Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷರಾಗಿ ಸೂರಜ್ ಖಾರ್ವಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಎಂ.ಸಿ. ಸ್ವಾಮಿ ನೇತೃತ್ವದಲ್ಲಿ ಸಂಘದ ಗಂಗೊಳ್ಳಿ ಪ್ರಧಾನ ಕಛೇರಿಯಲ್ಲಿ ಸೋಮವಾರ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನಿರ್ದೇಶಕರಾದ ಚಂದ್ರ ಖಾರ್ವಿ, ಮೋಹನ ಖಾರ್ವಿ, ಸುಶೀಲ ಖಾರ್ವಿ, ರಾಘವೇಂದ್ರ ಖಾರ್ವಿ, ಮಹೇಶ ಖಾರ್ವಿ, ರೋಹಿತ್ ಎ.ಕೆ., ಸುಮತಿ, ಉಷಾ ಖಾರ್ವಿ, ಭಾರತಿ, ವ್ಯವಸ್ಥಾಪಕ ಮೋಹನ ಖಾರ್ವಿ ಉಪಸ್ಥಿತರಿದ್ದರು. ಕಳೆದ ಅವಧಿಯಲ್ಲಿ ಸದಾಶಿವ ಖಾರ್ವಿ ಅವರು ಅಧ್ಯಕ್ಷರಾಗಿ ಮತ್ತು ಸೂರಜ್ ಖಾರ್ವಿ ಅವರು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2024-25 ರಿಂದ 2026-30ನೇ ಸಾಲಿನ ಐದು ವರ್ಷದ ಸಂಘದ ಆಡಳಿತ ಮಂಡಳಿಯ ಎಲ್ಲಾ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿತ್ತು. ಸಾಮಾನ್ಯ ಸ್ಥಾನದಿಂದ ಸದಾಶಿವ ಖಾರ್ವಿ, ಚಂದ್ರ ಖಾರ್ವಿ, ಮೋಹನ ಖಾರ್ವಿ, ಸುಶೀಲ ಖಾರ್ವಿ, ರಾಘವೇಂದ್ರ ಖಾರ್ವಿ, ಮಹೇಶ ಖಾರ್ವಿ, ರೋಹಿತ್ ಎ.ಕೆ., ಪ.ಜಾತಿ ಸ್ಥಾನದಿಂದ ಸುಮತಿ, ಹಿಂದುಳಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಟಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಮಾನತೆಯ ಬದುಕಿಗೆ ಹೆಚ್ಚು ಮಹತ್ವ ನೀಡಿ ಬಂಜಾರ ಸಮುದಾಯದ ಉನ್ನತಿಗಾಗಿ ಹೋರಾಡಿದ ಮಹಾನ್ ಸಂತ ಸೇವಲಾಲರು. ಅಧೋಗತಿಯಲ್ಲಿರುವ ಸಮಾಜದ ಏಳಿಗೆಗಾಗಿ ಪ್ರತಿಯೊಂದು ಸಮುದಾಯದಲ್ಲೂ ಜನ್ಮ ತಾಳಿದ ಅದೇಷ್ಟೋ ಮಹಾಪುರುಷರ ನಿದರ್ಶನಗಳು ನಮ್ಮ ಕಣ್ಣ ಮುಂದೆ ಇದೆ. ಸೇವಲಾಲ್ ಕೂಡ ತನ್ನ ಸಮಾಜವನ್ನು ದಾರ್ಶನಿಕರಾಗಿ, ಸಂತರಾಗಿ, ಚಿಂತಕರಾಗಿ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ ಎಂದರು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒಂದು ದಿನದ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮ ಕಾಲೇಜಿನ ಶೀ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ. ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿ ಉಪನ್ಯಾಸಕರಿಗೆ ಶೈಕ್ಷಣಿಕ ಅಭಿವೃದ್ಧಿ, ತರಬೇತಿ , ಸಂಶೋಧನೆ, ತಂತ್ರ ಜ್ಞಾನದ ಬಳಕೆ ಬಗ್ಗೆ ಮಾಹಿತಿ ಅತಿ ಅಗತ್ಯವಾಗಿದೆ. ಉಪನ್ಯಾಸಕರು ಶೈಕ್ಷಣಿಕವಾಗಿ ಸಮರ್ಥರಾದಾಗ ಮಾತ್ರ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲು ಸಾಧ್ಯ ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಜೈನ್ ಪರಿಗಣಿತ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ಅನಿಲಾ ಬಾಜಪೇಯಿ ಭಾಗವಹಿಸಿ ಉಪನ್ಯಾಸಕರಿಗೆ ತರಬೇತಿ ನೀಡಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರವಿಚಂದ್ರ ಕಾರ್ಯಕ್ರಮ ಸಂಯೋಜಿಸಿದರು. ಐಕ್ಯೂಏಸಿ ಸಂಯೋಜಕರಾದ ಸಂದೀಪ್ ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರಾಮಾಣಿಕತೆ ಎಂಬುದು ನಮ್ಮ ನೈತಿಕ ಮತ್ತು ಸಾಮಾಜಿಕ ಬದುಕಿನ ಬಹುಮುಖ್ಯ ಅಂಶ. ಜೀವನದಲ್ಲಿ ಕಷ್ಟ, ವಿಫಲತೆಗಳು ಹಾಗೂ ಆಕಸ್ಮಿಕ ಸಮಸ್ಯೆಗಳು ಬಂದರೂ, ಪ್ರಾಮಾಣಿಕತೆಯ ಹಾದಿಯಲ್ಲಿ ನಡೆದರೆ ಯಶಸ್ಸು ನಮಗೆ ಖಂಡಿತ ಒಲಿಯುತ್ತದೆ ಎಂದು ಮಾಜಿ ಸಚಿವ ಹಾಗೂ ರಾಜ್ ಫಿಶ್ ಮೀಲ್ ಆಂಡ್ ಆಯಿಲ್ ಕಂಪೆನಿಯ ವ್ಯವಸ್ಥಾಪಕ ಪಾಲುದಾರ ಪ್ರಮೋದ ಮಧ್ವರಾಜ್ ನುಡಿದರು. ಅವರು ಕುವೆಂಪು ಸಭಾಂಗಣದಲ್ಲಿ ನಡೆದ ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ನೂತನ ವಿದ್ಯಾರ್ಥಿ ಸ್ಟಾರ್ಟ್‌ಅಫ್ ವೇದಿಕೆ ’ಟ್ರೈಬ್ಲೇಜ್’ನ್ನು ಉದ್ಘಾಟಿಸಿ, ’ಯಶಸ್ವಿ ನಾಯಕತ್ವದ ತಂತ್ರಗಳುʼ ವಿಷಯದ ಕುರಿತು ಮಾತನಾಡಿದರು. ನಮ್ಮ ಪರಂಪರೆ, ಸಂಸ್ಕೃತಿ, ಆಚರಣೆ, ಗುರುಹಿರಿಯರು, ಪಾಲಕರು, ಪೋಷಕರನ್ನು ಮರೆತ ದಿನ, ನಮ್ಮ ಅವನತಿ ಪ್ರಾರಂಭವಾಗುತ್ತದೆ. ದುರಾದೃಷ್ಟಾವಷಾತ್ ನಮ್ಮ ಇಂದಿನ ಸಮಾಜ ಭಾರತೀಯ ಭವ್ಯ ಪರಂಪರೆಯನ್ನು ಕಡೆಗಾಣಿಸುತ್ತಾ ಸಾಗಿದೆ. ನಮ್ಮ ಸಂಸ್ಕೃತಿಯ ಭಾಗವಾಗಿದ್ದ ಎರಡು ಕೈಗಳನ್ನು ಜೋಡಿಸಿ ವಂದಿಸುವ ಸಂಸ್ಕೃತಿ ನಮ್ಮಲ್ಲಿ ಮರೆಯಾಗಿ ವಿದೇಶಗಳಲ್ಲಿ ಆಳವಡಿಸಿಕೊಳ್ಳಲಾಗುತ್ತಿದೆ. ಇದು ಸಲ್ಲದು ಎಂದರು. ತನ್ನ ಜೀವನ ವೃತಾಂತವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಬವಳಾಡಿ ನಿವಾಸಿ ರಮೇಶ್ ಪೂಜಾರಿ (45) ಎಂಬ ವ್ಯಕ್ತಿಯು ಜ. 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ 100, 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಈಗಲೂ ಸಹ ಈ ಯೋಜನೆಗಳ ಲಾಭ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲೆಯಾದ್ಯಂತ ಸಂಚರಿಸಿ, ಮಾಹಿತಿ ನೀಡಲಿರುವ ಕಲಾಜಾಥಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಬಹುತೇಕ ಜನರು ಒಂದಲ್ಲಾ ಒಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಇದ್ದಾರೆ. ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ ಯೋಜನೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಪೂರಕವಾದ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತ ಜಿಲ್ಲಾ ಮಟ್ಟ, ತಾಲೂಕು ಮಟ್ಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ನಾಗರಾಜ್‌ ಕಾಮಧೇನು ನೇತೃತ್ವದ ತಂಡಕ್ಕೆ ಅಭೂತಪರ್ವ ಗೆಲುವು ಲಭಿಸಿದೆ. ಸಾಮನ್ಯ ವರ್ಗದಲ್ಲಿ ಕೆ. ನಾಗರಾಜ ರಾವ್‌ ಕಾಮಧೇನು , ಅಜೇಯ ಹವಾಲ್ದಾರ್‌, ಬಿ. ಶ್ರೀಧರ, ಸತೀಶ ನರಸಿಂಹ ಶೇರೆಗಾರ, ಕೆ. ಅಶೋಕ ಬೆಟ್ಟಿನ್‌, ಎಂ.