Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಕಾಲೇಜುಗಳಲ್ಲಿ ಕಲಿಯುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಿದ್ದ ಬಹುದೊಡ್ಡ ಕೊರತೆಯನ್ನು ನೀಗಿಸುವಲ್ಲಿ ಸಮೃದ್ಧ ಬೈಂದೂರು ತಂಡ ಪ್ರಥಮ ಹೆಜ್ಜೆ ಇರಿಸಿದ್ದು, ಉಚಿತ ಕೆಸಿಇಟಿ ಹಾಗೂ ನೀಟ್ ತರಬೇತಿ ನೀಡಲು ಯೋಜಿಸಿದೆ. ಗುಣಮಟ್ಟದ ತರಬೇತಿ ನೀಡುವ ಮೂಲಕ ಅವಕಾಶವನ್ನು ಸೃಷ್ಟಿಸಿಕೊಡುವ ಜವಾಬ್ದಾರಿ ನಮ್ಮದಾಗಿದ್ದು, ಆಸಕ್ತಿಯ ಕಲಿಕೆ ಹಾಗೂ ಫಲಿತಾಂಶವನ್ನು ತೋರಿಸುವ ಹೊಣೆ ವಿದ್ಯಾರ್ಥಿಗಳದ್ದಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಬೈಂದೂರು ಹಾಗೂ ಉಪ್ಪುಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ, ಜ್ಞಾನದೀಪ ಟುಟೋರಿಯಲ್ ಕಾಲೇಜಿನ ಸಹಯೋಗದೊಂದಿಗೆ ಹಮ್ಮಿಕೊಂಡ ಉಚಿತ ಕೆಸಿಇಟಿ ಹಾಗೂ ನೀಟ್ ತರಬೇತಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿ ಬಡತನವೆಂಬುದು ಕೊರತೆಯಾಗಬಾರದು. ಅದನ್ನೇ ಸವಾಲಾಗಿ ಸ್ವೀಕರಿಸಿದ ಅದೇಷ್ಟೋ ಮಂದಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆದ್ದ ನೂರಾರು ಉದಾಹರಣೆಗಳು ನಮ್ಮ ಮುಂದಿದೆ. ಅಂತಹದ್ದೊಂದು ಇಚ್ಚಾಶಕ್ತಿಯನ್ನು ಬೆಳಿಸಿಕೊಳ್ಳಿ ಎಂದರು. ತರಗತಿಗಳಲ್ಲಿ ಕಲಿಕೆಯಲ್ಲಿ ಉತ್ತಮ ಹಾಗೂ ಸಾಧಾರಣವಿರುವ ವಿದ್ಯಾರ್ಥಿಗಳಿಗೂ ಪಾಠ ಮಾಡಬೇಕಾಗುತ್ತದೆ. ಬಾಹ್ಯ ತರಬೇತಿಗಳಲ್ಲಿ ಕಲಿಕೆಯಲ್ಲಿ ಉತ್ತಮವಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ನಟನೆಯ 40ನೇ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟುಹಾಕಿದೆ. ಹಬ್ಬದ ಸಂಭ್ರಮದಲ್ಲಿ ಪೋಸ್ಟರ್ ಜೊತೆಗೆ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಅವರ ಈ ಹೊಸ ಸಿನಿಮಾಗೆ ಟೈಟಲ್ ಇನ್ನೂ ಫೈನಲ್ ಆಗಿಲ್ಲ. ಪೋಸ್ಟರ್ ಭರ್ಜರಿಯಾಗಿದ್ದು ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ. ಪ್ರಜ್ವಲ್ ಅವರ 40ನೇ ಸಿನಿಮಾಗೆ ‘ಅಂಬಿ ನಿಂಗೆ ವಯಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರುದತ್ ನಿರ್ದೇಶನದ ಮೊದಲ ಸಿನಿಮಾ ‘ಅಂಬಿ ನಿಂಗೆ ವಯಸಾಯ್ತೋ’ 2018 ರಲ್ಲಿ ಬಿಡುಗಡೆಯಾಗಿತ್ತು. ಮೊದಲ ಸಿನಿಮಾದಲ್ಲೇ ರೆಬಲ್ ಸ್ಟಾರ್ ಅಂಬರೀಶ್, ಕಿಚ್ಚ ಸುದೀಪ್, ಸುಹಾಸಿನಿ ಅಂತಹ ದೊಡ್ಡ ದೊಡ್ಡ ಸ್ಟಾರ್ ಕಲಾವಿದರಿಗೆ ನಿರ್ದೇಶನ ಮಾಡಿದ್ದ ಗುರು ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಇದೀಗ ಆ ಎಲ್ಲಾ ಕುತೂಹಲ ಮತ್ತು ಪ್ರಶ್ನೆಗಳಿಗೆ ತೆರೆಬಿದ್ದಿದೆ. ಸಿನಿಮಾದ ಪೋಸ್ಟರ್ ನೋಡಿದ್ದರೆ ಇದು ಕಂಬಳದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಶಾರದೋತ್ಸವ ಸುವರ್ಣ ಮಹೋತ್ಸವದ ಅಂಗವಾಗಿ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಭಾನುವಾರ ಬೈಂದೂರು ಗಾಂಧಿ ಮೈದಾನದಲ್ಲಿ ಜರುಗಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಮನುಷ್ಯರಲ್ಲಿ ಏಕಾಗ್ರತೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ. ಸೋಲೇ ಗೆಲುವಿನ ಸೋಪಾನ ಎಂದು ಕ್ರೀಡಾಸ್ಪೂರ್ತಿಯಿಂದ ಸ್ವರ್ಧೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು. ಬೈಂದೂರು ದಸರಾ ಸಮಿತಿ ಅಧ್ಯಕ್ಷ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಗಿರೀಶ್ ಬೈಂದೂರು, ಬಿ.ಎಮ್. ನಾಗರಾಜ್ ಗಾಣಿಗ, ಶಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ ಬೈಂದೂರು, ಬೈಂದೂರು ತಾಲೂಕು ಯುವ ಜನ ಕ್ರೀಡಾ ಇಲಾಖೆಯ ಯೋಜನಾಧಿಕಾರಿ ಪ್ರಭಾಕರ್ ಎಸ್ ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಅ.15: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿದ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಮಾತನಾಡಿ 9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇವಳ ಸಕಲ ಸಿದ್ಧತೆ ಮಾಡಿಕೊಂಡಿದ್ದು ಊರ- ಪರವೂರಿನಿಂದ ಭಕ್ತರಿಗೋಸ್ಕರ ವಿಶೇಷ ಸೌಕರ್ಯ ಒದಗಿಸಲಾಗಿದೆ. ಚಂಡಿಕಾ ಯಾಗ, ರಥೋತ್ಸವ, ವಿದ್ಯಾರಂಭ, ನವಾನ್ನಪ್ರಾಶನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನವರಾತ್ರಿ ಸಂದರ್ಭ ನಡೆಯುತ್ತವೆ. ಪ್ರತಿದಿನ ನಡೆಯುವ ಸಾಂಸ್ಕೃತಿಕ ಉತ್ಸವವೂ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಡಾ ಕೆ. ರಾಮಚಂದ್ರ ಅಡಿಗ, ಜಯಾನಂದ ಹೋಬಳಿದಾರ್, ಡಾ. ಅತುಲ್ ಕುಮಾರ್ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸೇವಾಸಮಿತಿ ಅಧ್ಯಕ್ಷರಾದ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನೀಡಿದರು. ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಸೇವಾಸಮಿತಿಯ ಗೌರವಾಧ್ಯಕ್ಷರಾದ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ನಾಗರಾಜ ಗಾಣಿಗ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗುವ ನೂರಾರು ಗೋವುಗಳಿಗೆ ಆಪತ್ಬಾಂದವರಂತೆ ಸೇವೆ ಸಲ್ಲಿಸುತ್ತಿದ್ದಾರೆ ಯಡ್ತರೆಯ ಈ ಬೈಕ್ ಮೆಕ್ಯಾನಿಕ್. ಬೈಂದೂರು ತಾಲೂಕಿನ ಯಡ್ತರೆಯಲ್ಲಿ ಶ್ರೀ ದುರ್ಗಾ ಆಟೋ ವರ್ಕ್ಸ್ ಎಂಬ ಹೆಸರಿನ ಸ್ವಂತ ಗ್ಯಾರೇಜ್ ನಡೆಸುತ್ತಿರುವ ಸಂಜೀವ ದೇವಾಡಿಗ ಅವರು ಮೂರು ದಶಕಗಳ ಅನುಭವ ಹೊಂದಿರುವ ಪರಿಣತ ಬೈಕ್ ಮೆಕ್ಯಾನಿಕ್. ತನ್ನ ವೃತ್ತಿಯ ಜೊತೆಗೆ ಪ್ರೌವೃತ್ತಿಯಾಗಿ ಆಯ್ದುಕೊಂಡದ್ದು ಅನಾಥ ಗೋವುಗಳ ಚಿಕಿತ್ಸೆ. ಕಳೆದ 15 ವರ್ಷದಿಂದ ಸದ್ದಿದ್ದಲೇ ಗೋಸೇವೆಯಲ್ಲಿ ತೊಡಗಿರುವ ಸಂಜೀವ ದೇವಾಡಿಗ ಅವರು, ನೂರಾರು ಗೋವುಗಳ ಪಾಲಿಗೆ ಆಪತ್ಬಾಂದವರಾಗಿದ್ದಾರೆ. ಅಪಘಾತಕ್ಕೀಡಾಗುವ ದನಗಳನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ವೈದ್ಯರ ಮಾರ್ಗದರ್ಶನದಲ್ಲಿ ತಿಂಗಳುಗಟ್ಟಲೇ ಸಲಹುತ್ತಿದ್ದಾರೆ. ತನ್ನ ವೈಯಕ್ತಿಕ ಬದುಕಿನ ನೋವುಗಳ ನಡುವೆಯೂ ಗೋಸೇವೆಯಲ್ಲಿ ಬದುಕಿನ ನೈಜ ಖುಷಿ ಕಾಣುತ್ತಿದ್ದಾರೆ.

Read More

ಬೆಳಗಾವಿ: ಬಹು ನಿರೀಕ್ಷಿತ ಇನಾಮ್ದಾರ ಚಿತ್ರ ಧ್ವನಿ ಸುರಳಿ ಬಿಡುಗಡೆ ಸಮಾರಂಭ ಬೆಳಗಾವಿ ನಗರದ ಸರ್ದಾರ ಮೈದಾನದಲ್ಲಿ ಅ.15ರಂದು ಭಾನುವಾರ ಸಂಜೆ 4ಗಂಟೆಗೆ ನಡೆಯಲಿದೆ. ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕರಾದ ರಾಜು ಸೇಠ್, ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕತ್ತಿ, ಅಭಯ ಪಾಟೀಲ್ ಮಾಜಿ ಶಾಸಕ ಮಾಜಿ ಶಾಸಕ ಅರವಿಂದ್ ಚ. ಪಾಟೀಲ್, ಸಾಮಾಜಿಕ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗ್ನಟಿ, ಕಾರ್ಯಕರ್ತ ಸಂತೋಶ ಗುಬಚೆ, ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಠಲ್ ಗಡ್ಡಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕುಂತಿಯಮ್ಮಾ ಮತ್ತು ತಸ್ಮಯ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಪ್ರಮೋದ್ ಶೆಟ್ಟಿ ನಿರ್ಮಾಪಕರು. ಉತ್ತರ ಕರ್ನಾಟಕದ ಅದರಲ್ಲೂ ಮೂಲತಃ ಕುಂದಾನಗರಿ ಬೆಳಗಾವಿ ಜಿಲ್ಲೆಯ ನಟ ಖಡಕ್ ಸ್ಟಾರ್ ರಂಜನ್ ಛತ್ರಪತಿ, ಇನಾಮ್ದಾರ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಚಿರಶ್ರೀ ಅಂಚನ್ ಮತ್ತು ಎಸ್ತಾರ್ ನೆರೋನಾ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಯಾನ್ಸರ್ ಕಾಯಿಲೆಯ ಬಗ್ಗೆ ಆರಂಭ ಹಂತದಲ್ಲಿ ಭಯ ಮತ್ತು ಉಪೇಕ್ಷೆ ತಾಳದೆ, ಪರಿಣತರಿಂದ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡದರೆ ಅದು ವಾಸಿಯಾಗುತ್ತದೆ ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿಯ ತಜ್ಞ ವೈದ್ಯ ಡಾ. ಹೇಮಂತಕುಮಾರ್ ಹೇಳಿದರು. ಮರವಂತೆಯ ಸಾಧನಾ ವೇದಿಕೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಸರೆ ಚಾರಿಟಬಲ್ ಟ್ರಸ್ಟ್, ಸ್ನೇಹಾ ಮಹಿಳಾ ಮಂಡಳ, ಹೋಲಿ ಫ್ಯಾಮಿಲಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಚೇತನಾ ಚಿಕಿತ್ಸಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಅಲ್ಲಿನ ಸಾಧನಾ ಸಮುದಾಯ ಭವನದಲ್ಲಿ ನಡೆದ ಕ್ಯಾನ್ಸರ್ ಕಾಯಿಲೆ ಅರಿವು ಕಾರ್ಯಕ್ರಮದಲ್ಲಿ ಅವರು ಕಾಯಿಲೆ ಕುರಿತು ವಿಸ್ತೃತ ಮಾಹಿತಿ ನೀಡಿದರು. ಶರೀರದ ವಿವಿಧ ಅಂಗಗಳಿಗೆ ತಗಲುವ ಕ್ಯಾನ್ಸರ್ ಕಾಯಿಲೆ, ಆರಂಭದಲ್ಲೇ ಅದನ್ನು ಪತ್ತೆ ಮಾಡುವ ಕ್ರಮ, ಅದರ ಹಂತಗಳಲ್ಲಿ ಲಭ್ಯವಿರುವ ಚಿಕಿತ್ಸಾ ಕ್ರಮ, ಆರೈಕೆ ಕುರಿತು ದೃಕ್ ಸಾಧನ ಬಳಸಿ ವಿವರ ನೀಡಿದ ಡಾ. ಹೇಮಂತಕುಮಾರ್, ಈ ಕಾಯಿಲೆಯನ್ನು ದೂರವಿಡಲು ಸೇವಿಸಬೇಕಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿದ್ದ ಮಣಿಕಂಠ ಹೋಬಳಿದಾರ್ ಅವರು, 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. 100ಮೀ. ಓಟದ ಸೆಮಿಫೈನಲ್‌ನಲ್ಲಿ 10.23 ಸೆಕೆಂಡುಗಳಲ್ಲಿ ಓಡಿ ರಾಷ್ಟ್ರೀಯ ದಾಖಲೆ ಬರೆದಿದ್ದ 21 ವರ್ಷದ ಮಣಿಕಂಠ, 2015ರಲ್ಲಿ ಒಡಿಶಾದ ಅಮಿಯಾ ಕುಮಾರ್ ಮಲ್ಲಿಕ್ 10.26 ಸೆಕೆಂಡುಗಳಲ್ಲಿ ಓಡಿದ್ದ ರಾಷ್ಟ್ರೀಯ ದಾಖಲೆ ಮುರಿದರು. ರಾಷ್ಟ್ರೀಯ ದಾಖಲೆಯೊಂದಿಗೆ ಗುರುವಾರ ನಡೆದ ಫೈನಲ್ನಲ್ಲಿಯೂ ಕೂಡ ಕೇವಲ 10.42 ಸೆಕೆಂಡ್ಗಳಲ್ಲಿ ಓಟ ಮುಗಿಸಿದ ಮಣಿಕಂಠ ಅಗ್ರಸ್ಥಾನದೊಂದಿಗೆ ಚಿನ್ನಕ್ಕೆ ಕೊರಳೊಡ್ಡಿದರು. ಬೈಂದೂರು ಪಡುವರಿಯ ಮಂಜುನಾಥ ಹೋಬಳಿದಾರ್ ಹಾಗೂ ದಿ. ಸುಂದರಿ ಅವರ ಪುತ್ರರಾದ ಮಣಿಕಂಠ ಅವರು 2020ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಥ್ಲೆಟಿಕ್ಸ್ನಲ್ಲಿ ವಿವಿಧ ಪದಕ ಗಳಿಸಿದ್ದಾರೆ.

Read More