ಠವಾದದ್ದು ಎಂದರು. ಈ ವೇಳೆ ಕೃಷಿ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಕೆಜಿಎಸ್ ಕ್ಲಬ್‌ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಫ್ಟಿಂಗ್ ಸಬ್ ಜೂನಿಯರ್ ಸ್ಪರ್ಧೆಯ M-1 ವಿಭಾಗದ 66 ಕೆಜಿ ಯಲ್ಲಿ 445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ. ಅವರು ಕುಂದಾಪುರದ ಹರ್ಕ್ಯುಲಸ್ ಜಿಮ್ಮಿನ ವ್ಯವಸ್ಥಾಪಕರಾಗಿರು ಹಾಗೂ ತುಳುನಾಡು ರಕ್ಷಣಾ ವೇದಿಕೆಯ ಕುಂದಾಪುರ ಘಟಕದ ಅಧ್ಯಕ್ಷರಾಗಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಭೆ ಮತ್ತು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾಯಕ್ರಮನುದ್ದೇಶಿಸಿ ಮಾತನಾಡಿ, ಬದುಕಿನ ತತ್ವ, ನಿಷ್ಠೆಗಳನ್ನು ಮೈಗೂಡಿಸಿಕೊಂಡು ಗೆಲುವಿನ ಹಾದಿಯಲ್ಲಿ ಸಾಗುವ ಛಲ ವಿದ್ಯಾರ್ಥಿಗಳಿಗಿದ್ದರೆ ಯಶಸ್ಸನ್ನು ಸಾಧಿಸಬಹುದು. ಹೆತ್ತವರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿ ಅವರನ್ನು ಯೋಗ್ಯ ವ್ಯಕ್ತಿಗಳನ್ನಾಗಿಸಬೇಕು. ಜೊತೆಗೆ ಹೆತ್ತವರು ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸಾಮರ್ಥ್ಯಗಳನ್ನು ಬೆಳೆಸಬೇಕೆ ಹೊರತು ಅವರ ಮೇಲೆ ಒತ್ತಡ ಹೇರಬಾರದು ಮತ್ತು ಮಕ್ಕಳಲ್ಲಿ ಸಕಾರಾತ್ಮಕ ಮಾತುಗಳನ್ನು ಆಡುವಂತೆ ಹಾಗೂ ಸಹಕಾರ ಮನೋಭಾವವನ್ನು ಮಕ್ಕಳಲ್ಲಿ ಬೆಳೆಸಿ ಹೃದಯವಂತರನ್ನಾಗಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದದರು. ಕಾರ್ಯಕ್ರಮದಲ್ಲಿ ಸಂಯೋಜಕರಾದ ಸೂರಜ್ ಕುಮಾರ್ ಶೆಟ್ಟಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹರೀಶ್ ಕಾಂಚನ್ ಉಪಸ್ಥಿತರಿದ್ದರು. ಕನ್ನಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ನೇಚರ್ ಕ್ಲಬ್ ಜಂಟಿ ಆಶ್ರಯದಲ್ಲಿ ರೀಫ್ ವಾಚ್ ಮರೈನ್ ಸಂಸ್ಥೆ ಸಹಯೋಗದೊಂದಿಗೆ ಎಚ್. ಸಿಎಲ್ ಫೌಂಡೇಶನ್ ಹಾಗೂ ಸ್ಥಳೀಯ ಭಜನಾ ಮಂಡಳಿ ಮತ್ತು ಮೀನುಗಾರರ ಸಹಕಾರದೊಂದಿಗೆ ವಿಶ್ವ ಭೂಮಿಯ ದಿನ ಆಚರಣೆಯ ಅಂಗವಾಗಿ ಕಂಚುಗೋಡಿನ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ರೀಫ್ ವಾಚ್ ಸಂಸ್ಥೆಯವರು ತೇಲುವ ತುಂಡು ಬಲೆಗಳಿಂದ ಸಮುದ್ರ ಮತ್ತು ಭೂಮಿಯ ಮೇಲಿರುವ ಪ್ರಾಣಿ ಪಕ್ಷಿಗಳು ಸಿಕ್ಕಿಹಾಕಿ ಸಾಯುವುದನ್ನು ತಡೆಯಲು ಮತ್ತು ಪರಿಸರ ಸಂರಕ್ಷಣೆಗಾಗಿ ಕಡಲ ತೀರದಲ್ಲಿ ಕಸದಂತೆ ಬಿದ್ದಿದ ರಾಶಿ ರಾಶಿ ನಿರೂಪಯುಕ್ತ ಬಲೆಗಳನ್ನು ಖರೀದಿಸಿದರು. ವಿಶ್ವ ಭೂಮಿ ದಿನ ಆಚರಣೆಯ ಪ್ರಸಿದ್ಧ ಘೋಷಣೆಯಾದ ಕಡಿಮೆ ಮಾಡಿ, ಮರುಬಳಕೆ ಮಾಡಿ ಎಂಬ ಘೋಷಣೆಯಂತೆ ತುಂಡು ವ್ಯರ್ಥ ಬಲೆಯಿಂದ ತಯಾರಿಸಿದ ಅತ್ಯುತ್ತಮ ಬೆಂಚ್ ಟೇಬಲ್ ಮತ್ತು ಬ್ಯಾಗ್‌ಳನ್ನು ಸಮುದಾಯದ ಬಳಕೆಗಾಗಿ ಕಂಚುಗೋಡಿನ ಕಡಲ ತೀರದಲ್ಲಿ ಹಾಕಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಗಣಕಯಂತ್ರ ವಿಭಾಗ ಮತ್ತು ಐಕ್ಯೂಎಸಿ ಇವರ ಸಹಯೋಗದೊಂದಿಗೆ ವ್ಯಕ್ತಿತ್ವ ವಿಕಾಸನ ಮತ್ತು ಉದ್ಯೋಗ ಸಂದರ್ಶನ ಮಾಹಿತಿ ಕಾರ್ಯಗಾರ  ನಡೆಯಿತು.  ನೆಟ್ ಅನಾಲಿಟಿಕ್ಸ್ ಕಂಪೆನಿಯಲ್ಲಿ ಹ್ಯೂಮನ್ ಕ್ಯಾಪಿಟಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿರುವ ಶ್ರೀರಕ್ಷಾ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ವಹಿಸಿದ್ದರು. ಒಂದು ದಿನ ನಡೆದ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು. ಗಣಕಯಂತ್ರ ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಗಣೇಶ್ ಕೆ., ಐಕ್ಯೂಎಸಿ ಸಂಚಾಲಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿಯಾದ ನಿಧಿ ಹೆಗ್ಡೆ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಗುರು ಸೇವಾಪರಿಷತ್ ಮಹಾಮಂಡಲ ಇವರ ವತಿಯಿಂದ ಶ್ರೀಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಅವರ ಸಾಮೂಹಿಕ ಗುರುಪಾದ ಪೂಜೆ ಇಲ್ಲಿನ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ಇತ್ತೀಚಿಗೆ ಜರುಗಿತು. ಬಳಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿ, ಸನಾತನ ಧರ್ಮದಲ್ಲಿ ಇರುವ ಜಾತಿಗಳು ಕೌಶಲ್ಯ ಆಧಾರಿತವಾಗಿದೆ. ಯಾವಜಾತಿಯೂ ಮೇಲೂ ಅಲ್ಲ ಮತ್ತು ಕೀಳಲ್ಲ ಸಮಾನವೂ ಅಲ್ಲ ತೋಟದಲ್ಲಿ ಇರುವ ನಾನಾ ಹೂವು ಮತ್ತು ಮರಗಳಂತೆ. ದೇಶಮತ್ತು ಧರ್ಮದ ವಿಷಯದಲ್ಲಿ ಎಲ್ಲರೂ ಎಲ್ಲವೂ ಒಂದಾಗಿರಬೇಕು ಎಂದರು. ಸಮಾಜದ 3 