ಜಿ. ರಾಜೇಶ್‌, ಶ್ರೀದರ ಪಿ.ಎಸ್‌. ಕೆ. ಸೂರ್ಯಕಾಂತ, ಕೃಷ್ಣಯ್ಯ ವಿ. ಮದ್ದೋಡಿ, ಹಿಂದುಳಿದ ವರ್ಗ ʼಎ’ಸ್ಥಾನದಿಂದ ಬಿ. ರಾಧಕೃಷ್ಣ ನಾಯಕ್‌, ಆಯ್ಕೆಯಾದರು. ಮಹಿಳಾ ಮೀಸಲು ಸ್ಥಾನದಿಂದ ರಶ್ಮಿ ಪುಷ್ಪರಾಜ್‌, ಶಾರದ ವಿಜಯ್‌, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಒಟ್ಟು 10 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2 ಮಹಿಳಾ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಸಹಕಾರ ಸಂಘಗಳ ಸಹಾಯಕಿ ನಿಬಂಧಕಿ ಸುಕನ್ಯಾ ಚುನಾವಣೆ ನಡೆಸಿ ಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಬಿಐ ಬ್ಯಾಂಕ್ ಕುಂದಾಪುರ ಶಾಖೆ ವತಿಯಿಂದ ಅಂಪಾರು ಮೂಡುಬಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್‌ ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಐಡಿಬಿಐ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ನಾಗರಾಜ್ ಕಮ್ಮಾರ, ಕುಂದಾಪುರ ಶಾಖೆಯ ವ್ಯವಸ್ಥಾಪಕ ಕಿರಣ್ ಕುಮಾರ್ ಶಿಂಧೆ, ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ್ ಶೆಟ್ಟಿ , ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮತ್ತು ಎಸ್‌.ಡಿ.ಎಂ.ಸಿ.ಯ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಫೆ. 21ರಿಂದ ಮೂರು ದಿನಗಳ ಕಾಲ ನಡೆಯುವ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನ”ದ ಸರ್ವಾಧ್ಯಕ್ಷರಾಗಿ ಭಾರತೀಯ ಇತಿಹಾಸ ತಜ್ಞ, ಶಿಕ್ಷಣ ತಜ್ಞ, ದೆಹಲಿಯ ಕೇಶವನ್ ವೆಳುತ್ತಾಟ್ ಅವರನ್ನುಆಯ್ಕೆ ಮಾಡಲಾಗಿದೆ. ಅವರು ಕೇರಳ ಮೂಲದವರಾಗಿದ್ದು ಮಧ್ಯಯುಗದ ದಕ್ಷಿಣ ಭಾರತೀಯ ಇತಿಹಾಸದಲ್ಲಿ ವಿಶೇಷ ಪರಿಣಿತರು. ಶಾಸನ ತಜ್ಞರು, ಸಂಸ್ಕೃತ, ತಮಿಳು, ಕನ್ನಡ, ಮಲೆಯಾಳಂ ಭಾಷೆ ಅರಿತಿರುವ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಆನಂತರ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದರು. ದೇಶದ ಹಲವು ವಿಶ್ವ ವಿದ್ಯಾನಿಲಯಗಳಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿದ್ದಾರೆ. ಹಲವು ಗ್ರಂಥಗಳನ್ನು ಬರೆದಿದ್ದಾರೆ. ಕ್ಯಾಲಿಕಟ್ ವಿ.ವಿ. ಯಿಂದ ಸ್ನಾತ್ತಕೋತ್ತರ ಪದವಿ ಹಾಗೂ ಡಾಕ್ಟರೇಟ್, ಜವಹರಲಾಲ್ ನೆಹರು ವಿ.ವಿ. ಯಿಂದ ಎಂ.ಫಿಲ್. ಪದವಿ ಪಡೆದ ಅವರು ದೇಶದ ಶ್ರೇಷ್ಠ ಇತಿಹಾಸ ಹಾಗೂ ಶಿಕ್ಷಣ ತಜ್ಞ, ಶಾಸನತಜ್ಞರಲ್ಲಿ ಪ್ರಮುಖರಾಗಿದ್ದಾರೆ.

Read More