Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಸಾಬೀತುಪಡಿಸಿದೆ. ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೇ ಮುಸ್ಲಿಮರಿಗಾಗಿ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ ಖಂಡನೀಯ ಎಂದು  ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಹೇಳಿಕೆಯ ವಿರುದ್ಧ ಆಯೋಜಿಸಲಾದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆಯವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಡಿಕೆ ಶಿವಕುಮಾರ್ ಮಾತನ್ನು ಖಂಡಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೈಲು ಹಳಿಯ ಬದಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ರೈಲು ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.24ರಂದು ಸಂಜೆ ವೇಳೆ ಗಂಗೊಳ್ಳಿಯ ಕುಂದಬಾರಂದಾಡಿ ಗ್ರಾಮದ ಹೂವಿನ ಕಂಬಳಗದ್ದೆ ಎಂಬಲ್ಲಿ ನಡೆದಿದೆ. ತ್ರಾಸಿ ಗ್ರಾಮದ ಹೆರಿಯ(70) ಮೃತ ದುರ್ದೈವಿ. ಕೂಲಿ ಕೆಲಸವನ್ನು ಮುಗಿಸಿಕೊಂಡು ಮನೆಗೆ ವಾಪಾಸ್ಸು ರೈಲ್ವೇ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹೆರಿಯ ಅವರಿಗೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ರೈಲು ಢಿಕ್ಕಿ ಹೊಡೆದು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಗೋಳ್ಳಿ ಅಂಬ್ಯುಲೆನ್ಸ್‌ ಚಾಲಕ ಮೊಹಮ್ಮದ್‌ ಇಬ್ರಾಹಿಂ ಅವರ ತಂಡ, ಪಿಎಸ್‌ಐ ಬಸವ ಕನಶೆಟ್ಟಿ ಹಾಗೂ ಸ್ಥಳೀಯರು ಸುಮಾರು ಒಂದೂವರೆ ಕಿ.ಮೀ ತನಕ ಕಾಲುದಾರಿಯಲ್ಲೇ ನಡೆದು ಅಂಬ್ಯುಲೆನ್ಸ್‌ ತನಕ ಮೃತದೇಹವನ್ನು ಸಾಗಿಸಿ ಅಲ್ಲಿಂದ ಕುಂದಾಪುರ ಶವಾಗಾರಕ್ಕೆ ಕೊಂಡೊಯ್ಯಲಾಯಿತು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಜ್ಞಾನವು ತಂತ್ರಜ್ಞಾನ ಅಭಿವೃದ್ಧಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ತಂತ್ರಜ್ಞಾನ ಪ್ರಗತಿಯ ಹಿಂದೆ ವಿಜ್ಞಾನಿಗಳ ಪರಿಶ್ರಮ ಮತ್ತು ನಾವೀನ್ಯತೆ ಅಡಕವಾಗಿದೆ. ಭವಿಷ್ಯದಲ್ಲಿ ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಜೈವಿಕ ತಂತ್ರಜ್ಞಾನ ಮುಂತಾದ ಕ್ಷೇತ್ರಗಳು ನವ್ಯತೆಯ ಹೊಸ ಮಾರ್ಗಗಳನ್ನು ತೆರೆಯಲಿವೆ ಎಂದು ಮಣಿಪಾಲ್ ಇನ್‌ಸ್ಟಿಟ್ಯುಟ್ ಆಫ್ ಟೆಕ್ನಾಲಜಿ (ಎಂ.ಐ.ಟಿ.) ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗುರುಮೂರ್ತಿ ಎಸ್. ಸಿ. ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದ ಆವಿಷ್ಕಾರರಾಗಬೇಕೆಂದು ಪ್ರೇರೇಪಿಸಿದರು. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ವಿಜ್ಞಾನ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರಭಾವಿ ಸಂವಹನವೇ ಇಂದಿನ ಸವಾಲು ಮತ್ತು ಅವಶ್ಯಕತೆ. ಭಾರತವು ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ನಿಮ್ಮ ಕಲಿಕೆಯೇ ಅದರ ವೇಗವರ್ಧಕವಾಗಿದೆ. ಪರೀಕ್ಷೆಯೇ ಕಲಿಕೆಯ ಅಂತ್ಯವಲ್ಲ. ಬದುಕಿನಲ್ಲಿ ಪ್ರತಿನಿತ್ಯ ಕಲಿಕೆ ಅನಿವಾರ್ಯ ಎಂದು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ವಾಸುದೇವ ಕಾಮತ್ ಹೇಳಿದರು. ಅವರು ಇಲ್ಲಿನ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕೃತಕಬುದ್ಧಿಮತ್ತೆ (ಎಐ) ಎಂಬುದು ಮಿಥ್ಯೆ ಅಲ್ಲ. ಔದ್ಯೋಗಿಕ ಬದುಕಿನ ಅನಿವಾರ್ಯತೆ. ನೀವು ಉದ್ಯಮಶೀಲತೆಯನ್ನು ಮೈಗೂಡಿಸಿಕೊಂಡು ಯಶಸ್ವಿ ಆಗಬಹುದು. ಕೋಟ್ಯಧಿಪತಿಗಳಾದ ಕರಾವಳಿ ಸಾಧಕರು ಇದ್ದಾರೆ. ನಿಮ್ಮ ಅಂತರಂಗವನ್ನು ಆಲಿಸಿ. ಹೃದಯದ ಮಾತು ಕೇಳಿ, ನಿಮಗೆ ಅತ್ಯುತ್ತಮ ಅವಕಾಶವನ್ನು ’ಆಳ್ವಾಸ್’ನೀಡಿದೆ. ನೀವು ಇತರರಿಗೂ ತಿಳಿಸಿ, ಇತರರ ಏಳ್ಗೆಗೆ ನೆರವಾಗಿ. ಮರಕಲ್ಲಿನ ಬೆಟ್ಟವನ್ನು ಮನಸ್ಸು ಕಟ್ಟುವ ಶೈಕ್ಷಣಿಕ ನೆಲೆಯಾಗಿ ಪರಿವರ್ತಿಸಿದ ಡಾ| ಮೋಹನ ಆಳ್ವ ಅವರ ಸಾಧನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪೇಜಾವರ ಅಧೋಕ್ಷಜ ಮಠ ಉಡುಪಿ, ಅಖಿಲ ಭಾರತ ಮಾದ್ವ ಮಹಾಮಂಡಲ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಬೆಂಗಳೂರು ಹಾಗೂ ಅನೇಕ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪೆರಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಶ್ರೀ ರಾಮೋತ್ಸವ ಪ್ರಯುಕ್ತ ದಶಕೋಟಿ ರಾಮತಾರಕ ಮಂತ್ರ ಜಪಯಜ್ಞ, ಶ್ರೀ ರಾಮತಾರಕ ಮಂತ್ರ ಜಪಾನುಷ್ಠಾನ ಪರ್ವ ಕಾರ್ಯಕ್ರಮ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಇತ್ತೀಚಿಗೆ ನಡೆಯಿತು. ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಆಶೀರ್ವದಿಸಿದರು. ಎನ್. ಪ್ರಕಾಶ್ ನಾಯಕ್ ಗಂಗೊಳ್ಳಿ, ಕೃಷ್ಣಮೂರ್ತಿ ಕಿಣಿ ಬೆಂಗಳೂರು, ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ, ಸಂಚಾಲಕ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಅಶ್ವಿತಾ ಜಿ. ಪೈ, ಮಾಜಿ ಅಧ್ಯಕ್ಷರಾದ ಸವಿತಾ ಎನ್. ದೇವಾಡಿಗ, ಬಿ. ಲಕ್ಷ್ಮೀಕಾಂತ ಮಡಿವಾಳ, ಶಿಶು ಮಂದಿರದ ಸದಸ್ಯರಾದ ವಿಜಯಶ್ರೀ ವಿ. ಆಚಾರ್ಯ, ವಸಂತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 105ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾಯಿತು. ವೇದಿಕೆಯಲ್ಲಿ ಡಾ. ರಮಾಕಾಂತ್ ಶೆಣೈ, ಪುಷ್ಪರಾಜ್, ವಸಂತಿ ಆರ್. ಪಂಡಿತ್, ಗಿರೀಶ್ ಪೈ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಮೈಸೂರಿನ ಡಾ. ರಮಾಕಾಂತ್ ಶೆಣೈ ಹಾಗೂ ಕುಂದಾಪುರದ ದೀಕ್ಷಾ ಪೈ, ಪ್ರೇಕ್ಷಾ ಪೈ ಸಹೋದರಿಯರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ನಂತರ ಡಾ. ರಮಾಕಾಂತ್ ಶೆಣೈ ಅವರು ವಿಷ್ಣು ಸಹಸ್ರನಾಮದ ಬಗ್ಗೆ ಪ್ರವಚನ ನೀಡಿ ಅದರ ಮಹತ್ವ ವಿವರಿಸಿದರು. ದೀಕ್ಷಾ ಪೈ ಹಾಗೂ ಪ್ರೇಕ್ಷಾ ಪೈ ಸಹೋದರಿಯರು ಭಕ್ತಿ ಸಂಗೀತ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದರು. ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ರಶ್ಮಿರಾಜ್ ಕುಂದಾಪುರ ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಲ್ಪ ಮಾನವತ್ವವನ್ನು ವಿಶ್ವ ಮಾನವತೆಯ ಕಡೆಗೆ ಬಿತ್ತರಿಸಬೇಕು ಎಂಬ ಆಶಯದೊಂದಿಗೆ ಕಟ್ಟಿಕೊಂಡ ಶೈಕ್ಷಣಿಕ ವ್ಯವಸ್ಥೆ ನಮ್ಮದು. ಶಿಕ್ಷಣ ಸಂಸ್ಥೆಗಳು ಒಳ್ಳೆಯ ಸಂಸ್ಕಾರ ಮತ್ತು ಉತ್ತಮ ಜ್ಞಾನವನ್ನು ನಿಮಗೆ ನೀಡಿ ಬದುಕನ್ನು ಕಟ್ಟಿಕೊಳ್ಳಲು ಅನುವು ಮಾಡಿಕೊಡುತ್ತದೆ. ಹಕ್ಕಿ ಆಹಾರಕ್ಕಾಗಿ ಭೂಮಿಗೆ ಬರುವಂತೆ, ನಾವು ಎಷ್ಟೇ ಉನ್ನತ ಹುದ್ದೆಯಲ್ಲಿದ್ದರೂ ಜನ್ಮಜಾತ ಊರಿಗೆ ಹಾಗೂ ಕಲಿತ ಶಾಲೆಗೆ ಮರಳಿ ಬರಲೇಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತ ತಾಯಿಗೆ ನಮನ, ಹೊತ್ತ ಇಳೆಗೆ ನಮನ, ತುತ್ತಿಟ್ಟ  ಬಂಧು ಬಳಗಕ್ಕೆ ನಮನ, ಶಾಲೆಗೆ ನಮನ, ತಿದ್ದಿ ತೀಡಿದ ಗುರುಗಳಿಗೆ ನಮನ  ಎಂದು ಹೇಳುತ್ತಾ ನಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು. ಇಂದು ನೀತಿ ಇಲ್ಲದ ವ್ಯಾಪಾರ, ಶೀಲವಿಲ್ಲದ ಶಿಕ್ಷಣ, ತತ್ವರಹಿತ ರಾಜಕಾರಣ, ಮಾನವತೆ ಇಲ್ಲದ ವಿಜ್ಞಾನ ಒಂದು ರೀತಿಯಲ್ಲಿ ಎಲ್ಲವೂ ಸರಕಾಗಿಬಿಟ್ಟಿದೆ. ಮನಸು