ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮರವಂತೆ, ನಾವುಂದ, ಗುಜ್ಜಾಡಿ ಮತ್ತು ಹೊಸಾಡು ಗ್ರಾಮ ಪಂಚಾಯತ್ಗಳ ಸಂಯುಕ್ತ ಆಶ್ರಯದಲ್ಲಿ ನಾಲ್ಕು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಸಮುದಾಯದ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರವು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆಯಿತು. ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ ಶಿಬಿರವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಕಾಲಕಾಲಕ್ಕೆ ಆರೋಗ್ಯ ತಪಾಣೆ ಮಾಡಿಸಿಕೊಳ್ಳುವುದರಿಂದ ವಿವಿಧ ಕಾರಣಗಳಿಂದ ಆರೋಗ್ಯದಲ್ಲಿ ಆಗುವ ಏರುಪೇರುಗಳನ್ನು ವಾಸಿಮಾಡಿಕೊಳ್ಳಬಹುದು. ಆರೋಗ್ಯ ಕೇಂದ್ರ ವ್ಯಾಪ್ತಿಯ ಕೊರಗ ಕಾಲನಿಗಳಲ್ಲಿ ಈಗ ನಿಯತಕಾಕಲಿಕವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆ ವೇಳೆಯಲ್ಲಿ ಕುಟುಂಬದ ಎಲ್ಲ ಜನರು ಹಾಜರಿದ್ದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ಹೊಸಾಡು ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಗುಜ್ಜಾಡಿ ಅಧ್ಯಕ್ಷ ಹರೀಶ ಮೇಸ್ತ, ಮರವಂತೆಯ ಮಾಜಿ ಅಧ್ಯಕ್ಷ ಎಸ್.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆಧುನಿಕ ತಂತ್ರಜ್ಞಾನಗಳ ಫಲವಾಗಿ ವಿಶ್ವದೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿದ್ದರೂ ಮನುಷ್ಯ ಮನುಷ್ಯನ ನಡುವಿನ ಪ್ರೀತಿ ಭಾಂದವ್ಯ, ನೈತಿಕ ಮೌಲ್ಯಗಳು ಕುಸಿಯುತ್ತಿದೆ. ಮೊ ಮೊಬೈಲ್, ಟಿವಿಯ ಕಾರಣದಿಂದ ಕಲೆಯ ಆಸ್ವಾದನೆಯಿಂದ ವಿಮುಖರಾಗುತ್ತಿರುವುದೂ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲ ಶರಣ ಕುಮಾರ್ ಹೇಳಿದರು ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ೧೭ನೇ ವರ್ಷದ ಸಂಭ್ರಮದೊಂದಿಗೆ ಆಯೋಜಿಸಿದ ಸುರಭಿ ಜೈಸಿರಿ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ ಬದುಕಿನಲ್ಲಿ ಕಲೆ ಒಡನಾಟ ಇಲ್ಲದಿದ್ದರೆ ನಮ್ಮಲ್ಲಿ ಒಳ್ಳೆಯ ಮನೋಭಾವ ಬೆಳೆಯದು. ಕಲೆ ಬದುಕಿನ ಪಾಠವನ್ನು, ಬದುಕುವ ರೀತಿಯನ್ನು ಕಲಿಸಿಕೊಡುತ್ತದೆ ಎಂದರು. ಚಿತ್ರ ಕಲಾವಿದ ಮಂಜುನಾಥ ಮಯ್ಯ ಉಪ್ಪುಂದ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಭರತನಾಟ್ಯ ಗುರು ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಹಾಗೂ ಯಕ್ಷಗಾನ ಗುರು ಪ್ರಶಾಂತ್ ಮಯ್ಯ ದಾರಿಮಕ್ಕಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಗ್ರಾಮದ ಯಡಾಡಿ ಮತ್ಯಾಡಿ ಗ್ರಾಮದ ಹಳನೀರು ಪ್ರದೇಶದಲ್ಲಿ ವಾರಾಹಿ ನೀರಾವರಿ ನಿಗಮ ನಿಯಮಿತ ಉಪಕಾಲುವೆ 31ರಲ್ಲಿ ಗುತ್ತಿಗೆದಾರರು ನಿಯಮಗಳನ್ನು ಗಾಳಿಗೆ ತೂರಿ ಕಾಲುವೆಯಲ್ಲಿ ಎದುರಾದ ಬಂಡೆಗಳನ್ನು ನ್ಪೋಟಿಸಿದ್ದರಿಂದ ಸುಮಾರು 1ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವವರಿಗೆ ತೊಂದರೆ ಉಂಟಾಗಿದೆ ಎಂದು ಗ್ರಾಮಸ್ಥರು ಉಗ್ರವಾಗಿ ಪ್ರತಿಭಟಿಸಿದರು. ಕಾಮಗಾರಿಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಒಮ್ಮೆಲೆ 3-4 ಕಂಪ್ರಸರ್ ಒಟ್ಟಾಗಿ ಸುಮಾರು 100ರಿಂದ 200 ಗುಳಿಗಳನ್ನು ನಿಯಮದಂತೆ ಮಾಡದೆ ಅದಕ್ಕಿಂತಲೂ ಹೆಚ್ಚಿನ ಆಳದ ಗುಳಿಗಳನ್ನು ತೋಡಿ ಸ್ಫೋಟಿಸಿದ್ದರಿಂದ ತೊಂದರೆ ಆಗುತ್ತಿರುವ ಬಗ್ಗೆ ಗ್ರಾಮಸ್ಥರು ದೂರಿದ್ದಾರೆ. ಸ್ಫೋಟದ ವೇಳೆ ಗುಳಿಗಳನ್ನು ಮರಳು ಚೀಲದಿಂದ ಮುಚ್ಚದೆ ಏಕಾಏಕಿ ಸ್ಫೋಟಿಸಿರುವುದರಿಂದ ಅಪಾಯ ಹೆಚ್ಚು ಎನ್ನುವುದು ಗ್ರಾಮಸ್ಥರ ಅಭಿಪ್ರಾಯ. ಪ್ರತಿಭಟನೆಯಲ್ಲಿ ತಾ.ಪಂ. ಅಧ್ಯಕ್ಷೆ ಜಯಶ್ರೀ ಸುಧಾಕರ, ತಾ.ಪಂ. ಮಾಜಿ ಸದಸ್ಯ ರಮೇಶ ಶೆಟ್ಟಿ ಹಾಲಾಡಿ, ಹೊಂಬಾಡಿ ಮಂಡಾಡಿ ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಪೂಜಾರಿ, ಗ್ರಾ.ಪಂ. ಸದಸ್ಯ ಬಿ. ಅರುಣ ಕುಮಾರ ಹೆಗ್ಡೆ, ಮಾಜಿ ಗ್ರಾ.ಪಂ ಅಧ್ಯಕ್ಷ ಗಣೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಂಸ್ಕೃತಿಕ ಶೈಕ್ಷಣಿಕವಾಗಿ ಹಾಗೂ ಹಲವಾರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುವ ಮೂಲಕ ರಾಜ್ಯ ಯುವ ಪ್ರಶಸ್ತಿಯನ್ನು ಪಡೆದ ಹೆಮ್ಮೆಯ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಇಂಜಿನಿಯರ್ ಕೆ.ರವೀಂದ್ರ ಕಾವೇರಿ ಹೇಳಿದರು. ಅವರು ಶ್ರೀ ಮೈಲಾರೇಶ್ವರ ಯುವಕ ಮಂಡಲ (ರಿ) ಇದರ 40 ರ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ಉದ್ಯಮಿ ಬಿ.ವೆಂಕಟರಮಣ ಬಿಜೂರು, ಕೋಟೇಶ್ವರ ಶ್ರೀ ರಾಮಕ್ಷತ್ರೀಯ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾದ ವಿಶ್ವನಾಥ ಬರಗೆರೆ, ಕೊಲ್ಲುರು ಉದ್ಯಮಿ ಮಂಜುನಾಥ ಶೇರೆಗಾರ, ಗುತ್ತಿಗೆದಾರರಾದ ರಮಾನಾಥ ನಾಯ್ಕ್, ರಮೇಶ ರಾವ್ ಪಡುಕೇರಿ, ಅಂಕಣಕಾರ ಕೋ ಶಿವಾನಂದ ಕಾರಂತ, ಬೈಂದೂರು ರಾಮಕ್ಷತ್ರಿಯ ಸಂಘದ ಆಡಳಿತ ಸದಸ್ಯರಾದ ವಸಂತಿ ನಾರಾಯಣ ಮದ್ದೋಡಿ, ಸಂಸ್ಥೆಯ ಗೌರವ ಅಧ್ಯಕ್ಷರಾದ ಕೆ.ಪಿ.ಶಿವಪ್ರಸಾದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕ್ರತರಾದ ಮಾಲತಿ ಡಿ.ಕೆ, ಹೊಸನಗರ ತಾಲೂಕಿನ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಆಶಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಒಳಚರಂಡಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಹಾಗೂ ಯೋಜನೆಯ ಕಾಮಗಾರಿಯ ನಿರ್ವಹಣೆ, ಗುಣಮಟ್ಟದ ಬಗ್ಗೆ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಜಲಮಂಡಳಿಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಸಭೆಯನ್ನು ಹತ್ತು ದಿನದೊಳಗೆ ಕರೆಯಬೇಕೆಂದು ಮನವಿ ಮಾಡಿದ್ದರೂ ತನಕ ಸಭೆ ಕರೆಯದೇ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದ ಒಳಗೆ ಸಭೆಯನ್ನು ಕರೆಯದೇ ಇದ್ದಲ್ಲಿ ಮಾ. ೩ರಂದು ಪುರಸಭೆಯ ಎದುರು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕುಂದಾಪುರದ ಪ್ರಜಾ ಜಾಗೃತಿ ವೇದಿಕೆ ಅಧ್ಯಕ್ಷ ರಾಮಕೃಷ್ಣ ಹೇರ್ಳೆ ತಿಳಿಸಿದ್ದಾರೆ. ಈ ಕುರಿತು ಕುಂದಾಪುರ ಪುರಸಭೆಯ ಅಧ್ಯಕ್ಷರಿಗೆ ಸಮಿತಿಯ ಕಾರ್ಯದರ್ಶಿ ಬಿ. ಕಿಶೋರ್ ಕುಮಾರ್ ಅವರನ್ನೊಳಗೊಂಡು ಸಮಿತಿಯ ಸದಸ್ಯರು ಸದಸ್ಯರು ಮನವಿಯನ್ನು ಸಲ್ಲಿಸಿದರು.
ಕಲಾಸಂಸ್ಥೆಗಳಿಂದ ಕಲೆಯ ಅಳಿವಿನ ಆತಂಕ ದೂರ: ದೀಪಾ ರವಿಶಂಕರ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆಯನ್ನು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ವರ್ಗಾಯಿಸುವ ಕೆಲಸ ಬಹುಮುಖ್ಯವಾದುದು. ನಮ್ಮ ಸಂಸ್ಕೃತಿ ಹಾಗೂ ಕಲಾ ಪ್ರಕಾರವನ್ನು ಮುಂದಿನ ಜನಾಂಗ ಕಲಿಯಲಾರವು ಎಂಬ ಆತಂಕ ದೂರವಾಗಿಸುವ ಮಾಧ್ಯಮವಾಗಿ ಕಲಾ ಸಂಸ್ಥೆಗಳ ಕಾರ್ಯನಿರ್ವಹಿಸುತ್ತವೆ ಎಂದು ಲೇಖಕಿ, ನಟಿ ದೀಪಾ ರವಿಶಂಕರ್ ಬೆಂಗಳೂರು ಹೇಳಿದರು ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ೧೭ನೇ ವರ್ಷದ ಸಂಭ್ರಮದೊಂದಿಗೆ ಆಯೋಜಿಸಿದ ಮೂರು ದಿನಗಳ ಕಾರ್ಯಕ್ರಮ ಸುರಭಿ ಜೈಸಿರಿ ಉದ್ಘಾಟಿಸಿ ಮಾತನಾಡಿದರು. ಭಾರತೀಯರ ಮೇಲೆ ಹಲವು ಪರಕೀಯ ದಾಳಿಗಳು ನಡೆದ ಬಳಿಕವೂ ಪ್ರದರ್ಶನ ಕಲೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಾರತೀಯ ಕಲೆಗಳನ್ನು ಇಂದಿಗೂ ತಮ್ಮ ಅಸ್ತಿತ್ವವನ್ನು ಕಾಯ್ದುಕೊಳ್ಳುವಂತಹ ಗಟ್ಟಿ ಬೇರನ್ನು ಹೊಂದಿದೆ. ಇಂದಿನ ಪೀಳಿಗೆ ಕಲೆಯನ್ನು ಮುಂದುವರಿಸುತ್ತಾರೋ ಬಿಡುತ್ತಾರೋ ಎಂಬುದಕ್ಕಿಂತ ಅವುಗಳು ಅವರ ಮನಸ್ಸಿನೊಳಕ್ಕೆ ಹೊಕ್ಕು ಕೂರುತ್ತದೆ. ಕಲೆಯನ್ನು ಕಲಿಸುವ ಕಾರ್ಯ ನಿರಂತರವಾಗಿ ನಡೆಸುವುದು ಬಹುಮುಖ್ಯವಾದುದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಮೇಲ್ಗಂಗೊಳ್ಳಿಯ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಾಯೋಜಿತ ಓಂ ಶ್ರೀ ಮಾತೃ ಮಂಡಳಿ ನೇತೃತ್ವದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಕಾರ್ಯಕ್ರಮ ಸಂಜೆ ಗೋಧೂಳಿ ಲಗ್ನ ಸುಮೂರ್ಹತದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿತು. ಶಿವ ಪಾರ್ವತಿಯ ವಿಗ್ರಹವನ್ನು ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದ ಬಳಿಯಿಂದ ವೈಭವೋಪಿತ ಪುರಮೆರವಣಿಗೆಯಲ್ಲಿ ತರಲಾಯಿತು. ವೇದಮೂರ್ತಿ ಶ್ರೀಪತಿ ಭಟ್ ಮಂಕಿ ನೇತೃತ್ವದಲ್ಲಿ ಪುರೋಹಿತರು ಕಲ್ಯಾಣೋತ್ಸವದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ವಧು ನಿರೀಕ್ಷಣೆ, ಅರಶಿನ ಕುಂಕುಮ ಸಮರ್ಪಣೆ, ಧಾರೆಮಣಿ ಕಟ್ಟುವಿಕೆ, ಶಿವನಿಗೆ ಮಧುಪರ್ಕ ಸಮರ್ಪಣೆ, ಮಾಲಾಧಾರಣೆ, ಕನ್ಯಾದಾನ, ಕಂಕಣ ಮಾಂಗಲ್ಯ ಸೂತ್ರ ಧಾರಣೆ, ಚಿನ್ನಾಭರಣಾಧಿ ಕಪ್ಪ ಕಾಣಿಕೆಗಳ ಸಮರ್ಪಣೆ, ಪ್ರಸನ್ನ ಪೂಜೆ, ಅಷ್ಟಾವಧಾನ ಸೇವೆಗಳ ಮೂಲಕ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಭಕ್ತಿ ಶ್ರದ್ಧಾಪೂರ್ವಕ ನೆರವೇರಿಸಲಾಯಿತು. ಓಂ ಶ್ರೀ ಮಾತೃ ಮಂಡಳಿಯ ಅಧ್ಯಕ್ಷೆ ಸುಶೀಲ ಸಿ., ಗೌರವಾಧ್ಯಕ್ಷೆ ಪದ್ಮಾವತಿ, ಪ್ರಧಾನ ಕಾರ್ಯದರ್ಶಿ ಪ್ರೇಮ, ಕಾರ್ಯದರ್ಶಿ ಜ್ಯೋತಿ, ದೇವಸ್ಥಾನದ ಮೊಕ್ತೇಸರ ಈಶ್ವರ ಜಿ., ತಾಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನರ್ಸರಿ, ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳ ಮನಸ್ಸನ್ನು ಅರಳಿಸುವ ತಾಣವಾಗಬೇಕು. ಶಿಕ್ಷಣದ ಜಗತ್ತು ತೆರೆದುಕೊಳ್ಳುವ ಮೊದಲು ಮಗುವಿನ ಮನಸ್ಸು ತೆರೆದುಕೊಳ್ಳಬೇಕು. ಅಂತಹ ಪರಿಸರವನ್ನು ಸೃಷ್ಟಿಸಿರುವ ಇಂತಹ ಶಾಲೆಗಳು ಅಭಿನಂದನೆಗೆ ಅರ್ಹ ಎಂದು ಶಿಕ್ಷಣ ತಜ್ಞ ಶ್ರೀಪತಿ ಹೇರ್ಳೆ ಹೇಳಿದರು. ಅವರು ಕೋಟೇಶ್ವರದ ಕೆನರಾ ಕಿಡ್ಸ್ ಶಾಲೆಯ ವಠಾರದಲ್ಲಿ ನಡೆದ ಕ್ಯಾನ್ ಕಿಡ್ಸ್ ಡೇ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿಕ್ಷಣ ಸಂಸ್ಥೆಯ ಸಂಚಾಲಕಿ ವಿನಂತಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು. ಶಾಲಾ ಶಿಕ್ಷಣ ನಿರ್ದೇಶಕಿ ರಜನಿ ಉಪಾಧ್ಯ ವರದಿ ವಾಚಿಸಿದರು. ಸವಿತಾ ಆರ್ ಐತಾಳ್ ಉಪಸ್ಥಿತರಿದ್ದರು. ಶಿಕ್ಷಕಿ ಸುಜಾತಾ ಶೆಟ್ಟಿ ವಂದಿಸಿದರು.ಕಾರ್ಯಕ್ರಮದ ಅನಂತರ ಮುದ್ದು ಮಕ್ಕಳ ನೃತ್ಯ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿ.ಎಸ್.ಬಿ ಸಮಾಜದವರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಗುರುಗಳ ಅನುಗ್ರಹ, ಹಿರಿಯರ ಅವಿರತ ಶ್ರಮ ನಮಗೆ ಬೆನ್ನೆಲುಬಾಗಿದೆ. ಕ್ರಿಕೆಟ್ ಪಂದ್ಯಾಟದ ಆಯೋಜನೆಯಿಂದ ಇತರ ಊರುಗಳ ಸಮಾಜ ಬಾಂಧವರ ಪರಿಚಯದಿಂದ ಯುವ ಸಮುದಾಯದ ತಂಡ ರೂಪುಗೊಳ್ಳುತ್ತದೆ. ಆ ಮೂಲಕ ಸಮಾಜದ ಧಾರ್ಮಿಕ ಕಾರ್ಯಕ್ರಮಗಳಿಗೆ ಸ್ವಯಂ ಸೇವಕರನ್ನು ಒಗ್ಗೂಡಿಸುವ ಕಾರ್ಯ ನಡೆಯಬೇಕಿದೆ ಎಂದು ಸಿದ್ದಾಪುರ ಸಂಯುಕ್ತ ಜಿ.