ಮಂದಿ ಸಾಧಕರಾದ ಗಜೇಂದ್ರ ಆಚಾರ್ಯ ಅಂಕದಕಟ್ಟೆ, ಉದಯ ಆಚಾರ್ಯ ಕುಂದಾಪುರ, ಅಶೋಕ ಆಚಾರ್ಯ ಕುಂದಾಪುರ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರ ಹೋಬಳಿ, ಲೋಲಾಕ್ಷ ಶರ್ಮ, ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶಣೈ, ಗುರು ಸೇವಾಪರಿಷತ್ ಕೇಂದ್ರ ಸಮಿತಿಯ ಅಧ್ಯಕ್ಷ ಗಣೇಶ್ ಆಚಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಅನೇಕ ಸಮುದಾಯಗಳಿಗೆ, ವಿದ್ಯಾರ್ಥಿಗಳಿಗೆ ಯಶಸ್ಸನ್ನು ನೀಡುವ ದೀವಿಗೆಯಾಗಿ ಆಳ್ವಾಸ್ ರೀಚ್ ಕಾರ್ಯಕ್ರಮ ಮೂಡಿ ಬರಲಿ ಎಂದು  ಎಸ್ಸೇ ಡಿಜಿಟ್ರೋನಿಕ್ಸ್ ಪ್ರೈವೆಟ್ ಲಿಮಿಟೆಡ್‌ನ  ಮಾನವ ಸಂಪನ್ಮೂಲ ವಿಭಾಗದ ಸಹಾಯಕ ಜನರಲ್ ಮ್ಯಾನೇಜರ್ ಶಾಲಿನಿ ಗಿರೀಶ್‌ ಹೇಳಿದರು.   ಅವರು ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ರಜತ ಮಹೋತ್ಸವ ಅಂಗವಾಗಿ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡ ಸಾಮೂಹಿಕ ಅಭ್ಯುದಯಕ್ಕಾಗಿ ಸಮಾಜಕಾರ್ಯ ಹಳೆ ವಿದ್ಯಾರ್ಥಿಗಳು ಪ್ರಾಯೋಜಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ʼಲೋಕಾಃ ಸಮಸ್ತಾಃ ಸುಖಿನೋ ಭವಂತುʼಎಂಬ ಮಂತ್ರದಂತೆ ಆಳ್ವಾಸ್ ಸಂಸ್ಥೆ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯನ್ನಾಗಿ ನೀಡುತ್ತಾ ಬಂದಿದೆ. ಸುಮಾರು ೨೦ ವ?ಗಳ ನಂತರ ಮತ್ತೊಮ್ಮೆ ಆಳ್ವಾಸ್ ಕಾಲೇಜಿಗೆ ಭೇಟಿ ನೀಡುತ್ತಿರುವುದು ಬಹಳ ಸಂತಸ ನೀಡಿದೆ. ಅಂದಿನ ಕಾಲೇಜು ದಿನಗಳು, ವಿಭಾಗದೊಂದಿಗೆ ಸೇರಿ ಕೈಗೊಂಡಿದ್ದ ಕಾರ್ಯಕ್ರಮಗಳು ಪುನರ್‌ಮನನ ಮಾಡಲು ಅವಕಾಶ ದೊರೆಯಿತು ಎಂದರು. ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ವಾರ್ಷಿಕ ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭವು ಇತ್ತೀಚಿಗೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ. ಬಿ. ಗಣನಾಥ ಶೆಟ್ಟಿ ಅವರು ಎನ್ಎಸ್ಎಸ್‌ ಜೀವನ ಪಾಠವನ್ನು ಕಲಿಸುತ್ತದೆ. ಈ ಅನುಭವ ಜೀವನದುದ್ದಕ್ಕೂ ಸಹಕಾರಿಯಾಗುತ್ತದೆ ಎಂದರು. ಇನ್ನೋರ್ವ ಸಂಸ್ಥಾಪಕರಾದ ಅಶ್ವತ್.ಎಸ್.