Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು ಇದರ ಪ್ರಧಾನ ಕಛೇರಿಯಲ್ಲಿ ಆರಂಭಿಸಲಾದ ಇ –ಸ್ಟಾಂಪ್‌ ಪೇಪರ್ ಸೌಲಭ್ಯವನ್ನು ಶುಕ್ರವಾರ ಸಂಸ್ಥೆಯ ಅಧ್ಯಕ್ಷರು‌ ಹಾಗೂ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಉದ್ಘಾಟಿಸಿದರು. ವೇಳೆ ನಿರ್ದೇಶಕರಾದ ಎಸ್. ರಾಜು ಪೂಜಾರಿ, ಕೆ. ಶಂಕರ ಪೂಜಾರಿ, ಚಿಕ್ಕು ಪೂಜಾರಿ, ಯು. ಕೇಶವ ಪೂಜಾರಿ, ಕಲ್ಪನಾ ಭಾಸ್ಕರ್, ಉದಯ ಜಿ. ಪೂಜಾರಿ, ಶೇಖರ ಪೂಜಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಬಿ. ಪೂಜಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ 7ನೇ ವಾರ್ಷಿಕೋತ್ಸವವು ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಇತ್ತೀಚಿಗೆ ಜರುಗಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಿ, ಕಟ್ಟಿನಮಕ್ಕಿ ಈ ಭಾಗದ ಪ್ರಮುಖ ಸಮಸ್ಯೆಯ ಬಗ್ಗೆ ಅರಿವಿದ್ದು ವಿವಿಧ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರೋಪಾಯದ ಮಾರ್ಗದ ಕುರಿತು ಚಿಂತಿಸುವುದಾಗಿ ತಿಳಿಸಿ, ಕಲಾ ಸಂಘದ ಪ್ರಯತ್ನಗಳನ್ನು ಮತ್ತು ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಎನ್. ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು, ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ ಕಳಿ, ಆಲೂರು ಹರ್ಕೂರು ವ್ಯ.ಸೇ.ಸ.ಬ್ಯಾಂಕ್ ಅಧ್ಯಕ್ಷ ಎಚ್. ಮಂಜಯ್ಯ ಶೆಟ್ಟಿ ಹರ್ಕೂರು, ಆಲೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ ಕುಶಲ ಶೆಟ್ಟಿ, ಕಲಾ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು. ರಾಜೇಂದ್ರ ದೇವಾಡಿಗ ಅವರು ಶುಭ ಹಾರೈಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ವಿಖ್ಯಾತ ದೇವಾಡಿಗ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರಿ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಉಳ್ಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಇದರ ಧರ್ಮದರ್ಶಿಗಳಾದ ಎಸ್. ಸಚ್ಚಿದಾನಂದ ಚಾತ್ರ ಅವರು ಸ್ಪೂರ್ತಿದಾಯಕ ಭಾಷಣ ಮಾಡಿ, ಸಾಮಾಜಿಕ ಆರ್ಥಿಕ ಸವಾಲುಗಳನ್ನು ಎದುರಿಸುವಲ್ಲಿ ಎನ್.ಎಸ್.ಎಸ್.ನ ಮಹತ್ವವನ್ನು ಒತ್ತಿ ಹೇಳಿದರು. ಜೊತೆಗೆ ಸಮಾಜದ ಕಲ್ಯಾಣಕ್ಕೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಉಳ್ಳೂರು ಶ್ರೀ ಬನಶಂಕರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂಪಿಗೇಡಿ ಸಂಜೀವ ಶೆಟ್ಟಿ ಮಾತನಾಡಿ, ಎನ್.ಎಸ್.ಎಸ್. ಘಟಕ ಸ್ವಚ್ಚತೆ, ನೈರ್ಮಲ್ಯ ಸಮಯಪಾಲನೆ, ವ್ಯಕ್ತಿತ್ವ ವಿಕಸನಕ್ಕೆ ಬೇಕಾಗುವ ಕೌಶಲ್ಯಗಳ ಬಗ್ಗೆ ತಿಳಿಸುತ್ತಾ ತಮ್ಮ ಕಾಲೇಜು ಜೀವನದ ಬಗ್ಗೆ ಮೆಲುಕು ಹಾಕಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ. ರಾಧಾಕೃಷ್ಣ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯನ್ನು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಎಂದು ಪುನರ್ ನಾಮಕರಣ ಮಾಡಲಾಗಿದೆ. ಶುಭದಾ ಎಜುಕೇಶನಲ್ ಟ್ರಸ್ಟ್ ನಡೆಸುತ್ತಿರುವ ಶುಭದಾ ಆಂಗ್ಲ ಮಾಧ್ಯಮ ಶಾಲೆಯು 2024-25ನೇ ಶೈಕ್ಷಣಿಕ ವರ್ಷದಿಂದ ನೂತನ‌ ಆಡಳಿತ ಮಂಡಳಿ ಅವರು ಈ ಸಂಸ್ಥೆಯನ್ನು ‌ಮುನ್ನಡೆಸುತ್ತಿರುವುದರಿಂದ ಶಾಲಾ ಹೆಸರು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಎಂದು ಬದಲಾಯಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ – ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಎನ್.ಎಸ್.ಎಸ್. ಉತ್ಸವ ಕ್ಷಿತಿಜದಲ್ಲಿ ಡಾ. ಬಿ.ಬಿ. ಹೆಗ್ಡೆಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಸಮಗ್ರ ಪ್ರಶಸ್ತಿ ಪಡೆದರು.  ಸಮೂಹ ಗಾನ, ವೆರೈಟಿ ಡಾನ್ಸ್, ಪೇಸ್ ಪೇಂಟಿಂಗ್ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಬೀದಿ ನಾಟಕ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆಯಿತು. ಎನ್.ಎಸ್. ಎಸ್. ಸ್ವಯಂಸೇವಕರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ, ಬೋಧಕ- ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More

ಕುಂದಾಪರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ” ಹಾಗೂ 2024ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2024ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುವುದು. ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂಪಾಯಿ, ತೃತೀಯ ಸ್ಥಾನಕ್ಕೆ 15 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ. ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಕ್ವಾಟರ್‌ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿಯು ತಮಿಳುನಾಡಿನ ಯೂನಿವರ್ಸಿಟಿ ಆಫ್ ಮದ್ರಾಸ್ ತಂಡವನ್ನು 35-23, 35-29 ನೇರ ಸೆಟ್‌ನಲ್ಲಿ ಸೋಲಿಸಿ 18ನೇ ಬಾರಿಗೆ ಲೀಗ್ ಹಂತಕ್ಕೆ ಆಯ್ಕೆಯಾಗಿತ್ತು. ಲೀಗ್ ಹಂತದಲ್ಲಿ ತಮಿಳುನಾಡಿನ ಮಧುರೈಯ ಕಾಮರಾಜ್ ವಿವಿ ತಂಡವನ್ನು 35-15, 35-26 ಅಂತರಗಳಿಂದ, ಮಹಾತ್ಮಾ ಗಾಂಧಿ ವಿವಿಯನ್ನು 35-18, 35-14 ನೇರ ಅಂತರಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತು. ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ಅಣ್ಣಾ ವಿವಿಯೊಂದಿಗಿನ ರೋಚಕ ಪಂದ್ಯಾಟದಲ್ಲಿ ರನ್ನರ್ ಅಪ್ ಸ್ಥಾನಗಳಿಸುವಲ್ಲಿ ಯಶಸ್ವಿಯಾಯಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತಿಹಾಸದಲ್ಲೆ ಮೊದಲೆಂಬಂತೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನಲ್ಲಿ ಸಾಕ್ಷಿಯಾಯಿತು. ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇಗುಲದಿಂದ ಶ್ರೀನಿವಾಸ ಪದ್ಮಾವತಿ ಒಳಗೊಂಡ ಮೂರ್ತಿ ವರ್ಣರಂಜಿತ ಮೆರವಣಿಗೆ ಮೂಲಕ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಿಕೊಂಡು ಶ್ರೀನಿವಾಸ ಕಲ್ಯಾಣ ನಡೆಯುವ ಸ್ಥಳಕ್ಕೆ ಕರೆ ತರಲಾಯಿತು. ಗಮನ ಸೆಳೆಚ ವರ್ಣರಂಜಿತ ಮೆರೆವಣಿಗೆ ಸಾಲಿಗ್ರಾಮದಿಂದ ಹೊರಟ ಪುರಮೆರವಣಿಗೆಯಲ್ಲಿ ಸುಮಾರು ಹತ್ತಕ್ಕೂ ಅಧಿಕ ಕುಣಿತ ಭಜನಾ ತಂಡಗಳು, ಕೀಲು ಕುದುರೆ, ಕೋಲಾಟ ಭಜನೆ, ಚಂಡೆ ವಾದನ, ಪಂಡಾರಪುರ ಹೊಲುವ ಭಜನಾ ತಂಡ, ಸಾವಿರಾರು ಶ್ರೀನಿವಾಸ ಭಕ್ತರು ಪೂರ್ಣಕುಂಭ ಕಳಶ ಹಿಡಿದು ಮೆರವಣಿಗೆಯೂದ್ದಕ್ಕೂ ಗೋವಿಂದನ ನಾಮ ಸ್ಮರಣೆಗೈಯುವ ದೃಶ್ಯ ವಿಶೇಷವಾಗಿ ಪದ್ಮಾವತಿ ಸಹಿತ ಶ್ರೀನಿವಾಸ ದೇವರ ದಿವ್ಯ ಶೋಭಾಯಾತ್ರೆ ಗಮನ ಸೆಳೆಯಿತು. ಬೆಳಿಗ್ಗೆ 9.00 ರಿಂದ ಸ್ಥಳ ಶುದ್ದಿ, ಪುಣ್ಯಾಹವಾಚನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12 ರಿಂದ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಗೋದುಳಿ ಮುಹೂರ್ತ ನಡೆದ ವಿವಾಹಸಂಜೆ 5ರಿಂದ ಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿಬರುತ್ತಿರುತ್ತಾನೆ. ಮಾರ್ಚ್ 20 ರಂದು ಮನೆಗೆ ಬರುವುದಾಗಿ ಹೇಳಿದವನು ಇದೂವರೆಗೂ ಮನೆಗೂ ಬಾರದೇ ಸಂಬಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿರುವ ಅವರು ಕನ್ನಡ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ:9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

Read More