Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜೇಸಿಐ ಕುಂದಾಪುರ ಸಿಟಿ ಮತ್ತು ಕಿಯೋನಿಕ್ಸ್ ಚರ್ಚ್ ರಸ್ತೆ ಕುಂದಾಪುರ ಇವರ ಸಹಕಾರದೊಂದಿಗೆ ಚೌಡೇಶ್ವರಿ ಟೈಗರ್ಸ್ ಟಿ.ಟಿ. ರಸ್ತೆ ಕುಂದಾಪುರ ಇವರಿಂದ ಹುಲಿವೇಷ ಕುಣಿತ ಪ್ರದರ್ಶನ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ, ಜೇಸಿಐ ಸಿಟಿ ಕುಂದಾಪುರದ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಜೇಸಿಐ ರಾಷ್ಟ್ರೀಯ ಉಪಾಧ್ಯಕ್ಷರಾದ ಕಾರ್ತಿಕೇಯ ಮಧ್ಯಸ್ಥ, ಸ್ಥಾಪಕಾಧ್ಯಕ್ಷರಾದ ಹುಸೇನ್ ಹೈಕಾಡಿ, ಕಾರ್ಯಕ್ರಮದ ಪ್ರಾಯೋಜಕರಾದ ಹರ್ಷವರ್ಧನ್ ಶೆಟ್ಟಿ, ಮಾಲಕರು ಕಿಯೋನಿಕ್ಸ್ ಚರ್ಚ್ ರಸ್ತೆ ಕುಂದಾಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚೌಡೇಶ್ವರಿ ಹುಲಿ ಕುಣಿತ ತಂಡದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಬೈಂದೂರು ಬ್ಲಾಕ್ ಕಿಸಾನ್ ಘಟಕದ ನೂತನ ಅಧ್ಯಕ್ಷರಾಗಿ ಎಸ್. ವೀರಭದ್ರ ಗಾಣಿಗ ಹಾಲಂಬೇರ್ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಪೂಜಾರಿ ಹಾಗೂ ಸಮಸ್ತ ಬೈಂದೂರು ಕಾಂಗ್ರೆಸ್ ಪಕ್ಷದ ನಾಯಕರ ಸಮ್ಮುಖದಲ್ಲಿ ಪಕ್ಷದ ನಾಯಕರಾದ ಗೋಪಾಲ ಪೂಜಾರಿ ಅವರಿಂದ ಆದೇಶ ಪ್ರತಿಯನ್ನು ಹಸ್ತಾಂತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಚಹಾ ಮಾಡುತ್ತಿದ್ದ ವೇಳೆ ಗ್ಯಾಸ್ ಒಲೆಯ ಬೆಂಕಿ ಧರಿಸಿದ್ದ ಬಟ್ಟೆಗೆ ತಗಲಿ ಗಂಭೀರ ಗಾಯಗೊಂಡು ಗುಜ್ಜಾಡಿ ಸಮೀಪದ ಕೊಡಪಾಡಿಯ ಫಾತಿಮಾ ಕಾರ್ಡಿನ್ (65) ಸಾವನ್ನಪ್ಪಿದ್ದಾರೆ. ಫಾತಿಮಾ ಅ. 2ರಂದು ಪುತ್ರನ ಮನೆಲ್ಲಿದ್ದಾಗ ದುರ್ಘಟನೆ ಸಂಭವಿಸಿತ್ತು. ಗಂಭೀರ ಸುಟ್ಟ ಗಾಯಗಳೊಂದಿಗೆ ಅವರನ್ನು ಮರವಂತೆಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಗೆ, ಅನಂತರ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಅ. 5ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅ. 13ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಬರುತ್ತಿರುವಾಗ ಕುಂದಾಪುರದ ಬಳಿ ಮತ್ತೆ ಅಸ್ವಸ್ಥಗೊಂಡರು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಹೋದರೂ ಸ್ವಲ್ಪ ಸಮಯದಲ್ಲಿ ಸಾವನ್ನಪ್ಪಿದರು. ಪುತ್ರ ದಿಲೀಪ್ ಕಾರ್ಡಿನ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಳೆದ 49 ವರ್ಷಗಳಿಂದ ಗಂಗೊಳ್ಳಿಯಲ್ಲಿ ವಿಶೇಷವಾಗಿ ಶ್ರೀ ಶಾರದಾ ಮಹೋತ್ಸವವನ್ನು ಆಚರಿಸಿಕೊಂಡು ಧರ್ಮ, ಸಂಸ್ಕೃತಿಯನ್ನು ಬೆಳೆಸುವ ಕಾಯಕದ ಜೊತೆಗೆ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಧಾರ್ಮಿಕವಾಗಿ ಸಮಾಜಮುಖಿ ಕೆಲಸವನ್ನು ಶ್ರೀ ಶಾರದೋತ್ಸವ ಸಮಿತಿ ಮಾಡುತ್ತಿದ್ದು, ಸಮಿತಿಯ ವತಿಯಿಂದ ಸಾರ್ವಜನಿಕರಿಗೆ ಮಾಡಿದ ಉಪಕಾರ ಹಾಗೂ ಅದರಿಂದ ದೊರಕಿದ ಸ್ಪಂದನೆ ಅತ್ಯುತ್ತಮವಾಗಿದೆ ಎಂದು ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ-2024ರ ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಳ್ಳಾರಿಯ ಉದ್ಯಮಿ ಪದ್ಮನಾಭ ಕೊತ್ವಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಊರಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಹಿಳಾ ಮಂಡಳಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಗೌರವಾಧ್ಯಕ್ಷ ನಿತಿನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.                                                                               ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಪದವಿ ಮತ್ತು ಸ್ನಾತಕೋತ್ತರ ಮನೋವಿಜ್ಞಾನ ವಿಭಾಗಗಳು ಆಳ್ವಾಸ್ ಕ್ಷೇಮ ತರಬೇತಿ ಕೇಂದ್ರದ ಸಹಯೋಗದೊಂದಿಗೆ ವಿಭಾಗದ ಆವರಣದಲ್ಲಿ ಹಮ್ಮಿಕೊಂಡ   ‘ಮೆಟಾನೋಯಾ’- ಮನೋವಿಜ್ಞಾನ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು .  ಸದೃಢ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವಲ್ಲಿ ಗೆಳೆಯರ ಪಾತ್ರವು ಪ್ರಮುಖವಾಗಿದೆ ಎಂದ ಅವರು, ಇಂತಹ ಕಾರ್ಯಕ್ರಮಗಳಿಗೆ ¼ ಮಾನಸಿಕ ಆರೋಗ್ಯದ ಬಗ್ಗೆ ಉತ್ತಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಾವಳಿ ಕಡಲ ತಡಿಯ ಭಾರ್ಗವ ರಾಮರ ಸುಂದರ ಹಸಿರು ನಾಡಿನ ಸುಣ್ಣಾರಿ ಎನ್ನುವ ಸುಂದರ ಊರಿನಲ್ಲಿ ಸ್ಥಾಪಿತಗೊಂಡಿರುವ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸಾಧಿಸಿರುವ ಅಗ್ರಗಣ್ಯ ಸಂಸ್ಥೆಯೇ ಎಕ್ಸಲೆಂಟ್ ವಿದ್ಯಾಸಂಸ್ಥೆಯಾಗಿದೆ. ಈ ಸಂಸ್ಥೆಗೆ ಪ್ರತಿ ವರ್ಷವು ವಿವಿಧ ರಾಜ್ಯದ ಹಾಗೂ ಜಿಲ್ಲೆಗಳ ನಾನಾ ಭಾಗದ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಹೊಸ ಕ್ರಾಂತಿಯನ್ನು ಸೃಷ್ಠಿಸಿದೆ. ಪ್ರತಿ ವರ್ಷವು ಸಿಇಟಿ, ಜೆಇಇ, ನೀಟ್, ಸಿಎ, ಸಿಎಸ್ ಹಾಗೂ ಬೋರ್ಡ್‌ಗಳಲ್ಲಿ ಹಲವಾರು ರ್ಯಾಕ್‌ಗಳನ್ನು ಗಳಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೇ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಭಾಗವಹಿಸಿ ಅದೆಷ್ಟೋ ಪ್ರಶಸ್ತಿಗಳನ್ನುತನ್ನ ತೆಕ್ಕೆಗೆ ಹಾಕಿಕೊಂಡಿದ್ದು ಸಂಸ್ಥಗೆ ಹೆಮ್ಮೆಯ ವಿಚಾರವಾಗಿದೆ. ಹೀಗೆ ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಂಸ್ಕ್ರತಿಕ ಕ್ರೇತ್ರದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳಿಗೆ ಬದುಕಿಗೆ ಬಹುಮುಖ್ಯ ಅಂಗವಾಗಿರುವ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿಯೇ ಆರಂಭವಾಗಬೇಕು. ಮಾನವೀಯತೆಗೆ ಮಿಡಿಯುವ ಮನಸ್ಸುಗಳು ಕಡಿಮೆಯಾಗುತ್ತಿರುವುದು ದುರದೃಷ್ಠಕರ ಸಂಗತಿ. ನೋವಿಗೆ ಸ್ಪಂದಿಸುವ ಪ್ರವೃತ್ತಿ ಎಲ್ಲ ಕಾರ್ಯಗಳಿಗಿಂತ ಶ್ರೇಷ್ಠವಾದುದು ಎಂದು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಹೇಳಿದರು. ಅವರು ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ ಯಡ್ತಾಡಿ ಇವರ ಆಶ್ರಯದಲ್ಲಿ ನಡೆದ 13 ನೇ ವರ್ಷದ ಶ್ರೀ ಶಾರದ ಮಹೋತ್ಸವ ನಮ್ಮೂರ ದಸರಾ-2024 ( ಭಾವ ಭಕ್ತಿಯ ಸಂಗಮ) ಕಾರ್ಯಕ್ರಮದಲ್ಲಿ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ವಿನಾಯಕ ಯುವಕ ಮಂಡಲ ವಿಶಿಷ್ಟ ಕಾರ್ಯಕ್ರಮಗಳ ಆಯೋಜನೆ ಮೂಲಕ ಯುವಕ ಮಂಡಲದ ಸ್ಥಾಪನೆಯ ಸಾರ್ಥಕತೆಯನ್ನು ಕಂಡುಕೊಳ್ಳುತ್ತಿದ್ದೆ. ವಿಶು ಶೆಟ್ಟಿ ಯುವ ಜನಾಂಗಕ್ಕೆ ಮಾದರಿ ಎಂದರು. ವಿದ್ವಾನ್ ಟಿ, ವಾಸುದೇವ ಜೋಯಿಷ್‍, ತಟ್ಟುವಟ್ಟು ಆಶೀರ್ವಚನ ಮಾತುಗಳನ್ನಾಡಿ ಭವ್ಯ ಭಾರತದಲ್ಲಿ ನಮ್ಮ ಜನ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ  ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ  ಸೇರಿದಂತೆ ಮತ್ತಿತರ ಪ್ರಕರಣಗಳನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ರಸ್ತೆ ಕಾಮಗಾರಿ ವಿಳಂಬದಿಂದಾಗಿ ರಸ್ತೆ ಇಕ್ಕಟ್ಟಿನಿಂದಾಗಿ ಕಳೆದ ಎರಡು ವರ್ಷಗಳಿಂದ ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿ, ಮರಣ ಹೊಂದಿರುತ್ತಾರೆ. ಇದಕ್ಕೆಲ್ಲಾ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರಣವಾಗಿದ್ದು, ರಸ್ತೆ ಅಪಘಾತ ಸಂಬಂಧ ಕಾರಣಕರ್ತರಾದ ರೈಲ್ವೆ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಹಾಗೂ ಗುತ್ತಿಗೆದಾರರುಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ ವೆಬ್‌ಸೈಟ್  https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ : 0820-2574596 ಅಥವಾ ಕಾರ್ಕಳ ದೂರವಾಣಿ : 08258-231101 ಹಾಗೂ ಕುಂದಾಪುರ ದೂರವಾಣಿ :…

Read More