Author: ನ್ಯೂಸ್ ಬ್ಯೂರೋ

ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅವರು ಶನಿವಾರ ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮೀ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದು, ಇದರಿಂದ ಶೇ.88ರಷ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನೂತನವಾಗಿ ಆರಂಭವಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜು, ಈ ಶೈಕ್ಷಣಿಕ ವರ್ಷದಿಂದಲೇ ಬಹು ಬೇಡಿಕೆಯ ನಾಲ್ಕು ವರ್ಷದ ಅವಧಿಯ ಬಿಎಸ್ಸಿ (ಆನರ್ಸ್) ಅಗ್ರಿಕಲ್ಚರ್ ಮತ್ತು ಬಿ.ಟೆಕ್ ಫುಡ್ ಟೆಕ್ನಾಲಜಿ ಕೋರ್ಸಗಳನ್ನು ಪ್ರಾರಂಭಿಸುತ್ತಿದೆ. ಈ ಕಾಲೇಜು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದಡಿಯಲ್ಲಿ ಕರ‍್ಯನಿರ್ವಹಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣವನ್ನು ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಹಟ್ಟಿಅಂಗಡಿ ವಲಯ ಇವುಗಳ ಸಂಯುಕ್ತ ಆಯೋಜನೆಯಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ  ಶುಕ್ರವಾರದಂದು ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಸುಬ್ರಹ್ಮಣ್ಯ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲೇ ಜೀವನದ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಬೇಕಾದ ಜವಾಬ್ದಾರಿ ಪಾಲಕರ ಮತ್ತು ಅಧ್ಯಾಪಕರ ಹೆಗಲ ಮೇಲಿದೆ. ಮಕ್ಕಳೂ ತಮ್ಮ ಬಗ್ಗೆ ತಾವು ಅರಿತುಕೊಂಡಿರಬೇಕಾಗುತ್ತದೆ. ಮಕ್ಕಳು ಪ್ರೌಢಶಾಲೆಯಲ್ಲಿ ಇರುವಾಗಲೇ ಜೀವನಕ್ಕೆ ಸ್ಪಷ್ಟವಾದ ಗುರಿಯನ್ನು ನಿರ್ಧರಿಸಿಕೊಂಡಿರಬೇಕು. ಕೈಮುಷ್ಟಿಯಲ್ಲಿರುವ ಚಿಟ್ಟೆಯ ಭವಿಷ್ಯ ಆ ಕೈಯಲ್ಲಿರುವಂತೆ, ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಎನ್ನುತ್ತಾ ಪ್ರಾಪಂಚಿಕ ಘಟನೆಗಳ ಮೂಲಕ ಮಕ್ಕಳಿಗೆ ತಿಳಿ ಹೇಳಿದರು. ಮತ್ತೋರ್ವ ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: 2025ನೇ ಸಾಲಿನ ರಾಜ್ಯೋತ್ಸವದ ಉಡುಪಿ ಜಿಲ್ಲೆಯ ಸನ್ಮಾನಿತರ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ 77 ಮಂದಿಯ ಹೆಸರು ಗೌರವಕ್ಕೆ ಆಯ್ಕೆಗೊಂಡಿದೆ. ಪ್ರಶಸ್ತಿ ಪುರಸ್ಕೃತರ ವಿವರ ಈ ಕೆಳಕಂಡಂತಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ಸಚಿವರು, ಅಧಿಕಾರಿಗಳು ಬದ್ಧತೆಯಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಯಾರಿ ಮಾಡಲಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ 8000 ಕೋಟಿ ರೂಪಾಯಿ ಅನುದಾನವನ್ನು ನೀಡುತ್ತಿದೆ‌. ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದರು. ವಾರಾಹಿ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಈವರೆಗೂ ರೈತರಿಗೆ ಸರ್ಕಾರದಿಂದ ಪರಿಹಾರ ನೀಡಿರುವುದಿಲ್ಲ, ಈ ಕುರಿತು ಸರ್ಕಾರದಿಂದ ಹಣ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು. ಈ ಯೋಜನೆಯಲ್ಲಿ ಕೆಲವು ಜಮೀನುಗಳು ಡೀಮ್ಡ್ ಫಾರೆಸ್ಟ್ ಹಾಗೂ ಮೀಸಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ ಆಶ್ರಯದಲ್ಲಿ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ-2025, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 35ನೇ ಸಂಸ್ಥಾಪನಾ ದಿನಾಚರಣೆ ಮತ್ತು ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಕಾರ್ಯಕ್ರಮವು ನವಂಬರ್ 4ರಂದು ಮೀಪುಗುರಿ-ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಗ್ಗೆ 6.30ರಿಂದ ಕನ್ನಡ ಗ್ರಾಮದಲ್ಲಿ ಸುಪ್ರಭಾತ ಗಾಯನ, ಬೆಳಗ್ಗೆ 10.00ಕ್ಕೆ ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ. ರಾಷ್ಟ್ರ ಧ್ವಜಾರೋಹಣ ಗೈಯಲಿದ್ದಾರೆ. ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಾರಾಧನೆ ಗೈಯುವರು. 10.30ಕ್ಕೆ ಡಾ| ಕನ್ಯಾನ ಸದಾಶಿವ ಶೆಟ್ಟಿ, ಸೇವಾ ಬಳಗ ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ, ಚಾರ್ಲ ಶಿವರಾಮ ಕಾಸರಗೋಡು 60 ಫೋಟೋ ಗ್ಯಾಲರಿ ಅನಾವರಣಗೊಳಿಸುವರು. 11.00ಕ್ಕೆ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ-2025 ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಉದ್ಘಾಟಿಸಲಿರುವರು. ಅಖಿಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ವಕ್ವಾಡಿ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಆಯೋಜಿಸಿದ್ದ  ಕುಂದಾಪುರ ತಾಲೂಕು ಮಟ್ಟದ ಪ್ರಸಕ್ತ ಸಾಲಿನ ಕ್ರೀಡಾಕೂಟ ಗುರುವಾರದಂದು ನಡೆಯಿತು. ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕರ ಗುಂಡು ಎಸೆತ ಮತ್ತು ಜಾವೆಲಿನ್ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸೂರ್ಯಪ್ರಕಾಶ್ ಪ್ರಥಮ ಸ್ಥಾನ ಗಳಿಸಿ ಎರಡು ಚಿನ್ನದ ಪದಕದೊಂದಿಗೆ ಉಡುಪಿ ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿದ್ದಾನೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಮತ್ತು ಕಾವ್ಯ ಶೆಟ್ಟಿ ತಂಡ ವ್ಯವಸ್ಥಾಪಕರಾಗಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮದ ದೀಪಿಕಾ ಶ್ಯಾನುಭಾಗ್ ಯು. ಅವರು ಮಂಡಿಸಿದ ’ಇನ್ವೆಸ್ಟಿಗೇಶನ್ ಆಫ್ ಥರ್ಮೋಎಲೆಕ್ಟ್ರಿಕ್ ಪರ್ಫೋರ್ಮೆನ್ಸ್ ಆಫ್ ರೇರ್ ಅರ್ತ್ ಆಂಡ್ ಚಾಲ್ಕೋಜಿನೈಡ್ ಬೇಸ್ಡ್ ಸಿಸ್ಟಮ್ಸ್’ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಪಿಎಚ್‌ಡಿ ಪದವಿ ನೀಡಿದ್ದಾರೆ. ಮಣಿಪಾಲ ಇನ್ಸಿಟ್ಯೂಟ್ ಆಫ್ ಟೆಕ್ನಾಲೋಜಿ ಮಾಹೆ ಮಣಿಪಾಲದ ಭೌತಶಾಸ್ತ್ರ ವಿಭಾಗದ ಸೀನಿಯರ್ ಪ್ರೊಫೆಸರ್ ಡಾ. ಅಶೋಕ್ ರಾವ್ ಅವರಿಗೆ ಮಾರ್ಗದರ್ಶನ ನೀಡಿದ್ದರು. ಅವರು ಗಂಗೊಳ್ಳಿಯ ಯು. ಪುಂಡಲೀಕ ಶ್ಯಾನುಭಾಗ್ ಮತ್ತು ಉಷಾ ಪಿ. ಶ್ಯಾನುಭಾಗ್ ದಂಪತಿ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದದ ಪ್ರಧಾನ ಕಛೇರಿಗೆ ತಮಿಳುನಾಡು ರಾಜ್ಯದ ಇಲಾಖಾ 25 ಲೆಕ್ಕಪರಿಶೋಧಕರ ಅಧ್ಯಯನ ತಂಡವು ಗುರುವಾರ ಭೇಟಿ ನೀಡಿದರು. ಸಂಘದ ವ್ಯವಹಾರ ಚಟುವಟಿಕೆಗಳ ವೈವಿದ್ದೀಕರಣ, ಕ್ರೆಡಿಟ್ ಮೊನಿಟರಿಂಗ್, ಕೃಷಿ ಸಾಲ, ವ್ಯವಹಾರಿಕ ಸಾಲ, ಸದಸ್ಯರೊಂದಿಗಿರುವ ವ್ಯವಹಾರಿಕ ವಿನಿಮಯ ಇನ್ನಿತರ ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು ಹಾಗೂ ಸಂಘದ ಮುಂದಿನ ಯೋಜನೆಗಳ ಕಾರ್ಯವೈಕರಿಗಳ ಮಾಹಿತಿ ಪಡೆದುಕೊಂಡರು. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ಸಂಘವು ಸಾವಿರ ಕೋಟಿಗೂ ಮಿಕ್ಕಿ ವಹಿವಾಟು ನಡೆಸುತ್ತಿದ್ದು ಸಂಘದ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಉತ್ತಮ ರೀತಿಯ ಸೇವೆಯನ್ನು ನೀಡುತ್ತಾ ಬಂದಿದೆ. ಸಂಘವು ಆರ್ಥಿಕ ವಹಿವಾಟಿನ ಜೊತೆಗೆ ರೈತರಿಗೆ ಬಲತುಂಬುವ ನಿಟ್ಟಿನಲ್ಲಿ ಹಾಗೂ ಯುವ ರೈತರನ್ನು ಹುಟ್ಟುಹಾಕುವ ನೆಲೆಯಲ್ಲಿ ಅವರ ಅಪೇಕ್ಷೆಯಂತೆ ಮಾಹಿತಿ ಕಾರ್ಯಗಾರ, ಪ್ರಾತ್ಯಕ್ಷಿತೆ, ಕೃಷಿ ಪೂರಕ ಉತ್ಪನ್ನಗಳು ಹಾಗೂ ಸಲಕರಣೆಗಳ ಒದಗಿಸುವಿಕೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಂಘದ ಸದಸ್ಯರಿಗೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ಗೋಪಾಡಿಯ ಶ್ರೀರಾಮ ಗ್ರಾನೈಟ್ ಬಳಿಯ ರಸ್ತೆಯಲ್ಲಿ ಸೈಕಲ್‌ಗೆ ಸ್ಕೂಟರ್ ಢಿಕ್ಕಿಯಾಗಿ ಸೈಕಲ್ ಸವಾರ ಬಾಬು ಹಾಗೂ ಸ್ಕೂಟರ್ ಸವಾರ ಕಾರ್ತಿಕ್ ಗಾಯಗೊಂಡ ಘಟನೆ ಇತ್ತೀಚಿಗೆ ಸಂಭವಿಸಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ, ಬಳಿಕ ಸೈಕಲ್ ಸವಾರ ಬಾಬು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More