ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2025ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2003 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘ ರಿ. ಇದರ ದ್ವಿತೀಯ ವಾರ್ಷಿಕೋತ್ಸವ ಸಮಾರಂಭವು ಬಂಕೇಶ್ವರದ ರಾಜರಾಜೇಶ್ವರಿ ಸಭಾಭವನದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ನಡೆಯಿತು. ವಾರ್ಷಿಕ ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ನಾಗೇಂದ್ರ ಕುಮಾರ್ ನೆರವೆರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಮೋಹನ್ ರೇವಣಕರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸೂರಜ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮಂಜುನಾಥ್ ರೇವಣಕರ್ ಮಾತನಾಡಿ, ಬೈಂದೂರಿನಲ್ಲಿ ದೈವಜ್ಞ ಬ್ರಾಹಣ ಸಮುದಾಯವು ಸಂಘಟಿತರಾಗಿ ಸಮೂದಾಯದ ಏಳಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅಗತ್ಯ ನೆರವು ನೀಡಲು ತಾನು ಸದಾ ಸಿದ್ದನಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸಾಧನೆಗೈದ ಆರು ಮಂದಿ ಸ್ವರ್ಣ ಕುಶಲಕರ್ಮಿಗಳನ್ನು ಸನ್ಮಾನಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿಯ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಯಿತು ಮತ್ತು ಕ್ರೀಡಾ ಸಾಧಕರಿಗೆ ಬಹುಮಾನವನ್ನು ವಿತರಿಸಲಾಯಿತು. ಇಬ್ಬರು ಸಮಾಜದ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸತೀಶ್ ಅಕಾಡೆಮಿ ಆಯೋಜಿಸಿದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದ ಗಣಿತ – 2025ರ ಸ್ಪರ್ಧೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನದೊಂದಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿರುತ್ತಾರೆ ವಿಜೇತರಾದ ವಿದ್ಯಾರ್ಥಿಗಳ ಯಾದಿ ಈ ಕೆಳಗಿನಂತಿದೆ ಅಬಾಕಸ್ರಾಷ್ಟ್ರ ಮಟ್ಟದಶಮಿ ಡಿ III Aರಾಜ್ಯ ಮಟ್ಟಯುಕ್ತ ಬಿ ಭಟ್ II B ಚಾಂಪಿಯನ್ ಆಫ್ ಚಾಂಪಿಯನ್ ಅವಾರ್ಡ್ಅಹನಾ ವಿ ಶೆಟ್ಟಿ V A ಚಾಂಪಿಯನ್ ಅವಾರ್ಡ್ಮನ್ವಿತ್ ಜಿ V Bಐಝ ಮಹೀನ್ V Bಪ್ರಮಿತ್ IV Bಹನಿ V Bಸಯಿಮ್ III B ಮೆರಿಟ್ ವಿನ್ನರ್ಪವನ್ ಉಡುಪ V Bಸಾನ್ಯಾ ಎಸ್ ಶೆಟ್ಟಿ V Bವಿಘ್ನೇಶ್ ನಾಯ್ಕ್ V Aಧ್ರುವನ್ ಗಣೇಶ್ ಶೆಟ್ಟಿ V Aಪರೀಕ್ಷಿತ್ ಶೆಟ್ಟಿ IV Aಮೊಹಮ್ಮದ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಮಾಧ್ಯಮ ಪರ್ವ-2025 ರಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಒಟ್ಟು 4 ವಿಭಾಗದಲ್ಲಿ ಪ್ರಥಮ, ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರು. ವಿದ್ಯಾರ್ಥಿಗಳಾದ ಇಶಿತ್ ಹಾಗೂ ಅಶ್ವಿನ್ ಕ್ರೈಸಿಸ್ ಮ್ಯಾನೇಜ್ಮೆಂಟ್ (ಬಿಕ್ಕಟ್ಟು ನಿರ್ವಹಣೆ) ನಲ್ಲಿ ಪ್ರಥಮ, ಪ್ರಧಾನ್ ಛಾಯಾಗ್ರಹಣದಲ್ಲಿ ಪ್ರಥಮ, ರುಧೀರ್ ಹಾಗೂ ಮಿಯಾರವರನ್ನು ಒಳಗೊಂಡ ತಂಡ ರಸಪ್ರಶ್ನೆಯಲ್ಲಿ ಪ್ರಥಮ, ರಚನ್, ಸರ್ವೇಶ್, ವಿಶಾಲ್, ದೀಕ್ಷಾ, ಸುರಕ್ಷಾ, ಆಕಾಶ್, ಸುಮಿತ್, ದಿಶಾ, ಪ್ರಗತಿ, ಸ್ವಾತಿ, ರಿಶಾಂತ್, ರಕ್ಷಿತಾ, ಶ್ರೀವಲ್ಲಿ ಅವರ ತಂಡ ವೆರೈಟಿ ಪ್ರದರ್ಶನದಲ್ಲಿ ( ವೈವಿಧ್ಯಮಯ ನೃತ್ಯ) ಪ್ರಥಮ ಸ್ಥಾನ ಪಡೆದರು. ವೀಕ್ಷಿತಾ ಹಾಗೂ ರಾಹುಲ್ ಕ್ರಮವಾಗಿ ವರದಿಗಾರಿಕೆ ಹಾಗೂ ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 81ನೇ ವರ್ಷದ ಅಧ್ಯಕ್ಷರಾಗಿ ಗುರುರಾಜ್ ಗಂಗೊಳ್ಳಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುದೀಪ್ ಜಿ.ಎನ್., ಗೌರವಾಧ್ಯಕ್ಷರಾಗಿ ಮಂಜುನಾಥ ಜಿ.ಟಿ., ಕಾರ್ಯದರ್ಶಿಯಾಗಿ ವರದರಾಜ್ ಜಿ.ಟಿ., ಜೊತೆ ಕಾರ್ಯದರ್ಶಿಯಾಗಿ ಅಶ್ವತ್ ಬಿ., ಆಡಳಿತ ಮೊಕ್ತೇಸರರಾಗಿ ಸಂಜೀವ ಜಿ.ಟಿ., ಖಜಾಂಚಿ ಕರುಣಾಕರ ಎಂ., ಲೆಕ್ಕ ಪರಿಶೋಧಕರು ಕೃಷ್ಣ ಎಸ್. ಮತ್ತು ನರಸಿಂಹ ಎಂ.ಜಿ., ಗೌರವ ಸಲಹೆಗಾರರಾಗಿ ಅಶೋಕ್ ಎನ್.ಡಿ. ಮತ್ತು ಅಯ್ಯಪ್ಪ ಯಾನೆ ಮಹೇಶ್, ಅರ್ಚಕರಾಗಿ ಕೃಷ್ಣ ಜಿ.ಟಿ., ಅರುಣ್ ಕುಮಾರ್ ಮತ್ತು ಅಭಿನಂದನ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನುಕ್ಷಣವು ವಿದ್ಯಾರ್ಥಿಯು ತನ್ನನ್ನು ತಾನು ಬದಲಾಗುತ್ತಿರುವ ವಾತಾವರಣಕ್ಕೆ ಅನುಗುಣವಾಗಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬೇಕೆಂದು ಉಡುಪಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ್ ಭಟ್ ವಿದ್ಯಾರ್ಥಿಗನ್ನುದ್ದೇಶಿಸಿ ಸಲಹೆ ನೀಡಿದರು. ಅವರು ಕುಂದಾಪುರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತುಗಳ್ನನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ಅಂತಿಮ ಬಿ.ಕಾಂ. ವಿದ್ಯಾರ್ಥಿ ಪ್ರತಿನಿಧಿಗಳಾದ ಓಂಕಾರ್ ಮತ್ತು ರಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ಕಾರ್ಯಗಾರವನ್ನು ಸಂಯೋಜಿಸಿ, ಅತಿಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಗೆ ಕುಂದಾಪುರ ಕಡೆಯಿಂದ ಬಂದ ಪಿಕ್ ಅಪ್ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ಮರವಂತೆ ಗ್ರಾಮದ ರಾ.ಹೆ-66ರಲ್ಲಿ ನಡೆದಿದೆ. ಘಟನೆಯಲ್ಲಿ ಯಳಜಿತದ ಬಾಬು ಎಂಬುವವರ ಪತ್ನಿ ಲಕ್ಷ್ಮೀ (45) ಅವರು ಮೃತಪಟ್ಟಿದ್ದಾರೆ. ರಾ.ಹೆ-66ರಲ್ಲಿ ಭಾನುವಾರ ಮಧ್ಯಾಹ್ನ ತನ್ನ ಪತಿಯೊಂದಿಗೆ ರಸ್ತೆ ದಾಟಿ ಪುಟ್ ವಾಕ್ ಮೇಲೆ ಬಸ್ ನಿಲ್ದಾಣದ ಎದುರು ನಿಂತಿದ್ದ ವೇಳೆ ನಿಯಂತ್ರಿಣ ತಪ್ಪಿದ ಪಿಕ್ಅಪ್ ವಾಹನವು ಸೀದಾ ಪುಟ್ ವಾಕ್ ಏರಿ ಮಹಿಳೆಗೆ ಡಿಕ್ಕಿಯಾಗಿ ಚರಂಡಿಗಿಳಿದಿದೆ. ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೀ ಅವರ ಬೆನ್ನಿಗೆ, ಸೊಂಟಕ್ಕೆ ಹಾಗೂ ಎಡಕಾಲಿಗೆ ರಕ್ತ ಗಾಯವಾಗಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆಂಗು ಬೆಳೆಗೆ ಕಪ್ಪು ಹುಳ ಬಾಧೆ ರೋಗ ತಗುಲಿದ್ದು, ತೆಂಗು ಬೆಳೆಗಾರರಿಗೆ ಪರಿಹಾರ ನೀಡಿಕೆ, ರೋಗ ನಿವಾರಣಾ ಕ್ರಮಗಳು ಹಾಗೂ ತೆಂಗು ಬೆಳೆಗಾರರ ಕುಂದು ಕೊರತೆ ಹಾಗೂ ಅವರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸರ್ಕಾರವನ್ನು ಪ್ರಶ್ನೆ ಮಾಡಿದರು. ಶಾಸಕರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ರಾಜ್ಯದಲ್ಲಿ 41,368 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳದ ಬಾಧೆ ಕಂಡು ಬಂದಿದ್ದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮೂವತ್ತು ಮುಡಿ ಮತ್ತು ಕನ್ನಡ ಕುದ್ರು ಗ್ರಾಮಗಳಲ್ಲಿ 20 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳುವಿನ ಬಾಧೆ ರೋಗ ಪ್ರಕರಣ ಗಳು ಕಂಡು ಬಂದಿರುತ್ತದೆ ಎಂದಿದ್ದಾರೆ. ಈ ಬಗ್ಗೆ ಮಾತನಾಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮದಲ್ಲಿ ಕೊಂಕಣಿ ಖಾರ್ವಿ ಸಮುದಾಯದವರು ಪ್ರತಿ ವರ್ಷ ಆಚರಿಸುತ್ತಿರುವ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಗಂಗೊಳ್ಳಿ, ಗುಜ್ಜಾಡಿ, ಕಂಚುಗೋಡು, ಹೊಸಪೇಟೆ, ತ್ರಾಸಿ ಮೊದಲಾದ ಕಡೆಗಳಿಂದ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಸಹಸ್ರಾರು ಜನರಿಂದ ಬಣ್ಣಗಳ ಎರಚಾಟ, ಕುಣಿತ, ಗಾನಬಜಾನ ಗಂಗೊಳ್ಳಿ ಪೇಟೆಯುದ್ದಕ್ಕೂ ಕಂಡು ಬಂದಿತು. ಯುವಕ ಯುವತಿಯರು ಹಿರಿಯರು ಮಕ್ಕಳು ಎಂಬ ಭೇದ ಭಾವಗಳಿಲ್ಲದೆ ಪರಸ್ಪರ ಬಣ್ಣ ಹಚ್ಚಿಕೊಂಡು ಡಿಜೆ ಮ್ಯೂಸಿಕ್ಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಗುಂಪುಗಳನ್ನು ಮಾಡಿಕೊಂಡ ಯುವಕ ಯುವತಿಯರು ತಮ್ಮದೇ ವಿಶಿಷ್ಟ ಧಿರಿಸಿನ ಮೂಲಕ ಮೆರವಣಿಗೆಯಲ್ಲಿ ಸಾಗಿಬಂದು ನೋಡುಗರ ಗಮನ ಸೆಳೆದರು. ವಿವಿಧೆಡೆಗಳಿಂದ ಆಗಮಿಸಿದ ಹೋಳಿ ಪಂಗಡಗಳು ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ಬಳಿ ಸೇರಿ ಬೃಹತ್ ಹೋಳಿ ಉತ್ಸವ ನಡೆಸಿದರು. ಸಂಪ್ರದಾಯದಂತೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪುಷ್ಕರಣಿಯಲ್ಲಿ ಸ್ನಾನ ಮಾಡುವ ಮೂಲಕ ಹೋಳಿ ಮೆರವಣಿಗೆ ಸಂಪನ್ನಗೊಂಡಿತು. ಒಟ್ಟಿನಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೊಂಕಣಿ ಖಾರ್ವಿ ಸಮಾಜದವರು ಹೋಳಿ ಹಬ್ಬವನ್ನು ವರ್ಷಂಪ್ರತಿ ಅದ್ದೂರಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಮೀಪದ ಮೊವಾಡಿ ಸಮೀಪ ಸಂಭವಿಸಿದೆ. ಮೊವಾಡಿ ನಿವಾಸಿ ಕೃಷ್ಣ ಮೊಗವೀರ ಅವರ ಪುತ್ರ ನಿತಿನ್ ಮೊಗವೀರ (26) ಮೃತ ಯುವಕ. ಮೃತ ನಿತಿನ್ ಭಾನುವಾರ ರಾತ್ರಿ 8 ಗಂಟೆಯ ಸುಮಾರಿಗೆ ತನ್ನ ತಂಗಿಯನ್ನು ಬೈಕಿನಲ್ಲಿ ಕುಂದಾಪುರದ ಬಸ್ ಸ್ಟ್ಯಾಂಡ್ಗೆ ಬಿಟ್ಟು ಮನೆಗೆ ಹಿಂತಿರುಗುವಾಗ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
