ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ತಂತ್ರಜ್ಞಾನಾಧಾರಿತ ಬೋಧನೆಯನ್ನು ಆರಂಭಿಸಿದ್ದು, ಲೀಡ್ ಸಂಸ್ಥೆಯಿಂದ ಓರಿಯೆಂಟೇಶನ್ ಕಾರ್ಯಕ್ರಮವನ್ನು ಇತ್ತೀಚಿಗೆ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದ ಪಾಲಕ-ಪೋಷಕರಿಗಾಗಿ ನಡೆಸಲಾಯಿತು. ಲೀಡ್ ಸಂಸ್ಥೆಯ ಶಾಲಾ ಸಲಹೆಗಾರರಾದ ಸತೀಶ್ ಅವರು ತಮ್ಮ ಮಾತುಗಳಲ್ಲಿ, ನಗರ ಪ್ರದೇಶಗಳಲ್ಲಿ ತಂತ್ರಜ್ಞಾನವನ್ನು ಈಗಾಗಲೇ ಶಿಕ್ಷಣದಲ್ಲಿ ಯಶಸ್ವಿಯಾಗಿ ಬಳಸಲಾಗುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಶಾಲೆಯು ಮುಂದಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಮಾಡಿದ ನಿರ್ಧಾರ ಹಾಗೂ ಅದರಿಂದಾಗಿ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳ ಮೇಲೆ ಬೆಳಕು ಚೆಲ್ಲಿದರು. ಲೀಡ್ ಸಂಸ್ಥೆಯ ದಕ್ಷಿಣ ವಲಯದ ಸಿಇಒಆಗಿರುವ ಶಶಿಕಾಂತ ಅವರು ಪೋಷಕರೊಡನೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಂವಹನ ಕೌಶಲ್ಯ ಎಷ್ಟು ಮುಖ್ಯವಾದದ್ದು ಹಾಗೂ ವಿದ್ಯಾರ್ಥಿಗಳು ಭವಿಷ್ಯದಲ್ಲಿ ವಿವಿಧ ಪರೀಕ್ಷೆಗಳನ್ನು ಬರೆಯಲು ಮತ್ತು ಸಂದರ್ಶನಗಳಲ್ಲಿ ಆತ್ಮವಿಶ್ವಾಸದಿಂದ ಉತ್ತರಿಸಲು ತಂತ್ರಜ್ಞಾನಾಧಾರಿತ ಶಿಕ್ಷಣವು ಎಷ್ಟು ಮಹತ್ವದ ಪಾತ್ರ ವಹಿಸುತ್ತದೆ ಎಂಬುದನ್ನು ಹೇಳಿದರು. ಈ ಸಂದರ್ಭ ಶಾಲೆಯ ಪ್ರಾಂಶುಪಾಲರಾದ ಶರಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ಸಿಎಮ್ಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ ಅವರು ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎನ್ನುವುದರ ಕುರಿತು ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಜೀವನ ಪದ್ಧತಿ ಇರಬೇಕು ಅದರಲ್ಲಿ ಅಗ್ರಸ್ಥಾನದಲ್ಲಿ ಈ ಪ್ರಾಣಾಯಾಮ, ಆಸನ, ಮುದ್ರೆಗಳ ಬಳಕೆ ಬಹಳ ಪರಿಣಾಮಕಾರಿ ಎಂದು ಶುಭಾಶಂಸನೆ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಹಾಗೂ ಕಾರ್ಯಕ್ರಮ ಸಂಯೋಜಕರಾದ ಸುಹಾಸ್ ಜಟ್ಟಿಮನೆ ಮತ್ತು ಶ್ವೇತ ಭಂಡಾರಿ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಮುಸ್ಲಿಂ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಪ್ರಶ್ನಿಸಿದಾತನ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಆರೋಪಿಸಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಹಿಂದೂ ಕಾರ್ಯಕರ್ತರು ಕುಂದಾಪುರ ಪೊಲೀಸ್ ಠಾಣೆಯ ಎದುರು ಆಹೋರಾತ್ರಿ ಧರಣಿ ಕುಳಿತ ಘಟನೆ ಗುರುವಾರ ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿ ಸೇನಾಪುರದ ಮಹೇಶ್ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದಿದೆ. ಕುಂದಾಪುರ ಪೊಲೀಸರು ಸಾರ್ವಜನಿಕ ಜಾಗದಲ್ಲಿ ಶಾಂತಿ ಭಂಗ ಎನ್ನುವ ಕಾರಣಕ್ಕೆ ಸೊಮೋಟೋ ಪ್ರಕರಣ ದಾಖಲಿಸಿದ್ದರು. ಬಳಿಕ ಮಂಗಳವಾರ ಹಿಂದೂ ಯುವತಿಯ ತಾಯಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರೊಂದನ್ನು ನೀಡಿದ್ದು, ದೂರಿನಲ್ಲಿ ತನ್ನ ಮಗಳಿಗೆ ಆರೋಪಿ ಮಹೇಶ್ ಮಾನ ಹಾನಿ ಮಾಡಿದ್ದಾನೆ ಎಂದು ತಿಳಿಸಿದ್ದು, ಮಹೇಶ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಎಲ್ಲಾ ಘಟನೆಗೆ ಸಂಬಂಧಿಸಿದಂತೆ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕರಾವಳಿಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿದೆ ಎನ್ನಲಾದ 14ರಿಂದ 20 ಕೋಟಿ ರೂ. ಅವ್ಯವಹಾರ ಪ್ರಕರಣದ ಸಮಗ್ರ ತನಿಖೆಯೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಕಳೆದ 48 ದಿನಗಳಿಂದ ಕಾರ್ಖಾನೆ ಎದುರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿಯನ್ನು ನಾಳೆ ಹಿಂದೆಗೆದುಕೊಳ್ಳಲು ಉಡುಪಿ ಜಿಲ್ಲಾ ರೈತ ಸಂಘ ನಿರ್ಧರಿಸಿದೆ. ಧರಣಿ ಸ್ಥಳಕ್ಕೆ ಬುಧವಾರ ಸಂಜೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರು ಧರಣಿ ನಿರತರ ಎಲ್ಲಾ ಬೇಡಿಕೆಗಳನ್ನು ಸರಕಾರ ಒಪ್ಪಿಕೊಂಡಿರುವುದಾಗಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದು, ಧರಣಿಯನ್ನು ಹಿಂದೆಗೆದುಕೊಳ್ಳುವಂತೆ ಮನವಿ ಮಾಡಿದ್ದರು ಎಂದು ಅವರು ವಿವರಿಸಿದರು. ಪ್ರಕರಣದಲ್ಲಿ ಶಾಮೀಲಾಗಿರುವ ಮೂವರು ಹಿರಿಯ ಸಹಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಎಲ್ಲಾ…
ಕುಂದಾಪ್ರ ಡಾಟ್ ಕಾಂ ಲೇಖನ.ಫೇಶಿಯಲ್ ಯೋಗ ಎನ್ನುವುದು ಇತ್ತೀಚಿನ ಟ್ರೆಂಡ್. ಮುಖಕ್ಕೆ ಸಂಬಂಧ ಪಟ್ಟ ಈ ನಿರ್ದಿಷ್ಟ ಕ್ರಿಯೆಯಿಂದ ಮುಖದ ಚರ್ಮದಲ್ಲಿ ಹೊಳಪು, ಮುಖದ ಮಾಂಸಖಂಡಗಳು ರಿಲ್ಯಾಕ್ಸ್ ಆಗುವ ಜತೆಗೆ ಸುಕ್ಕುಗಳು ಕಡಿಮೆ ಆಗುತ್ತವೆ. ಸಲೂನ್ ಹಾಗೂ ಚರ್ಮರೋಗ ತಜ್ಞರ ಹೊರತಾಗಿ ಮುಖದ ಯೋಗಾಸನವು ಸೌಂದರ್ಯವನ್ನು ಎತ್ತಿ ಹಿಡಿಯುತ್ತದೆ. ಫೇಶಿಯಲ್ ಯೋಗದಲ್ಲಿ ಹಲವು ವಿಧಗಳಿವೆ. ಮೀನಿನಂತೆ ಮುಖವನ್ನು ಉದ್ದ ಮಾಡುವುದು, ನಸುನಗುತ್ತ ಓಂ ಪಠಣ ಮಾಡುವುದು, ಹುಬ್ಬುಗಳನ್ನು ಮೇಲಕ್ಕೆ ಎತ್ತರಿಸುವುದು, ಕಣ್ಣಿನ ರೆಪ್ಪೆಗಳನ್ನು ಪಕ್ಕಕ್ಕೆ ಎಳೆದು ವಿಸ್ತರಿಸುವುದು . ಇದರ ಜೊತೆಗೆ ಉಸಿರಾಟದ ವ್ಯಾಯಾಮಗಳು ಮುಖಕ್ಕೆ ವಿಶೇಷ ಕಳೆ ನೀಡಬಲ್ಲವು. ಇವುಗಳಿಂದ ಮುಖದ ಚರ್ಮ ಕುಸಿಯುವುದಿಲ್ಲ, ನೆರಿಗೆ ಉಂಟಾಗುವುದಿಲ್ಲ. ಮುಖದ ಚರ್ಮ ಬಿಗಿಯನ್ನು ಕಳೆದುಕೊಳ್ಳುವುದಿಲ್ಲ. ಅಲ್ಲದೆ, ಮುಖದ ಮಾಂಸಖಂಡಗಳು ರಿಲ್ಯಾಕ್ಸ್ ಹೊಂದುತ್ತವೆ. ಫೇಶಿಯಲ್ ಯೋಗದಿಂದ ಹಲವಾರು ಪ್ರಯೋಜನಗಳಿವೆ. ಕೇವಲ ಸೌಂದರ್ಯದ ದೃಷ್ಟಿಯಿಂದ ಮಾತ್ರವಲ್ಲ. ಮುಖದ ಚರ್ಮದಲ್ಲಿ ಕಳೆ ತುಂಬುವ ಕೊಲಾಜನ್ ಉತ್ಪಾದನೆಯನ್ನು ಹೆಚ್ಚಿಸುತ್ತವೆ. ನಾವು ದಿನವೂ ಮಾತನಾಡುವಾಗ, ನಗುವಾಗ, ವಿವಿಧ ಭಂಗಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶರಾಬು ಕುಡಿಯಲು ಹಣವಿಲ್ಲದೆ ಯುವಕನೋರ್ವ ಅದೇ ಚಿಂತೆಯಲ್ಲಿ ಮನೆಯ ಜಂತಿಗೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಪಾರು ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣ್ಯ (33) ಆತ್ಮಹತ್ಯೆಗೆ ಶರಣಾದ ಯುವಕ. ಸುಬ್ರಹ್ಮಣ್ಯ ಮನೆಯಲ್ಲಿಯೇ ಇರುತ್ತಿದ್ದು, ಅಪರೂಪಕ್ಕೊಮ್ಮೆ ಬದಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಶರಾಬು ಸೇವನೆಯ ವ್ಯಸನ ಹೊಂದಿದ್ದರು. ಆತನ ಕುಡಿತ ಬಿಡಿಸಲು ಹಲವಾರು ಬಾರಿ ಮದ್ಯವರ್ಜನ ಶಿಬಿರಕ್ಕೆ ಸೇರಿಸಿದ್ದು, ಆದರೂ ಆತನು ವಿಪರೀತ ಶರಾಬು ಕುಡಿಯುತ್ತಿದ್ದು, ಕುಡಿಯಬಾರದಾಗಿ ಎಷ್ಟು ಸಲ ಬುದ್ದಿ ಹೇಳಿದರೂ ಆತನು ಮನೆಯಲ್ಲಿ ಯಾರ ಮಾತನ್ನು ಕೇಳುತ್ತಿರಲಿಲ್ಲ, ಹೀಗಿರುವಾಗ ಸುಬ್ರಹ್ಮಣ್ಯನು ಶರಾಬು ಕುಡಿಯಲು ಹಣ ಇಲ್ಲದೇ ಇದ್ದುದರಿಂದ ಅದೇ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಮಾಡಿನ ಜಂತಿಗೆ ಲುಂಗಿಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಳ್ಳಿಕಟ್ಟೆಯಿಂದ ಬಂಟ್ವಾಡಿ ಕಡೆಗೆ ಅತಿ ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಲಾರಿ ಬಂಟ್ವಾಡಿ ಸೇತುವೆ ಸಮೀಪ ಸಿಮೆಂಟ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದು, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿನ ಹೊಂಡಕ್ಕೆ ಬಿದ್ದ ಘಟನೆ ನಡೆಯಿತು. ಅಪಘಾತದಲ್ಲಿ ಟಿಪ್ಪರ್ ಚಾಲಕ ಪಾರಾಗಿದ್ದಾರೆ. ಲಾರಿ ನದಿಗೆ ಉರುಳ ಸಂಧರ್ಭದಲ್ಲಿ ಮರದ ಸಹಾಯದಿಂದ ಪೋದೆಯಲ್ಲಿ ಸಿಲುಕಿಕೊಂಡಿದ್ದರಿಂದ ಭಾರಿ ದೊಡ್ಡ ಅನಾಹುತ ತಪ್ಪಿದೆ. ಟಿಪ್ಪರ್ ಲಾರಿಗೆ ಹಾನಿಯಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 3 ದಿನಗಳ ಪಾರಂಪರಿಕ ಯೋಗ ಶಿಬಿರವು ಇತ್ತೀಚಿಗೆ ನಡೆಯಿತು. ಇಶಾ ಫೌಂಡೇಶನ್ ಸದ್ಗುರು ಗುರುಕುಲಂನ ಶಾಸ್ತ್ರೀಯ ಹಠ ಯೋಗದ ಶಿಕ್ಷಕರಾದ ಪ್ರವೀಣ್ ಕುಮಾರ್ ಪತಂಗಾಸನ, ಶಿಶುಪಾಲಾಸನ, ನಾಡಿ ವಿಭಜನಾಸನ, ಓಂಕಾರ ಪಠಣ ಸೂರ್ಯ ಶಕ್ತಿ ಆಸನ ಇತ್ಯಾದಿಗಳ ಕುರಿತಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಇತರೆ ಸಹಾಯಕ ಸಿಬ್ಬಂದಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಭಾರತೀಯ ಪರಂಪರೆಯಲ್ಲಿ ಯೋಗಾಭ್ಯಾಸಕ್ಕೆ ಮಹತ್ವದ ಸ್ಥಾನ ನೀಡಲಾಗಿದ್ದು, ಯೋಗವು ನಮ್ಮ ಪ್ರಾಚೀನ ಋಷಿ ಮುನಿಗಳಿಂದ – ಸಾಧು ಸಂತರಿಂದ ಆರಂಭಗೊಂಡು ಇಂದು ಬಹುಮುಖಿ ಪ್ರಯೋಜನಗಳೊಂದಿಗೆ ಸರ್ವವ್ಯಾಪಿಯಾಗಿ ಬೆಳೆದು ನಿಂತಿದೆ. ನಿತ್ಯದ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸು ಪ್ರಫುಲ್ಲಗೊಳ್ಳುತ್ತದೆ. ದೇಹ ಮತ್ತು ಮನಸ್ಸುಗಳ ಮಧ್ಯೆ ಸಮತೋಲನ ಸಾಧಿಸಿದಾಗ ಮಾತ್ರ ಮಾನವ ಆರೋಗ್ಯಪೂರ್ಣ ಜೀವನವನ್ನು ನಡೆಸಲು ಸಾಧ್ಯ. ಇಂದು ಜಗತ್ತು ಸಾಕಷ್ಟು ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಂದ ಪರಿತಪಿಸುತ್ತಿದ್ದು, ನಿರಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಸನ್ನಿಧಿ ಎಮ್ ಅವರು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ 600 ರಲ್ಲಿ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ಜಿಲ್ಲೆಗೆ ಐದನೇ ಸ್ಥಾನ ಪಡೆದಿದ್ದಾರೆ. ಕಾಲ್ತೋಡು ವಿನೋದ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾದ ಈಕೆ ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಅವರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ನಿತ್ಯಾನಂದ ಆಶ್ರಮದಲ್ಲಿ ಎ.12 ಮತ್ತು ಎ.13 ರಂದು 65ನೇ ವಾರ್ಷಿಕೋತ್ಸವ ನಡೆಯಲಿದೆ. ಎ. 12ನೇ ಶನಿವಾರ ಬೆಳಿಗ್ಗೆ ಗಣಹೋಮ, ಗುರುಹೋಮ, ಶ್ರೀ ಗುರುದ್ವಯರ ಮಾಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಎ. 13 ನೇ ಆದಿತ್ಯವಾರ ಬೆಳಿಗ್ಗೆ ಶ್ರೀ ನಾಗದೇವರ ಕಲ್ಲೋಕ್ತ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಶ್ರಮದ ಪ್ರತಟಣೆ ತಿಳಿಸಿದೆ.
