Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯುತ್‌ ಕಂಬಕ್ಕೆ ಬೈಕ್‌ ಢಿಕ್ಕಿಯಾಗಿ ಸಹ ಸವಾರ ಸಾವನ್ನಪ್ಪಿದ ಘಟನೆ ತ್ರಾಸಿ -ಗಂಗೊಳ್ಳಿ ಮುಖ್ಯ ರಸ್ತೆಯ ಕೊಡಪಾಡಿಯ ಮಾರಿಕಾಂಬಾ ದೇವಸ್ಥಾನದ ಬಳಿ ನಡೆದಿದೆ. ಸಹ ಸವಾರ ಮೊಹಮ್ಮದ್ ಕೈಸ್‌ ಕಿದಿಯೂರು (17) ಸಾವನ್ನಪ್ಪಿದವರು. ಅವರು ಆಸಾಸ್ ಅವರ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ‌ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದ್ದ ಪರಿಣಾಮ ಸಹ ಸವಾರ ಮೊಹಮ್ಮದ್ ‌ ಕೈಸ್‌ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಬೈಕ್ ಸವಾರ ಆನಾಸ್ ಸಹ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೋಳಂಬಳ್ಳಿಯ ಶ್ರೀ ಪದ್ಮಾವತಿ ದೇವಿ ಕ್ಷೇತ್ರದಲ್ಲಿ ಹುಂಬುಜ ಮಠದ ಪೀಠಾಧಿಪತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ 27 ಅಡಿ ಎತ್ತರದ ಏಕಶಿಲಾ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಹಾಗೂ 21 ಅಡಿ ಎತ್ತರದ ಭಗವಾನ್ ಶ್ರೀ ರಾಮಚಂದ್ರ ದೇವರ ಪ್ರತಿಮೆ ಪ್ರತಿಷ್ಠಾಪಿಸಲಾಯಿತು. ಈ ಪುಣ್ಯ ಕಾರ್ಯದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಮತ್ತು ವನಿತಾ ಧರ್ಮರಾಜ್ ದಂಪತಿಗಳು ಅಲಂಕಾರಿಕ ಆರತಿ ಬೆಳಗುವ ಮೂಲಕ ಮುನ್ನುಡಿ ಹಾಕಿದರು. ಈ ವೇಳೆ ಗ್ರಾ.ಪಂ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ, ಡಾ. ಆಕಾಶ್‌ರಾಜ್, ಮೂಡುಬಿದಿರೆಯ 18 ಬಸದಿಗಳ ಆಡಳಿತ ಮೊಕೇಸರ ಆದರ್ಶ್ ಎಂ., ಸಮುದಾಯದ ಪ್ರಮುಖರಾದ ಸುಭಾಶ್ ಜೈನ್ ಕುಂದಾಪುರ, ಪದ್ಮಪ್ರಸಾದ್ ಜೈನ್ ನಾಗರಾಜ್, ಡಾ. ಅಕ್ಷತಾ ಆದರ್ಶ್, ಎಂ.ಎನ್. ವಿಜಯೇಂದ್ರ ಮಳೂರು, ಪಾವನ ರಾಜ್, ಪಾರೀಷ್ ಮತ್ತು ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಶ್ರೀ ಬಾಹುಬಲಿ ವಿಗ್ರಹವು ಉಡುಪಿ ಜಿಲ್ಲೆಯಲ್ಲಿನ ಎರಡನೇ ಬಾಹುಬಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು.  ಮುಖ್ಯ ಅತಿಥಿ ಉಪ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಾಟೀಲ್ ಮಾತನಾಡಿ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪದವಿ ವ್ಯಾಸಂಗದ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ನಿರಂತರ ತರಬೇತಿಯನ್ನು ಪಡೆದುಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಎಂತಹ ಸಾಧನೆಯನ್ನು ಬೇಕಾದರೂ ಮಾಡಬಹುದು ಎಂದರು.  ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬಿ.ಕಾಂ. ಪದವಿಯ ಜೊತೆ ಪ್ರತಿ ಸೆಮಿಸ್ಟರ್ನಲ್ಲಿ ವಿದ್ಯಾರ್ಥಿಗಳಿಗೆ ಸಿಬ್ಬಂದಿ ಆಯ್ಕೆ ಆಯೋಗದ ಕುರಿತು ಬೋಧನೆ ನಡೆಸಲಾಗುವುದು. ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಎಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ 2025ನೇ ನಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಏಪ್ರಿಲ್ -16 ಮತ್ತು17 ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 12, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ ತಲಾ  6 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಆಧುನಿಕ ವೇಗದ ಬದುಕಿನ ಭರಾಟೆಯಲ್ಲಿ ತಲ-ತಲಾಂತರಗಳಿಂದ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧಗಳನ್ನು ಹೊಂದಿ ಜೀವನವನ್ನು ಶ್ರೀಮಂತಗೊಳಿಸಿದ ಮೌಖಿಕ ಪರಂಪರೆಯಾದ ಅಮೂಲ್ಯ ಜಾನಪದ ಸಂಸ್ಕೃತಿಯನ್ನು ಇಂದಿನ ಯುವ ಪೀಳಿಗೆ ರಕ್ಷಿಸಬೇಕಾದ ತುರ್ತು ಅಗತ್ಯವಿದೆ ಎಂದು ಕಲಾ ಚಿಗುರು ಕಲಾ ತಂಡದ ಚೇತನ್ ನೈಲಾಡಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಜಾನಪದ ಉತ್ಸವ 2025, ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಾನಪದ ಎಂಬುದು ಒಂದು ಸಂಪ್ರದಾಯ, ಪರಂಪರೆಗಳ ವಿಜ್ಞಾನ ಎಂದು ಪರಿಭಾವಿಸಬೇಕಾದ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ವಿದ್ಯೆ ಕಲಿಕೆಯೊಂದಿಗೆ ಸನಾತನ ಸಂಸ್ಕೃತಿಯ ಜೀವನದ ಶೈಲಿಯನ್ನು ರೂಢಿಸಿಕೊಂಡು ಮುಂದಿನ ತಲೆಮಾರಿಗೆ ಅದನ್ನು ವರ್ಗಾಯಿಸುವ ಗುರುತರ ಹೊಣೆಗಾರಿಕೆಯನ್ನು ಹೊಂದಬೇಕಾಗಿದೆ ಎಂದರು. ಪ್ರಾಂಶುಪಾಲರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ರಾಮನವಮಿಯ ಪರ್ವಕಾಲವಾದ ಭಾನುವಾರದಂದು ಶಾಲಾ ಸಂಸ್ಥಾಪಕರಾದ ದಿ. ವೇದಮೂರ್ತಿ ರಾಮಚಂದ್ರ ಭಟ್ಟರ ಧರ್ಮಪತ್ನಿಯವರಾದ ರಮಾದೇವಿ ಆರ್ ಭಟ್‌ ಅವರು ತಮ್ಮ ಅಮೃತಹಸ್ತದಿಂದ ನೂತನ ವಸತಿನಿಲಯದ ನಿರ್ಮಾಣಕ್ಕಾಗಿ ಭೂಮಿಪೂಜೆಯನ್ನು ನಡೆಸಿದರು. ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನದ ಆಡಳಿತಕ್ಕೆ ಒಳಪಟ್ಟ ಈ ಶಾಲೆಯಲ್ಲಿ ಕಳೆದೆರಡು ಮೂರು ವರ್ಷಗಳಿಂದ ದಾಖಲಾತಿಗೆ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಶಾಲೆಯ ವಸತಿನಿಲಯದಲ್ಲಿ ಅವಕಾಶ ಕಡಿಮೆ ಇರುವುದರಿಂದ ದಾಖಲಾತಿ ಬಯಸುವ ವಿದ್ಯಾರ್ಥಿಗಳು ನಿರಾಸೆಯಿಂದ ಹಿಂತಿರುಗುತ್ತಿರುವುದನ್ನು ಮನಗಂಡು ಆಡಳಿತಮಂಡಳಿ ನೂತನವಾಗಿ ವಸತಿನಿಲಯದ ಸಂರಚನೆಗೆ ಭೂಮಿಪೂಜೆಯ ಮೂಲಕ ಅಡಿಯನ್ನಿರಿಸಿದೆ. ಈ ಶುಭಾವಸರದಲ್ಲಿ ಶಾಲಾ ಪ್ರಾಂಶುಪಾಲರು ಹಾಗೂ ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶರಣಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಶಾಲಾ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಮತ್ತು ಹಳೆ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಮತ್ತು ಬೈಂದೂರು ಸಹಯೋಗದೊಂದಿಗೆ ಖಗೋಳ ವೀಕ್ಷಣೆ ಕಾರ್ಯಕ್ರಮವು ಶಾಲೆಯ ವಠಾರದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚಿತ್ತೂರು ಪ್ರೌಢಶಾಲೆಯ ಅಧ್ಯಾಪಕ ನಾರಾಯಣ ಮರಾಠಿ, ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ ಬಂಟ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಗಾಯತ್ರಿ ಕೊಡಂಚ, ಗುಜ್ಜಾಡಿ ಗ್ರಾಪಂ. ಸದಸ್ಯರಾದ ಹರೀಶ್ ಮೇಸ್ತ ಮತ್ತು ತುಂಗ ಪೂಜಾರಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸಕಿ ಸಂಧ್ಯಾ ಗಾಂವ್ಕರ್, ರವೀಂದ್ರ ಕೋಡಿ, ರವಿ ಕಟಗೇರಿ, ಸಂದೇಶ ಕುಂದಾಪುರ, ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಖಗೋಳದ ವಿಸ್ಮಯದ ಬಗ್ಗೆ ಸಂಪನ್ಮೂಲ ವ್ಯಕ್ತಿ, ಪ್ರೌಢಶಾಲಾ ಅಧ್ಯಾಪಕ ಉದಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸೇನಾಪುರ ಗ್ರಾಮದ ಪುರಾಣ ಪ್ರಸಿದ್ಧ ನಾಗಕ್ಷೇತ್ರವಾದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನರ್ ಅಷ್ಟಬಂಧ ಮತ್ತು ಬ್ರಹ್ಮಕಲಶೋತ್ಸವ ಶುಕ್ರವಾರದಿಂದ ಆದಿತ್ಯವಾರದ ತನಕ ವಿಜೃಂಭಣೆಯಿಂದ ನಡೆಯಿತು. ಶುಕ್ರವಾರ ಸಂಜೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತ್ತು. ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಸ್ಥಾನಶುದ್ಧಿ, ಪ್ರಾಸಾದಶುದ್ಧಿ, ರಾಕೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ಬಲಿಪೂಜೆ ನಡೆಯಿತು. ಶನಿವಾರ ಬೆಳಿಗ್ಗೆ ಪುಣ್ಯಾಹ, ಗಣಯಾಗ, ಶಾಂತಿಹೋಮ, ಕಲಾಭಿವೃದ್ಧಿ, ತತ್ವಹೋಮ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಂಡಲ ರಚನೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಅದೇ ದಿನ ಸಂಜೆ ಪುಣ್ಯಾಹ, ಮಂಟಪ ಸಂಸ್ಕಾರ, ಬ್ರಹ್ಮಕಲಶ ಸ್ಥಾಪನೆ, ಮಹಾಪೂಜೆ ನಡೆಯಿತು. ಸಂಜೆ 5 ಗಂಟೆಯಿಂದ ಸಂಜೆ 7 ಗಂಟೆಯ ತನಕ ಆಹ್ವಾನಿತ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಆದಿತ್ಯವಾರ ಪುಣ್ಯಾಹ, ಜೀರ್ಣಅಷ್ಟಬಂಧ ಲೇಪನ ಪ್ರಧಾನ ಹೋಮ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಸಂದರ್ಶನ ಸೇವೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಮೇಳದ ಮದ್ದಳೆಗಾರರೊಬ್ಬರು ಅರಾಟೆ ಸೇತುವೆ ಬಳಿ ಸೇತುವೆ ದುರಸ್ಥಿ ಕಾಮಗಾರಿಗೆ ಹಾಕಲಾಗಿದ್ದ ಮಣ್ಣಿನ ರಾಶಿಗೆ ಬೈಕ್ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ಹಟ್ಟಿಯಂಗಡಿ ಮೇಳದ ಮದ್ದಳೆಗಾರ ನಾರಾಯಣ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಮಳೆ ಬಂದ ಕಾರಣದಿಂದ ಅನಿವಾರ್ಯವಾಗಿ ರದ್ದಾಗಿತ್ತು. ಆ ಕಾರಣದಿಂದ ಮೇಳದ ಪ್ರಧಾನ ಮದ್ದಳೆಗಾರ ಅವರು ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭ ಅರಾಟೆ ಸೇತುವೆ ಬಳಿ ದುರಸ್ತಿಗಾಗಿ ಏಕಮುಖ ಸಂಚಾರ ವ್ಯವಸ್ಥೆ ಮಾಡಿದ್ದು ಗೊಂದಲಕ್ಕೆ ಒಳಗಾದ ನಾರಾಯಣ ಪೂಜಾರಿ ಅವರು ದ್ವಿಮುಖ ಸಂಚಾರ ರಸ್ತೆಯಲ್ಲಿ ಬರುತ್ತಿದ್ದಾಗ ಅಡ್ಡ ಹಾಕಿದ ಮಣ್ಣಿನ ರಾಶಿಗೆ ಗುದ್ದಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More