Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ವೈದ್ಯಕೀಯ ವಿಭಾಗ, ಮಾಹೆ ಮಣಿಪಾಲ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಶ್ರೀ ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ಕುಂದಾಪುರ, ದೈವಜ್ಞ ಬ್ರಾಹ್ಮಣರ ಸಂಘ, ಶ್ರೀ ವೀರ ವಿಠಲ ದೇವಸ್ಥಾನ ಗಂಗೊಳ್ಳಿ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚಿಗೆ ನಡೆಯಿತು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಶಿಬಿರವನ್ನು ಉದ್ಘಾಟಿಸಿದರು. ಕೆಎಂಸಿ ಮಣಿಪಾಲದ ವೈದ್ಯಾಧಿಕಾರಿ ಡಾ. ಸಾಚಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಶಂಕರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೈಸೂರಿನ ದಸರಾ ಕಾರ್ಯಕ್ರಮದ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ್‌ ಬಿ. ಪೂಜಾರಿ ಭಾಗವಹಿಸಿ 90.ಕೆಜಿ ಬಲ ಕೈ ವಿಭಾಗದಲ್ಲಿ ಚಿನ್ನದ ಪದಕ ಗಳಿಸುವುದರ ಮೂಲಕ ಸತತ 4 ವರ್ಷ ಚಿನ್ನದ ಪದಕ ಮೂಡಿಗೆರಿಸಿಕೊಂಡಿದ್ದಾರೆ. ಅವರು ಅಂತಾಷ್ಟ್ರೀಯ ಕ್ರೀಡಾ ಸ್ಪರ್ಧಿಯಾಗಿ ಭಾಗವಹಿಸಿ ಹಲವು ಪದಕಗಳನ್ನು ಪಡೆದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ “ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ” ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಇತ್ತೀಚಿಗೆ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಸಿಬ್ಬಂದಿಗಳು ಉದ್ಯೋಗ ಸಂಬಂಧಿತ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿ, ವೈಯಕ್ತಿಕ ಮತ್ತು ವೃತ್ತಿಜೀವನದ ನಡುವೆ ಸಮತೋಲನ ಸಾಧಿಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿತ್ತು.ಕಾರ್ಯಕ್ರಮಕ್ಕೆ ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ, ಉದ್ಯೋಗ ಸ್ಥಳದಲ್ಲಿ ಒತ್ತಡವನ್ನು ಕಡಿಮೆ ಮಾಡುವ ಪ್ರಾಯೋಗಿಕ ವಿಧಾನಗಳು ಮತ್ತು ಕೆಲಸ-ಜೀವನ ಸಮತೋಲನ ಸಾಧಿಸುವ ತಂತ್ರಗಳನ್ನು ಕುರಿತು ಬೆಳಕು ಚೆಲ್ಲಿದರು. ಸ್ವಯಂ ಆರೈಕೆ, ಸಮಯ ನಿರ್ವಹಣೆ ಮತ್ತು ಸಕಾರಾತ್ಮಕ ಕೆಲಸದ ವಾತಾವರಣದ ಮಹತ್ವವನ್ನು ಅವರು ಒತ್ತಿ ಹೇಳಿದರು. ಇದೇ ಸಂದರ್ಭದಲ್ಲಿ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್, ಉಪಪ್ರಾಂಶುಪಾಲರಾದ ರೂಪಶ್ರೀ ಕೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಇಲ್ಲಿನ ಪೊಲೀಸರು 24 ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಗಣೇಶ ನಗರದ ಯಾಧವ ದುರ್ಗಮ್ಮ ಎಂದು ಗುರುತಿಸಲಾಗಿದೆ. ಆಕೆಯಿಂದ ಕಳವುಗೈದ 2.5 ಲಕ್ಷ ರೂ. ಮೌಲ್ಯದ ಹವಳದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಸೆಪ್ಟೆಂಬರ್ 26ರಂದು ರಾತ್ರಿ 8:50ರಿಂದ 9:15ರ ನಡುವೆ ದೇವಿಪ್ರಿಯಾ ಎಂಬ ಭಕ್ತೆಯ ಬ್ಯಾಗ್‌ನ ಜಿಪ್ ತೆರೆಯಲಾಗಿದ್ದು, ಅದರಲ್ಲಿ ಇಟ್ಟುಕೊಂಡಿದ್ದ ಸುಮಾರು 3 ಪವನ್ ಹವಳದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ್ದರು. ಇದರ ಮೌಲ್ಯ ಅಂದಾಜು ರೂ.2.5 ಲಕ್ಷ ಎಂದು ದೂರಿನಲ್ಲಿ ಹೇಳಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ನೀಲೇಶ್ ಚೌಹಾಣ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣಾ ಉಪನಿರೀಕ್ಷಕ ವಿನಯ್ ಎಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪರಿಸರ ಉಳಿಸಿ ಎಂಬ ಸಂದೇಶದೊಂದಿಗೆ ಉಡುಪಿಯಿಂದ ಲಡಾಖ್‌ವರೆಗೆ 3,300 ಕಿಮೀ ಯಾತ್ರೆಯನ್ನು ಸತತ 11 ತಿಂಗಳು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ ತಾಲೂಕಿನ ಕಮಲಶಿಲೆ ಹಳ್ಳೀಹೊಳೆ ಸಮೀಪದ ಪಾರ್ವತಿ ಮತ್ತು ಶೇಷು ಬೋವಿ ದಂಪತಿಯ ಪುತ್ರ ದಿನೇಶ್ ಬೋವಿ ಇದೀಗ ಹುಟ್ಟೂರಿಗೆ ಮರಳಿದ್ದಾರೆ. ಅಪ್ರತಿಮ ಸಾಧನೆ ತೋರಿ ಊರಿಗೆ ಮರಳಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ದಿನೇಶ್ ಅವರಿಗೆ ಶನಿವಾರ ಕಾಲೇಜಿನ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ವೇಳೆ ಮಲ್ಪೆ ಪೊಲೀಸ್ ಠಾಣೆಯ ಎಸ್ಸೈ ಅನಿಲ್ ಕುಮಾರ್, ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಜಯರಾಮ ಶೆಟ್ಟಿಗಾರ್, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಆಲನ್ ಲೂವಿಸ್, ಶೇಖರ ಗುಜ್ಜರಬೆಟ್ಟು, ಶಾಲೆಟ್ ಮಥಾಯಸ್, ಶಿಕ್ಷಕ ರಕ್ಷಕ ಸಂಘದ ಗಣೇಶ್ ಮೇಸ್ತ ಹಾಗೂ ಇತರರು ಉಪಸ್ಥಿತರಿದ್ದರು. ಅವರು 2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದು 2025ರ ಸೆ.15ರಂದು ಲಡಾಖ್ ತಲುಪುವುದರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆಯ ಆತಿಥ್ಯದಲ್ಲಿ ನಡೆದ 3 ದಿನಗಳ ಮೈಸೂರು ವಿಭಾಗ ಮಟ್ಟದ ಅಂಡರ್ 14/17 ಬಾಲಕ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಅಂಡರ್ 17 ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕೊಡಗು ಮತ್ತು ಉಡುಪಿ ಇವುಗಳ ನಡುವಿನ ನಡೆದ ಹಣಾಹಣಿ ಪಂದ್ಯಾಟದಲ್ಲಿ ಉಡುಪಿ ಬಾಲಕಿಯರ ತಂಡ ವಿಜಯ ಸಾಧಿಸಿತು. ಅಂಡರ್ 17 ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ವರ್ಸಸ್ ಉಡುಪಿ ಇವುಗಳ ನಡುವಿನ ನಡೆದ ರೋಚಕ ಪಂದ್ಯಾಟದಲ್ಲಿ ಉಡುಪಿ ತಂಡವು ವಿಜಯ ಸಾಧಿಸಿತು. ಅಂಡರ್ 14 ಬಾಲಕರ ವಿಭಾಗದಲ್ಲಿ ಹಾಸನ ವರ್ಸಸ್ ಮೈಸೂರು ಇವುಗಳ ನಡುವೆ ನಡೆದ ರೋಚಕವಾದ ಪಂದ್ಯಾಟದಲ್ಲಿ ಮೈಸೂರು ತಂಡವು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನದ ಅಂಗವಾಗಿ ಬೈಂದೂರು ವಲಯ ಅರಣ್ಯ ಇಲಾಖೆ ನೇತೃತ್ವದಲ್ಲಿ ರೋಟರಿ ಕ್ಲಬ್‌ ಬೈಂದೂರು, ಕ್ಲೀನ್‌ ಕಿನಾರ ತಂಡ ಹಾಗೂ ಸರಕಾರಿ ಪದವಿ ಕಾಲೇಜಿನ ಎನ್ಎಸ್ಎಸ್‌ ಘಟಕದ ಸಹಯೋಗದೊಂದಿಗೆ ಇಲ್ಲಿನ ಸೋಮೇಶ್ವರ ಕಡಲ ತೀರದಲ್ಲಿ ಭಾನುವಾರ ಕಡಲತೀರ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಬೀಚ್‌ ಸ್ವಚ್ಚತಾ ಕಾರ್ಯದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಕಡಲಾಮೆ, ಕಡಲಾಮೆ ಮೊಟ್ಟೆ ಸಂರಕ್ಷಣೆ ಹಾಗೂ ಇನ್ನಿತರ ಸಂರಕ್ಷಣ ಕಾರ್ಯದಲ್ಲಿ ತೊಡಗಿಕೊಂಡಿರುವ ಸ್ಥಳೀಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ವೇಳೆ ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್‌ ಕುಮಾರ್‌, ರೋಟರಿ ವಲಯ 1ರ ಸಹಾಯಕ ಗವರ್ನರ್‌ ಐ. ನಾರಾಯಣ್‌, ಬೈಂದೂರು ರೋಟರಿ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ, ನಿವೃತ್ತ ಸೈನಿಕ ಚಂದ್ರಶೇಖರ ನಾವಡ, ಎನ್ಎಸ್ಎಸ್‌ ಘಟಕಾಧಿಕಾರಿ ನವೀನ್‌ ಹೆಚ್.‌ ಜಿ., ಕ್ಲೀನ್‌ ಕಿನಾರ ತಂಡದ ರಾಘವೇಂದ್ರ ಪಡುವರಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.27: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದ್ದಾರೆ. ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್‌ಗಳಲ್ಲಿ ಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ, ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನ – ಶ್ರೀ ರಾಮಕ್ಷತ್ರಿಯ ಯುವಕ ಸಮಾಜದಿಂದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭವು ಸೆಪ್ಟೆಂಬರ್‌ 29 ರಿಂದ ಅಕ್ಟೋಬರ್‌ 02ರ ತನಕ ಅದ್ದೂರಿಯಾಗಿ ಜರುಗಲಿದೆ. ಸೆ.29ರಂದು ಬೆಳಿಗ್ಗೆ ಶ್ರೀ ಶಾರದಾಂಬೆ ವಿಗ್ರಹವನ್ನು ವಾದ್ಯಘೋಷದೊಂದಿಗೆ ತಂದು ಪ್ರತಿಷ್ಠಾಪಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅ.01ರ ಬುಧವಾರ ನವಚಂಡಿಕಾ ಯಾಗ ಹಾಗೂ ಅದೇ ದಿನ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಶಾರದೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳ ಜರುಗಲಿದ್ದು, ಸೆ.29ರ ಸೋಮವಾರ ಮಧ್ಯಾಹ್ನ 2.30ರಿಂದ ಭಕ್ತಿಗೀತೆ, ರಂಗೋಲಿ ಸ್ಪರ್ಧೆ, ಹೂಮಾಲೆ ಕಟ್ಟುವ ಸ್ಪರ್ಧೆ, ಭಗವದ್ಗೀತಾ ಪಠಣ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 6.00ಕ್ಕೆ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ.1ರಂದು ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆ ಜರುಗಲಿದೆ. ಸೆ.30ರಂದು ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬೈಂದೂರು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಶ್ರೀ ರಾಜಶೇಖರ ದೇವಸ್ಥಾನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ, ಉಡುಪಿ ಜಿಲ್ಲಾ ಸಮಿತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಸೂರ್ಯ ನಮಸ್ಕಾರ, ದುರ್ಗಾ ನಮಸ್ಕಾರ ಕಾರ್ಯಕ್ರಮ ನಡೆಯಿತು. ವ್ಯವಸ್ಥಾಪನ ಸಮಿತಿ ಸದಸ್ಯ ಚಂದ್ರ ಆಚಾರ್ ದೀಪ ಪ್ರಜ್ವಲಿಸಿ, ಉದ್ಘಾಟಿಸಿ, ಕ್ಷೇತ್ರದ ಕುರಿತು ವಿವರಿಸಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೋಟ ಶಾಖೆಯ ಪ್ರಮುಖರಾದ ರಮೇಶ್ ಪ್ರಭು, ಗೋಪಾಲ್ ಭಟ್, ವಿನಯ್ ಗಾಣಿಗ, ಉಡುಪಿ ಜಿಲ್ಲಾ ಶಿಕ್ಷಕ ಪ್ರಮುಖ ಬಿರಾದರ್ ಹಲವರು ಭಾಗಿಯಾದರು.

Read More