ಎಲ್. ಎನ್‌ಎಸ್‌ಎಸ್‌ನ ವಿಶೇಷ ಶಿಬಿರಗಳು ಹಾಗೂ ಇತರೆ ಸಮಾಜಮುಖಿ ಸೇವೆಗಳು ನಮ್ಮನ್ನು ಶ್ರೇಷ್ಠ ವ್ಯಕ್ತಿಗಳಾಗಿ ರೂಪಿಸಬಲ್ಲದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥಾಪಕರಲ್ಲಿ ಓರ್ವರು ಹಾಗೂ ಪ್ರಾಂಶುಪಾಲರೂ ಆದ ವಿದ್ವಾನ್ ಗಣಪತಿ ಭಟ್ ಮಾತನಾಡಿ, ಸೇವಾ ಮನೋಭಾವ ಶ್ರೇಷ್ಠವಾದುದ್ದು, ಈ ವ್ಯಕ್ತಿತ್ವ ಬದುಕಿನುದ್ದಕ್ಕೂ ಸಹಕಾರಿ ಎಂದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್‌ಚಟುವಟಿಕೆಗಳಲ್ಲಿ ಸಾಧನೆ ಗೈದ ಸ್ವಯಂ ಸೇವಕರಿಗೆ ಫಲಕ ನೀಡಿ ಗೌರವಿಸಲಾಯಿತು. ಸಭೆಯಲ್ಲಿ ಸಂಯೋಜನಾಧಿಕಾರಿ ಉಮೇಶ್, ಉಪನ್ಯಾಸಕರಾದ ರಾಘವೇಂದ್ರ ಬಿ. ರಾವ್. ಚಂದ್ರಕಾಂತ ಹಾಗೂ ಬೋಧಕೇತರು ಹಾಗೂ ಎನ್‌ಎಸ್‌ಎಸ್‌ಸ್ವಯಂ ಸೇವಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಧ್ಯ ಪಡ್ರೆ ಕಾರ್ಯಕ್ರಮ ನಿರೂಪಿಸಿ, ಹಿತ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜದ ಒಳಿತಿಗಾಗಿ ಸಮಾಜಕ್ಕೊಸ್ಕರ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ಆನಂದ್ ಸಿ. ಕುಂದರ್ ಕರಾವಳಿಯ ಕಲ್ಪತರು ಆಗಿದ್ದಾರೆ ಎಂದು ಉಡುಪಿಯ ಹೊಸಬದುಕು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರ ಸಾಸ್ತಾನ ನುಡಿದರು. ಅವರು ಜನತಾ ಸಂಸ್ಥೆಯಲ್ಲಿ ಆನಂದ್ ಸಿ ಕುಂದರ್ 77ನೇ ವರ್ಷಾಚರಣೆ ಅಂಗವಾಗಿ ಗೀತಾನಂದ ಫೌಂಡೇಶನ್ ವತಿಯಿಂದ ಸುಮಾರು 25 ಲಕ್ಷಕ್ಕೂ ಅಧಿಕ ರೂಗಳನ್ನು ವಿವಿಧ ಆಶ್ರಮಕ್ಕೆ, ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ನೆರವು ಕಾರ್ಯದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಡವರ ಬಗ್ಗೆ ಅಶಕ್ತರಿಗೆ ತುಡಿಯುವ ಮನಸ್ಥಿತಿ ಅಪರೂಪದಲ್ಲಿ ಅಪರೂಪವಾಗಿದೆ. ಆನಂದ್ ಸಿ ಕುಂದರ್ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸಿದ್ದು ಅತ್ಯಂತ ಶ್ಲಾಘನಾರ್ಹ ಕಾರ್ಯವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇದೇ ವೇಳೆ ಉಡುಪಿಯ ಹೊಸಬದುಕು, ಬ್ರಹ್ಮಾವರದ ಅಪ್ಪ ಅಮ್ಮ ಆಶ್ರಮ, ಮಾನಸ ಜ್ಯೋತಿ ವಿಶೇಷಚೇತನ ಶಾಲೆ, ಬ್ರಹ್ಮಾವರದ ವಿಜಯ ಬಾಲನಿಕೇತನ ಸೇರಿದಂತೆ ಒಟ್ಟು 11 ಆಶ್ರಮ ಹಾಗೂ…

Read More