ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ ಅಧಿಕ ಪ್ರಮಾಣದಲ್ಲಿ ಜಾನುವಾರು ಹಾಗೂ ಮಾನವ ಹಾನಿ ಸಂಭವಿಸಿದ್ದು, ಅದನ್ನು ತಡೆಗಟ್ಟಲು ಪ್ರಸ್ತುತ ಸಾಲಿನಲ್ಲಿ ಸಾರ್ವಜನಿಕರು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ಪ್ರಾಧಿಕಾರದಿಂದ ಹೊರಡಿಸುವ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಅಂತಹ ಸಂಧರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಆದಷ್ಟೂ ಮನೆಯಲ್ಲಿಯೇ ಇದ್ದು, ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕು. ಇದರಿಂದ ಸಂಭವಿಸಬಹುದಾದ ಮಾನವ ಹಾಗೂ ಜಾನುವಾರು ಹಾನಿಯನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ. ಮಲ್ಪೆ ಕರಾವಳಿ ಕಾವಲು ಪೊಲೀಸ್ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಗುಲ್ವಾಡಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಪ್ರವಾಸಿ ಪರಿಷತ್ ಕುವೈಟ್ (ಕರ್ನಾಟಕ ಘಟಕ) ಇದರ ಕರುನಾಡ ಡಿಂಡಿಮ – 2025 ಕಾರ್ಯಕ್ರಮಕ್ಕಾಗಿ ಯಕ್ಷ ಧೀಂಕಿಟ, ಕುವೈಟ್ ಯಕ್ಷಗಾನ ತಂಡದ ವತಿಯಿಂದ ಯಕ್ಷಗಾನ ರಂಗಸ್ಥಳ ಮಾದರಿ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಕುವೈಟ್ ನಿವಾಸಿ ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ ಅವರು ಚಕ್ರತಾಳವನ್ನು ಹಾಗೂ ರಫೀಕುದ್ದೀನ್ ಮಡಂತ್ಯಾರು ಚಂಡೆಯನ್ನು ನುಡಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವ್ಯಕ್ತಿಯೋರ್ವ ತಮ್ಮದೇ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ತಾಲೂಕಿನ ಕುಂಭಾಶಿ ಆನೆಗುಡ್ಡೆ ದೇವಸ್ಥಾನದ ಸಮೀಪ ನಡೆದಿದೆ. ಬೊಬ್ಬೆ ಕೇಳಿದ ಸ್ಥಳೀಯರು ಕೂಡಲೇ ಕುಂದಾಪುರದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸುಮಾರು 30 ಅಡಿ ಆಳದ ಬಾವಿಗೆ ಇಳಿದು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದ ಠಾಣಾಧಿಕಾರಿ ವಿ. ಸುಂದರ ನೇತೃತ್ವದಲ್ಲಿ ಕಾಜಾಹುಸೇನ್, ಸಚಿನ್, ರಿಯಾಜ್ ಹಾಗೂ ಸುಂದರ್ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೈಯಕ್ತಿಕ ವಿಚಾರಗಳನ್ನು ಮೀರಿದ ಸಂಬಂಧವೇರ್ಪಡಿಸಿ ನಮ್ಮನ್ನು ಒಂದುಗೂಡಿಸುವ ಶಕ್ತಿ ಕಲೆ ಮತ್ತು ಸಾಹಿತ್ಯಕ್ಕಿದೆ. ತಾಯಿಯಂತಹ ಕರುಣೆ ಮತ್ತು ಮಗುವಿನಂತಹ ನಿಷ್ಕಪಟ ದೃಷ್ಠಿಯಿಂದ ನೋಡಿದರೆ ನಮಗೆ ಜಗತ್ತು ಸುಂದರ ಹಾಗೂ ಸನಿಹವಾಗುತ್ತದೆ. ಜಾತಿ, ಮತ, ಅಂತಸ್ತುಗಳ ನರಕದಿಂದ ಮೇಲೆತ್ತುವ ಸಾಮರ್ಥ್ಯ ಕೂಡ ಕಲೆಗಿದೆ ಎಂದು ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು. ಅವರುಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಟರಾಜ ಡಾನ್ಸ್ ಕಂಪೆನಿಯ ಮೂರನೇ ವರ್ಷದ ಸಮ್ಮರ್ ಕ್ಯಾಂಪ್ನ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಸಿಟಿ ಅಧ್ಯಕ್ಷ ರಾಜು ಮೊಗವೀರ ಮಾತನಾಡಿ, ಎಲ್ಲರೂ ಒಟ್ಟಾಗಿ ಕಲೆತು ಭಾಗವಹಿಸುವ ಇಂತಹ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಏಕತಾ ಭಾವನೆ ಮೂಡಿಸುತ್ತದೆ. ಬದುಕಿನಲ್ಲಿ ದೊರೆತ ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಕ್ರೀಯಾತ್ಮಕ ಚಿಂತನೆಗಳಿಂದ ಹೊಸತನ ಕಾಣಲು ಸಾಧ್ಯವಿದೆ. ಕಲೆ, ಶಿಕ್ಷಣ ಎಲ್ಲದರ ಮೂಲ ಉದ್ದೇಶ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವುದಾಗಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಪ್ರಗತಿಯ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೂಡುಗಿಳಿಯಾರಿನ ಶ್ರೀ ಸ್ವಾಮಿ ನಂದೀಕೇಶ್ವರ ದೈವಸ್ಥಾನದ ಕೋಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯ ಮೋಕ್ತೇಸರರಾದ ಸುಭಾಷ್ ಚಂದ್ರ ಶೆಟ್ಟಿ, ಸೇವಾಕರ್ತರಾದ ರತ್ನಾಕರ್ ಶೆಟ್ಟಿ, ಚಂದ್ರ ಪಾಣಾ, ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕಿ ರೇಷ್ಮಾ ಶೆಟ್ಟಿ, ಪ್ರವೀಣ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುಎಚ್ವಿ ಕಾರ್ಯಕ್ರಮದ ಭಾಗವಾಗಿ, ಇಲ್ಲಿನ ಎಂಐಟಿ ಎರಡನೇ ವರ್ಷದ ಸಿಎಸ್ಇ ಡೇಟಾ ಸೈನ್ಸ್ ವಿದ್ಯಾರ್ಥಿಗಳು ಡಿವೈನ್ ಪಾರ್ಕ್ ಮತ್ತು ಸ್ಪಂದನ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ್ದರು. ಡಿವೈನ್ ಪಾರ್ಕ್ನ ಭೇಟಿ ವಿದ್ಯಾರ್ಥಿಗಳಿಗೆ ಒಂದು ಜ್ಞಾನೋದಯದ ಅನುಭವವಾಗಿತ್ತು. ಯೋಗದ ಮಹತ್ವ ಮತ್ತು ಉದ್ಯಾನವನವು ನೀಡುವ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು. ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸ್ವಯಂ ಸಾಕ್ಷಾತ್ಕಾರದ ಮೇಲೆ ಕೇಂದ್ರೀಕರಿಸಿದ ವಿವಿಧ ಕಾರ್ಯಕ್ರಮಗಳ ಮೂಲಕ ಡಿವೈನ್ ಪಾರ್ಕ್ “ಮಾನವ ನಿರ್ಮಾಣ ಮತ್ತು ರಾಷ್ಟ್ರ ನಿರ್ಮಾಣ” ವನ್ನು ಒತ್ತಿಹೇಳುತ್ತದೆ. ಉದ್ಯಾನವನದ ಮೂಲ ಸಂದೇಶ “ದೇವರು ಒಬ್ಬನೇ; ಹೆಸರುಗಳು ಮತ್ತು ರೂಪಗಳು ಹಲವು”, ಇದು ವೈವಿಧ್ಯತೆಯಲ್ಲಿ ಏಕತೆಯನ್ನು ಎತ್ತಿ ತೋರಿಸುತ್ತದೆ. ಇದರ ನಂತರ, ವಿದ್ಯಾರ್ಥಿಗಳು ಬ್ರಹ್ಮಾವರದ ಉಪ್ಪೂರಿನಲ್ಲಿರುವ ಸ್ಪಂದನ ಪುನರ್ವಸತಿ ಕೇಂದ್ರಕ್ಕೆ ಭೇಟಿದರು. ಇದು ನಿಜವಾಗಿಯೂ ಹೃದಯಸ್ಪರ್ಶಿ ಅನುಭವವಾಗಿತ್ತು, ಅಲ್ಲಿಯ ಮುಗ್ಧ ಮತ್ತು ಸುಂದರ ಆತ್ಮಗಳನ್ನು ಭೇಟಿಯಾದದ್ದು ವಿದ್ಯಾರ್ಥಿಗಳಿಗೆ ಅವಿಸ್ಮರಣೀಯ ಅನುಭವ. ಮಾನಸಿಕ ಸವಾಲುಗಳ ಹೊರತಾಗಿಯೂ, ಅವರ ಸೃಜನಶೀಲತೆ ವಿದ್ಯಾರ್ಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಉಪ್ಪುಂದ ಪರಿಚಯ ಹೋಟೆಲ್ನ ಕೊಠಡಿಯಲ್ಲಿ ಇತ್ತೀಚಿಗೆ ಕಳವು ನಡೆದಿದೆ. ಬಿಜೂರು ನಿವಾಸಿ ಮಾಲತಿ ಎಂಬವರು ಹೋಟೆಲ್ನ ರೂಮ್ನಲ್ಲಿ ವಾಸ್ತವ್ಯ ಮಾಡಿ ಕೊಂಡಿದ್ದು, ಮೇ. 8ರಂದು ತಾಯಿ ಮನೆಗೆ ಬಿಜೂರಿಗೆ ಹೋಗಿದ್ದರು. ವಾಪಸ್ ಬಂದು ನೋಡುವಾಗ ಕೊಠಡಿಯ ಕಪಾಟಿನಲ್ಲಿರಿಸಿದ್ದ 10 ತೊಲೆ(100 ಗ್ರಾಂ) ಚಿನ್ನದ ಕರಿಮಣಿ ಸರ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಸಿಸಿಟಿವಿ ಪರಿಶೀಲಿಸಿದಾಗ ಹೋಟೆಲ್ನ 2ನೇ ಮಹಡಿಯ ಕೊಠಡಿಯಲ್ಲಿದ್ದ ವ್ಯಕ್ತಿಯೊಬ್ಬ ಮಧ್ಯಾಹ್ನ 2.20ರ ಹೊತ್ತಿಗೆ ಮಾಲತಿ ಅವರ ಕೊಠಡಿಯಲ್ಲಿ ಹೋಗಿ ಬಂದ ದೃಶ್ಯ ಸೆರೆಯಾಗಿದೆ. ಈ ಬಗ್ಗೆ ಬೈಂದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಜಿಎಸ್ಬಿ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಮೇ.20ರಿಂದ 26ರ ವರೆಗೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಪಂಚದಿನಾತ್ಮಕ ವಾಸ್ತವ್ಯವಿರಲಿದ್ದು, ದೇವಳದಲ್ಲಿ ನೂತನ ನಿರ್ಮಾಣದ ಶ್ರೀ ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳನ್ನು ಶ್ರೀಗಳು ಉದ್ಘಾಟಿಸಲಿದ್ದಾರೆ ಎಂದು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಯು. ರಾಜೇಶ ಪೈ ಹೇಳಿದರು. ಮೇ.20ರಂದು ಸಂಜೆ ದೇವಳದ ಪರ್ಯಾಯ ಅರ್ಚಕ ಯು. ಚಂದ್ರಶೇಖರ ಭಟ್ ಮತ್ತು ವೈದಿಕ ತಂಡದವರಿಂದ ರಾಕ್ಷೋಘ್ನಹೋಮ, ಶುದ್ದಿಹೋಮ, ನವಗ್ರಹಯುಕ್ತ ವಾಸ್ತುಹವನ ನಡೆಯಲಿದೆ. ಮೇ.21ರಂದು ಸಂಜೆ ಶ್ರೀ ಗುರುಗಳ ಆಗಮನ, ಪೂರ್ಣಕುಂಭ ಸ್ವಾಗತ, ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳ ಉದ್ಘಾಟನೆ, ಪಾದಪೂಜೆ ನಂತರ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ಮೇ.22ರಂದು ಬೆಳಿಗ್ಗೆ ಶ್ರೀ ದೇವರಿಗೆ ಹತಕಲಶಾಭಿಶೇಕ, ಮಹಾಪೂಜೆ, ಸಂಜೆ ಶ್ರೀ ರಾಮನಾಮ ಜಪ, ಭಜನೆ, ರಾತ್ರಿಪೂಜೆ. ನಂತರ ಶ್ರೀ ಹನುಮಗಿರಿ ಮೇಳದವರಿಂದ ಯಕ್ಷಗಾನ…