ಎಸ್.ಬಿ ಸಮಾಜದ ಆಧ್ಯಕ್ಷ ಗೋಪಿನಾಥ ಕಾಮತ್ ಆಶಿಸಿದರು. ಅವರು ಬಸ್ರೂರಿನ ಸರಕಾರಿ ಪ್ರೌಡಶಾಲೆಯ ಮೈದಾನದಲ್ಲಿ ಬಸ್ರೂರು ಜಿ.ಎಸ್.ಬಿ ಸಭಾ ಆಶ್ರಯದಲ್ಲಿ ಹಾಗೂ ಚಿತ್ತಾರ ಕ್ಯಾಶ್ಯೂ ವಂಡಾರು ಇವರ ಪ್ರಾಯೋಜಕತ್ವದಲ್ಲಿ ಜಿ.ಎಸ್.ಬಿ ಸಮಾಜ ಬಾಂಧವರಿಗೆ ಸೀಮಿತ ಓವರುಗಳ 30 ಗಜಗಳ ಕ್ರಿಕೆಟ್ ಪಂದ್ಯಾಟ “ಆಮ್ಗೆಲೆ ಟ್ರೋಫಿ-2017″ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಹರಿಓಂ ಎಸ್ವಿಎಸ್ ಗಂಗೊಳ್ಳಿ ತಂಡ ವಿಜೇತ ತಂಡವಾಗಿ ಪ್ರಥಮ ಬಹುಮಾನವಾದ ರೂ 11,777 ಹಾಗೂ ಶಾಶ್ವತ ಫಲಕ, ದ್ವಿತೀಯ ಸ್ಥಾನವನ್ನು ಕೊಂಕಣ್ ಎಕ್ಸ್ಪ್ರೆಸ್ ಕೋಟೇಶ್ವರ ರೂ 7,777 ಹಾಗೂ ಶಾಶ್ವತ ಫಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಂಘ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರಬೇಕು. ಪರಿಸರದ ಜನರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಜನರ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಮಾಜದ ಕಟ್ಟಕಡೆಯ ಜನರನ್ನು ಗುರುತಿಸುವ ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಘ ಸಂಸ್ಥೆಗಳು ಶ್ರಮಿಸಬೇಕು ಎಂದು ಕುಂದಾಪುರ ತಾಲೂಕು ಪಂಚಾಯತ್ ಅಧಿಕಾರಿ ಕೆ.ರಾಮಚಂದ್ರ ಮಯ್ಯ ಹೇಳಿದರು. ಅವರು ಕೊಡಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಕೊಡಪಾಡಿಯ ಸವ್ಯಸಾಚಿ ಯುವಕ ಮಂಡಲದ ೧೬ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾದ ಪತ್ರಕರ್ತ ಬಿ.ರಾಘವೇಂದ್ರ ಪೈ, ಉಡುಪಿ ಸವಿತಾ ಸಮಾಜದ ಸಂಘಟನಾ ಕಾರ್ಯದರ್ಶಿ ಮಂಜುನಾಥ ಸಾಲಿಯಾನ್, ಗಂಗೊಳ್ಳಿಯ ಉದ್ಯಮಿ ಜಿ.ವಿಠಲ ಭಾಸ್ಕರ ಶೆಣೈ ಶುಭಾಶಂಸನೆಗೈದರು. ಇದೇ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಬೈಂದೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ವೀಣಾ, ತಾಯಿ ಮಾರಿಕಾಂಬಾ ಮಹಿಳಾ ಮಂಡಳಿ ಅಧ್ಯಕ್ಷೆ ಕವಿತಾ ಗಾಣಿಗ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ…