ಮಾರುಕಟ್ಟೆಯಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ  ಪ್ರತಿಯೊಬ್ಬ ನಾಗರಿಕರೂ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ. ಆರ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯತ್-ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ 2030 ರ ಒಳಗೆ ಕ್ಷಯ ಮುಕ್ತ ಭಾರತವನ್ನಾಗಿಸುವ ಆಂದೋಲನವನ್ನು ಹಮ್ಮಿಕೊಂಡಿದೆ. ಜಿಲ್ಲೆಯನ್ನೂ ಸಹ ಕ್ಷಯ ಮುಕ್ತವನ್ನಾಗಿಸಬೇಕು. ಕ್ಷಯರೋಗಿಗಳನ್ನು ಮುಂಚಿತವಾಗಿ ಪತ್ತೆ ಹಚ್ಚುವುದು, ಸಂಪೂರ್ಣ ಚಿಕಿತ್ಸೆಯನ್ನು ನೀಡುವುದು ಹಾಗೂ ರೋಗವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗಲುಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಕೊಲ್ಲೂರು ದೇವಿಯ ಪರಮ ಭಕ್ತರಾದ ಇಳಯರಾಜ್‌ ಅವರು ಸಾಮಾನ್ಯವಾಗಿ ಪ್ರತಿವರ್ಷವೂ ಕೊಲ್ಲೂರಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ರಘುರಾಮ ದೇವಾಡಿಗ, ಇಓ ಪ್ರಶಾಂತ್‌ ಶೆಟ್ಟಿ ಇಳಯರಾಜ್‌ ಅವರನ್ನು ಗೌರವಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನೆಯಲ್ಲಿ ವೃದ್ಧೆ ಮಾತ್ರ ಇರುವ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಅವರೊಂದಿಗೆ ಮನೆಯವರಂತೆ ಮಾತನಾಡಿ ಆಕೆಯ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರಿನಲ್ಲಿ ಮಾ.20ರಂದು ನಡೆದಿದೆ. ರುದ್ರಮ್ಮ(92) ಚಿನ್ನ ಕಳೆದುಕೊಂಡಿರುವ ವೃದ್ಧೆ. ಮಾ.20ರಂದು ಮನೆಯವರೆಲ್ಲರೂ ಸ್ಥಳೀಯ ಕೊಟ್ಟೂರು ದೇಗುಲದ ಜಾತ್ರೆಗೆಂದು ತೆರಳಿದ್ದರು. ಈ ವೇಳೆ ಮನೆಯಲ್ಲಿ ರುದ್ರಮ್ಮ ಒಬ್ಬರೇ ಇದ್ದರು. ದಿನನಿತ್ಯದಂತೆ ಅವರು ಮಲಗುವಾಗ ತಾನು ಧರಿಸಿದ್ದ ಚಿನ್ನದ ಸರವನ್ನು ಮಂಚದ ಮೇಲೆ ಕಳಚಿಟ್ಟಿದ್ದರು. ಜಾತ್ರೆಗೆ ತೆರಳಿದ್ದ ಅವರ ಅಳಿಯ ಶ್ರೀಧರ್ ಅವರು ದಿಢೀರನೇ ಮನೆಗೆ ಬಂದಿದ್ದು, ಈ ವೇಳೆ ಮನೆಯ ಬಾಗಿಲು ಒಡೆದಿರುವುದು ಕಂಡುಬಂದಿದೆ. ಈ ಬಗ್ಗೆ ರುದ್ರಮ್ಮರನ್ನು ಶ್ರೀಧರ್ ಅವರು ವಿಚಾರಿಸಿದಾಗ “ಯಾರೋ ಹುಡುಗ ಬಂದಿದ್ದ. ನನಗೆ ದೃಷ್ಟಿ ದೋಷವಿರುವುದರಿಂದ ಯಾರೆಂದು ತಿಳಿಯಲಿಲ್ಲ. ನಾನು ನೀವೇ ಬಂದಿರಬಹುದು ಎಂದು ಜಾತ್ರೆ ಮುಗಿಯಿತಾ? ಹೇಗಾಯಿತು ಎಂದು ಆತನಲ್ಲಿ ಕೇಳಿದ್ದೆ. ಆತನೂ ಮನೆಯವರಂತೆಯೇ ಮಾತನಾಡಿದ್ದ” ಎಂದು ತಿಳಿಸಿದ್ದರು. ಆಗ…

Read More